ಮೈಸೂರು

ರಂಗಾಯಣ | ಜ.11ರಿಂದ ಬಹುರೂಪಿ ರಾಷ್ಟ್ರೀಯ ನಾಟಕೋತ್ಸವ ; 24 ನಾಟಕಗಳ ಪ್ರದರ್ಶನ

ಮೈಸೂರು : ರಂಗಾಯಣದ ಮಹತ್ವಾಕಾಂಕ್ಷೆಯ ಬಹುರೂಪಿ ರಾಷ್ಟ್ರೀಯ ನಾಟಕೋತ್ಸವಕ್ಕೆ ವೇದಿಕೆ ಸಜ್ಜಾಗುತ್ತಿದ್ದು, ‘ಬಾಬಾ ಸಾಹೇಬ್-ಸಮತೆಯೆಡೆಗೆ ನಡಿಗೆ’ ಆಶಯದಡಿ ಜ.11 ರಿಂದ 18ರವರೆಗೆ ನಾಟಕೋತ್ಸವ ಆಯೋಜಿಸಲಾಗಿದೆ.

ರಂಗಾಯಣದ ಬಿ.ವಿ.ಕಾರಂತ ರಂಗಚಾವಡಿಯಲ್ಲಿ ಬುಧವಾರ ಬಹುರೂಪಿ ನಾಟಕೋತ್ಸವದ ಪೋಸ್ಟರ್ ಬಿಡುಗಡೆಗೊಳಿಸಿ ಮಾತನಾಡಿದ ರಂಗಾಯಣ ನಿರ್ದೇಶಕ ಸತೀಶ್ ತಿಪಟೂರು, ಜ.11ರಿಂದ ಆರಂಭವಾಗುವ ಬಹುರೂಪಿ ನಾಟಕೋತ್ಸವ ಈ ಬಾರಿ 8 ದಿನಗಳ ಕಾಲ ರಂಗಾಸಕ್ತರನ್ನು ಮನರಂಜಿಸಲಿದೆ. ಬಹುಭಾಷಾ ನಾಟಕೋತ್ಸವ, ವಿಚಾರ ಸಂಕಿರಣ, ಚಲನಚಿತ್ರೋತ್ಸವ, ಜನಪದ ಸಂಭ್ರಮ, ಪುಸ್ತಕ ಮೇಳ, ಕರಕುಶಲ ಮೇಳ ಮತ್ತು ಪ್ರಾತ್ಯಕ್ಷಿಕೆ, ದೇಸಿ ಆಹಾರ ಮೇಳ, ಚಿತ್ರಕಲಾ ಪ್ರದರ್ಶನ ಹಾಗೂ ಮಕ್ಕಳ ನಾಟಕೋತ್ಸವ ರಂಗೋತ್ಸವದಲ್ಲಿ ಇರಲಿದೆ ಎಂದು ಮಾಹಿತಿ ನೀಡಿದರು.

ಬಹುರೂಪಿ ಬೆಳ್ಳಿ ಹಬ್ಬ ಆಚರಿಸಿಕೊಳ್ಳುತ್ತಿರುವ ಹಿನ್ನೆಲೆಯಲ್ಲಿ ಈ ಬಾರಿ ವಿಶೇಷವಾಗಿ ಆಯೋಜನೆ ಮಾಡಲಾಗಿದೆ. ‘ಬಾಬಾ ಸಾಹೇಬ್-ಸಮತೆಯೆಡೆಗೆ ನಡಿಗೆ’ ಈ ಬಾರಿಯ ನಾಟಕೋತ್ಸವದ ಆಶಯವಾಗಿದ್ದು, ಮೈಸೂರು ವಿಶ್ವವಿದ್ಯಾನಿಲಯದ ಡಾ.ಬಿ.ಆರ್.ಅಂಬೇಡ್ಕರ್ ಸಂಶೋಧನಾ ಸಂಸ್ಥೆ, ಸಮಾಜ ಕಲ್ಯಾಣ ಇಲಾಖೆ ಸಹಯೋಗದಲ್ಲಿ ಅಂಬೇಡ್ಕರ್‌ರ ಜೀವನ-ಯಶೋಗಾಥೆ ಕುರಿತು ಬೆಳಕು ಚೆಲ್ಲುವ ನಾಟಕಗಳ ಪ್ರದರ್ಶನ ಇರಲಿದೆ. ಈ ಬಾರಿಯೂ ಮಕ್ಕಳ ರಂಗಭೂಮಿಯನ್ನು ಉತ್ತೇಜಿಸುವ ಉದ್ದೇಶದಿಂದ ಮಕ್ಕಳ ನಾಟಕೋತ್ಸವ ನಡೆಸಲಾಗುತ್ತಿದೆ. ನಾಟಕೋತ್ಸವಕ್ಕೆ ಸರ್ಕಾರದಿಂದ ಒಂದು ಕೋಟಿ ರೂ. ಅನುದಾನ ನೀಡಲಾಗಿದೆ. ಕಳೆದ ಬಾರಿ 25 ಲಕ್ಷ ರೂ.ಅನುದಾನ ದೊರೆತಿತ್ತು ಎಂದು ಹೇಳಿದರು.

ಬಹುರೂಪಿ ಕಾರ್ಯಕ್ರಮಗಳಿವು
ಜ.11ರಂದು ಚಲನಚಿತ್ರೋತ್ಸವದ ಉದ್ಘಾಟನೆಯೊಂದಿಗೆ ಈ ಬಾರಿಯ ಬಹುರೂಪಿ ಚಾಲನೆ ಪಡೆದುಕೊಳ್ಳಲಿದೆ. ಅಂದು ಬೆಳಿಗ್ಗೆ 10.30ಕ್ಕೆ ಭೂಮಿಗೀತದಲ್ಲಿ ಬರಹಗಾರ ಬರಗೂರು ರಾಮಚಂದ್ರಪ್ಪ ಚಲನಚಿತ್ರೋತ್ಸವ ಉದ್ಘಾಟಿಸುವರು. ಕರ್ನಾಟಕ ನಾಟಕ ಅಕಾಡೆಮಿ ಅಧ್ಯಕ್ಷ ಡಾ.ಕೆ.ವಿ.ನಾಗರಾಜಮೂರ್ತಿ ಸೇರಿದಂತೆ ಹಲವರು ಪಾಲ್ಗೊಳ್ಳುವರು. ಸಂಜೆ 6 ಗಂಟೆಗೆ ಕಿಂದರಿ ಜೋಗಿ ಆವರಣದಲ್ಲಿ ಜನಪದ ಸಂಭ್ರಮಕ್ಕೆ ಕರ್ನಾಟಕ ಬಯಲಾಟ ಅಕಾಡೆಮಿ ಅಧ್ಯಕ್ಷ ಡಾ.ದುರ್ಗಾದಾಸ್ ಚಾಲನೆ ನೀಡುವರು.

12 ರಂದು ಬೆಳಿಗ್ಗೆ 10.30ಕ್ಕೆ ಕಲಾಮಂದಿರದಲ್ಲಿ ಮಕ್ಕಳ ಬಹುರೂಪಿಯನ್ನು ಹಿರಿಯ ರಂಗಕರ್ಮಿ ರಾಮೇಶ್ವರಿ ವರ್ಮ ಉದ್ಘಾಟಿಸುವರು. ಮುಖ್ಯ ಅತಿಥಿಗಳಾಗಿ ಕರ್ನಾಟಕ ನಾಟಕ ಅಕಾಡೆಮಿ ಸದಸ್ಯೆ ಡಾ.ಜಾಹೀದಾ, ರಂಗ ಸಮಾಜದ ಸದಸ್ಯರಾದ ಡಾ.ಕೆ.ರಾಮಕೃಷ್ಣಯ್ಯ, ಮಹಾಂತೇಶ್ ಗಜೇಂದ್ರಗಡ ಭಾಗವಹಿಸುವರು.

ನಾಟಕೋತ್ಸವದ ಅಧಿಕೃತ ಉದ್ಘಾಟನೆಯನ್ನು 12 ರಂದು ಸಂಜೆ 5.30 ಕ್ಕೆ ವನರಂಗದಲ್ಲಿ ಹಮ್ಮಿಕೊಳ್ಳಲಾಗಿದ್ದು, ಭಾರತೀಯ ರಂಗಭೂಮಿಯ ಹಿರಿಯ ಕಲಾವಿದೆ ಹೈಸ್ನಾಂ ಸಾವಿತ್ರಿ ದೇವಿ ಗಂಗೋತ್ಸವಕ್ಕೆ ಚಾಲನೆ ನೀಡುವರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಬಹುರೂಪಿ ಉದ್ಘಾಟಿಸುವರು. ಪುಸ್ತಕ, ಕರಕುಶಲ ಮಳಿಗೆಯನ್ನು ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ.ಮಹದೇವಪ್ಪ ಉದ್ಘಾಟಿಸಲಿದ್ದು, ರಂಗಸಂಚಿಕೆಯನ್ನು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ತಂಗಡಗಿ ಬಿಡುಗಡೆ ಮಾಡುವರು. ಸಂಸದ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಬಾಬಾ ಸಾಹೇಬ್ ಛಾಯಾಚಿತ್ರ ಪ್ರದರ್ಶನ, ಸಂಸದ ಸುನೀಲ್ ಬೋಸ್ ಚಿತ್ರಕಲಾ ಪ್ರದರ್ಶನ ಅನಾವರಣ ಮಾಡುವರು. ಶಾಸಕ ಕೆ.ಹರೀಶ್ ಗೌಡ ಅಧ್ಯಕ್ಷತೆ ವಹಿಸುವರು. ಇದೇ ವೇಳೆ ಹೈಸ್ನಾಂ ಸಾವಿತ್ರಿ ದೇವಿ ಅವರಿಗೆ ‘ಬೆಳ್ಳಿ ಬಹುರೂಪಿ’ ರಂಗಗೌರವ ನೀಡಲಾಗುವುದು ಎಂದು ಮಾಹಿತಿ ನೀಡಿದರು.

17, 18ರಂದು ವಿಚಾರ ಸಂಕಿರಣ:
ಜ.17, 18ರಂದು ರಾಷ್ಟ್ರೀಯ ವಿಚಾರ ಸಂಕಿರಣ ಆಯೋಜಿಸಲಾಗಿದೆ. 17ರಂದು ಬೆಳಿಗ್ಗೆ 10.30ಕ್ಕೆ ಹೊಸದಿಲ್ಲಿಯ ದಿ ವೈರ್ ಸಂಸ್ಥಾಪಕ ಸಂಪಾದಕ ಸಿದ್ಧಾರ್ಥ್ ವರದರಾಜನ್ ಉದ್ಘಾಟಿಸುವರು. ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ.ಮಹದೇವಪ್ಪ ಅಧ್ಯಕ್ಷತೆ ವಹಿಸಲಿದ್ದು, ಎಂಎಲ್‌ಸಿ ಯತೀಂದ್ರ, ಮೈಸೂರು ವಿವಿ ಕುಲಪತಿ ಪ್ರೊ.ಎನ್.ಕೆ.ಲೋಕನಾಥ್, ಸಮಾಜ ಕಲ್ಯಾಣ ಇಲಾಖೆ ಆಯುಕ್ತ ಡಾ.ಕೆ.ರಾಕೇಶ್ ಕುಮಾರ್ ಭಾಗವಹಿಸುವರು.

24 ನಾಟಕಗಳ ಪ್ರದರ್ಶನ
ಈ ಬಾರಿಯ ಬಹುರೂಪಿ ನಾಟಕೋತ್ಸವದಲ್ಲಿ ಮಹಾರಾಷ್ಟ್ರ, ಮಣಿಪುರ, ತಮಿಳುನಾಡು, ಅಸ್ಸಾಂ, ಕೇರಳ ರಾಜ್ಯಗಳ 5 ನಾಟಕಗಳು, ಕನ್ನಡ ಭಾಷೆಯ 12 ನಾಟಕಗಳು, ತುಳು ಭಾಷೆಯ 2, ಹಿಂದಿ-ಇಂಗ್ಲಿಷ್ ಭಾಷೆಯ 5 ನಾಟಕಗಳು ಸೇರಿದಂತೆ ಒಟ್ಟು 24 ನಾಟಕಗಳು ಭೂಮಿಗೀತ, ವನರಂಗ, ಕಲಾಮಂದಿರ ಮತ್ತು ಕಿರುರಂಗಮಂದಿರ ವೇದಿಕೆಗಳಲ್ಲಿ ಪ್ರದರ್ಶನಗೊಳ್ಳಲಿವೆ.

ಚಲನಚಿತ್ರೋತ್ಸವದಲ್ಲಿ ವಿವಿಧ ಭಾಷೆಗಳ 21 ಚಲಚಿತ್ರಗಳು ಪ್ರದರ್ಶನಗೊಳ್ಳಲಿವೆ. ಇದರ ಜತೆಗೆ ವಿವಿಧ ಜಿಲ್ಲೆಗಳ ಜಾನಪದ ಕಲಾತಂಡಗಳು ಕಿಂದರಜೋಗಿ ಆವರಣದಲ್ಲಿ ಪ್ರದರ್ಶನ ನೀಡಲಿವೆ. ನಾಟಕ ವೀಕ್ಷಣೆಗೆ 100 ರೂ ಟಿಕೆಟ್ ದರವಿದ್ದು, ಗುರುವಾರದಿಂದಲೇ ಟಿಕೆಟ್ ಮಾರಾಟ ಆರಂಭವಾಗಲಿದೆ. 70 ಮಳಿಗೆಗಳಲ್ಲಿ ಪುಸ್ತಕ, ಕರಕುಶಲ ವಸ್ತುಗಳು, ಆಹಾರ ಮೇಳ ಆಯೋಜಿಸಲಾಗಿದೆ.

 

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಅಪ್ರಾಪ್ತನಿಗೆ ದ್ವಿಚಕ್ರ ವಾಹನ ನೀಡಿದ ಪೋಷಕರಿಗೆ 30 ಸಾವಿರ ರೂ.ದಂಡ

ಸಿದ್ದಾಪುರ : ಅಪ್ರಾಪ್ತ ಬಾಲಕನಿಗೆ ದ್ವಿಚಕ್ರ ವಾಹನ ಚಲಾಯಿಸಲು ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಲಕನ ಪೋಷಕರಿಗೆ ನ್ಯಾಯಾಲಯ ಹಾಗೂ ಬಾಲ…

6 hours ago

ಪ್ರೇಕ್ಷಕರು ಬದಲಾದಾಗ ಭಾಷೆಯಲ್ಲೂ ಬದಲಾವಣೆ ; ಭಾಗವತ್‌ ಕುರಿತು ಖರ್ಗೆ ವ್ಯಂಗ್ಯ

ಬೆಂಗಳೂರು : ಆರ್‌ಎಸ್‌ಎಸ್ ಸಂಘಟನೆಯ ಕಾರ್ಯವೈಖರಿ ಹಾಗೂ ವಿದೇಶದಲ್ಲಿನ ಅದರ ಚಟುವಟಿಕೆಗಳ ಕುರಿತು ಸಚಿವ ಪ್ರಿಯಾಂಕ್ ಖರ್ಗೆ ಸಾಮಾಜಿಕ ಜಾಲತಾಣದಲ್ಲಿ…

6 hours ago

ಚಿತ್ರಕೂಟ ; ಮಂದಾಕಿನಿ ನದಿ ಪ್ರವಾಹ ಭೀತಿ

ಚಿತ್ರಕೂಟ : ಮಧ್ಯಪ್ರದೇಶ-ಉತ್ತರ ಪ್ರದೇಶ ಗಡಿಯಲ್ಲಿರುವ ಧಾರ್ಮಿಕ ಕ್ಷೇತ್ರ ಚಿತ್ರಕೂಟದಲ್ಲಿ ಮಂದಾಕಿನಿ ನದಿ ಅಪಾಯಕಾರಿಯಾಗಿ ಉಕ್ಕಿ ಹರಿಯುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲಾಡಳಿತ…

7 hours ago

ನೇಪಾಳ ಪ್ರವಾಹ ; ರಕ್ಷಣಾ ಕಾರ್ಯಾಚರಣೆ ಮುಂದುವರಿಕೆ

ಮೃತರ ಸಂಖ್ಯೆ 750 ಕ್ಕೆ ಏರಿಕೆ; 3,044 ನಾಪತ್ತೆ ಕಠ್ಮಂಡು : ನೇಪಾಳ ಮತ್ತು ಟಿಬೆಟ್ ಗಡಿಯಲ್ಲಿ ಸಂಭವಿಸಿದ ಭೀಕರ…

7 hours ago

ಕೆಪಿಎಸ್‌ಸಿ ಹಗರಣ : ಐಎಎಸ್‌ ಅಧಿಕಾರಿ ಘ್ಯಾನೇಂದ್ರ ಕುಮಾರ್‌ ಬಂಧನ

ಬೆಂಗಳೂರು : ಕರ್ನಾಟಕ ಲೋಕ ಸೇವಾ ಆಯೋಗದಲ್ಲಿ(ಕೆಪಿಎಸ್‌ಸಿ) ನಡೆದಿದೆ ಎನ್ನಲಾದ ಅಕ್ರಮಗಳಿಗೆ ಸಂಬಂಧಿಸಿದಂತೆ ಘ್ಯಾನೇಂದ್ರ ಕುಮಾರ್‌ ಗಂಗ್ವಾರ್‌ ಅವರನ್ನು ಸಿಐಡಿ…

9 hours ago

ಹನೂರು ಶೂಟ್‌ಔಟ್ ಪ್ರಕರಣ | ಸ್ಥಳ ಮಹಜರ್, ಸಾಕ್ಷಿ ವಿಚಾರಣೆ

ಹನೂರು : ಕಾವೇರಿ ವನ್ಯಜೀವಿಧಾಮದ ಹೊಲೆಮುರಿದಟ್ಟಿ ಕರಿಕಲ್ಲು ಗುಡ್ಡ ಅರಣ್ಯ ಪ್ರದೇಶದಲ್ಲಿ ಶೂಟ್‌ಔಟ್ ನಡೆದ ಸ್ಥಳಕ್ಕೆ ಪ್ರಕರಣದ ಪ್ರಮುಖ ಸಾಕ್ಷಿ…

11 hours ago