ಮೈಸೂರು

ಅತ್ಯಾಚಾರ ಕೇಸ್‌| ಆರೋಪಿಗೆ 10 ವರ್ಷ ಶಿಕ್ಷೆ ವಿಧಿಸಿದ ಮೈಸೂರು ಜಿಲ್ಲಾ ನ್ಯಾಯಾಲಯ

ಮೈಸೂರು: ಅವಿವಾಹಿತ ಮಹಿಳೆ ಮೇಲೆ ಅತ್ಯಾಚಾರವೆಸೆಗಿದ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಅಪರಾಧಿಗೆ 10 ವರ್ಷ ಜೈಲು ಶಿಕ್ಷೆ ಹಾಗೂ 30 ಸಾವಿರ ದಂಡವನ್ನು ವಿಧಿಸಲಾಗಿದೆ ಎಂದು ಮೈಸೂರಿನ 7ನೇ ಅಧಿಕ ಜಿಲ್ಲಾ ಮತ್ತು ಸತ್‌ ನ್ಯಾಯಾಲಯ ತೀರ್ಪು ಪ್ರಕಟಿಸಿದೆ.

ಈ ಕುರಿತು ಇಂದು(ಫೆಬ್ರವರಿ.25) ವಿಚಾರಣೆ ನಡೆಸಿದ ಕೋರ್ಟ್‌, ಹುಣಸೂರು ತಾಲ್ಲೂಕಿನ(ಪಟ್ಟಣ) ಲಾಲ್‌ ಬಂದ್‌ ಸ್ಟ್ರೀಟ್‌ ನಿವಾಸಿ ಜಬೀವುಲ್ಲಾ(26) S/O ಅತಾವುಲ್ಲಾ ಎಂಬಾತ ಮಹಿಳೆಗೆ ದೆವ್ವ ಬಿಡಿಸುವ ನೆಪದಲ್ಲಿ ಅತ್ಯಾಚಾರ ಎಸಗಿರುವುದು ರುಜುವಾತಾಗಿದೆ. ಹೀಗಾಗಿ ಆರೋಪಿಯನ್ನು ಅಪರಾಧಿ ಎಂದು ಪರಿಗಣಿಸಿ ಆರೋಪಿಗೆ ಕಲಂ 376 ಐಪಿಸಿ ಅಡಿಯಲ್ಲಿ 10 ವರ್ಷಗಳ ಕಾಲ ಕಠಿಣ ಕಾರಾಗೃಹ ಶಿಕ್ಷೆ, 30 ಸಾವಿರ ರೂ. ದಂಡ ಹಾಗೂ ಕಲಂ 506 ಐಪಿಸಿ ಅಡಿಯ ಅಪರಾಧಕ್ಕೆ 1 ವರ್ಷ ಸಾದಾ ಸಜೆ ಮತ್ತು 5 ಸಾವಿ ರೂ. ದಂಡ ವಿಧಿಸಲಾಗಿದೆ ಎಂದು ಆದೇಶ ಹೊರಡಿಸಿದೆ.

ಏನಿದು ಪ್ರಕರಣ?

ಸಂತ್ರಸ್ಥೆ ಮಹಿಳೆಗೆ 33 ವರ್ಷಗಳಾದರೂ ಮದುವೆಯಾಗದ ಹಿನ್ನೆಲೆಯಲ್ಲಿ ಕುಟುಂಬಸ್ಥರು ಆಕೆಯನ್ನು ಆರೋಪಿ ಆರೋಪಿ ಜಬೀವುಲ್ಲಾ ಬಿನ್ ಅತಾವುಲ್ಲಾ ಬಳಿ ಕರೆದುಕೊಂಡು ಹೋಗಿದ್ದರು. ಈ ನಡುವೆ ಆರೋಪಿಯೇ ತಾನು ಧರ್ಮಗುರು ಎಂದು ಹೇಳಿಕೊಂಡಿದ್ದು, ಸಂತ್ರಸ್ತೆಗೆ ದೆವ್ವ ಹಿಡಿದಿದೆ ಹೇಳಿದ್ದನು. ಬಳಿಕ ಪೂಜೆ ಮಾಡಿ ಬಿಡಿಸಿದರೆ ಮದುವೆಯಾಗುತ್ತದೆ ಎಂದು ತಿಳಿಸಿದ್ದನು. ಅಂತೆಯೇ 01-06-2020 ರಂದು ಬೆಳಿಗ್ಗೆ 10-00 ಗಂಟೆಗೆ ಸಂತ್ರಸ್ಥೆಯ ಮನೆಯಲ್ಲಿ ಪೂಜೆ ಮಾಡಿದ್ದು, ಮೊಟ್ಟೆ, ನಿಂಬೆಹಣ್ಣನ್ನು ಬೋಲೆಬಾಲೆ ಹಜರತ್ ಶಾ ಖಾದ್ರಿ ಅಂಬ್ರಿಗೋರಿಯ ಬಳಿ ಒಡೆಯಬೇಕೆಂದು ಹೇಳಿ ಪಿರಿಯಾಪಟ್ಟಣದ ಬೋಲೆಬಾಲೆ ಗೋರಿಯ ಸಮೀಪ ಸಂತ್ರಸ್ಥೆ ಹಾಗೂ ಆಕೆಯ ಸಂಬಂಧಿ ಸಾದಿಕ್ ಪಾಷ ಅವರನ್ನು ಕರೆದುಕೊಂಡು ಹೋಗಿದ್ದನು.

ಈ ಮಧ್ಯೆ ಆರೋಪಿಯೂ ಸಾದಿಕ್‌ ಪಾಷ ಅವರಿಗೆ ಬೆಂಕಿ ಪೊಟ್ಟಣ ತರುವಂತೆ ಪಿರಿಯಾಪಟ್ಟಣ ನಗರಕ್ಕೆ ಕಳುಹಿಸಿದ್ದನು. ಬಳಿಕ ಅಂದು ಮಧ್ಯಾಹ್ನವೇ ಸಂತ್ರಸ್ಥೆ ಒಬ್ಬರೇ ಇದ್ದಾಗ ಬಲವಂತವಾಗಿ ಅತ್ಯಾಚಾರವೆಸಗಿದ್ದನು. ಇನ್ನು ಈ ಸಂಬಂಧ ಪಿರಿಯಾಪಟ್ಟಣ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಅರ್ಚನ ಎಸ್‌ ಎಸ್

Recent Posts

ಶ್ರಾವಣ ಮಾಸದ ಕೊನೆಯ ದಿನದ 108 ಕುಂಭಾಭಿಷೇಕ: ಮಲೆ ಮಹದೇಶ್ವರ ಕ್ಷೇತ್ರದಲ್ಲಿ ಭಕ್ತಿ ವೈಭವ

ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…

32 mins ago

ಹನೂರು| ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ: ಮೂವರು ಯುವಕರು ದುರ್ಮರಣ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…

1 hour ago

ಓದುಗರ ಪತ್ರ: ದಸರಾ ಚಿತ್ರೋತ್ಸವ ಮುಂದುವರಿಯಲಿ

ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…

6 hours ago

ಓದುಗರ ಪತ್ರ: ಫಿಲಂ ಸಿಟಿ ಯೋಜನೆ ಆದಷ್ಟು ಬೇಗ ಕಾರ್ಯರೂಪಕ್ಕೆ ಬರಲಿ

ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…

6 hours ago

ಓದುಗರ ಪತ್ರ: ಕಾವೇರಿ:ಆದೇಶ ನಿಷ್ಪಕ್ಷಪಾತವಾಗಿರಲಿ

ಸಿಡಬ್ಲ್ಯುಆರ್‌ಸಿ ಆದೇಶದಂತೆ ಪ್ರತಿದಿನ ೬,೦೦೦ ಕ್ಯೂಸೆಕ್ಸ್‌ನಂತೆ ೧೫ ದಿನಗಳ ಕಾಲ ಕರ್ನಾಟಕ ತಮಿಳುನಾಡಿಗೆ ಕಾವೇರಿ ನದಿ ನೀರು ಹರಿಸಬೇಕಾಗುತ್ತದೆ. ಜಲಾಶಯದಲ್ಲಿ…

6 hours ago

ಮಲ್ಟಿಪ್ಲೆಕ್ಸ್: ಪ್ರಾದೇಶಿಕ ಭಾಷಾ ಚಿತ್ರಗಳಿಗೆ ಮಾರಕ ಹಂಚಿಕಾ ಸೂತ್ರ

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ  ಅದೇಕೋ ಏನೋ ಕರ್ನಾಟಕಕ್ಕೂ ಇಲ್ಲಿರುವ ಮಲ್ಟಿಪ್ಲೆಕ್‌ಳಿಗೂ ಆಗಿ ಬರುತ್ತಿಲ್ಲ ಎನಿಸುತ್ತದೆ. ಅದು ಚಿತ್ರೋದ್ಯಮಕ್ಕೆ ಮಾತ್ರವಲ್ಲ,…

6 hours ago