ಮೈಸೂರು : ನಿರಂತರ ರಂಗ ತಂಡದ ‘ನಿರಂತರ ರಂಗ ಉತ್ಸವ-2025-26’ರ ಐದು ದಿನಗಳ ರಂಗೋತ್ಸವದ ಕೊನೆಯ ದಿನ ‘ಕೊಡಲ್ಲ ಅಂದ್ರೆ ಕೊಡಲ್ಲ’ ನಾಟಕ ಪ್ರದರ್ಶನದ ಮೂಲಕ ತೆರೆ ಬಿತ್ತು.
ನಗರದ ಕಲಾಮಂದಿರ ಆವರಣದ ಕಿರುರಂಗಮಂದಿರದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಮತ್ತು ಹೊಸದಿಲ್ಲಿಯ ಸಂಸ್ಕೃತಿ ಸಚಿವಾಲಯದ ಸಹಯೋಗದಲ್ಲಿ ನಿರಂತರ -ಫೌಂಡೇಷನ್ ಏರ್ಪಡಿಸಿದ್ದ ಐದು ದಿನಗಳ ನಿರಂತರ ರಂಗೋತ್ಸವದ ಸಮಾರೋಪ ಸಮಾರಂಭದಲ್ಲಿ ಸಂಸ್ಕೃತಿ ಚಿಂತಕ ದೇವನೂರು ಬಸವರಾಜು ಮಾತನಾಡಿ, ನಿರಂತರ ರಂಗತಂಡ ಪ್ರಗತಿಪರವಾಗಿ ಅನ್ಯಾಯಗಳ ವಿರುದ್ಧ ಧ್ವನಿ ಎತ್ತುವ ಚಿಂತನೆಗಳ ಸಮೂಹವಾಗಿದೆ. ಇವತ್ತು ಜಾತಿ, ಧರ್ಮ, ಮೌಢ್ಯತೆಗಳಿಂದ ಹದಗೆಟ್ಟ ಸ್ಥಿತಿಯ ಸಮಾಜದಲ್ಲಿ, ಸಂಸ್ಥೆ ಕ್ರಿಯಾಶೀಲವಾಗಿ ಬೆಳೆದು ಬಂದಿದೆ ಎಂದರು.
ಪ್ರಸ್ತುತದಲ್ಲಿ ಜಾತಿ, ಧರ್ಮಗಳು ಮನುಷ್ಯನನ್ನು ಮೀರಿ ಬೆಳೆದಿವೆ. ಇಂತಹ ಸಮಯದಲ್ಲಿ ಯುವ ಮನಸ್ಸುಗಳಲ್ಲಿ ಪ್ರಗತಿಪರ ಆಲೋಚನೆಗಳನ್ನು, ಚಿಂತನೆಗಳನ್ನು, ಸದೃಢ ಭವಿಷ್ಯವನ್ನು ನಿರ್ಮಾಣ ಮಾಡುವಂತಹ ಮನೋಭಾವವನ್ನು ರಂಗತಂಡಗಳು, ಕಲಾವಿದರೂ ಮಾಡಬೇಕಿದೆ. ಅದಲ್ಲದೇ ಈ ವಿಚಾರವಂತಿಕೆಯನ್ನು ಕಾಲೇಜು ವಿದ್ಯಾರ್ಥಿಗಳಲ್ಲಿ ಬಿತ್ತುವ ಕೆಲಸ ಮತ್ತಷ್ಟು ಹೆಚ್ಚಬೇಕಿದೆ ಎಂದು ಅಭಿಪ್ರಾಯಪಟ್ಟರು.
ಇವತ್ತು ರಂಗದ ಮೇಲೆ ಪ್ರಸ್ತುತದಲ್ಲಿ ನಡೆಯುತ್ತಿರುವ ವಿಚಾರಗಳ ಕುರಿತು ನಾಟಕ ಪ್ರದರ್ಶನಗಳಾಗಬೇಕಿದೆ. ಈ ನಡೆಯಲ್ಲಿ ಮೊಬೈಲ್ಗಳಿಂದ ಆಗುವ ಅನಾಹುತದ ‘ಮೈ ಫೈಮಿಲಿ’ ನಾಟಕ, ಹಿಂದು ಮುಸ್ಲಿಂ ಭಾವೈಕ್ಯತೆಯ ‘ಗೊರೂರು’ ನಾಟಕಗಳು ನಿದರ್ಶನಗಳಾಗಿವೆ. ನಾಟಕಗಳು ಪ್ರಗತಿಪರ ಚಿಂತನೆಗಳಿಗಾಗಿ, ನಾಳೆಯ ನೆಮ್ಮದಿಗಾಗಿ ಕಾರ್ಯನಿರ್ವಹಿಸುವ ಕೆಲಸ ಹೆಚ್ಚಾಗಿ ನಿರಂತರವಾಗಿರಲಿ ಎಂದು ಬಣ್ಣಿಸಿದರು.
ಹಿರಿಯ ರಂಗ ನಿರ್ದೇಶಕ ಚಿದಂಬರರಾವ್ ಜಂಬೆ ಮಾತನಾಡಿ, ಯುವ ತಲೆಮಾರನ್ನು ಕಟ್ಟುವ ಕೆಲಸ ನಿರಂತರ, ನಿರಂತರವಾಗಿ ಮಾಡುತ್ತಾ ಬಂದಿದೆ. ಅದು ಮುಂದೆ ಸಾಗಬೇಕಾಗಿದ್ದು, ಸಮಾಜದಲ್ಲಿನ ಇವತ್ತಿನ ವಿಕೃತಿಗೆ ಇದೊಂದೇ ಪರಿಹಾರ. ಇಂತಹ ಉತ್ಸವಗಳು ಉತ್ಕೃಷ್ಟವಾಗಿ ನಡೆಯಬೇಕಿದೆ ಎಂದು ಆಶಯ ವ್ಯಕ್ತಪಡಿಸಿದರು.
ಕಡೂರು ನವೀನ್ ಕುಮಾರ್ ಮತ್ತು ತಂಡ
ಜಾನಪದ ನೃತ್ಯ, ವೀರಗಾಸೆ ಮೇಳೈಸಿತು. ಬಳಿಕ ಶ್ರೀರಂಗಪಟ್ಟಣದ ನಿರ್ದಿಗಂತ ರಂಗ ತಂಡ ಪ್ರಸ್ತುತಿಯ ಶಕೀಲ್ ಅಹ್ಮದ್ ಅವರ ಪರಿಕಲ್ಪನೆ ಮತ್ತು ನಿರ್ದೇಶನದ ದಾರಿಯೋ – ಅವರ ‘ಕಾಂಟ್ ಪೇ ವೋಂಟ್ ಪೇ’ ಆಧಾರಿತ ‘ಕೊಡಲ್ಲ ಅಂದ್ರೆ ಕೊಡಲ್ಲ’ ನಾಟಕ ಕೊನೆಯ ದಿನ ಅದ್ಧೂರಿ ಪ್ರದರ್ಶನ ಕಂಡಿತು.
ಯಳಂದೂರು: ಚಿರತೆ ಸೆರೆಗಾಗಿ ಇಟ್ಟಿದ್ದ ಬೋನಿನಲ್ಲಿ ಸಿಲುಕಿದ ವ್ಯಕ್ತಿ 4 ತಾಸು ಒದ್ದಾಟ ನಡೆಸಿದ ಘಟನೆ ಯಳಂದೂರು ತಾಲ್ಲೂಕಿನ ಗಂಗವಾಡಿಯಲ್ಲಿ…
ಮೈಸೂರು: ರಾಜ್ಯ ರಾಜಕಾರಣದಲ್ಲಿ ಕುರ್ಚಿ ಕಾದಾಟ ತೀವ್ರಗೊಳ್ಳುತ್ತಿದ್ದಂತೆ, ಅಹಿಂದ ಸಮಾವೇಶದ ಹೆಸರಿನಲ್ಲಿ ಭಾರೀ ರಾಜಕೀಯ ಚಟುವಟಿಕೆಗಳಿಗೆ ವೇಗ ಸಿಕ್ಕಿದೆ. ಮುಖ್ಯಮಂತ್ರಿ…
ಮೈಸೂರು: ಚಿರತೆಯೊಂದು ರಾತ್ರೋರಾತ್ರಿ ಬೀದಿ ನಾಯಿಯನ್ನು ಹೊತ್ತೊಯ್ದಿರುವ ಘಟನೆ ಮೈಸೂರಿನ ಹೊರವಲಯದ ಬೆಳಗಾವಿ ಗ್ರಾಮದಲ್ಲಿ ನಡೆದಿದೆ. ಮೈಸೂರು ಜಿಲ್ಲೆಯಲ್ಲಿ ಕಾಡು…
ಬೆಂಗಳೂರು,- ನಿರಂತರ ಏರಿಕೆಯಿಂದಾಗಿ ಚಿನ್ನ, ಬೆಳ್ಳಿ ಬೆಲೆಯು ಸಾರ್ವಕಾಲಿಕ ದಾಖಲೆ ಸೃಷ್ಟಿಸಿದೆ. ಇಂದು ಪ್ರತೀ ಗ್ರಾಂ ಚಿನ್ನಕ್ಕೆ (24 ಕ್ಯಾರೆಟ್)…
ಅಮೇರಿಕಾ: ಯುವ ರೋಗಿಯನ್ನು ಹಾಗೂ ಇತರ ಏಳು ಜನರನ್ನು ಸಾಗಿಸುತ್ತಿದ್ದ ಮೆಕ್ಸಿಕ್ನ ನೌಕಾಪಡೆಯ ಸಣ್ಣ ವಿಮಾನವು ಗಾಲ್ವೆಸ್ಟನ್ ಬಳಿ ಪತನಗೊಂಡು…
ಬೆಂಗಳೂರು: 17ನೇ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ರಾಯಭಾರಿಯಾಗಿ ನಟ ಪ್ರಕಾಶ್ ರಾಜ್ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.…