ಮೈಸೂರು

ರಂಗಾಯಣ | ಐದು ದಿನಗಳ ʼನಿರಂತರ ರಂಗ ಉತ್ಸವʼಕ್ಕೆ ತೆರೆ

ಮೈಸೂರು : ನಿರಂತರ ರಂಗ ತಂಡದ ‘ನಿರಂತರ ರಂಗ ಉತ್ಸವ-2025-26’ರ ಐದು ದಿನಗಳ ರಂಗೋತ್ಸವದ ಕೊನೆಯ ದಿನ ‘ಕೊಡಲ್ಲ ಅಂದ್ರೆ ಕೊಡಲ್ಲ’ ನಾಟಕ ಪ್ರದರ್ಶನದ ಮೂಲಕ ತೆರೆ ಬಿತ್ತು.

ನಗರದ ಕಲಾಮಂದಿರ ಆವರಣದ ಕಿರುರಂಗಮಂದಿರದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಮತ್ತು ಹೊಸದಿಲ್ಲಿಯ ಸಂಸ್ಕೃತಿ ಸಚಿವಾಲಯದ ಸಹಯೋಗದಲ್ಲಿ ನಿರಂತರ -ಫೌಂಡೇಷನ್ ಏರ್ಪಡಿಸಿದ್ದ ಐದು ದಿನಗಳ ನಿರಂತರ ರಂಗೋತ್ಸವದ ಸಮಾರೋಪ ಸಮಾರಂಭದಲ್ಲಿ ಸಂಸ್ಕೃತಿ ಚಿಂತಕ ದೇವನೂರು ಬಸವರಾಜು ಮಾತನಾಡಿ, ನಿರಂತರ ರಂಗತಂಡ ಪ್ರಗತಿಪರವಾಗಿ ಅನ್ಯಾಯಗಳ ವಿರುದ್ಧ ಧ್ವನಿ ಎತ್ತುವ ಚಿಂತನೆಗಳ ಸಮೂಹವಾಗಿದೆ. ಇವತ್ತು ಜಾತಿ, ಧರ್ಮ, ಮೌಢ್ಯತೆಗಳಿಂದ ಹದಗೆಟ್ಟ ಸ್ಥಿತಿಯ ಸಮಾಜದಲ್ಲಿ, ಸಂಸ್ಥೆ ಕ್ರಿಯಾಶೀಲವಾಗಿ ಬೆಳೆದು ಬಂದಿದೆ ಎಂದರು.

ಪ್ರಸ್ತುತದಲ್ಲಿ ಜಾತಿ, ಧರ್ಮಗಳು ಮನುಷ್ಯನನ್ನು ಮೀರಿ ಬೆಳೆದಿವೆ. ಇಂತಹ ಸಮಯದಲ್ಲಿ ಯುವ ಮನಸ್ಸುಗಳಲ್ಲಿ ಪ್ರಗತಿಪರ ಆಲೋಚನೆಗಳನ್ನು, ಚಿಂತನೆಗಳನ್ನು, ಸದೃಢ ಭವಿಷ್ಯವನ್ನು ನಿರ್ಮಾಣ ಮಾಡುವಂತಹ ಮನೋಭಾವವನ್ನು ರಂಗತಂಡಗಳು, ಕಲಾವಿದರೂ ಮಾಡಬೇಕಿದೆ. ಅದಲ್ಲದೇ ಈ ವಿಚಾರವಂತಿಕೆಯನ್ನು ಕಾಲೇಜು ವಿದ್ಯಾರ್ಥಿಗಳಲ್ಲಿ ಬಿತ್ತುವ ಕೆಲಸ ಮತ್ತಷ್ಟು ಹೆಚ್ಚಬೇಕಿದೆ ಎಂದು ಅಭಿಪ್ರಾಯಪಟ್ಟರು.

ಇವತ್ತು ರಂಗದ ಮೇಲೆ ಪ್ರಸ್ತುತದಲ್ಲಿ ನಡೆಯುತ್ತಿರುವ ವಿಚಾರಗಳ ಕುರಿತು ನಾಟಕ ಪ್ರದರ್ಶನಗಳಾಗಬೇಕಿದೆ. ಈ ನಡೆಯಲ್ಲಿ ಮೊಬೈಲ್‌ಗಳಿಂದ ಆಗುವ ಅನಾಹುತದ ‘ಮೈ ಫೈಮಿಲಿ’ ನಾಟಕ, ಹಿಂದು ಮುಸ್ಲಿಂ ಭಾವೈಕ್ಯತೆಯ ‘ಗೊರೂರು’ ನಾಟಕಗಳು ನಿದರ್ಶನಗಳಾಗಿವೆ. ನಾಟಕಗಳು ಪ್ರಗತಿಪರ ಚಿಂತನೆಗಳಿಗಾಗಿ, ನಾಳೆಯ ನೆಮ್ಮದಿಗಾಗಿ ಕಾರ್ಯನಿರ್ವಹಿಸುವ ಕೆಲಸ ಹೆಚ್ಚಾಗಿ ನಿರಂತರವಾಗಿರಲಿ ಎಂದು ಬಣ್ಣಿಸಿದರು.

ಹಿರಿಯ ರಂಗ ನಿರ್ದೇಶಕ ಚಿದಂಬರರಾವ್ ಜಂಬೆ ಮಾತನಾಡಿ, ಯುವ ತಲೆಮಾರನ್ನು ಕಟ್ಟುವ ಕೆಲಸ ನಿರಂತರ, ನಿರಂತರವಾಗಿ ಮಾಡುತ್ತಾ ಬಂದಿದೆ. ಅದು ಮುಂದೆ ಸಾಗಬೇಕಾಗಿದ್ದು, ಸಮಾಜದಲ್ಲಿನ ಇವತ್ತಿನ ವಿಕೃತಿಗೆ ಇದೊಂದೇ ಪರಿಹಾರ. ಇಂತಹ ಉತ್ಸವಗಳು ಉತ್ಕೃಷ್ಟವಾಗಿ ನಡೆಯಬೇಕಿದೆ ಎಂದು ಆಶಯ ವ್ಯಕ್ತಪಡಿಸಿದರು.

ಕಡೂರು ನವೀನ್ ಕುಮಾರ್ ಮತ್ತು ತಂಡ
ಜಾನಪದ ನೃತ್ಯ, ವೀರಗಾಸೆ ಮೇಳೈಸಿತು. ಬಳಿಕ ಶ್ರೀರಂಗಪಟ್ಟಣದ ನಿರ್ದಿಗಂತ ರಂಗ ತಂಡ ಪ್ರಸ್ತುತಿಯ ಶಕೀಲ್ ಅಹ್ಮದ್ ಅವರ ಪರಿಕಲ್ಪನೆ ಮತ್ತು ನಿರ್ದೇಶನದ ದಾರಿಯೋ – ಅವರ ‘ಕಾಂಟ್ ಪೇ ವೋಂಟ್ ಪೇ’ ಆಧಾರಿತ ‘ಕೊಡಲ್ಲ ಅಂದ್ರೆ ಕೊಡಲ್ಲ’ ನಾಟಕ ಕೊನೆಯ ದಿನ ಅದ್ಧೂರಿ ಪ್ರದರ್ಶನ ಕಂಡಿತು.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಬಂಡಾಯದ ಹೊಳೆ

ಬಂಡಾಯದ ಹೊಳೆ ಮಿಂಚು ಹೂಮಳೆ ! ಅತಿವೃಷ್ಟಿ,ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ, ಕಾರಣ,…

17 hours ago

ಓದುಗರ ಪತ್ರ: ಆತಂಕಕಾರಿ ವಿಚಾರ

ರಾಜ್ಯದಲ್ಲಿ ಎಂಟು ಸಾವಿರಕ್ಕೂ ಅಧಿಕ ಪೋಕ್ಸೊ ಪ್ರಕರಣಗಳು ದಾಖಲಾಗಿವೆ ಎಂದು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನ್ಯಾಯಮೂರ್ತಿ…

17 hours ago

ಓದುಗರ ಪತ್ರ: ಜ್ಞಾಪಿಸಿಕೊಳ್ಳಬೇಕಿತ್ತು, ಕೃತಜ್ಞತೆ ಹೇಳಬೇಕಿತ್ತು…

ಮೈಸೂರಿನ ನಾರಾಯಣ ಶಾಸಿ ರಸ್ತೆಯಲ್ಲಿ, ಕಳೆದ ಶನಿವಾರ ಪ್ರಧಾನಿ ನರೇಂದ್ರ ಮೋದಿ ಅವರಿಂದ ಉದ್ಘಾಟನೆಗೊಂಡ ವಿವೇಕ ಸ್ಮಾರಕದ ಜಗವು ಕೆಲವು…

17 hours ago

ಮನುಕುಲದ ಏರಿಳಿತಗಳಿಗೆ ಸಾಕ್ಷಿದಾರರಾದ ಈ ಪೀಳಿಗೆಗಳು

ಶುಭಾ ಖಟಾವಕರ ಮ್ಹೆತ್ರಸ್ ಹೊಸ ಇತಿಹಾಸ ಸೃಷ್ಟಿಸಿದ ‘ಜೆನ್ ಝೀ’ ಪೀಳಿಗೆ ಸಂಪ್ರದಾಯಗಳನ್ನು ಪ್ರಶ್ನಿಸಿದ ‘ಬೂಮರ್ಸ್’ ಯುವಜನ ೧೯೦೦ ರಿಂದ…

17 hours ago

ನನೆಗುದಿಗೆ ಬಿದ್ದ ರಾಜ್‌ಘಾಟ್ ಮಾದರಿ ಗಾಂಧಿ ಸ್ಮಾರಕ

ಪುನೀತ್ ೩ ವರ್ಷ ಕಳೆದರೂ ಮುಗಿಯದ ಕಾಮಗಾರಿ: ಶೀಘ್ರ ಪೂರ್ಣಗೊಳಿಸಲು ಒತ್ತಾಯ ಮಡಿಕೇರಿ: ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಭಾಷಣ ಮಾಡಿದ್ದ…

17 hours ago

ಅನಿಲ್ ಚಿಕ್ಕಮಾದುಗೆ ಕೈತಪ್ಪಿದ ಸಚಿವ ಸ್ಥಾನ; ಕ್ಷೇತ್ರದ ಜನರಿಗೆ ನಿರಾಸೆ

ಮಂಜು ಕೋಟೆ ಕೋಟೆ: ಸಚಿವ ಸ್ಥಾನ ದೊರೆತಿದ್ದರೆ ಹಿಂದುಳಿದ ಕ್ಷೇತ್ರದ ಅಭಿವೃದ್ಧಿಯಾಗುತ್ತಿತ್ತು ಎಂಬ ನಿರೀಕ್ಷೆ ಎಚ್.ಡಿ.ಕೋಟೆ: ಮೈಸೂರು ಪ್ರಾಂತ್ಯದ ನಾಯಕ…

17 hours ago