ramalinga reddy
ಮೈಸೂರು : ಸೆಪ್ಟಂಬರ್ ತಿಂಗಳಲ್ಲಿ ಯಾವ ಕ್ರಾಂತಿಯೂ ಇಲ್ಲ. ಎಲ್ಲಾ ಬರೀ ಶಾಂತಿ. ಅಭಿವೃದ್ಧಿ ಮಾಡುವುದು ಮುಖ್ಯ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ಎಲ್ಲದಕ್ಕೂ ತೆರೆ ಎಳೆದ ಮೇಲೆ ಬೇರೇನೂ ಇಲ್ಲ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಹೇಳಿದರು.
ಮೈಸೂರಿನಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿ, ಹೊಸದಿಲ್ಲಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ನಾನೇ ಐದು ವರ್ಷಗಳ ಕಾಲ ಸಿಎಂ ಎನ್ನುವುದನ್ನು ಹೇಳಿ ಎಲ್ಲಾ ವಿಚಾರಗಳಿಗೂ ಕೊನೆ ಹಾಡಿದ್ದಾರೆ. ಸಚಿವರು, ಶಾಸಕರು ನಾಯಕತ್ವ ವಿಚಾರದಲ್ಲಿ ಮಾತನಾಡದಂತೆ ಹೇಳಲಾಗಿದೆ ಎಂದರು.
ಸಚಿವರ ಕಾರ್ಯವೈಖರಿ ಕುರಿತು ಶಾಸಕರು ದೂರು ಹೇಳಿರುವ ವಿಚಾರ ನನಗೆ ಗೊತ್ತಿಲ್ಲ. ಯಾವ ಶಾಸಕರು ಏನು ಹೇಳಿದ್ದಾರೆ ಎಂಬುದು ನನಗೆ ತಿಳಿದಿಲ್ಲ. ಅವರು ಹೇಳಿರುವ ವಿಚಾರಗಳು ನಮಗೆ ಗೊತ್ತಿದ್ದರೆ ನಿಮಗೆ ಹೇಳುತ್ತಿದ್ದೆ. ನನಗೆ ಏನು ಗೊತ್ತಿಲ್ಲ ಅಂದ ಮೇಲೆ ಅಂತಹ ವಿಚಾರ ಕುರಿತು ಮಾತನಾಡಲ್ಲ ಎಂದು ಪ್ರತಿಕ್ರಿಯಿಸಿದರು.
ನಾಯಕತ್ವ ಬದಲಾವಣೆ ಬಗ್ಗೆ ಹೈಕಮಾಂಡ್ ಯಾವ ವಿಚಾರವನ್ನೂ ಹೇಳಿಲ್ಲ. ಅಲ್ಲಿ ಏನಾಗಿದೆ ಎಂಬುದು ತಿಳಿಯದು. ಎಲ್ಲರು ಒಂದೇ ಬಾರಿ ಮುಖ್ಯಮಂತ್ರಿಯಾಗಲು ಸಾಧ್ಯವಿಲ್ಲ. ಮುಂದೆ ಅವಕಾಶ ದೊರೆಯಬಹುದು.
ಡಿ.ಕೆ.ಶಿವಕುಮಾರ್ ಹುಟ್ಟು ಕಾಂಗ್ರೆಸ್ಸಿಗ ಪಕ್ಷವನ್ನು ಅಧಿಕಾರಕ್ಕೆ ತರುವಲ್ಲಿ ಶ್ರಮವಹಿಸಿದ್ದಾರೆ. ಅದೇ ರೀತಿ ಸಿದ್ದರಾಮಯ್ಯ ಅವರು ಒಳ್ಳೆಯ ನಾಯಕರು. ಸಿದ್ದರಾಮಯ್ಯ ಅವರಿಂದ ಅಭಿವೃದ್ಧಿ ಆಗಿದೆಯೋ,ಇಲ್ಲವೋ ನೀವೇ ಹೇಳಬೇಕೆಂದು ಮಾಧ್ಯಮದವರನ್ನು ಪ್ರಶ್ನಿಸಿದರು.
ಸಾರಿಗೆ ನೌಕರರ ಬೇಡಿಕೆಗಳನ್ನು ಈಡೇರಿಸಲಾಗುತ್ತಿದೆ. ಸಮಾನ ಕೆಲಸಕ್ಕೆ ಸಮಾನ ವೇತನ ನೀಡುವ ಒಂದು ಬೇಡಿಕೆ ಬಾಕಿ ಇದೆ. ಉಳಿದಂತೆ ಎಲ್ಲಾ ಬೇಡಿಕೆಗಳನ್ನು ಸರ್ಕಾರ ಈಡೇರಿಸಿದೆ. ಬಿಜೆಪಿ ಸರ್ಕಾರ ಇದ್ದಾಗ ಎರಡು-ಮೂರು ತಿಂಗಳಿಗೊಮ್ಮೆ ಸಂಬಳ ನೀಡಲಾಗುತ್ತಿತ್ತು. ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಪ್ರತಿ ತಿಂಗಳು ವೇತನ ನೀಡಲಾಗುತ್ತಿದೆ. ಶಕ್ತಿ ಯೋಜನೆಯಿಂದ ಸಂಸ್ಥೆಗೂ ಆದಾಯ ಬರುತ್ತಿದೆ. ೫,೮೦೦ ಕೋಟಿ ರೂ. ಶಕ್ತಿ ಯೋಜನೆಗೆ ನೀಡಲಾಗಿದೆ. ಮಹಿಳೆಯರಿಗೆ ಇದರಿಂದ ತುಂಬಾ ಅನುಕೂಲವಾಗಿದೆ ಎಂದು ಹೇಳಿದರು.
ವಿಜಯಪುರ : ಭಾರೀ ಗಾಳಿ ಮತ್ತು ಮಳೆಯಿಂದಾಗಿ ಹಳೆಯ ಮನೆಯ ಮೇಲ್ಚಾವಣಿ ಕುಸಿದು ಒಂದೇ ಕುಟುಂಬದ ನಾಲ್ವರು ದುರ್ಮರಣವನ್ನಪ್ಪಿದ ಘಟನೆ…
ಬೆಂಗಳೂರು : ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ 64ನೇ ಹುಟ್ಟುಹಬ್ಬದ ಸಂಭ್ರಮದಲ್ಲಿ ಶುಭ ಹಾರೈಸಲು ಅಭಿಮಾನಿಗಳು, ಕಾರ್ಯಕರ್ತರು, ಹಿತೈಷಿಗಳ ದಂಡೇ…
ನವದೆಹಲಿ : ರೇಣುಕಾಸ್ವಾಮಿ ಕೊಲೆ ಪ್ರಕರಣದ ಪ್ರಮುಖ ಆರೋಪಿ ನಟ ದರ್ಶನ್ಗೆ ಸುಪ್ರೀಂ ಕೋರ್ಟ್ನಲ್ಲಿ ಭಾರೀ ಹಿನ್ನಡೆಯಾಗಿದ್ದು, ಇನ್ನು ಒಂದು…
ನವದೆಹಲಿ : ಪ್ರಶ್ನೆಪತ್ರಿಕೆ ಸೋರಿಕೆ ಆರೋಪದ ಹಿನ್ನೆಲೆಯಲ್ಲಿ ರದ್ದುಗೊಂಡಿದ್ದ ‘ನೀಟ್-ಯುಜಿ 2026’ ವೈದ್ಯಕೀಯ ಪ್ರವೇಶ ಪರೀಕ್ಷೆಯ ಮರು ಪರೀಕ್ಷೆ ಜೂನ್…
ಉತ್ಸವಗಳ ಉತ್ಸವ ಎಂದೇ ಪ್ರತೀತಿ ಪಡೆದಿರುವ ಅಂತಾರಾಷ್ಟ್ರೀಯ ಚಿತ್ರೋತ್ಸವ ಫ್ರಾನ್ಸ್ನ ಕಾನ್ನದು. ಇದೀಗ ಮೊನ್ನೆ ಅದರ ೭೯ನೇ ಆವೃತ್ತಿಗೆ ಚಾಲನೆ…
ಎಚ್.ಎಸ್.ದಿನೇಶ್ ಕುಮಾರ್ ಮೈಸೂರು : ಕಳೆದ ವರ್ಷ ಗಗನಕ್ಕೇರಿದ್ದ ತೆಂಗಿನಕಾಯಿ ಬೆಲೆ ಇದೀಗ ಶೇ. ೫೦ರಷ್ಟು ದರ ಇಳಿದಿದೆ. ಇದರಿಂದಾಗಿ…