ಮೈಸೂರು

ಡ್ರಗ್ಸ್‌ ಪ್ರಕರಣ ಕುರಿತ ಉನ್ನತ ಮಟ್ಟದ ತನಿಖೆಗೆ ಆಗ್ರಹಿಸಿ ಜಾಥ

ಮೈಸೂರು : ಮೈಸೂರು ನಗರದಲ್ಲಿ ಮಾದಕ ದ್ರವ್ಯ ಪ್ರಕರಣ ಪತ್ತೆಯಾಗಿರುವುದರಿಂದ ಉನ್ನತ ಮಟ್ಟದ ತನಿಖೆ ನಡೆಸುವಂತೆ ಒತ್ತಾಯಿಸಿ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ವತಿಯಿಂದ ಮಾದಕ ದ್ರವ್ಯ ಮುಕ್ತ ನಗರಿ ಬಗ್ಗೆ ಜಾಗೃತಿ ಜಾಥಾ ನಡೆಸಲಾಯಿತು.

ನಗರದ ಬಸವೇಶ್ವರ ವೃತ್ತದಿಂದ ಹೊರಟ ಕಾರ್ಯಕರ್ತರು ಪ್ರಮುಖ ಬೀದಿಗಳಲ್ಲಿ ಸಾಗಿ ಜಿಲ್ಲಾಧಿಕಾರಿ ಕಚೇರಿವರೆಗೆ ಮೆರವಣಿಗೆ ನಡೆಸಿದರು. ನಂತರ, ರಾಜ್ಯಸರ್ಕಾರಕ್ಕೆ ಮನವಿ ಸಲ್ಲಿಸಿದರು.

ಎನ್.ಆರ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಗರ ಪೊಲೀಸರ ಸಹಕಾರದೊಡನೆ ಮಹಾರಾಷ್ಟ್ರ ಪೊಲೀಸರು ದಾಳಿ ನಡೆಸಿ ವಶಪಡಿಸಿಕೊಂಡ ಮಾದಕ ವಸ್ತುಗಳ ಪ್ರಮಾಣಕ್ಕೆ ಸಂಬಂಧಿಸಿದಂತೆ ಅಲ್ಲಿನ ಪೊಲೀಸರು ಹಾಗೂ ನಗರ ಪೊಲೀಸರು ನೀಡಿರುವ ಮಾಹಿತಿಗೂ ವ್ಯತ್ಯಾಸವಿದೆ ಎಂದು ಆರೋಪಿಸಿದರು.

ಎರಡು ರಾಜ್ಯಗಳ ಅಧಿಕಾರಿಗಳ ಹೇಳಿಕೆಗಳು ದ್ವಂದ್ವವಾಗಿವೆ. ದಾಳಿ ಬಳಿಕ ಎನ್.ಆರ್. ಠಾಣಾಧಿಕಾರಿ ಲಕ್ಷ್ಮೀಕಾಂತ ತಳವಾರ್ ಅವರನ್ನು ಅಮಾನತುಗೊಳಿಸಿ, ಮರುದಿನವೇ ಅದನ್ನು ರದ್ದುಗೊಳಿಸಿರುವುದು ಅನೇಕ ಅನುಮಾನಗಳಿಗೆ ಕಾರಣವಾಗಿವೆ. ಇವರನ್ನೇ ದೂರುದಾರರನ್ನಾಗಿಸಿರುವುದು ಸರಿಯಲ್ಲ ಎಂದರು.

ಮಾದಕ ದ್ರವ್ಯ ತಯಾರಿಕಾ ಘಟಕ ಠಾಣಾ ವ್ಯಾಪ್ತಿಯಲ್ಲೇ ಇದ್ದರೂ ಇವರು ಏಕೆ ಸುಮ್ಮನಿದ್ದರು ಎಂಬುದರ ಬಗ್ಗೆ ತನಿಖೆ ನಡೆಸಬೇಕು. ಇನ್ನು ಮಾದಕ ವಸ್ತು ಕಳ್ಳ ಸಾಗಣೆ ಮತ್ತು ದುರುಪಯೋಗ ವಿರುದ್ಧ ಕೇಂದ್ರ ನಾರ್ಕೊಟಿಕ್ ಕಂಟ್ರೋಲ್ ಬ್ಯೂರೋಗೆ ತಾವು ದೂರು ಸಲ್ಲಿಸಲಿದ್ದೇವೆ ಎಂದು ತಿಳಿಸಿದರು.

ಮೈಸೂರು ನಗರ ಅಂತಾ ರಾಷ್ಟ್ರೀಯ ಮಟ್ಟದಲ್ಲಿ ಸ್ವಚ್ಛ ನಗರಿ ಮತ್ತು ಸಾಂಸ್ಕೃತಿಕ ನಗರಿ ಎಂಬ ಹೆಸರು ವಾಸಿಯೂ ಆಗಿದ್ದು, ದೇಶ-ವಿದೇಶಿಗರ ಪ್ರವಾಸಿತಾಣವು ಆಗಿದೆ. ಇದನ್ನೇ ಬಂಡವಾಳ ಮಾಡಿಕೊಂಡು ಸಮಾಜಘಾತುಕಶಕ್ತಿಗಳು ಮೈಸೂರು ನಗರ ಮತ್ತು ಸುತ್ತಮುತ್ತ ಕಾನೂನುಬಾಹಿರವಾಗಿ ಮಾದಕದ್ರವ್ಯ ಉತ್ಪಾದನೆ ಮಾಡುವುದು ಮತ್ತು ಸೇವೆನೆ ಮಾಡುವುದು ಅತಿ ಹೆಚ್ಚಾಗಿ ಕಂಡುಬರುತ್ತಿದೆ ಎಂದು ಆರೋಪಿಸಿದರು.

ರಾಜ್ಯ ಸರ್ಕಾರ ಮತ್ತೊಮ್ಮೆ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಲು ವಿಫಲವಾಗಿದೆ. ಅದಕ್ಕಾಗಿ ಕೂಡಲೇ ಈ ಪ್ರಕರಣದಲ್ಲಿ ಎನ್.ಆರ್.ಠಾಣೆಯ ವೃತ್ತ ನಿರೀಕ್ಷಕ ಲಕ್ಷ್ಮೀಕಾಂತ್ ತಳವಾರ್ ವಿರುದ್ದ ಎಫ್ಐಆರ್ ದಾಖಲಿಸಿ ಬಂಧಿಸಬೇಕು. ಸೇವೆಯಿಂದ ಅಮಾನತುಪಡಿಸಿದ್ದ ಪೊಲೀಸ್ ಆಯುಕ್ತರು ವಾಪಸ್ ಪಡೆದಿರುವುದನ್ನು ನೋಡಿದರೆ ಕಾಣದ ಕೈಗಳ ಕೈವಾಡ ಇರುವುದು ತನಿಖೆಯಲ್ಲಿ ತಿಳಿಸಬೇಕಿದೆ. ಆದ್ದರಿಂದ ಪೊಲೀಸರು ಡ್ರಗ್ಸ್ ಪ್ರಕರಣ‌ ತನಿಖೆ ಮಾಡುವುದು ಸೂಕ್ತವಲ್ಲ. ಉನ್ನತ ಮಟ್ಟದ ತನಿಖೆಗೆ ಒಪ್ಪಿಸಬೇಕು ಎಂದರು.

ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ರಾಜ್ಯ ಉಪಾಧ್ಯಕ್ಷ ಕೆ.ಎಸ್. ಸೋಮಸುಂದರ, ರಾಜ್ಯ ಸಂಘಟನಾ ಕಾರ್ಯದರ್ಶಿ ಎಂ. ರವಿಕುಮಾರ್‌, ಮೈಸೂರು ನಗರ ಅಧ್ಯಕ್ಷ ಎಸ್. ನಾಗೇಂದ್ರ, ನಗರ ಘಟಕದ ಪ್ರಧಾನ ಕಾರ್ಯದರ್ಶಿ ರವಿ ಗೌಡ, ಗ್ರಾಮಾಂತರ ಅಧ್ಯಕ್ಷ ರವೀಂದ್ರ, ಗ್ರಾಮಾಂತರ ಘಟಕ ಪ್ರಧಾನ ಕಾರ್ಯದರ್ಶಿ ಹರೀಶ್, ಮಹಾದೇವಮ್ಮ, ನಾಗರಾಜ್ ಆರ್ ವೇಣುಗೋಪಾಲ್, ಜಗದೀಶ್ ಲೋಕೇಶ್ ಸುಂದರಪ್ರೇಮ್ ಕುಮಾರ್ ಮತ್ತಿತರರು ಪಾಲ್ಗೊಂಡಿದ್ದರು.

ಆಂದೋಲನ ಡೆಸ್ಕ್

Recent Posts

ಹೋಟೆಲ್,ರೆಸ್ಟೋರೆಂಟ್‌ಗಳ ಮೇಲೆ ಮುಂದುವರೆದ ದಾಳಿ

ಬೆಂಗಳೂರು ನಂತರ ಮೈಸೂರು, ಮಂಗಳೂರಿನಲ್ಲೂ ಕಾರ್ಯಾಚರಣೆ ಬೆಂಗಳೂರು : ರಾಜ್ಯದಲ್ಲಿ ಆಹಾರದ ಗುಣಮಟ್ಟ ಮತ್ತು ನೈರ್ಮಲ್ಯದ ಕುರಿತು ಸಾರ್ವಜನಿಕರಿಂದ ಹೆಚ್ಚುತ್ತಿರುವ…

8 hours ago

ನಂ.ಗೂಡು | ಮತ್ತೆ ಕಳಚಿ ಬೀಳುತ್ತಿರುವ ಸೇತುವೆಯ ಸೀಲಿಂಗ್ ಕಾಂಕ್ರೀಟ್

ಮೂರೂ ದಿನಗಳಿಂದಲೂ ಸೇತುವೆಯತ್ತ ಮುಖ ಮಾಡದ ರೈಲ್ವೆ ಇಲಾಖೆ ನಂಜನಗೂಡು : ಮಹಾತ್ಮಾಗಾಂಧಿ ಶತಾಬ್ಧಿ ರಸ್ತೆಗೆ ನಿರ್ಮಿಸಿರುವ ರೈಲ್ವೆ ಕೆಳ…

10 hours ago

ರಾವಣನ ಪಾತ್ರವನ್ನ ನನಗಿಂತ ಉತ್ತಮವಾಗಿ ಯಾರೂ ಮಾಡಲು ಸಾಧ್ಯವಿಲ್ಲ : ಯಶ್

ಮುಂಬೈ : ‘ಟಾಕ್ಸಿಕ್’ ಮತ್ತು ‘ರಾಮಾಯಣ’ ಸಿನಿಮಾಗಳ ಕೆಲಸಗಳಲ್ಲಿ ನಿರತರಾಗಿರುವ ಯಶ್, ‘ರಾಮಾಯಣ’ ಸಿನಿಮಾದಲ್ಲಿ ಕೇವಲ ಸಹ-ನಿರ್ಮಾಪಕರಾಗಿ ಮಾತ್ರವಲ್ಲದೆ ʻರಾವಣʼನ…

11 hours ago

ರಾಜ್ಯಗಳಿಗೆ ನೀಡುವ ವಿಪತ್ತು ಪರಿಹಾರದಲ್ಲೂ ಕೇಂದ್ರದಿಂದ ವಂಚನೆ : ಸಿಎಜಿ ವರದಿ

ಬೆಂಗಳೂರು : ಭೂಕುಸಿತ, ಬರದಂತಹ ಭೀಕರ ಪ್ರಕೃತಿ ವಿಕೋಪಗಳಿಂದ ಕಂಗಾಲಾಗಿರುವ ರಾಜ್ಯಗಳಿಗೆ ಕೇಂದ್ರ ಸರ್ಕಾರದಿಂದ ಸಿಗಬೇಕಾದ ವಿಪತ್ತು ಪರಿಹಾರ ಅನುದಾನದಲ್ಲಿ…

11 hours ago

ಶಾಸಕರ ಭರವಸೆ ಬಳಿಕ ಪ್ರತಿಭಟನೆ ಹಿಂಪಡೆತ : ಮೃತರ ಕುಟುಂಬಕ್ಕೆ ತಲಾ ₹15 ಲಕ್ಷ ಪರಿಹಾರ

ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ದಾಳಿಗೆ ಮೃತಪಟ್ಟ ಕುಟುಂಬಗಳಿಗೆ ಸರ್ಕಾರಿ ಉದ್ಯೋಗ, ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ಹಾಗೂ ಸೂಕ್ತ…

14 hours ago

ವಾರಣಾಸಿ ಏರ್‌ಫೋರ್ಟ್‌ | ಶಸ್ತ್ರಾಸ್ತ್ರ ತಪಾಸಣೆ ವೇಳೆ ಆಕಸ್ಮಿಕ ಗುಂಡಿನ ದಾಳಿ ; ಇಬ್ಬರಿಗೆ ಗಾಯ

ವಾರಣಾಸಿ : ವಾರಣಾಸಿಯ ಲಾಲ್ ಬಹದ್ದೂರ್ ಶಾಸ್ತ್ರಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾನುವಾರ ಬೆಳಿಗ್ಗೆ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಶಸ್ತ್ರಾಸ್ತ್ರ ತಪಾಸಣೆಯ…

15 hours ago