ಮೈಸೂರು

ರಂಗಾಯಣ | ಐದು ದಿನಗಳ ʼನಿರಂತರ ರಂಗ ಉತ್ಸವʼಕ್ಕೆ ತೆರೆ

ಮೈಸೂರು : ನಿರಂತರ ರಂಗ ತಂಡದ ‘ನಿರಂತರ ರಂಗ ಉತ್ಸವ-2025-26’ರ ಐದು ದಿನಗಳ ರಂಗೋತ್ಸವದ ಕೊನೆಯ ದಿನ ‘ಕೊಡಲ್ಲ ಅಂದ್ರೆ ಕೊಡಲ್ಲ’ ನಾಟಕ ಪ್ರದರ್ಶನದ ಮೂಲಕ ತೆರೆ ಬಿತ್ತು.

ನಗರದ ಕಲಾಮಂದಿರ ಆವರಣದ ಕಿರುರಂಗಮಂದಿರದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಮತ್ತು ಹೊಸದಿಲ್ಲಿಯ ಸಂಸ್ಕೃತಿ ಸಚಿವಾಲಯದ ಸಹಯೋಗದಲ್ಲಿ ನಿರಂತರ -ಫೌಂಡೇಷನ್ ಏರ್ಪಡಿಸಿದ್ದ ಐದು ದಿನಗಳ ನಿರಂತರ ರಂಗೋತ್ಸವದ ಸಮಾರೋಪ ಸಮಾರಂಭದಲ್ಲಿ ಸಂಸ್ಕೃತಿ ಚಿಂತಕ ದೇವನೂರು ಬಸವರಾಜು ಮಾತನಾಡಿ, ನಿರಂತರ ರಂಗತಂಡ ಪ್ರಗತಿಪರವಾಗಿ ಅನ್ಯಾಯಗಳ ವಿರುದ್ಧ ಧ್ವನಿ ಎತ್ತುವ ಚಿಂತನೆಗಳ ಸಮೂಹವಾಗಿದೆ. ಇವತ್ತು ಜಾತಿ, ಧರ್ಮ, ಮೌಢ್ಯತೆಗಳಿಂದ ಹದಗೆಟ್ಟ ಸ್ಥಿತಿಯ ಸಮಾಜದಲ್ಲಿ, ಸಂಸ್ಥೆ ಕ್ರಿಯಾಶೀಲವಾಗಿ ಬೆಳೆದು ಬಂದಿದೆ ಎಂದರು.

ಪ್ರಸ್ತುತದಲ್ಲಿ ಜಾತಿ, ಧರ್ಮಗಳು ಮನುಷ್ಯನನ್ನು ಮೀರಿ ಬೆಳೆದಿವೆ. ಇಂತಹ ಸಮಯದಲ್ಲಿ ಯುವ ಮನಸ್ಸುಗಳಲ್ಲಿ ಪ್ರಗತಿಪರ ಆಲೋಚನೆಗಳನ್ನು, ಚಿಂತನೆಗಳನ್ನು, ಸದೃಢ ಭವಿಷ್ಯವನ್ನು ನಿರ್ಮಾಣ ಮಾಡುವಂತಹ ಮನೋಭಾವವನ್ನು ರಂಗತಂಡಗಳು, ಕಲಾವಿದರೂ ಮಾಡಬೇಕಿದೆ. ಅದಲ್ಲದೇ ಈ ವಿಚಾರವಂತಿಕೆಯನ್ನು ಕಾಲೇಜು ವಿದ್ಯಾರ್ಥಿಗಳಲ್ಲಿ ಬಿತ್ತುವ ಕೆಲಸ ಮತ್ತಷ್ಟು ಹೆಚ್ಚಬೇಕಿದೆ ಎಂದು ಅಭಿಪ್ರಾಯಪಟ್ಟರು.

ಇವತ್ತು ರಂಗದ ಮೇಲೆ ಪ್ರಸ್ತುತದಲ್ಲಿ ನಡೆಯುತ್ತಿರುವ ವಿಚಾರಗಳ ಕುರಿತು ನಾಟಕ ಪ್ರದರ್ಶನಗಳಾಗಬೇಕಿದೆ. ಈ ನಡೆಯಲ್ಲಿ ಮೊಬೈಲ್‌ಗಳಿಂದ ಆಗುವ ಅನಾಹುತದ ‘ಮೈ ಫೈಮಿಲಿ’ ನಾಟಕ, ಹಿಂದು ಮುಸ್ಲಿಂ ಭಾವೈಕ್ಯತೆಯ ‘ಗೊರೂರು’ ನಾಟಕಗಳು ನಿದರ್ಶನಗಳಾಗಿವೆ. ನಾಟಕಗಳು ಪ್ರಗತಿಪರ ಚಿಂತನೆಗಳಿಗಾಗಿ, ನಾಳೆಯ ನೆಮ್ಮದಿಗಾಗಿ ಕಾರ್ಯನಿರ್ವಹಿಸುವ ಕೆಲಸ ಹೆಚ್ಚಾಗಿ ನಿರಂತರವಾಗಿರಲಿ ಎಂದು ಬಣ್ಣಿಸಿದರು.

ಹಿರಿಯ ರಂಗ ನಿರ್ದೇಶಕ ಚಿದಂಬರರಾವ್ ಜಂಬೆ ಮಾತನಾಡಿ, ಯುವ ತಲೆಮಾರನ್ನು ಕಟ್ಟುವ ಕೆಲಸ ನಿರಂತರ, ನಿರಂತರವಾಗಿ ಮಾಡುತ್ತಾ ಬಂದಿದೆ. ಅದು ಮುಂದೆ ಸಾಗಬೇಕಾಗಿದ್ದು, ಸಮಾಜದಲ್ಲಿನ ಇವತ್ತಿನ ವಿಕೃತಿಗೆ ಇದೊಂದೇ ಪರಿಹಾರ. ಇಂತಹ ಉತ್ಸವಗಳು ಉತ್ಕೃಷ್ಟವಾಗಿ ನಡೆಯಬೇಕಿದೆ ಎಂದು ಆಶಯ ವ್ಯಕ್ತಪಡಿಸಿದರು.

ಕಡೂರು ನವೀನ್ ಕುಮಾರ್ ಮತ್ತು ತಂಡ
ಜಾನಪದ ನೃತ್ಯ, ವೀರಗಾಸೆ ಮೇಳೈಸಿತು. ಬಳಿಕ ಶ್ರೀರಂಗಪಟ್ಟಣದ ನಿರ್ದಿಗಂತ ರಂಗ ತಂಡ ಪ್ರಸ್ತುತಿಯ ಶಕೀಲ್ ಅಹ್ಮದ್ ಅವರ ಪರಿಕಲ್ಪನೆ ಮತ್ತು ನಿರ್ದೇಶನದ ದಾರಿಯೋ – ಅವರ ‘ಕಾಂಟ್ ಪೇ ವೋಂಟ್ ಪೇ’ ಆಧಾರಿತ ‘ಕೊಡಲ್ಲ ಅಂದ್ರೆ ಕೊಡಲ್ಲ’ ನಾಟಕ ಕೊನೆಯ ದಿನ ಅದ್ಧೂರಿ ಪ್ರದರ್ಶನ ಕಂಡಿತು.

ಆಂದೋಲನ ಡೆಸ್ಕ್

Recent Posts

ಮಿರ್ಜಾಪುರದಲ್ಲಿ ಸರಣಿ ಅಪಘಾತ: 11 ಮಂದಿ ಸಾವು

ಮಿರ್ಜಾಪುರ (ಉತ್ತರ ಪ್ರದೇಶ): ಬಹು ವಾಹನಗಳು ಡಿಕ್ಕಿಯಾಗಿ ಸಂಭವಿಸಿದ ಭೀಕರ ಸರಣಿ ಅಪಘಾತದಲ್ಲಿ ಮಕ್ಕಳು ಸೇರಿದಂತೆ 11 ಮಂದಿ ಸಾವನ್ನಪ್ಪಿರುವ…

1 hour ago

ಪೆಟ್ರೋಲ್‌, ಡೀಸೆಲ್‌ ದರ ಏರಿಕೆಯ ಚಿಂತನೆ ಇಲ್ಲ: ಕೇಂದ್ರ ಸರ್ಕಾರ ಸ್ಪಷ್ಟನೆ

ನವದೆಹಲಿ: ಪೆಟ್ರೋಲ್‌ ಮತ್ತು ಡೀಸೆಲ್‌ ಬೆಲೆ ಏರಿಕೆಯ ಚಿಂತನೆ ಇಲ್ಲ ಎಂದು ಕೇಂದ್ರ ಸರ್ಕಾರ ಸ್ಪಷ್ಟನೆ ನೀಡಿದೆ. ಪೆಟ್ರೋಲ್‌ ಮತ್ತು…

1 hour ago

ಮಂಡ್ಯದಲ್ಲಿ ಸಿಇಟಿ ಗದ್ದಲ: ವಿದ್ಯಾರ್ಥಿನಿಯರ ಓಲೆ ಬಿಚ್ಚಿಸಿದ ಪರಿವೀಕ್ಷಕರು

ಮಂಡ್ಯ: ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆಯಲ್ಲಿ ಇಂದು ಸಿಇಟಿ ಪರೀಕ್ಷೆ ಹಿನ್ನೆಲೆ ರಾಜ್ಯ ಸರ್ಕಾರದ ವಸ್ತ್ರ ಸಂಹಿತೆ ಕಡ್ಡಾಯವಾಗಿ ಜಾರಿಗೊಂಡಿದೆ. ಪರೀಕ್ಷೆಗೆ…

2 hours ago

ಮೈಸೂರಿನಲ್ಲಿ ಮೀನು ಮಾರಾಟ ಮಳಿಗೆಗೆ ಬೆಂಕಿ: ಅಂಗಡಿ ಸಾಮಾಗ್ರಿಗಳು ಸಂಪೂರ್ಣ ಸುಟ್ಟು ಕರಕಲು

ಮೈಸೂರು: ಮೈಸೂರಿನಲ್ಲಿ ಮೀನು ಮಾರಾಟ ಮಳಿಗೆಗೆ ಆಕಸ್ಮಿಕ ಬೆಂಕಿ ಕಾಣಿಸಿಕೊಂಡ ಪರಿಣಾಮ ಅಂಗಡಿ ಸಾಮಾಗ್ರಿಗಳು ಸಂಪೂರ್ಣ ಸುಟ್ಟು ಕರಕಲಾಗಿರುವ ಘಟನೆ…

2 hours ago

ಪರಿಶಿಷ್ಟ ಜಾತಿಯೊಳಗೆ ಒಳಮೀಸಲಾತಿ | ನಾಳೆ ವಿಶೇಷ ಸಂಪುಟ ಸಭೆ

ಬೆಂಗಳೂರು : ಪರಿಶಿಷ್ಟ ಜಾತಿಯೊಳಗೆ ಒಳಮೀಸಲಾತಿ ಕಲ್ಪಿಸುವ ಉದ್ದೇಶಕ್ಕಾಗಿ ನಾಳೆ(ಏ.24)ವಿಶೇಷ ಸಚಿವ ಸಂಪುಟ ಸಭೆ ನಿಗದಿಯಾಗಿದೆ. ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ…

3 hours ago

ವಿದೇಶಿ ಮಹಿಳೆ ಮೇಲೆ ಅತ್ಯಾಚಾರ ಆರೋಪ: ಕುಟ್ಟ ಖಾಸಗಿ ಹೋಂಸ್ಟೇ ಪರವಾನಗಿ ರದ್ದು

ಪೊನ್ನಂಪೇಟೆ: ಕೊಡಗು ಜಿಲ್ಲೆ ಪೊನ್ನಂಪೇಟೆ ತಾಲ್ಲೂಕಿನ ಕುಟ್ಟ ಗ್ರಾಮದಲ್ಲಿ ವಿದೇಶಿ ಮಹಿಳೆ ಅತ್ಯಾಚಾರ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಕುಟ್ಟ ಖಾಸಗಿ…

3 hours ago