ಮೈಸೂರು: ಅವಿವಾಹಿತ ಮಹಿಳೆ ಮೇಲೆ ಅತ್ಯಾಚಾರವೆಸೆಗಿದ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಅಪರಾಧಿಗೆ 10 ವರ್ಷ ಜೈಲು ಶಿಕ್ಷೆ ಹಾಗೂ 30 ಸಾವಿರ ದಂಡವನ್ನು ವಿಧಿಸಲಾಗಿದೆ ಎಂದು ಮೈಸೂರಿನ 7ನೇ ಅಧಿಕ ಜಿಲ್ಲಾ ಮತ್ತು ಸತ್ ನ್ಯಾಯಾಲಯ ತೀರ್ಪು ಪ್ರಕಟಿಸಿದೆ.
ಈ ಕುರಿತು ಇಂದು(ಫೆಬ್ರವರಿ.25) ವಿಚಾರಣೆ ನಡೆಸಿದ ಕೋರ್ಟ್, ಹುಣಸೂರು ತಾಲ್ಲೂಕಿನ(ಪಟ್ಟಣ) ಲಾಲ್ ಬಂದ್ ಸ್ಟ್ರೀಟ್ ನಿವಾಸಿ ಜಬೀವುಲ್ಲಾ(26) S/O ಅತಾವುಲ್ಲಾ ಎಂಬಾತ ಮಹಿಳೆಗೆ ದೆವ್ವ ಬಿಡಿಸುವ ನೆಪದಲ್ಲಿ ಅತ್ಯಾಚಾರ ಎಸಗಿರುವುದು ರುಜುವಾತಾಗಿದೆ. ಹೀಗಾಗಿ ಆರೋಪಿಯನ್ನು ಅಪರಾಧಿ ಎಂದು ಪರಿಗಣಿಸಿ ಆರೋಪಿಗೆ ಕಲಂ 376 ಐಪಿಸಿ ಅಡಿಯಲ್ಲಿ 10 ವರ್ಷಗಳ ಕಾಲ ಕಠಿಣ ಕಾರಾಗೃಹ ಶಿಕ್ಷೆ, 30 ಸಾವಿರ ರೂ. ದಂಡ ಹಾಗೂ ಕಲಂ 506 ಐಪಿಸಿ ಅಡಿಯ ಅಪರಾಧಕ್ಕೆ 1 ವರ್ಷ ಸಾದಾ ಸಜೆ ಮತ್ತು 5 ಸಾವಿ ರೂ. ದಂಡ ವಿಧಿಸಲಾಗಿದೆ ಎಂದು ಆದೇಶ ಹೊರಡಿಸಿದೆ.
ಏನಿದು ಪ್ರಕರಣ?
ಸಂತ್ರಸ್ಥೆ ಮಹಿಳೆಗೆ 33 ವರ್ಷಗಳಾದರೂ ಮದುವೆಯಾಗದ ಹಿನ್ನೆಲೆಯಲ್ಲಿ ಕುಟುಂಬಸ್ಥರು ಆಕೆಯನ್ನು ಆರೋಪಿ ಆರೋಪಿ ಜಬೀವುಲ್ಲಾ ಬಿನ್ ಅತಾವುಲ್ಲಾ ಬಳಿ ಕರೆದುಕೊಂಡು ಹೋಗಿದ್ದರು. ಈ ನಡುವೆ ಆರೋಪಿಯೇ ತಾನು ಧರ್ಮಗುರು ಎಂದು ಹೇಳಿಕೊಂಡಿದ್ದು, ಸಂತ್ರಸ್ತೆಗೆ ದೆವ್ವ ಹಿಡಿದಿದೆ ಹೇಳಿದ್ದನು. ಬಳಿಕ ಪೂಜೆ ಮಾಡಿ ಬಿಡಿಸಿದರೆ ಮದುವೆಯಾಗುತ್ತದೆ ಎಂದು ತಿಳಿಸಿದ್ದನು. ಅಂತೆಯೇ 01-06-2020 ರಂದು ಬೆಳಿಗ್ಗೆ 10-00 ಗಂಟೆಗೆ ಸಂತ್ರಸ್ಥೆಯ ಮನೆಯಲ್ಲಿ ಪೂಜೆ ಮಾಡಿದ್ದು, ಮೊಟ್ಟೆ, ನಿಂಬೆಹಣ್ಣನ್ನು ಬೋಲೆಬಾಲೆ ಹಜರತ್ ಶಾ ಖಾದ್ರಿ ಅಂಬ್ರಿಗೋರಿಯ ಬಳಿ ಒಡೆಯಬೇಕೆಂದು ಹೇಳಿ ಪಿರಿಯಾಪಟ್ಟಣದ ಬೋಲೆಬಾಲೆ ಗೋರಿಯ ಸಮೀಪ ಸಂತ್ರಸ್ಥೆ ಹಾಗೂ ಆಕೆಯ ಸಂಬಂಧಿ ಸಾದಿಕ್ ಪಾಷ ಅವರನ್ನು ಕರೆದುಕೊಂಡು ಹೋಗಿದ್ದನು.
ಈ ಮಧ್ಯೆ ಆರೋಪಿಯೂ ಸಾದಿಕ್ ಪಾಷ ಅವರಿಗೆ ಬೆಂಕಿ ಪೊಟ್ಟಣ ತರುವಂತೆ ಪಿರಿಯಾಪಟ್ಟಣ ನಗರಕ್ಕೆ ಕಳುಹಿಸಿದ್ದನು. ಬಳಿಕ ಅಂದು ಮಧ್ಯಾಹ್ನವೇ ಸಂತ್ರಸ್ಥೆ ಒಬ್ಬರೇ ಇದ್ದಾಗ ಬಲವಂತವಾಗಿ ಅತ್ಯಾಚಾರವೆಸಗಿದ್ದನು. ಇನ್ನು ಈ ಸಂಬಂಧ ಪಿರಿಯಾಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಮಹೇಂದ್ರ ಹಸಗೂಲಿ ಸಂಚಾರಕ್ಕೆ ಅಡಚಣೆ; ಬಿಎಸ್ಎನ್ಎಲ್ ಗುತ್ತಿಗೆದಾರರ ವಿರುದ್ಧ ಕ್ರಮಕ್ಕೆ ಸಾರ್ವಜನಿಕರ ಒತ್ತಾಯ ಗುಂಡ್ಲುಪೇಟೆ: ಬಿಎಸ್ಎನ್ಎಲ್ನಿಂದ ನೇಮಿಸಲ್ಪಟ್ಟಿರುವ ಗುತ್ತಿಗೆದಾರರು ಕೇಬಲ್…
ನವದೆಹಲಿ : ದೇಶದ ರಾಜಕೀಯದ ಭಾಷೆ ಬದಲಾಗುತ್ತಿದೆ. ಒಮ್ಮೆ ಟ್ವಿಟರ್, ಈಗಿನ ಎಕ್ಸ್ನಲ್ಲಿ ನಡೆಯುತ್ತಿದ್ದ ವಾಗ್ವಾದ, ಟ್ರೆಂಡ್ಗಳು ಈಗ ಇನ್ಸ್ಟಾಗ್ರಾಂ…
ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿಗಳು ಶ್ರಮಪಡುವುದು ಗೊತ್ತಿರುವ ವಿಷಯವೇ. ವೃತ್ತಿಪರ ಕೋರ್ಸ್ಗಳು ಮತ್ತು ನಂತರ ಉದ್ಯೋಗಕ್ಕಾಗಿ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗೆ ವಿದ್ಯಾರ್ಥಿಗಳು…
ರಾಜ್ಯದಲ್ಲಿ ಪ್ರತಿದಿನ ಸೃಷ್ಟಿಯಾಗುವ ೧೨,೧೪೯ ಟನ್ ಕಸದಿಂದ ವಿದ್ಯುತ್ ತಯಾರಿಸುವ ಸರ್ಕಾರದ ಪ್ರಸ್ತಾಪವು ಕೇವಲ ಕಾಗದದ ಮೇಲಷ್ಟೇ ಸುಂದರವಾಗಿ ಕಾಣುತ್ತದೆ.…
ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್ ಪಂಜಬ್ ಮತ್ತು ಹರಿಯಾಣ ರೈತರ ೧೩ ತಿಂಗಳ ನಿರಂತರಹೋರಾಟ ಜನಮಾನಸದಿಂದ ಮರೆಯುತ್ತಿದ್ದಂತೆ ಬಿಜೆಪಿ ನೇತೃತ್ವದ…