ಮೈಸೂರು: ಚಾಮುಂಡೇಶ್ವರಿ ದೇವಾಲಯಕ್ಕೆ ಭಾರತ ಕ್ರಿಕೆಟ್ ತಂಡದ ಮುಖ್ಯ ಕೋಚ್ ರಾಹುಲ್ ದ್ರಾವಿಡ್ ಭೇಟಿ ನೀಡಿ, ದೇವಿಯ ದರ್ಶನ ಪಡೆದರು. ಇನ್ನೊಂದೆಡೆ, ಟಾಲಿವುಡ್ ನಟ ರಾಮ್ ಚರಣ್ ತೇಜ ಕೂಡ ಚಾಮುಂಡೇಶ್ವರಿಯ ದರ್ಶನ ಪಡೆದರು.
ನಟ ರಾಮ್ ಚರಣ್ ತೇಜ ಅವರ ಮುಂದಿನ ಚಿತ್ರ ‘ಗೇಮ್ ಚೇಂಜರ್’ ಚಿತ್ರೀಕರಣ ಮೈಸೂರಿನಲ್ಲಿ ನಡೆಯುತ್ತಿದ್ದು, ಚಿತ್ರತಂಡದೊಂದಿಗೆ ದೇವಾಲಯಕ್ಕೆ ಆಗಮಿಸಿದ್ದರು. ಭಾನುವಾರ ಮುಂಜಾನೆ ಚಾಮುಂಡೇಶ್ವರಿಯ ದರ್ಶನ ಪಡೆದರು.
ತಮ್ಮ ಪುತ್ರನ ಕ್ರಿಕೆಟ್ ಆಟ ಕಣ್ತುಂಬಿಕೊಳ್ಳಲು ರಾಹುಲ್ ದ್ರಾವಿಡ್ ದಂಪತಿ ಮೈಸೂರಿಗೆ ಆಗಮಿಸಿದ್ದರು. ಈ ವೇಳೆ ತಮ್ಮ ಪತ್ನಿ ವಿಜೇತಾ ಅವರ ಜೊತೆ ಚಾಮುಂಡೇಶ್ವರಿ ದರ್ಶನ ಪಡೆದರು