ಮೈಸೂರು

ಸ್ಮರ್ಧಾತ್ಮಕ ಪರೀಕ್ಷೆಗೆ ಓದಿ ಹೈರಣಾಗದೆ ರಾಜಕೀಯ ಪ್ರವೇಶಿಸಿ : ಯುವ ಸ್ಮರ್ಧಾರ್ಥಿಗಳಿಗೆ ರವಿ ಡಿ.ಚನ್ನಣ್ಣನವರ್‌ ಕರೆ

ಮೈಸೂರು : ಐಎಎಸ್, ಐಪಿಎಸ್ ಹಾಗೂ ಕೆಎಎಸ್‌ನಂತಹ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಓದಿ ಓದಿ ಹೈರಣಾಗುವ ಬದಲಿಗೆ ರಾಜಕೀಯ ಪ್ರವೇಶ ಮಾಡಿ ಗ್ರಾಪಂ ಚುನಾವಣೆಯಲ್ಲಿ ಸ್ಪರ್ಧೆ ಮಾಡಿ. ಸರ್ಕಾರಿ ಉದ್ಯೋಗಗಳನ್ನು ನಂಬಿ ಕೂರಬೇಡಿ ಎಂದು ಅಗ್ನಿಶಾಮಕ ಮತ್ತು ತುರ್ತುಸೇವೆಗಳ ಇಲಾಖೆ ಹೆಚ್ಚುವರಿ ಪೊಲೀಸ್ ಮಹಾನಿರೀಕ್ಷಕ ರವಿ ಡಿ.ಚನ್ನಣ್ಣನವರ್ ಕರೆ ನೀಡಿದರು.

ವಿಜಯನಗರದ ವಾಲ್ಮೀಕಿ ಭವನದಲ್ಲಿ ಕರ್ನಾಟಕ ರಾಜ್ಯ ನಾಯಕರ ಯುವ ಸೇನೆ ವತಿಯಿಂದ ಆಯೋಜಿಸಿದ್ದ 2024-25ನೇ ಸಾಲಿನ ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿ ವಿದ್ಯಾರ್ಥಿಗಳಿಗೆ 22ನೇ ವರ್ಷದ ಪ್ರತಿಭಾ ಪುರಸ್ಕಾರ ಹಾಗೂ ಅಭಿನಂದನಾ ಸಮಾರಂಭದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ಬರೀ ಐಎಎಸ್, ಐಪಿಎಸ್ ಅಧಿಕಾರಿಗಳಾಗಬೇಕೆಂದು ಕಾಲ ಕಳೆಯಬೇಡಿ. ಹದಿನೈದು ಲಕ್ಷ ಜನರಲ್ಲಿ 250 ಮಂದಿಗೆ ಅವಕಾಶ ಸಿಗಲಿದೆ. ಅದರಲ್ಲಿ ಪರಿಶಿಷ್ಟಜಾತಿಗೆ 18, ಪರಿಶಿಷ್ಟಪಂಗಡಕ್ಕೆ 7, ಹಿಂದುಳಿದ ವರ್ಗಕ್ಕೆ 32 ಸ್ಥಾನಗಳು ದೊರೆಯಲಿವೆ. ಈ 54 ಸ್ಥಾನಗಳನ್ನು ಪಡೆಯಲು ನಾವು ಓದಿ ಓದಿ ಹೈರಣಾಗುವ ಬದಲಿಗೆ ಸ್ವಯಂ ಉಳುವೆ, ಎರಡು ಕುರಿ, ಎತ್ತು ಮೇಯಿಸಿದರೆ ಸಾಕು. ಸರ್ಕಾರಿ ಉದ್ಯೋಗಗಳನ್ನು ನಂಬಿ ಕೂರಬೇಡಿ ಎಂದು ಕಿವಿಮಾತು ಹೇಳಿದರು.

ವಿದ್ಯೆ ಕಲಿಸಿದ ಗುರುವಿಗೆ ಬೆರಳನ್ನು ಕತ್ತರಿಸಿಕೊಟ್ಟ ಏಕಲವ್ಯನಾಗುವ ಬದಲಿಗೆ ಮದಕರಿನಾಯಕನಾಗಿ ಅನ್ಯಾಯ, ದೌರ್ಜನ್ಯದ ವಿರುದ್ಧ ಹೋರಾಟ ಮಾಡಬೇಕು. ಶ್ರೇಣಿಕೃತ ಸಮಾಜದಲ್ಲಿ ರಾಜಕೀಯ, ಆರ್ಥಿಕ, ಸಾಮಾಜಿಕ ಅಸಮಾನತೆ ತಾಂಡವವಾಡುತ್ತಿದೆ. ಹೀಗಾದ್ದಾಗ ನೀವು ಆರ್ಥಿಕವಾಗಿ ಸಬಲರಾಗದೇ ಯಾರ ಹೊಟ್ಟೆ ತುಂಬಿಸಲಾಗದು ಎಂದು ಅಭಿಪ್ರಾಯಿಸಿದರು.ಆರ್ಥಿಕವಾಗಿ ಸಬಲನಾಗದಿದ್ದರೆ ಯಾರ ಹೊಟ್ಟೆ ತುಂಬಿಸಲಾಗದು ಎಂದು ಅಭಿಪ್ರಾಯಪಟ್ಟರು.

ರಾಜ್ಯದಲ್ಲಿ ನಾಯಕ ಜನಾಂಗ ನಾಲ್ಕನೇ ದೊಡ್ಡ ಸ್ಥಾನದಲ್ಲಿದೆ. ವರ್ತಮಾನದಲ್ಲಿ ದೊಡ್ಡ ಅಸಡ್ಡೆಯಿಂದ ಕಾಲಕಳೆಯುತ್ತಿದ್ದೇವೆ. ಈಗ ಬಹುದೊಡ್ಡ ಶೂನ್ಯವಾಗಿದೆ. ನಾವು ಹಳೆಯ ಕಾಲದ ಬಿರುದುಗಳನ್ನು ಹೇಳಿಕೊಂಡು ಕೂರುವ ಬದಲಿಗೆ ಇನ್ನೊಂದು ಹೋರಾಟದ ಅವಶ್ಯಕತೆ ಇದೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಹೋರಾಡಿ ಪಡೆಯುವುದು ಹೆಚ್ಚು. ಹೋರಾಡಿಯೇ ಪಡೆಯಬೇಕು ಎಂದು ಕರೆ ನೀಡಿದರು.

ಆಂದೋಲನ ಡೆಸ್ಕ್

Recent Posts

ಮೈಸೂರು ಮೃಗಾಲಯದಲ್ಲಿ 9 ಮಂದಿ ಮಾತ್ರ ಖಾಯಂ ನೌಕರರಿದ್ದಾರೆ: ಸಚಿವ ಈಶ್ವರ್‌ ಖಂಡ್ರೆ

ಬೆಳಗಾವಿ: ಮೈಸೂರು ನಗರದಲ್ಲಿರುವ ಚಾಮರಾಜೇಂದ್ರ ಮೃಗಾಲಯದಲ್ಲಿ 356 ನೌಕರರು ಕಾರ್ಯ ನಿರ್ವಹಿಸುತ್ತಿದ್ದು, ಕೇವಲ 9 ಮಂದಿ ಮಾತ್ರ ಖಾಯಂ ನೌಕರರಾಗಿದ್ದಾರೆ…

1 hour ago

ವಿಪಕ್ಷಗಳ ವಿರೋಧದ ಮಧ್ಯೆ ವಿಧಾನಸಭೆಯಲ್ಲಿ ದ್ವೇಷ ಭಾಷಣ ಮಸೂದೆ ಅಂಗೀಕಾರ

ಬೆಂಗಳೂರು: ವಿಧಾನಸಭೆಯಲ್ಲಿ ವಿಪಕ್ಷಗಳ ತೀವ್ರ ವಿರೋಧ ಹಾಗೂ ಗದ್ದಲದ ಮಧ್ಯೆ ಕರ್ನಾಟಕ ದ್ವೇಷಭಾಷಣ ಹಾಗೂ ದ್ವೇಷಾಪರಾಧಗಳ ಪ್ರತಿಬಂಧನ ಮಸೂದೆ 2025ನ್ನು…

1 hour ago

ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ಧ: ಸಚಿವ ಕೃಷ್ಣಭೈರೇಗೌಡ

ಬೆಳಗಾವಿ: ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವ್ಯಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ…

1 hour ago

ಸಾರಿಗೆ ಸಿಬ್ಬಂದಿ ವೇತನ ಪರಿಷ್ಕರಣೆ ವಿಚಾರ: ಸಚಿವ ರಾಮಲಿಂಗಾರೆಡ್ಡಿ ಹೇಳಿದ್ದಿಷ್ಟು.!

ಬೆಳಗಾವಿ: ಬೆಳಗಾವಿಯಲ್ಲಿ ನಡೆಯುತ್ತಿರುವ ವಿಧಾನಮಂಡಲ ಅಧಿವೇಶನದಲ್ಲಿ ಸಾರಿಗೆ ಸಿಬ್ಬಂದಿ ವೇತನ ಪರಿಷ್ಕರಣೆ ಬಗ್ಗೆ ಪ್ರಸ್ತಾಪವಾಗಿದೆ. ಈ ಬಗ್ಗೆ ಸಾರಿಗೆ ಸಚಿವ…

2 hours ago

ಲೋಕಸಭೆಯಲ್ಲಿ ವಿ-ಬಿಜಿ ರಾಮ್‌ ಜಿ ಮಸೂದೆ ಅಂಗೀಕಾರ

ನವದೆಹಲಿ: ಲೋಕಸಭೆಯಲ್ಲಿ ವಿ-ಬಿಜಿ ರಾಮ್‌ ಜಿ ಮಸೂದೆ ಅಂಗೀಕಾರಗೊಂಡಿದೆ. ಸಂಸತ್ತಿನ ಚಳಿಗಾಲದ ಅಧಿವೇಶನದಲ್ಲಿ ಇಂದು ಲೋಕಸಭೆಯು ರೋಜ್‌ಗಾರ್‌ ಮತ್ತು ಅಜೀವಿಕಾ…

2 hours ago

ಕಳೆದ 3 ವರ್ಷಗಳಲ್ಲಿ 88 ಪೊಲೀಸರು ಅಪರಾಧ ಕೃತ್ಯಗಳಲ್ಲಿ ಭಾಗಿ: ಸಚಿವ ಪರಮೇಶ್ವರ್‌

ಬೆಳಗಾವಿ: ರಾಜ್ಯದಲ್ಲಿ ಪೊಲೀಸ್‌ ಸಿಬ್ಬಂದಿಗಳೇ ದರೋಡೆ, ಕಳ್ಳತನ ಸೇರಿದಂತೆ ವಿವಿಧ ಅಪರಾಧ ಕೃತ್ಯಗಳಲ್ಲಿ ಭಾಗಿಯಾಗುತ್ತಿರುವ ಪ್ರಕರಣಗಳು ಹೆಚ್ಚುತ್ತಿದ್ದು, ಬೇಲಿಯೇ ಎದ್ದು…

2 hours ago