ಮೈಸೂರು

ಅತ್ಯಾಚಾರ ಕೇಸ್‌| ಆರೋಪಿಗೆ 10 ವರ್ಷ ಶಿಕ್ಷೆ ವಿಧಿಸಿದ ಮೈಸೂರು ಜಿಲ್ಲಾ ನ್ಯಾಯಾಲಯ

ಮೈಸೂರು: ಅವಿವಾಹಿತ ಮಹಿಳೆ ಮೇಲೆ ಅತ್ಯಾಚಾರವೆಸೆಗಿದ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಅಪರಾಧಿಗೆ 10 ವರ್ಷ ಜೈಲು ಶಿಕ್ಷೆ ಹಾಗೂ 30 ಸಾವಿರ ದಂಡವನ್ನು ವಿಧಿಸಲಾಗಿದೆ ಎಂದು ಮೈಸೂರಿನ 7ನೇ ಅಧಿಕ ಜಿಲ್ಲಾ ಮತ್ತು ಸತ್‌ ನ್ಯಾಯಾಲಯ ತೀರ್ಪು ಪ್ರಕಟಿಸಿದೆ.

ಈ ಕುರಿತು ಇಂದು(ಫೆಬ್ರವರಿ.25) ವಿಚಾರಣೆ ನಡೆಸಿದ ಕೋರ್ಟ್‌, ಹುಣಸೂರು ತಾಲ್ಲೂಕಿನ(ಪಟ್ಟಣ) ಲಾಲ್‌ ಬಂದ್‌ ಸ್ಟ್ರೀಟ್‌ ನಿವಾಸಿ ಜಬೀವುಲ್ಲಾ(26) S/O ಅತಾವುಲ್ಲಾ ಎಂಬಾತ ಮಹಿಳೆಗೆ ದೆವ್ವ ಬಿಡಿಸುವ ನೆಪದಲ್ಲಿ ಅತ್ಯಾಚಾರ ಎಸಗಿರುವುದು ರುಜುವಾತಾಗಿದೆ. ಹೀಗಾಗಿ ಆರೋಪಿಯನ್ನು ಅಪರಾಧಿ ಎಂದು ಪರಿಗಣಿಸಿ ಆರೋಪಿಗೆ ಕಲಂ 376 ಐಪಿಸಿ ಅಡಿಯಲ್ಲಿ 10 ವರ್ಷಗಳ ಕಾಲ ಕಠಿಣ ಕಾರಾಗೃಹ ಶಿಕ್ಷೆ, 30 ಸಾವಿರ ರೂ. ದಂಡ ಹಾಗೂ ಕಲಂ 506 ಐಪಿಸಿ ಅಡಿಯ ಅಪರಾಧಕ್ಕೆ 1 ವರ್ಷ ಸಾದಾ ಸಜೆ ಮತ್ತು 5 ಸಾವಿ ರೂ. ದಂಡ ವಿಧಿಸಲಾಗಿದೆ ಎಂದು ಆದೇಶ ಹೊರಡಿಸಿದೆ.

ಏನಿದು ಪ್ರಕರಣ?

ಸಂತ್ರಸ್ಥೆ ಮಹಿಳೆಗೆ 33 ವರ್ಷಗಳಾದರೂ ಮದುವೆಯಾಗದ ಹಿನ್ನೆಲೆಯಲ್ಲಿ ಕುಟುಂಬಸ್ಥರು ಆಕೆಯನ್ನು ಆರೋಪಿ ಆರೋಪಿ ಜಬೀವುಲ್ಲಾ ಬಿನ್ ಅತಾವುಲ್ಲಾ ಬಳಿ ಕರೆದುಕೊಂಡು ಹೋಗಿದ್ದರು. ಈ ನಡುವೆ ಆರೋಪಿಯೇ ತಾನು ಧರ್ಮಗುರು ಎಂದು ಹೇಳಿಕೊಂಡಿದ್ದು, ಸಂತ್ರಸ್ತೆಗೆ ದೆವ್ವ ಹಿಡಿದಿದೆ ಹೇಳಿದ್ದನು. ಬಳಿಕ ಪೂಜೆ ಮಾಡಿ ಬಿಡಿಸಿದರೆ ಮದುವೆಯಾಗುತ್ತದೆ ಎಂದು ತಿಳಿಸಿದ್ದನು. ಅಂತೆಯೇ 01-06-2020 ರಂದು ಬೆಳಿಗ್ಗೆ 10-00 ಗಂಟೆಗೆ ಸಂತ್ರಸ್ಥೆಯ ಮನೆಯಲ್ಲಿ ಪೂಜೆ ಮಾಡಿದ್ದು, ಮೊಟ್ಟೆ, ನಿಂಬೆಹಣ್ಣನ್ನು ಬೋಲೆಬಾಲೆ ಹಜರತ್ ಶಾ ಖಾದ್ರಿ ಅಂಬ್ರಿಗೋರಿಯ ಬಳಿ ಒಡೆಯಬೇಕೆಂದು ಹೇಳಿ ಪಿರಿಯಾಪಟ್ಟಣದ ಬೋಲೆಬಾಲೆ ಗೋರಿಯ ಸಮೀಪ ಸಂತ್ರಸ್ಥೆ ಹಾಗೂ ಆಕೆಯ ಸಂಬಂಧಿ ಸಾದಿಕ್ ಪಾಷ ಅವರನ್ನು ಕರೆದುಕೊಂಡು ಹೋಗಿದ್ದನು.

ಈ ಮಧ್ಯೆ ಆರೋಪಿಯೂ ಸಾದಿಕ್‌ ಪಾಷ ಅವರಿಗೆ ಬೆಂಕಿ ಪೊಟ್ಟಣ ತರುವಂತೆ ಪಿರಿಯಾಪಟ್ಟಣ ನಗರಕ್ಕೆ ಕಳುಹಿಸಿದ್ದನು. ಬಳಿಕ ಅಂದು ಮಧ್ಯಾಹ್ನವೇ ಸಂತ್ರಸ್ಥೆ ಒಬ್ಬರೇ ಇದ್ದಾಗ ಬಲವಂತವಾಗಿ ಅತ್ಯಾಚಾರವೆಸಗಿದ್ದನು. ಇನ್ನು ಈ ಸಂಬಂಧ ಪಿರಿಯಾಪಟ್ಟಣ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಅರ್ಚನ ಎಸ್‌ ಎಸ್

Recent Posts

ಓದುಗರ ಪತ್ರ: ಜಗಕೆ ಮಾದರಿ!

ಜಗಕೆ ಮಾದರಿ! ಭಲೆ ಭಲೇ ಅಂಕೇಗೌಡರೆ ಜಗಕೆ ಮಾದರಿ ನಿಮ್ಮ ಪುಸ್ತಕಪ್ರೀತಿ ಅರಿವಿನ ಆಕರಗಳು ಪುಸ್ತಕಗಳು! ದುಡಿದ ಲಕ್ಷಾಂತರ ಹಣವನು…

41 mins ago

ಓದುಗರ ಪತ್ರ: ವಿವೇಕಾನಂದ ಪ್ರತಿಮೆ ಅನಾವರಣಗೊಳಿಸಿ

ಮೈಸೂರಿನ ವಿವೇಕಾನಂದ ನಗರದ ವೃತ್ತದಲ್ಲಿ ಸ್ವಾಮಿ ವಿವೇಕಾನಂದರ ಪ್ರತಿಮೆಯನ್ನು ಸ್ಥಾಪಿಸಲಾಗಿದ್ದು, ಪ್ರತಿಮೆಯನ್ನು ಪ್ಲಾಸ್ಟಿಕ್ ಕವರ್‌ನಿಂದ ಮುಚ್ಚಲಾಗಿದೆ. ಜ.೧೨ರಂದು ಸ್ವಾಮಿ ವಿವೇಕಾನಂದರ…

43 mins ago

ಓದುಗರ ಪತ್ರ: ಮಲ್ಲಯ್ಯನ ಬೆಟ್ಟ ಅಭಿವೃದ್ಧಿಗೊಳಿಸಿ

ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ ತಾಲ್ಲೂಕಿನ ಬೆಟ್ಟದಪುರದಲ್ಲಿರುವ ಶಿಡ್ಲು ಮಲ್ಲಿಕಾರ್ಜುನ ಸ್ವಾಮಿ ಬೆಟ್ಟ (ಮಲ್ಲಯ್ಯನ ಬೆಟ್ಟ) ಪ್ರಸಿದ್ಧ ಪ್ರವಾಸಿ ಮತ್ತು ಧಾರ್ಮಿಕ…

45 mins ago

ಓದುಗರ ಪತ್ರ: ಬಸ್ ತಂಗುದಾಣ ನಿರ್ಮಿಸಿ

ಚಾಮರಾಜನಗರದ, ಸಿಂಹ ಚಲನಚಿತ್ರಮಂದಿರದ ಎದುರಿರುವ ಎಲ್‌ಐಸಿ ಕಚೇರಿಯ ಮುಂಭಾಗದಲ್ಲಿ ನಂಜನಗೂಡು-ಮೈಸೂರು ಸೇರಿದಂತೆ ವಿವಿಧ ಮಾರ್ಗಗಳ ಬಸ್‌ಗಳು ಸಂಚರಿಸುತ್ತವೆ. ಈ ಸ್ಥಳದಲ್ಲಿ…

47 mins ago

ಓದುಗರ ಪತ್ರ: ರಥೋತ್ಸವ: ಮುನ್ನೆಚ್ಚರಿಕೆ ಅಗತ್ಯ

ಚಾಮರಾಜನಗರ ಜಿಲ್ಲೆ ಮುಕ್ಕಡಹಳ್ಳಿ ಗ್ರಾಮದಲ್ಲಿ ಮಂಗಳವಾರ ನಡೆದ ಮಾಯಮ್ಮ ದೇವಿ ರಥೋತ್ಸವದ ವೇಳೆ ರಥದ ಚಕ್ರದ ದಂಡ ಮುರಿದ ಪರಿಣಾಮ…

49 mins ago

ಅಕಾಲಿಕ ಮಳೆಯಿಂದ ಕಾಫಿ ಬೆಳೆಗಾರರಿಗೆ ಸಂಕಷ್ಟ

ಲಕ್ಷ್ಮಿಕಾಂತ್ ಕೊಮಾರಪ್ಪ ಹೂವು ಅರಳುತ್ತಿರುವುದರಿಂದ ಕಾಫಿ ಕೊಯ್ಲಿಗೆ ಅಡ್ಡಿ; ಹೆಚ್ಚುವರಿ ಕಾರ್ಮಿಕ ವೆಚ್ಚವನ್ನು ಭರಿಸಬೇಕಾದ ಅನಿವಾರ್ಯತೆ ಸೋಮವಾರಪೇಟೆ: ತಾಲ್ಲೂಕಿನ ಗ್ರಾಮೀಣ,…

52 mins ago