ಹುಣಸೂರು : ರಾಜ್ಯದಲ್ಲೇ ಜಾನುವಾರುಗಳ ಪ್ರಮುಖ ಜಾತ್ರೆಯಲ್ಲೊಂದಾದ ಹುಣಸೂರು ತಾಲೂಕಿನ ರತ್ನಪುರಿ(ದರ್ಗ)ಯಲ್ಲಿ ಹಿಂದೂ-ಮುಸ್ಲಿಮರ ಭಾವೈಕ್ಯತೆ ಮೆರೆವ ಶ್ರೀ ಅಂಜನೇಯ ಸ್ವಾಮಿಯ ಮಹಾಭಿಷೇಕ, ಪಲ್ಲಕಿ ಉತ್ಸವ ಹಾಗೂ ಮುಸ್ಲಿಮರ ಜಮಾಲ್ ಬೀ ಬೀ ಮಾ ಸಾಹೇಬರವರ ಗಂಧೊತ್ಸವದ ಉರುಸ್ ಫೆ.6ರಿಂದ 9ರವರೆಗೆ ವಿಜೃಂಭಿಸಲಿದೆ.
ಈ ಕುರಿತು ಪತ್ರಿಕಾಗೋಷ್ಠಿ ನಡೆಯಲ್ಲಿ ಮಾಹಿತಿ ನೀಡಿದ ಜಾತ್ರಾ ಮಹೋತ್ಸವ ಸಮಿಯ ಅಧ್ಯಕ್ಷ ಪ್ರಭು ಹಾಗೂ ವಕ್ ಬೋರ್ಡ್ ಸಲಹಾ ಸಮಿತಿ ಸದಸ್ಯರಾದ ಅಜ್ಗರ್ ಪಾಷಾ, ಗ್ರಾಮದಲ್ಲಿ ಇಡೀ ರಾಜ್ಯವೇ ಇತ್ತ ನೋಡುವಂತೆ ಹಿಂದೂ-ಮುಸ್ಲಿಂ ಸಮುದಾಯಗಳು ಸೇರಿ ಸಾಮರಸ್ಯ, ಸೌಹಾರ್ದತೆಯಿಂದ ಭಾವೈಕ್ಯತೆ ಸಾರುವಂತೆ ದರ್ಗಾ ಜಾತ್ರೆ ಮತ್ತು ಉರುಸ್ ಅನ್ನು ಅಚರಿಸುತ್ತೇವೆ ಎಂದರು.
ಜಾತ್ರಾ ಮಹೋತ್ಸವದ ಅಂಗವಾಗಿ ವಿವಿಧ ನಾಡ ಕ್ರೀಡೆಗಳನ್ನು ಅಚರಿಸಿಕೊಂಡು ಬಂದಿದ್ದೇವೆ, ಅದರಂತೆ ಈ ಬಾರಿಯೂ ರಾಜ್ಯ ಮಟ್ಟದ ಹೊನಲು ಬೆಳಕಿನ ಕಬಡ್ಡಿ ಮತ್ತು ಹಗ್ಗಜಗ್ಗಾಟ ಪಂದ್ಯಾವಳಿಯನ್ನು ಪುರುಷರಿಗೆ ಹಮ್ಮಿಕೊಂಡಿದ್ದೇವೆ ಎಂದರು.
ಶ್ರೀ ಅಂಜನೇಯ ಸ್ವಾಮಿ ಜಾತ್ರಾ ಮಹೋತ್ಸವ ಹಾಗೂ ಜನಾಭ್ ಜಮಾಲ್ ಬೀಬೀ ಮಾಸಾಹೇಬ ಉರೂಸ್ ಅಂಗವಾಗಿ ಫೆ.6 ಮತ್ತು ಫೆ.7ರಂದು ರಾಜ್ಯ ಮಟ್ಟದ ಹೊನಲು ಬೆಳಕಿನ ಮ್ಯಾಟ್ ಕಬಡ್ಡಿ ಪಂದ್ಯಾವಳಿ ಅಯೋಜಿಸಲಾಗಿದೆ ಎಂದರು.
ಮೈಸೂರು -ಕೊಡಗು ಲೋಕಸಭಾ ಸದಸ್ಯರಾದ ಯದುವೀರ್ ಕರಷ್ಣದತ್ತ ಚಾಮರಾಜ ಒಡೆಯರ್ ಕಾರ್ಯಕ್ರಮವನ್ನು ಉದ್ಘಾಟಿಸುವರು. ಅಧ್ಯಕ್ಷತೆಯನ್ನು ಶಾಸಕ ಜಿ.ಡಿ.ಹರೀಶ್ಗೌಡ ವಹಿಸುವರು. ಶಾಸಕರಾದ ಜಿ.ಟಿ.ದೇವೆಗೌಡ, ಮಾಜಿ ಶಾಸಕರಾದ ಹೆಚ್.ಪಿ.ಮಂಜುನಾಥ್ ಅಗಮಿಸುವರು ಎಂದರು.
ಫೆ.7ರ ಶನಿವಾರ ಬೆಳಿಗ್ಗೆ 7 ಗಂಟೆಗೆ ಧರ್ಮಾಪುರ ಗ್ರಾಮಸ್ಥರಿಂದ ಕೊಂಡೊತ್ಸವ ಹಾಗೂ ಆಂಜನೇಯ ಸ್ವಾಮಿಗೆ ಮಹಾ ಮಂಗಳಾರತಿ ನೆರವೇರಲಿದೆ. ಮಧ್ಯಾಹ್ನ 12 ಗಂಟೆಯಿಂದ 3 ಗಂಟೆಯವರೆಗೆ ಅನ್ನಸಂತರ್ಪಣೆ, ನಂತರ ಪುರುಷರ ರಾಜ್ಯ ಮಟ್ಟದ ಹೊನಲು ಬೆಳಕಿನ ಮ್ಯಾಟ್ ಕಬಡ್ಡಿ ಪಂದ್ಯಾವಳಿ ನಡೆಯಲಿದೆ. ಸಂಜೆ 6ಕ್ಕೆ ಶ್ರೀ ಆಂಜನೇಯ ಸ್ವಾಮಿಯ ಪಲ್ಲಕ್ಕಿ ಉತ್ಸವ ನೆರವೇರಲಿದೆ. ಫೆ.8ರ ಭಾನುವಾರ ಮಧ್ಯಾಹ್ನ 3 ಗಂಟೆಗೆ ಪುರುಷರ ಹಗ್ಗ-ಜಗ್ಗಾಟ ಪಂದ್ಯಾವಳಿ, ರಾತ್ರಿ 7 ಗಂಟೆಗೆ ಉರುಸ್ ಮತ್ತು ಗಂಧ ಮಹೋತ್ಸವ ನಡೆಯಲಿದೆ. 8 ಗಂಟೆಗೆ ಹಗ್ಗ ಜಗ್ಗಾಟದ ಸೆಮಿ ಫೈನಲ್ ಮತ್ತು ಫೈನಲ್ ಪಂದ್ಯಾವಳಿ ನಡೆಯಲಿದೆ. ಫೆ.9ರ ಸೋಮವಾರ ಬೆಳಿಗ್ಗೆ 11 ಗಂಟೆಗೆ ದನಗಳ ಜಾತ್ರೆಯಲ್ಲಿ ಭಾಗವಹಿಸುವ ಉತ್ತಮ ರಾಸುಗಳಿಗೆ ಎಪಿಎಂಸಿ ವತಿಯಿಂದ ಬಹುಮಾನ ವಿತರಿಸಲಾಗುವುದು ಎಂದು ತಿಳಿಸಿದರು.
ಡಾ.ಕೆ.ಪಿ.ಸಿದ್ಧಲಿಂಗಸ್ವಾಮಿ ಇಂದು ಶ್ರೀ ಶಿವರಾತ್ರಿ ರಾಜೇಂದ್ರ ಸ್ವಾಮೀಜಿ ೧೧೧ನೇ ಜಯಂತಿ ಕೆಲವರು ತಮ್ಮ ಕಾಲದಲ್ಲಿ ಬದುಕುತ್ತಾರೆ; ಕೆಲವರು ತಮ್ಮ ಕಾಲವನ್ನೇ…
ಆತ್ಮಬಲ ಅಸ್ತ್ರದಿಂದ ಬ್ರಿಟಿಷರ ಮಣಿಸಿದ ಗಾಂಧಿ ಗಾಂಧಿಜಿ ಕಲ್ಪನೆಯ ಸರ್ವೋದಯ ಸಮಾಜದಲ್ಲಿ ಎಲ್ಲರೂ ಸ್ವತಂತ್ರವಾಗಿರುತ್ತಾರೆ. ಇಲ್ಲಿ ಜಾತಿ, ವರ್ಗ, ಶೋಷಣೆ…
ರೋಹಿಣಿ ಸಂಗಪ್ಪ ದಳವಾಯಿ ಮೈಸೂರು ರಾಜ್ಯ ಕಂಡ ಅಪ್ರತಿಮ ಹೋರಾಟಗಾರ್ತಿ ಮತ್ತು ಜನಸೇವಕಿ ಯಶೋಧರಾ ದಾಸಪ್ಪ. ತಮ್ಮ ದಿಟ್ಟ ನಿಲುವು,…
ನಲವತ್ತು ವರುಷಗಳ ಕೆಳಗೆ ಇಂಗ್ಲೆಂಡಿನಲ್ಲಿ ಭಾರತೀಯ ವಿದ್ಯಾರ್ಥಿಗಳ ಸಂಖ್ಯೆ ಈಗ ಇರುವುದಕ್ಕಿಂತ ಬಹಳ ಕಡಿಮೆಯಾಗಿತ್ತು. ತಾವು ಮದುವೆಯಾದವರಾಗಿದ್ದರೂ, ಬ್ರಹ್ಮಚಾರಿಗಳೆಂದು ನಟಿಸುವುದು…
ಭೇರ್ಯ ಮಹೇಶ್ ಮಳೆ ಅಭಾವದಿಂದ ಬಿತ್ತನೆ ಮಾಡಿದ್ದ ಬೆಳೆಗಳು ಒಣಗಿ, ರೈತರಿಗೆ ಸಾಕಷ್ಟು ನಷ್ಟ ಕೆ.ಆರ್.ನಗರ: ಕೆ.ಆರ್.ನಗರ ಮತ್ತು ಸಾಲಿಗ್ರಾಮ…