ಮೈಸೂರು

ಮೈಸೂರಲ್ಲಿ ರೇವ್‌ ಪಾರ್ಟಿ: ಯುವತಿಯರು ಸೇರಿದಂತೆ 50ಮಂದಿ ವಶಕ್ಕೆ

ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನ ಹೊರವಲಯದಲ್ಲಿ ತಡರಾತ್ರಿ ನಡೆಯುತ್ತಿದ್ದ ರೇವ್‌ ಪಾರ್ಟಿಯ ಮೇಲೆ ಪೊಲೀಸರು ದಾಳಿ ನಡೆಸಿದ್ದು, 7ಯುವತಿಯರು ಸೇರಿದಂತೆ 50ಮಂದಿಯನ್ನು ವಶಕ್ಕೆ ಪಡೆದಿದ್ದಾರೆ.

ಶನಿವಾರ(ಸೆ.28) ತಡರಾತ್ರಿ ಕೆಆರ್‌ಎಸ್‌ ಬ್ಯಾಕ್‌ ವಾಟರ್‌ನ ಮೀನಾಕ್ಷಿಪುರದ ಜಮೀನಿನೊಂದರಲ್ಲಿ ಈ ರೇವ್ ಪಾರ್ಟಿ ಆಯೋಜನೆಯಾಗಿತ್ತು. ಈ ಬಗ್ಗೆ ಮಾಹಿತಿ ತಿಳಿದ ಜಿಲ್ಲಾ ಪೊಲೀಸರು ಕಾರ್ಯಾಚರಣೆ ನಡೆಸಿದ್ದಾರೆ.

50 ಮಂದಿ ವಶಕ್ಕೆ
ಪಾರ್ಟಿ ನಡೆಯುತ್ತಿದ್ದ ಸ್ಥಳಕ್ಕೆ ಎಂಟ್ರಿ ಕೊಟ್ಟ ಪೊಲೀಸರು ಯುವತಿಯರು ಸೇರಿದಂತೆ 50ಕ್ಕೂ ಹೆಚ್ಚು ಮಂದಿಯನ್ನು ವಶಕ್ಕೆ ಪಡೆದಿದ್ದಾರೆ. ಜತೆಗೆ ಸ್ಥಳದಲ್ಲಿದ್ದ 15 ಕಾರು, 20ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಂಡಿದ್ದಾರೆ.

ವ್ಯಕ್ತಿಯೊಬ್ಬ ಸಾಮಾಜಿಕ ಜಾಲಾತಾಣದಲ್ಲಿ ಈ ಪಾರ್ಟಿಯ ಬಗ್ಗೆ ಪ್ರಚಾರ ಮಾಡಿ ಸುಮಾರು 25ಕ್ಕೂ ಹೆಚ್ಚು ಜೋಡಿಗಳನ್ನು ಪಾರ್ಟಿಗೆ ನೊಂದಾಯಿಸಿದ್ದ ಎನ್ನಲಾಗಿದೆ. ಶನಿವಾರ ತಡರಾತ್ರಿ ಪಾರ್ಟಿ ಆರಂಭವಾಗಿದೆ. ಪಾರ್ಟಿಗೆ ಇಸ್ರೇಲ್‌ನಿಂದ ರ್ಯಾಪರ್‌ ಗ್ರೇನ್‌ ರಿಪ್ಪರ್‌ ಬಂದಿದ್ದರು. ಅಲ್ಲದೆ, ಆಯೋಜನಕರು ಪಾರ್ಟಿಗೆ ಒಬ್ಬರಿಗೆ 2ಸಾವಿರ ರೂ. ನಿಗದಿ ಮಾಡಿದ್ದರು ಎನ್ನಲಾಗಿದೆ.

ಮಾಹಿತಿ ಅರಿತ ಪೊಲೀಸರು ಎಸ್ಪಿ ವಿಷ್ಣುವರ್ಧನ್‌ ಅವರ ನೇತೃತ್ವದಲ್ಲಿ ಅಪರ ಪೊಲೀಸ್‌ ಎಸ್ಪಿ ನಾಗೇಶ್‌, ಡಿವೈಎಸ್ಪಿ ಕರೀಂ ರಾವತರ್‌ ಹಾಘೂ ಸಿಬ್ಬಂದಿಗಳು ದಾಳಿ ನಡೆಸಿದ್ದಾರೆ.

ದಾಳಿ ವೇಳೆ ಪೊಲೀಸರ ಹಲ್ಲೆಗೆ ಮುಂದಾದ ತಂಡ

ಪೊಲೀಸರು ಏಕಾಏಕಿ ದಾಳಿ ಮಾಡಿದ ಸಂದರ್ಭದಲ್ಲಿ ಅಲ್ಲಿನ ಯುವಕ, ಯುವತಿಯರು ಓಡಿಹೋಗಲು ಪ್ರಯತ್ನಿಸಿದ್ದಾರೆ. ಅಲ್ಲದೆ, ಪೊಲೀಸರ ಮೇಲೆ ಹಲ್ಲೆ ಮಾಡಲು ಮುಂದಾಗಿದ್ದರು ಎನ್ನಲಾಗಿದೆ.

ಯುವಕ,ಯುವತಿಯ ವೈದ್ಯಕೀಯ ತಪಾಸಣೆ
ವಶಪಡಿಸಿಕೊಂಡಿರುವ ಯುವಕ, ಯುವತಿಯರನ್ನ ವೈದ್ಯಕೀಯ ತಪಾಸಣೆಗೆ ಒಳಪಡಿಸಲು ಪೊಲೀಸರು ಮುಂದಾಗಿದ್ದಾರೆ. ಪಾರ್ಟಿಗೆ ಬಳಸಿದ್ದ ಸಂಗೀತ ಉಪಕರಣಗಳನ್ನು ವಶಕ್ಕೆ ಪಡೆದಿದ್ದಾರೆ. ಸ್ಥಳಕ್ಕೆ ಎಫ್‌ಎಸ್‌ಎಲ್‌ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿದೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಹೆಚ್ಚಾಯ್ತು ಸಫಾರಿ ವಿರೋಧ : 25ಕ್ಕೂ ಹೆಚ್ಚು ಗ್ರಾ.ಪಂ ಪಿಡಿಒಗಳಿಗೆ ಮನವಿ ಸಲ್ಲಿಸಿ ರೈತರು

ಗುಂಡ್ಲುಪೇಟೆ : ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಸಫಾರಿ ಪುನರಾರಂಭಿಸುವ ಸರ್ಕಾರದ ನಿರ್ಧಾರಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿ, ಕರ್ನಾಟಕ ರಾಜ್ಯ…

6 hours ago

ಟ್ರಂಪ್‌ ಸುಂಕ ರದ್ದುಪಡಿಸಿದ ಅಮೆರಿಕಾ ಸುಪ್ರೀಂಕೋರ್ಟ್‌ : ಭಾರತ ಹೇಳಿದ್ದೇನು?

ಹೊಸದಿಲ್ಲಿ : ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ವಿವಿಧ ದೇಶಗಳ ಮೇಲೆ ಹೇರಿರುವ ಹೆಚ್ಚುವರಿ ಸಾಮೂಹಿಕ ಸುಂಕಗಳನ್ನು ಅಮೆರಿಕ…

7 hours ago

ಗಡಿ ಭದ್ರತೆಗೆ ಒತ್ತು : ತಮಿಳುನಾಡು ಚುನಾವಣೆಗೆ ಕರ್ನಾಟಕ ಪೊಲೀಸ್ ಸಹಕಾರ ಭರವಸೆ

ಹನೂರು : ಮುಂದಿನ ದಿನಗಳಲ್ಲಿ ತಮಿಳುನಾಡು ವಿಧಾನಸಭೆ ಚುನಾವಣೆ ನಡೆಯಲಿದ್ದು ಯಶಸ್ವಿಯಾಗಿ ನಡೆಸಲು ಕರ್ನಾಟಕ ಪೊಲೀಸರು ಹಾಗೂ ಅಬಕಾರಿ ಇಲಾಖೆ…

7 hours ago

ಶಾರ್ಟ್ ಸರ್ಕ್ಯೂಟ್ : ಎಲೆಕ್ಟ್ರಾನಿಕ್ಸ್ ಅಂಗಡಿ ಸುಟ್ಟು ಭಸ್ಮ, ಲಕ್ಷಾಂತರ ರೂ. ನಷ್ಟ

ಕೆ.ಆರ್.ಪೇಟೆ : ಪಟ್ಟಣದ ಪಿ.ಎಲ್.ಡಿ ಬ್ಯಾಂಕ್ ಮುಂಭಾಗದಲ್ಲಿ ಶಫಿಉಲ್ಲಾ ಅವರು ನಡೆಸುತ್ತಿದ್ದ ಮೊಬೈಲ್ ಹಾಗೂ ಎಲೆಕ್ಟ್ರಾನಿಕ್ಸ್ ಅಂಗಡಿಯು ವಿದ್ಯುತ್ ಶಾರ್ಟ್…

8 hours ago

ಇವಿ ಹಬ್ ಆಗಿ ಕರ್ನಾಟಕ ರೂಪಾಂತರ ; ಕೇಂದ್ರ ಸಚಿವ ಹೆಚ್‌.ಡಿ. ಕುಮಾರಸ್ವಾಮಿ ವಿಶ್ವಾಸ

ಬೆಂಗಳೂರು : ಬೆಂಗಳೂರು ನಗರ ಮಾತ್ರವಲ್ಲದೆ ಇಡೀ ಕರ್ನಾಟಕ ಎಲೆಕ್ಟ್ರಿಕ್ ವಾಹನ ಉದ್ಯಮದ ಹಬ್ ಆಗಿ ಅಭಿವೃದ್ಧಿ ಹೊಂದುತ್ತಿದ್ದು, ಅದಕ್ಕೆ…

8 hours ago

ಶೇ.10 ರಷ್ಟು ಜಾಗತಿಕ ಸುಂಕ ಘೋಷಿಸಿದ ಡೊನಾಲ್ಡ್ ಟ್ರಂಪ್

ಸುಪ್ರೀಂ ತೀರ್ಪಿಗೆ ಆಕ್ರೋಶ ವ್ಯಕ್ತಪಡಿಸಿದ ಅಮೆರಿಕ ಅಧ್ಯಕ್ಷ ವಾಷಿಂಗ್ಟನ್ : ವಿವಿಧ ದೇಶಗಳ ಸರಕುಗಳ ಮೇಲೆ ವಿಧಿಸಿದ್ದ ಭಾರಿ ಸುಂಕಗಳನ್ನು…

8 hours ago