ಮೈಸೂರು : ತಮಿಳು ಚಿತ್ರರಂಗದ ಸೂಪರ್ ಸ್ಟಾರ್ ರಜನಿಕಾಂತ್ ಅವರು ಜೈಲರ್ -2 ಸಿನಿಮಾದ ಕೆಲವು ಭಾಗದ ಚಿತ್ರಿಕರಣ ಮೈಸೂರಿನ ಬಿಳಿಕೆರೆಯ ಹುಲ್ಲೇನಹಳ್ಳಿಯಲ್ಲಿ ನಡೆಯುತ್ತಿದ್ದು, ಅಭಿಮಾನಿಗಳು ರಜನಿಕಾಂತ್ ಅವರನ್ನು ನೋಡಲು ಮುಗಿಬಿದ್ದು ಚಿತ್ರಕರಣ ಸ್ಥಳಕ್ಕೆ ದೌಡಯಿಸುತ್ತಿದ್ದಾರೆ.
ಇದನ್ನೂ ಓದಿ: ಮೈಸೂರಲ್ಲಿ ಜೈಲರ್-2 ಶೂಟಿಂಗ್ ಆರಂಭ ; 3 ದಿನ ವಾಸ್ತವ್ಯ ಹೂಡಲಿರೋ ತಲೈವಾ
ಚಿತ್ರೀಕರಣದ ಸಂದರ್ಭದಲ್ಲಿ ಸಾರ್ವಜನಿಕ ನಿರ್ಬಂಧಕ್ಕೆ ಚಿತ್ರ ತಂಡವು ಎಚ್ಚರ ವಹಿಸಿದೆ. ಎಲ್ಲ ಕಡೆಗಳಲ್ಲಿ ಯೂ ಬಿಗಿ ಬಂದೋ ಬಸ್ತ್ ಹಾಕಲಾಗಿದೆ. ಚಿತ್ರೀಕರಣ ಮುಗಿದ ನಂತರ ಅಭಿಮಾನಿಗಳು ರಜನಿಕಾಂತ್ ಅವರನ್ನು ನೋಡಲು ಚಿತ್ರೀಕರಣದ ಸ್ಥಳಕ್ಕೆ ದೌಡಾಯಿಸಿದ್ದು, ನಟ ರಜನಿಕಾಂತ್ ಅಭಿಮಾನಿಗಳಿಗೆ ಕೈಬೀಸಿ, ನಮಸ್ಕರಿಸಿ ಕಾರಿನಲ್ಲಿ ತೆರಳುವ ದೃಶ್ಯಗಳು ಸಾಮಾಜಿಕ ಮಾಧ್ಯಮಗಳಲ್ಲಿ ಸುದ್ದು ಮಾಡುತ್ತಿವೆ.
ಈ ಚಿತ್ರದ ಚಿತ್ರೀಕರಣವೂ ನಾಲ್ಕರಿಂದ ಐದು ದಿನಗಳವರೆಗೆ ನಡೆಯಲಿದೆ. ಈಗಾಗಲೇ ಮೈಸೂರು ಭಾಗದ ಹುಲ್ಲೇನಹಳ್ಳಿಯ ಸೇತುವೆ ಮೇಲೆ ಕೆಲವು ದೃಶ್ಯಗಳು ಹಾಗೂ ಆಕ್ಷನ್ ದೃಶ್ಯಗಳನ್ನು ಮೂರು ದಿನಗಳ ಕಾಲ ಚಿತ್ರೀಕರಣ ಮಾಡಲಾಗಿದೆ. ಇದೇ ಸ್ಥಳದಲ್ಲಿ ೪೦ ವರ್ಷಗಳ ಹಿಂದೆ ಕನ್ನಡದ ಮೇರು ನಟ ಡಾ.ರಾಜ್ಕುಮಾರ್ ಅವರ ನಟನೆಯ ಹೊಸಬೆಳಕು ಸಿನಿಮಾ ಚಿತ್ರೀಕರಣವಾಗಿತ್ತು. ಇದೀಗ ಚಿತ್ರತಂಡವು ಹುಣಸೂರಿನ ಬಿಳಿಕೆರೆಯಲ್ಲಿ ಚಿತ್ರೀಕರಣ ನಡೆಸುತ್ತಿದೆ. ಚಿತ್ರೀಕರಣಕ್ಕಾಗಿ ಚಿತ್ರತಂಡ ಸೆಟ್ ಹಾಕಿ ಚಿತ್ರೀಕರಣ ಮಾಡಲಾಗುತ್ತಿದೆ ಎಂದು ತಿಳಿದುಬಂದಿದೆ.
ಕೊಡಗು: ಚಾಮರಾಜನಗರದ ಹನೂರಿನಲ್ಲಿ ನಡೆದ ಶೂಟೌಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು ಕೊಡಗಿನಲ್ಲಿ ಮಾಧ್ಯಮದವರು…
ಕೊಡಗು: ಸಿಎಂ ಡಿ.ಕೆ.ಶಿವಕುಮಾರ್ ಅವರಿಂದು ಕೊಡಗಿಗೆ ಭೇಟಿ ನೀಡಿದ್ದಾರೆ. ಕೊಡಗಿಗೆ ಆಗಮಿಸುತ್ತಿದ್ದಂತೆ ಕೊಡವ ಸಂಪ್ರದಾಯದಂತೆ ಸಿಎಂ ಡಿ.ಕೆ.ಶಿವಕುಮಾರ್ ಅವರಿಗೆ ಕೊಡವತಿಯರು…
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ ಪವಿತ್ರಾಗೌಡರನ್ನು ಪರಪ್ಪನ ಅಗ್ರಹಾರದಲ್ಲಿ ಬೇರೆ ಸೆಲ್ಗೆ ಶಿಫ್ಟ್ ಮಾಡಲಾಗಿದೆ. ಇಬ್ಬರ ಬ್ಯಾರಕ್ನಲ್ಲಿದ್ದ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕಾವೇರಿ ವನ್ಯಜೀವಿಧಾಮ ವ್ಯಾಪ್ತಿಯ ಶೂಟೌಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ನಡೆಯುತ್ತಿದ್ದ ಪ್ರತಿಭಟನೆಯಲ್ಲಿ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಹನೂರು ತಾಲೂಕಿನ ಕಾವೇರಿ ವನ್ಯಜೀವಿಧಾಮದ ಶಾಖೆ ಅರಣ್ಯದಲ್ಲಿ ನಡೆದ ಗುಂಡಿನ…
ಕುಶಾಲನಗರ: ತಾಲ್ಲೂಕಿನ ಕೂಡಿಗೆ ವ್ಯಾಪ್ತಿಯಲ್ಲಿ ಬೀದಿ ನಾಯಿಗಳ ಹಾವಳಿ ಮುಂದುವರಿದಿದ್ದು, ವ್ಯಕ್ತಿಗೆ ಗಂಭೀರ ಗಾಯಗಳಾಗಿರುವ ಘಟನೆ ನಡೆದಿದೆ. ಹೆಗ್ಗಡಹಳ್ಳಿ ಗ್ರಾಮದ…