ಮೈಸೂರು

ಅ.6 ರಂದು ಚಾಮುಂಡಿ ಬೆಟ್ಟದಲ್ಲಿ ರಥೋತ್ಸವ

ಮೈಸೂರು : ನಾಡಹಬ್ಬ ದಸರಾ ಮಹೋತ್ಸವದ ಅಂಗವಾಗಿ ಚಾಮುಂಡಿಬೆಟ್ಟದಲ್ಲಿ ಅ.೬ರಂದು ರಥೋತ್ಸವ ಹಾಗೂ ಅ.೮ರಂದು ತೆಪ್ಪೋತ್ಸವ ನಡೆಯಲಿದ್ದು, ಅದಕ್ಕಾಗಿ ಸಿದ್ಧತೆಮಾಡಿಕೊಳ್ಳಲಾಗುತ್ತಿದೆ.

ದಸರಾ ಮಹೋತ್ಸವದ ಜಂಬೂಸವಾರಿ ನೆರವೇರಿದ ನಂತರ ನಿಗಽತ ಮುಹೂರ್ತದಲ್ಲಿ ಚಾಮುಂಡಿಬೆಟ್ಟದಲ್ಲಿ ಭವ್ಯ ರಥೋತ್ಸವ ನಡೆಸುವ ಸಂಪ್ರದಾಯವಿದೆ. ಈಗಾಗಲೇ ದೇವಾಲಯದ ಮುಂಭಾಗ ದೊಡ್ಡ ರಥವನ್ನು ಅಣಿಗೊಳಿಸಲಾಗಿದ್ದು, ಅಗತ್ಯ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ.

ಅ.೬ರಂದು ಬೆಳಿಗ್ಗೆ ೯.೩೬ ರಿಂದ ೯.೫೮ರೊಳಗೆ ಸಲ್ಲುವ ಶುಭ ಲಗ್ನದಲ್ಲಿ ಬೆಟ್ಟದ ದೇವಾಲಯದ ಮುಂಭಾಗ ರಥೋತ್ಸವಕ್ಕೆ ರಾಜವಂಶಸ್ಥರಾದ ಪ್ರಮೋದಾದೇವಿ ಒಡೆಯರ್ ಚಾಲನೆ ನೀಡಲಿದ್ದಾರೆ. ಈ ವೇಳೆ ಸಂಸದ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್, ತ್ರಿಷಿಕಾ ಕುಮಾರಿ ಒಡೆಯರ್ ಹಾಗೂ ಇನ್ನಿತರರು ಪಾಲ್ಗೊಳ್ಳಲಿದ್ದಾರೆ.

ಇದನ್ನೂ ಓದಿ:-ತಿ. ನರಸೀಪುರ | ಗುಂಜನರಸಿಂಹ ಸ್ವಾಮಿ ಆವರಣದ ಮಹಾಲಕ್ಷ್ಮಿ ಗುಡಿಯಲ್ಲಿ ಕಳ್ಳತನ ; ಸಿಸಿಟಿವಿಯಲ್ಲಿ ದೃಶ್ಯ ಸೆರೆ

ರಥೋತ್ಸವಕ್ಕೆ ಚಾಲನೆ ದೊರೆತ ಬಳಿಕ ಮಂಗಳವಾದ್ಯ, ಪೊಲೀಸ್ ಬ್ಯಾಂಡ್ ವಾದನ ಹಾಗೂ ವಿವಿಧ ಸಾಂಸ್ಕೃತಿಕ ಕಲಾತಂಡಗಳು ರಥೋತ್ಸವದಲ್ಲಿ ಪಾಲ್ಗೊಳ್ಳಲಿದ್ದು, ಫಿರಂಗಿ ದಳದ ಸಿಬ್ಬಂದಿಗಳು ಚಿಕ್ಕ ಸಿಡಿಮದ್ದು ಟ್ರ್ತ್ಯ್ಯಾಲಿ ಬಳಸಿ ರಥೋತ್ಸವದ ಮಾರ್ಗದ ಉದ್ದಕ್ಕೂ ಸಿಡಿಮದ್ದು ಸಿಡಿಸಲಿದ್ದಾರೆ. ದೇವಾಲಯದ ಒಂದು ಸುತ್ತು ಪ್ರದಕ್ಷಿಣೆ ಹಾಕಲು ಒಂದು ಗಂಟೆ ಸಮಯ ಬೇಕಾಗಲಿದ್ದು, ಅಪಾರ ಸಂಖ್ಯೆಯ ಭಕ್ತರು ಚಾಮುಂಡಿಬೆಟ್ಟಕ್ಕೆ ಆಗಮಿಸಿ ಇಷ್ಟಾರ್ಥ ಸಿದ್ದಿಗಾಗಿ ಪ್ರಾರ್ಥಿಸಿ ರಥಕ್ಕೆ ಹಣ್ಣು-ಜವನ ಎಸೆದು ಪ್ರಾರ್ಥಿಸಲಿದ್ದಾರೆ.

ರಥೋತ್ಸವ ಜರುಗಿದ ಎರಡು ದಿನದ ನಂತರ ಅ.೮ರಂದು ಸಂಜೆ ೬ ಗಂಟೆ ನಂತರ ಚಾಮುಂಡಿಬೆಟ್ಟದ ದೇವಿಕೆರೆಯಲ್ಲಿ ಚಾಮುಂಡೇಶ್ವರಿ ತಾಯಿಯ ಉತ್ಸವ ಮೂರ್ತಿಗೆ ತೆಪ್ಪೋತ್ಸವ ಸೇವೆ ಜರುಗಲಿದೆ. ತೆಪ್ಪೋತ್ಸವದ ವೇಳೆ ರಾಜವಂಶಸ್ಥರು ಪಾಲ್ಗೊಳ್ಳಲಿದ್ದಾರೆ. ತೆಪ್ಪೋತ್ಸವದ ಮೂಲಕ ಈ ಸಾಲಿನ ದಸರಾ ಮಹೋತ್ಸವದ ಧಾರ್ಮಿಕ ಕಾರ್ಯ ಸಂಪನ್ನಗೊಳ್ಳಲಿದೆ.

ಆಂದೋಲನ ಡೆಸ್ಕ್

Recent Posts

ಕೆಆರ್‌ಎಸ್‌ನಿಂದ ತಮಿಳುನಾಡಿಗೆ 4917 ಕ್ಯೂಸೆಕ್‌ ನೀರು ಬಿಡುಗಡೆ

ಮಂಡ್ಯ: ರಾಜ್ಯದಲ್ಲಿ ಕೆಆರ್‌ಎಸ್‌ ಜಲಾಶಯದ ನೀರಿನ ವಿಚಾರವೂ ಚರ್ಚೆಗೆ ಬಂದಿದ್ದು, ಕೇವಲ 1951 ಕ್ಯೂಸೆಕ್ಸ್‌ ನೀರು ಹರಿದು ಬರುತ್ತಿರುವ ಡ್ಯಾಂನಿಂದ…

30 mins ago

ಕಾಡಾನೆಗಳ ಸೆರೆಗೆ ಕಾರ್ಯಾಚರಣೆ: ಮುಂಜಾಗ್ರತಾ ಕ್ರಮವಾಗಿ ಸೆಕ್ಷನ್ 144 ಜಾರಿ

ಕೊಡಗು: ಸಾರ್ವಜನಿಕರಿಗೆ ಉಪಟಳ ನೀಡುತ್ತಿರುವ ಮೂರು ಗಂಡಾನೆಗಳನ್ನು ಸೆರೆ ಹಿಡಿಯಲು ಅರಣ್ಯ ಇಲಾಖೆ ಆದೇಶ ನೀಡಿದೆ. ಇಂದು ಬೆಳಿಗ್ಗೆ 10…

6 hours ago

ಹನೂರು ಎನ್‌ಕೌಂಟರ್: ಆತ್ಮರಕ್ಷಣೆಗಾಗಿ ಗುಂಡು ಹಾರಿಸಿದೆವು: ACF ಮರಿಸ್ವಾಮಿ

ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ನಡೆದ ಹನೂರು ಎನ್‌ಕೌಂಟರ್ ಬಗ್ಗೆ ಮೊದಲ ಬಾರಿಗೆ ಕಾವೇರಿ ವನ್ಯಧಾಮದ ACF ಮರಿಸ್ವಾಮಿ ಮಾಧ್ಯಮಗಳಿಗೆ ಪ್ರತಿಕ್ರಿಯೆ…

6 hours ago

ಓದುಗರ ಪತ್ರ: ಇ-ಕೊಲಿ ಬ್ಯಾಕ್ಟೀರಿಯಾ ಪತ್ತೆ: ಮನಸ್ಸುಗಳಿಗಿಲ್ಲ ‘ಕೂಲ್‌ಕೂಲ್’

ದೇಶದ ಬಹುತೇಕ ರೈಲು ನಿಲ್ದಾಣದ ಫ್ಲಾಟ್‌ ಫಾರ್ಮ್‌ಗಳಲ್ಲಿ  ಸಾರ್ವಜನಿಕರು ಕುಡಿಯುವ ವಾಟರ್ ಕೂಲರ್‌ಗಳಲ್ಲಿ, ಇ-ಕೊಲಿ ಬ್ಯಾಕ್ಟೀರಿಯಾ ಪತ್ತೆಯಾಗಿದೆ ಎಂದು ಕಂಟ್ರೋಲರ್…

9 hours ago

ಓದುಗರ ಪತ್ರ: ಕೆಎಸ್‌ಪಿಸಿಬಿಯನ್ನು ರಾಜಕೀಯ ಮುಕ್ತಗೊಳಿಸಿ

ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಉನ್ನತ ಹುದ್ದೆಗಳಿಗೆ ತಜ್ಞರನ್ನು ಬಿಟ್ಟು ರಾಜಕೀಯ ವ್ಯಕ್ತಿಗಳನ್ನು ನೇಮಿಸುತ್ತಿರುವುದು ರಾಜ್ಯದ ಪರಿಸರ ಆಡಳಿತಕ್ಕೆ…

9 hours ago

ಓದುಗರ ಪತ್ರ: ಪರಸ್ಪರ ಗೌರವಕ್ಕೆ ಮತ್ತೊಮ್ಮೆ ಕನ್ನಡಿ

ದೇಶದ ೮೦ನೇ ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮದ ಕ್ಷಣಗಳಲ್ಲಿ, ವಿಶ್ವದ ಅತಿ ಎತ್ತರದ ಕಟ್ಟಡವಾದ ದುಬೈನ ‘ಬುರ್ಜ್ ಖಲೀಫಾ’ದಲ್ಲಿ ಭಾರತದ ತ್ರಿವರ್ಣ…

9 hours ago