ಮೈಸೂರು

ರಥಸಪ್ತಮಿ ಆಚರಣೆ: ಅಂಬಾವಿಲಾಸ ಅರಮನೆಯಲ್ಲಿ ವಿಶೇಷ ಪೂಜೆ

ಮೈಸೂರು: ಇಲ್ಲಿನ ಅಂಬಾವಿಲಾಸ ಅರಮನೆಯಲ್ಲಿ ರಥಸಪ್ತಮಿ ಆಚರಣೆ ಹಿನ್ನೆಲೆ ಉತ್ಸವ ಮೂರ್ತಿಗೆ ವಿಶೇಷ ಪೂಜೆ ಸಲ್ಲಿಸಿ, ಮೆರವಣಿಗೆ ಮಾಡಲಾಗಿದೆ.

ಸಾಂಸ್ಕೃತಿಕ ನಗರಿಯಲ್ಲಿ ಇಂದು(ಫೆಬ್ರವರಿ.5) ರಥಸ್ತಪಮಿ ಪ್ರಯುಕ್ತ ನಗರದ್ಯಾಂತದ ದೇವಾಲಯಗಳಲ್ಲಿ ವಿಶೇಷ ಪೂಜೆಗಳನ್ನು ಮಾಡಲಾಗುತ್ತಿದೆ. ಅಂತೆಯೇ ಅಂಬಾವಿಲಾಸ ಅರಮನೆಯಲ್ಲಿಯೂ ಕೂಡ ಅಲ್ಲಿನ ದೇವಾಲಯಗಳ ಉತ್ಸವ ಮೂರ್ತಿಗಳಿಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ.

ಇನ್ನೂ ಅಂಬಾವಿಲಾಸ ಅರಮನೆ ಅಂಗಳದಲ್ಲಿ ಅದ್ದೂರಿಯಾಗಿ ನಡೆದ ಭವ್ಯ ಮೆರವಣಿಗೆಯಲ್ಲಿ ಉತ್ಸವ ಮೂರ್ತಿಗಳ ದರ್ಶನವನ್ನು ಸಾರ್ವಜನಿಕರು ಪಡೆದಿದ್ದಾರೆ.

ರಥಸಪ್ತಮಿಯ ಹಿನ್ನೆಲೆ ಏನು?

ಇಡೀ ಜಗತ್ತಿಗೆ ಬೆಳಕು ಕೊಡುವವನು ಸೂರ್ಯ. ಅನೇಕ ಮಂದಿ ಪ್ರತಿನಿತ್ಯ ಬೆಳಿಗ್ಗೆ ಸೂರ್ಯನಿಗೆ ನಮಸ್ಕರಿಸಿ ಅರ್ಘ್ಯ ನೀಡುತ್ತಾರೆ. ಜಗತ್ತಿಗೆ ಬೆಳಕು ನೀಡುವ ಸೂರ್ಯದೇವನನ್ನು ರಥಸಪ್ತಮಿಯಂದು ವಿಶೇಷವಾಗಿ ಪೂಜಿಸಲಾಗುತ್ತದೆ. ಮಾಘ ಮಾಸ ಶುಕ್ಲ ಪಕ್ಷದ ಸಪ್ತಮಿಯ ದಿನವನ್ನು ರಥ ಸಪ್ತಮಿಯಾಗಿ ಆಚರಿಸಲಾಗುತ್ತದೆ. ಇದನ್ನು ಸೂರ್ಯ ಜಯಂತಿ ಮತ್ತು ಅಚಲಾ ಸಪ್ತಮಿ ಎಂದು ಕರೆಯಲಾಗುತ್ತದೆ. ಈ ದಿನ ಸೂರ್ಯ ದೇವನಿಗೆ ಅರ್ಘ್ಯವನ್ನು ನೀಡಿ ಪೂಜಿಸಲಾಗುತ್ತದೆ. ಧಾರ್ಮಿಕ ನಂಬಿಕೆಗಳ ಪ್ರಕಾರ ರಥ ಸಪ್ತಮಿಯ ದಿನದಂದು ಸೂರ್ಯನ ಆರಾಧನೆ ಮಾಡಿದರೆ ಆಯುಷ್ಯ, ಸಂಪತ್ತಿನ ವೃದ್ಧಿಯಾಗುತ್ತದೆ ಹಾಗೂ ಮನುಷ್ಯನ ಎಲ್ಲ ಪಾಪಗಳಿಗೂ ಮುಕ್ತಿ ಸಿಗುತ್ತದೆ ಎಂಬ ನಂಬಿಕೆ ಇದೆ.

ಧಾರ್ಮಿಕ ನಂಬಿಕೆಗಳ ಪ್ರಕಾರ ಮಾಘ ಮಾಸದ ಶುಕ್ಲ ಪಕ್ಷದ ಏಳನೇ ದಿನದಂದು ಸೂರ್ಯ ದೇವರು ತನ್ನ ರಥದ ಮೇಲೆ ಸವಾರಿ ಮಾಡಿ ಜಗತ್ತಿಗೆ ಬೆಳಕು ನೀಡಲು ಪ್ರಾರಂಭಿಸಿದ. ಈ ಕಾರಣಕ್ಕಾಗಿಯೇ ಈ ದಿನವನ್ನು ಸೂರ್ಯ ಜಯಂತಿ ಎಂದು ಹೇಳಲಾಗುತ್ತದೆ. ರಥ ಸಪ್ತಮಿಯ ದಿನ ಸೂರ್ಯ ದೇವನ ಜನ್ಮದಿನ ಎಂಬ ಪ್ರತೀತಿ ಇದೆ. ರಥ ಸಪ್ತಮಿಯ ದಿನ ಸೂರ್ಯನ ಪೂಜೆ ಮಾಡಿದರೆ ಜೀವನದ ಕಷ್ಟಗಳು ನಿವಾರಣೆಯಾಗುತ್ತವೆ. ಅಂದಿನ ದಿನ ಪವಿತ್ರ ನದಿಯಲ್ಲಿ ಸ್ನಾನ ಮಾಡಿ ಅರ್ಘ್ಯ ನೀಡುವುದರಿಂದ ಜಾತಕದಲ್ಲಿನ ದೋಷಗಳು ಹಾಗೂ ಆರೋಗ್ಯ ಸಮಸ್ಯೆಗಳು ದೂರವಾಗುತ್ತದೆ ಎಂಬ ಭಾವನೆ ಇದೆ.

ಅರ್ಚನ ಎಸ್‌ ಎಸ್

Recent Posts

ಓದುಗರ ಪತ್ರ: ಪ್ರಕೃತಿ ಪ್ರೀತಿ ಅತಿಮುಖ್ಯ

ಇಂದಿನ ಧಾವಂತದ ಬದುಕಿನಲ್ಲಿ ನಾವೆಲ್ಲರೂ ಆಸೆಗಳ ಬೆನ್ನೇರಿ ಓಡುತ್ತಿದ್ದು, ನಮ್ಮ ಉಸಿರಿಗೆ ಆಧಾರವಾಗಿರುವ ಪ್ರಕೃತಿಯನ್ನು ಮರೆಯುತ್ತಿದ್ದೇವೆ. ಗಾಳಿ, ನೀರು, ಬೆಳಕಿಲ್ಲದೆ…

7 hours ago

ಓದುಗರ ಪತ್ರ: ಪ್ಲಾಸ್ಟಿಕ್ ನೋಟುಗಳ ಬಿಡುಗಡೆ ನಿರ್ಧಾರ ದೂರದೃಷ್ಟಿಯ ಹೆಜ್ಜೆ

ಆರ್‌ಬಿಐ ಮುಂದಿನ ಹಣಕಾಸು ವರ್ಷದಿಂದ (೨೦೨೭-೨೮) ಪ್ಲಾಸ್ಟಿಕ್ (ಪಾಲಿಮರ್) ನೋಟುಗಳನ್ನು ಚಲಾವಣೆಗೆ ತರಲು ನಿರ್ಧರಿಸಿರುವುದು ಸ್ವಾಗತಾರ್ಹ ಮತ್ತು ದೂರದೃಷ್ಟಿಯ ಹೆಜ್ಜೆಯಾಗಿದೆ.…

7 hours ago

ಓದುಗರ ಪತ್ರ: ಸಮಾನತೆ ಮಾತನಾಡುವವರ ನಡವಳಿಕೆ ಇದೇನಾ?

ರಾಜ್ಯ ಸಚಿವ ಸಂಪುಟದಲ್ಲಿ ಮಹಿಳೆಯರಿಗೆ ಪ್ರಾತಿನಿಧ್ಯ ನೀಡದಿರುವುದು ಮಹಿಳೆಯರಿಗೆ ಮಾಡಿದ ಘೋರ ಅನ್ಯಾಯ. ಅಧಿಕಾರಕ್ಕೆ ಬರುವ ಮುನ್ನ ಮಹಿಳೆಯರ ಹೆಸರಿನಲ್ಲಿ…

7 hours ago

ಚಲನಚಿತ್ರ: ಪ್ರಮಾಣೀಕರಣ ಮಂಡಳಿಯದೇ ಅಂತಿಮ ತೀರ್ಪು

ವೈಡ್‌ ಆಂಗಲ್:‌ ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ  ಇಂದು ಬಿಡುಗಡೆಯಾಗುತ್ತಿರುವ ‘ ಬಾಸ್’ಎಂದೋ ತೆರೆಗೆ ಬರಬೇಕಾಗಿತ್ತು. ಆದರೆ ಚಿತ್ರದ ಹೆಸರು,…

7 hours ago

ಕೊಡಗು ಜಿಲ್ಲೆಯಲ್ಲಿ ಶೇ.37ರಷ್ಟು ಮಳೆ ಕೊರತೆ

ನವೀನ್ ಡಿಸೋಜ ಕಳೆದ ಕೆಲ ದಿನಗಳಲ್ಲಿ ಉತ್ತಮ ಮಳೆ; ವಾಡಿಕೆ ಮಳೆ ಕೊರತೆ ವಿರಾಜಪೇಟೆ ತಾಲ್ಲೂಕಿನಲ್ಲಿ ಅತಿ ಹೆಚ್ಚು ಶೇ.೪೩…

7 hours ago

ಕಬಿನಿ ಜಲಾಶಯದಿಂದ ಹರಿಸುತ್ತಿದ್ದ ನೀರು ಸ್ಥಗಿತ

ಮಂಜು ಕೋಟೆ ಎಚ್.ಡಿ.ಕೋಟೆ: ತಾಲ್ಲೂಕಿನ ಕಬಿನಿ ಜಲಾಶಯಕ್ಕೆ ಬರುತ್ತಿದ್ದ ಒಳಹರಿವ ಇಳಿಮುಖವಾಗಿರುವ ಹಿನ್ನೆಲೆಯಲ್ಲಿ ಹೊರಹರಿವು ಸ್ಥಗಿತಗೊಳಿಸಿ ಜಲಾಶಯದ ಕ್ರಸ್ಟ್‌ಗೇಟ್‌ಗಳನ್ನು ಬಂದ್…

7 hours ago