ಮೈಸೂರು

ಮೈಸೂರಲ್ಲಿ ರೇವ್‌ ಪಾರ್ಟಿ: ಯುವತಿಯರು ಸೇರಿದಂತೆ 50ಮಂದಿ ವಶಕ್ಕೆ

ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನ ಹೊರವಲಯದಲ್ಲಿ ತಡರಾತ್ರಿ ನಡೆಯುತ್ತಿದ್ದ ರೇವ್‌ ಪಾರ್ಟಿಯ ಮೇಲೆ ಪೊಲೀಸರು ದಾಳಿ ನಡೆಸಿದ್ದು, 7ಯುವತಿಯರು ಸೇರಿದಂತೆ 50ಮಂದಿಯನ್ನು ವಶಕ್ಕೆ ಪಡೆದಿದ್ದಾರೆ.

ಶನಿವಾರ(ಸೆ.28) ತಡರಾತ್ರಿ ಕೆಆರ್‌ಎಸ್‌ ಬ್ಯಾಕ್‌ ವಾಟರ್‌ನ ಮೀನಾಕ್ಷಿಪುರದ ಜಮೀನಿನೊಂದರಲ್ಲಿ ಈ ರೇವ್ ಪಾರ್ಟಿ ಆಯೋಜನೆಯಾಗಿತ್ತು. ಈ ಬಗ್ಗೆ ಮಾಹಿತಿ ತಿಳಿದ ಜಿಲ್ಲಾ ಪೊಲೀಸರು ಕಾರ್ಯಾಚರಣೆ ನಡೆಸಿದ್ದಾರೆ.

50 ಮಂದಿ ವಶಕ್ಕೆ
ಪಾರ್ಟಿ ನಡೆಯುತ್ತಿದ್ದ ಸ್ಥಳಕ್ಕೆ ಎಂಟ್ರಿ ಕೊಟ್ಟ ಪೊಲೀಸರು ಯುವತಿಯರು ಸೇರಿದಂತೆ 50ಕ್ಕೂ ಹೆಚ್ಚು ಮಂದಿಯನ್ನು ವಶಕ್ಕೆ ಪಡೆದಿದ್ದಾರೆ. ಜತೆಗೆ ಸ್ಥಳದಲ್ಲಿದ್ದ 15 ಕಾರು, 20ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಂಡಿದ್ದಾರೆ.

ವ್ಯಕ್ತಿಯೊಬ್ಬ ಸಾಮಾಜಿಕ ಜಾಲಾತಾಣದಲ್ಲಿ ಈ ಪಾರ್ಟಿಯ ಬಗ್ಗೆ ಪ್ರಚಾರ ಮಾಡಿ ಸುಮಾರು 25ಕ್ಕೂ ಹೆಚ್ಚು ಜೋಡಿಗಳನ್ನು ಪಾರ್ಟಿಗೆ ನೊಂದಾಯಿಸಿದ್ದ ಎನ್ನಲಾಗಿದೆ. ಶನಿವಾರ ತಡರಾತ್ರಿ ಪಾರ್ಟಿ ಆರಂಭವಾಗಿದೆ. ಪಾರ್ಟಿಗೆ ಇಸ್ರೇಲ್‌ನಿಂದ ರ್ಯಾಪರ್‌ ಗ್ರೇನ್‌ ರಿಪ್ಪರ್‌ ಬಂದಿದ್ದರು. ಅಲ್ಲದೆ, ಆಯೋಜನಕರು ಪಾರ್ಟಿಗೆ ಒಬ್ಬರಿಗೆ 2ಸಾವಿರ ರೂ. ನಿಗದಿ ಮಾಡಿದ್ದರು ಎನ್ನಲಾಗಿದೆ.

ಮಾಹಿತಿ ಅರಿತ ಪೊಲೀಸರು ಎಸ್ಪಿ ವಿಷ್ಣುವರ್ಧನ್‌ ಅವರ ನೇತೃತ್ವದಲ್ಲಿ ಅಪರ ಪೊಲೀಸ್‌ ಎಸ್ಪಿ ನಾಗೇಶ್‌, ಡಿವೈಎಸ್ಪಿ ಕರೀಂ ರಾವತರ್‌ ಹಾಘೂ ಸಿಬ್ಬಂದಿಗಳು ದಾಳಿ ನಡೆಸಿದ್ದಾರೆ.

ದಾಳಿ ವೇಳೆ ಪೊಲೀಸರ ಹಲ್ಲೆಗೆ ಮುಂದಾದ ತಂಡ

ಪೊಲೀಸರು ಏಕಾಏಕಿ ದಾಳಿ ಮಾಡಿದ ಸಂದರ್ಭದಲ್ಲಿ ಅಲ್ಲಿನ ಯುವಕ, ಯುವತಿಯರು ಓಡಿಹೋಗಲು ಪ್ರಯತ್ನಿಸಿದ್ದಾರೆ. ಅಲ್ಲದೆ, ಪೊಲೀಸರ ಮೇಲೆ ಹಲ್ಲೆ ಮಾಡಲು ಮುಂದಾಗಿದ್ದರು ಎನ್ನಲಾಗಿದೆ.

ಯುವಕ,ಯುವತಿಯ ವೈದ್ಯಕೀಯ ತಪಾಸಣೆ
ವಶಪಡಿಸಿಕೊಂಡಿರುವ ಯುವಕ, ಯುವತಿಯರನ್ನ ವೈದ್ಯಕೀಯ ತಪಾಸಣೆಗೆ ಒಳಪಡಿಸಲು ಪೊಲೀಸರು ಮುಂದಾಗಿದ್ದಾರೆ. ಪಾರ್ಟಿಗೆ ಬಳಸಿದ್ದ ಸಂಗೀತ ಉಪಕರಣಗಳನ್ನು ವಶಕ್ಕೆ ಪಡೆದಿದ್ದಾರೆ. ಸ್ಥಳಕ್ಕೆ ಎಫ್‌ಎಸ್‌ಎಲ್‌ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿದೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಲೋಕಾಯುಕ್ತ ಬಲೆಗೆ ಬಿದ್ದ ಪಿಡಿಒ

ಮೈಸೂರು: ಇ-ಸ್ವತ್ತು ಮಾಡಿ ಕೊಡಲು ಅರ್ಜಿದಾರರಿಗೆ ಹಣ ನೀಡುವಂತೆ ಒತ್ತಾಯ ಮಾಡಿದ ಗ್ರಾಮ ಪಂಚಾಯಿತಿ ಪಿಡಿಒ ಕುಳ್ಳೇಗೌಡ ನಾಲ್ಕು ಸಾವಿರ…

9 mins ago

ಅರ್ಥಪೂರ್ಣವಾಗಿ ಕನ್ನಡ ರಾಜ್ಯೋತ್ಸವ ಆಚರಣೆ – ಡಾ. ಪಿ ಶಿವರಾಜ್

ಮೈಸೂರು: ಕಳೆದ ಬಾರಿಯಂತೆ ಈ ಬಾರಿಯೂ ಅರ್ಥಪೂರ್ಣ ಹಾಗೂ ಅದ್ದೂರಿಯಾಗಿ ಕನ್ನಡ ರಾಜ್ಯೋತ್ಸವ ಆಚರಣೆ ಮಾಡಲಾಗುವುದು ಎಂದು ಅಪರ ಜಿಲ್ಲಾಧಿಕಾರಿ…

37 mins ago

ನಗರದ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ: ಜಿ ಟಿ ದೇವೇಗೌಡ

ಮೈಸೂರು: ನಗರವನ್ನು ಸ್ವಚ್ಛಗೊಳಿಸುವ ಮೂಲಕ ಜನರ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ ವಾಗಿದ್ದು, ಅವರು ಈ ವಿಷಯದಲ್ಲಿ ನಿರ್ಲಕ್ಷ್ಯ…

2 hours ago

ಹನೂರು: ಗುಂಡಿಮಯವಾದ ರಸ್ತೆ, ಸಾಮಾಜಿಕ ಜಾಲತಾಣ ಮೂಲಕ ಯುವಕ ವ್ಯಂಗ್ಯ

ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಅತಿ ದೊಡ್ಡ ಗ್ರಾಮ ಪಂಚಾಯಿತಿ ಎಂದು ಪ್ರಸಿದ್ಧಿ ಪಡೆದಿರುವ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ಮುಖ್ಯ…

2 hours ago

ಇಶಾ ಫೌಂಡೇಶನ್‌ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂಕೋರ್ಟ್‌

ಹೊಸದಿಲ್ಲಿ: ತಮಿಳುನಾಡಿನ ಕೊಯಮತ್ತೂರಿನಲ್ಲಿರುವ ಸದ್ಗುರು ಜಗ್ಗಿ ವಾಸುದೇವ್‌ ಅವರ ಆಶ್ರಮ ಸೇರಲು ತನ್ನ ಇಬ್ಬರು ಹೆಣ್ಣುಮಕ್ಕಳನ್ನು ಬ್ರೈನ್‌ವಾಶ್‌ ಮಾಡಲಾಗಿದೆ ಎಂಬ…

3 hours ago

ಮಡಿಕೇರಿ: ಮಗನಿಂದಲೇ ತಂದೆಯ ಹತ್ಯೆ..

ಮಡಿಕೇರಿ: ಮಗನಿಂದಲೇ ತಂದೆ ಹತ್ಯೆಯಾದ ಘಟನೆ ಶ್ರೀಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಚಿಕ್ಕಮಂಡೂರು ಗ್ರಾಮದಲ್ಲಿ ನಡೆದಿದೆ. ಸಿ ಎನ್ ನಾಣಯ್ಯ…

4 hours ago