ಮೈಸೂರು

ಸ್ಮರ್ಧಾತ್ಮಕ ಪರೀಕ್ಷೆಗೆ ಓದಿ ಹೈರಣಾಗದೆ ರಾಜಕೀಯ ಪ್ರವೇಶಿಸಿ : ಯುವ ಸ್ಮರ್ಧಾರ್ಥಿಗಳಿಗೆ ರವಿ ಡಿ.ಚನ್ನಣ್ಣನವರ್‌ ಕರೆ

ಮೈಸೂರು : ಐಎಎಸ್, ಐಪಿಎಸ್ ಹಾಗೂ ಕೆಎಎಸ್‌ನಂತಹ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಓದಿ ಓದಿ ಹೈರಣಾಗುವ ಬದಲಿಗೆ ರಾಜಕೀಯ ಪ್ರವೇಶ ಮಾಡಿ ಗ್ರಾಪಂ ಚುನಾವಣೆಯಲ್ಲಿ ಸ್ಪರ್ಧೆ ಮಾಡಿ. ಸರ್ಕಾರಿ ಉದ್ಯೋಗಗಳನ್ನು ನಂಬಿ ಕೂರಬೇಡಿ ಎಂದು ಅಗ್ನಿಶಾಮಕ ಮತ್ತು ತುರ್ತುಸೇವೆಗಳ ಇಲಾಖೆ ಹೆಚ್ಚುವರಿ ಪೊಲೀಸ್ ಮಹಾನಿರೀಕ್ಷಕ ರವಿ ಡಿ.ಚನ್ನಣ್ಣನವರ್ ಕರೆ ನೀಡಿದರು.

ವಿಜಯನಗರದ ವಾಲ್ಮೀಕಿ ಭವನದಲ್ಲಿ ಕರ್ನಾಟಕ ರಾಜ್ಯ ನಾಯಕರ ಯುವ ಸೇನೆ ವತಿಯಿಂದ ಆಯೋಜಿಸಿದ್ದ 2024-25ನೇ ಸಾಲಿನ ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿ ವಿದ್ಯಾರ್ಥಿಗಳಿಗೆ 22ನೇ ವರ್ಷದ ಪ್ರತಿಭಾ ಪುರಸ್ಕಾರ ಹಾಗೂ ಅಭಿನಂದನಾ ಸಮಾರಂಭದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ಬರೀ ಐಎಎಸ್, ಐಪಿಎಸ್ ಅಧಿಕಾರಿಗಳಾಗಬೇಕೆಂದು ಕಾಲ ಕಳೆಯಬೇಡಿ. ಹದಿನೈದು ಲಕ್ಷ ಜನರಲ್ಲಿ 250 ಮಂದಿಗೆ ಅವಕಾಶ ಸಿಗಲಿದೆ. ಅದರಲ್ಲಿ ಪರಿಶಿಷ್ಟಜಾತಿಗೆ 18, ಪರಿಶಿಷ್ಟಪಂಗಡಕ್ಕೆ 7, ಹಿಂದುಳಿದ ವರ್ಗಕ್ಕೆ 32 ಸ್ಥಾನಗಳು ದೊರೆಯಲಿವೆ. ಈ 54 ಸ್ಥಾನಗಳನ್ನು ಪಡೆಯಲು ನಾವು ಓದಿ ಓದಿ ಹೈರಣಾಗುವ ಬದಲಿಗೆ ಸ್ವಯಂ ಉಳುವೆ, ಎರಡು ಕುರಿ, ಎತ್ತು ಮೇಯಿಸಿದರೆ ಸಾಕು. ಸರ್ಕಾರಿ ಉದ್ಯೋಗಗಳನ್ನು ನಂಬಿ ಕೂರಬೇಡಿ ಎಂದು ಕಿವಿಮಾತು ಹೇಳಿದರು.

ವಿದ್ಯೆ ಕಲಿಸಿದ ಗುರುವಿಗೆ ಬೆರಳನ್ನು ಕತ್ತರಿಸಿಕೊಟ್ಟ ಏಕಲವ್ಯನಾಗುವ ಬದಲಿಗೆ ಮದಕರಿನಾಯಕನಾಗಿ ಅನ್ಯಾಯ, ದೌರ್ಜನ್ಯದ ವಿರುದ್ಧ ಹೋರಾಟ ಮಾಡಬೇಕು. ಶ್ರೇಣಿಕೃತ ಸಮಾಜದಲ್ಲಿ ರಾಜಕೀಯ, ಆರ್ಥಿಕ, ಸಾಮಾಜಿಕ ಅಸಮಾನತೆ ತಾಂಡವವಾಡುತ್ತಿದೆ. ಹೀಗಾದ್ದಾಗ ನೀವು ಆರ್ಥಿಕವಾಗಿ ಸಬಲರಾಗದೇ ಯಾರ ಹೊಟ್ಟೆ ತುಂಬಿಸಲಾಗದು ಎಂದು ಅಭಿಪ್ರಾಯಿಸಿದರು.ಆರ್ಥಿಕವಾಗಿ ಸಬಲನಾಗದಿದ್ದರೆ ಯಾರ ಹೊಟ್ಟೆ ತುಂಬಿಸಲಾಗದು ಎಂದು ಅಭಿಪ್ರಾಯಪಟ್ಟರು.

ರಾಜ್ಯದಲ್ಲಿ ನಾಯಕ ಜನಾಂಗ ನಾಲ್ಕನೇ ದೊಡ್ಡ ಸ್ಥಾನದಲ್ಲಿದೆ. ವರ್ತಮಾನದಲ್ಲಿ ದೊಡ್ಡ ಅಸಡ್ಡೆಯಿಂದ ಕಾಲಕಳೆಯುತ್ತಿದ್ದೇವೆ. ಈಗ ಬಹುದೊಡ್ಡ ಶೂನ್ಯವಾಗಿದೆ. ನಾವು ಹಳೆಯ ಕಾಲದ ಬಿರುದುಗಳನ್ನು ಹೇಳಿಕೊಂಡು ಕೂರುವ ಬದಲಿಗೆ ಇನ್ನೊಂದು ಹೋರಾಟದ ಅವಶ್ಯಕತೆ ಇದೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಹೋರಾಡಿ ಪಡೆಯುವುದು ಹೆಚ್ಚು. ಹೋರಾಡಿಯೇ ಪಡೆಯಬೇಕು ಎಂದು ಕರೆ ನೀಡಿದರು.

ಆಂದೋಲನ ಡೆಸ್ಕ್

Recent Posts

ಮುಸ್ಲಿಂ ಸಮುದಾಯದ ಜಹಾನ ಈಗ ವೈದ್ಯೆ!

ಕೋಟೆ ತಾಲ್ಲೂಕಿನ ಮುಸ್ಲಿಂ ಸಮುದಾಯದ ಪ್ರಥಮ ವೈದ್ಯೆ ಎಂಬ ಹೆಗ್ಗಳಿಕೆ ಹೊಂದಿದ ಜಹಾನ   ಮಂಜು ಕೋಟೆ ಎಚ್.ಡಿ.ಕೋಟೆ: ತಾಲ್ಲೂಕಿನ…

1 hour ago

ಚೇತನ್ ಅಹಿಂಸಾ ಗಡಿಪಾರಿಗೆ ಆಗ್ರಹ

ಅಭಿಮಾನಿಗಳು, ನಿರ್ಮಾಪಕರ ಸಂಘದ ಆಕ್ರೋಶ ಬೆಂಗಳೂರು : ಪದ್ಮಭೂಷಣ ಡಾ.ರಾಜ್‌ಕುಮಾರ್ ಅವರ ಸ್ಮಾರಕದ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ವಿವಾದಾತ್ಮಕ ಹೇಳಿಕೆ…

5 hours ago

ಕೊಡಗು | ಗುಂಡು ಹೊಡೆದುಕೊಂಡು ಶಿಕ್ಷಕಿ ಆತ್ಮಹತ್ಯೆ

ಮಡಿಕೇರಿ : ಶಿಕ್ಷಕಿಯೊಬ್ಬರು ಬಂದೂಕಿನಿಂದ ಗುಂಡು ಹೊಡೆದುಕೊಂಡು ಸಾವಿಗೆ ಶರಣಾದ ಘಟನೆ ಕೊಡಗು ಜಿಲ್ಲೆಯ ಮಡಿಕೇರಿ ತಾಲ್ಲೂಕಿನ ಚೇರಂಬಾಣೆಯಲ್ಲಿ ನಡೆದಿದೆ.…

5 hours ago

ಬಿಜೆಪಿಗೆ ಸೇರ್ಪಡೆಗೊಂಡ 7 ರಾಜ್ಯಸಭಾ ಸದಸ್ಯರ ವಿರುದ್ಧ ಕ್ರಮಕ್ಕೆ ಎಎಪಿ ಆಗ್ರಹ

ನವದೆಹಲಿ : ಆಮ್ ಆದ್ಮಿ ಪಕ್ಷದಲ್ಲಿ ಭಾರೀ ರಾಜಕೀಯ ಬೆಳವಣಿಗೆ ನಡೆದಿದ್ದು, ಪಕ್ಷ ತೊರೆದು ಭಾರತೀಯ ಜನತಾ ಪಕ್ಷಕ್ಕೆ (ಬಿಜೆಪಿ)…

6 hours ago

ಶಾಲೆಗಳಲ್ಲಿ ದಿನಪತ್ರಿಕೆ ಓದುವುದು ಇನ್ಮುಂದೆ ಕಡ್ಡಾಯ

ಬೆಂಗಳೂರು : ರಾಜ್ಯದ ಎಲ್ಲಾ ಸರ್ಕಾರಿ, ಅನುದಾನಿತ ಹಾಗೂ ಅನುದಾನ ರಹಿತ ಶಾಲೆಗಳಲ್ಲಿ ಪ್ರತಿದಿನ ದಿನಪತ್ರಿಕೆ ಓದಿಸುವುದನ್ನು ಕಡ್ಡಾಯಗೊಳಿಸಲು ಶಿಕ್ಷಣ…

6 hours ago

ಜನಗಣತಿಯಲ್ಲಿ ಪ್ರತಿಯೊಬ್ಬ ನಾಗರಿಕನ ಪಾಲ್ಗೊಳ್ಳುವಿಕೆ ಅತ್ಯಗತ್ಯ: ಪ್ರಧಾನಿ ಮೋದಿ

ನವದೆಹಲಿ : ದೇಶದಾದ್ಯಂತ ನಡೆಯುತ್ತಿರುವ ಜನಗಣತಿ ಕಾರ್ಯವು ಕೇವಲ ಸರ್ಕಾರದ ಕೆಲಸವಲ್ಲ, ಬದಲಾಗಿ ಪ್ರತಿ ನಾಗರಿಕರ ಜವಾಬ್ದಾರಿಯಾಗಿದೆ. ಇದರಲ್ಲಿ ಎಲ್ಲರ…

7 hours ago