ಮೈಸೂರು

ಸ್ಮರ್ಧಾತ್ಮಕ ಪರೀಕ್ಷೆಗೆ ಓದಿ ಹೈರಣಾಗದೆ ರಾಜಕೀಯ ಪ್ರವೇಶಿಸಿ : ಯುವ ಸ್ಮರ್ಧಾರ್ಥಿಗಳಿಗೆ ರವಿ ಡಿ.ಚನ್ನಣ್ಣನವರ್‌ ಕರೆ

ಮೈಸೂರು : ಐಎಎಸ್, ಐಪಿಎಸ್ ಹಾಗೂ ಕೆಎಎಸ್‌ನಂತಹ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಓದಿ ಓದಿ ಹೈರಣಾಗುವ ಬದಲಿಗೆ ರಾಜಕೀಯ ಪ್ರವೇಶ ಮಾಡಿ ಗ್ರಾಪಂ ಚುನಾವಣೆಯಲ್ಲಿ ಸ್ಪರ್ಧೆ ಮಾಡಿ. ಸರ್ಕಾರಿ ಉದ್ಯೋಗಗಳನ್ನು ನಂಬಿ ಕೂರಬೇಡಿ ಎಂದು ಅಗ್ನಿಶಾಮಕ ಮತ್ತು ತುರ್ತುಸೇವೆಗಳ ಇಲಾಖೆ ಹೆಚ್ಚುವರಿ ಪೊಲೀಸ್ ಮಹಾನಿರೀಕ್ಷಕ ರವಿ ಡಿ.ಚನ್ನಣ್ಣನವರ್ ಕರೆ ನೀಡಿದರು.

ವಿಜಯನಗರದ ವಾಲ್ಮೀಕಿ ಭವನದಲ್ಲಿ ಕರ್ನಾಟಕ ರಾಜ್ಯ ನಾಯಕರ ಯುವ ಸೇನೆ ವತಿಯಿಂದ ಆಯೋಜಿಸಿದ್ದ 2024-25ನೇ ಸಾಲಿನ ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿ ವಿದ್ಯಾರ್ಥಿಗಳಿಗೆ 22ನೇ ವರ್ಷದ ಪ್ರತಿಭಾ ಪುರಸ್ಕಾರ ಹಾಗೂ ಅಭಿನಂದನಾ ಸಮಾರಂಭದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ಬರೀ ಐಎಎಸ್, ಐಪಿಎಸ್ ಅಧಿಕಾರಿಗಳಾಗಬೇಕೆಂದು ಕಾಲ ಕಳೆಯಬೇಡಿ. ಹದಿನೈದು ಲಕ್ಷ ಜನರಲ್ಲಿ 250 ಮಂದಿಗೆ ಅವಕಾಶ ಸಿಗಲಿದೆ. ಅದರಲ್ಲಿ ಪರಿಶಿಷ್ಟಜಾತಿಗೆ 18, ಪರಿಶಿಷ್ಟಪಂಗಡಕ್ಕೆ 7, ಹಿಂದುಳಿದ ವರ್ಗಕ್ಕೆ 32 ಸ್ಥಾನಗಳು ದೊರೆಯಲಿವೆ. ಈ 54 ಸ್ಥಾನಗಳನ್ನು ಪಡೆಯಲು ನಾವು ಓದಿ ಓದಿ ಹೈರಣಾಗುವ ಬದಲಿಗೆ ಸ್ವಯಂ ಉಳುವೆ, ಎರಡು ಕುರಿ, ಎತ್ತು ಮೇಯಿಸಿದರೆ ಸಾಕು. ಸರ್ಕಾರಿ ಉದ್ಯೋಗಗಳನ್ನು ನಂಬಿ ಕೂರಬೇಡಿ ಎಂದು ಕಿವಿಮಾತು ಹೇಳಿದರು.

ವಿದ್ಯೆ ಕಲಿಸಿದ ಗುರುವಿಗೆ ಬೆರಳನ್ನು ಕತ್ತರಿಸಿಕೊಟ್ಟ ಏಕಲವ್ಯನಾಗುವ ಬದಲಿಗೆ ಮದಕರಿನಾಯಕನಾಗಿ ಅನ್ಯಾಯ, ದೌರ್ಜನ್ಯದ ವಿರುದ್ಧ ಹೋರಾಟ ಮಾಡಬೇಕು. ಶ್ರೇಣಿಕೃತ ಸಮಾಜದಲ್ಲಿ ರಾಜಕೀಯ, ಆರ್ಥಿಕ, ಸಾಮಾಜಿಕ ಅಸಮಾನತೆ ತಾಂಡವವಾಡುತ್ತಿದೆ. ಹೀಗಾದ್ದಾಗ ನೀವು ಆರ್ಥಿಕವಾಗಿ ಸಬಲರಾಗದೇ ಯಾರ ಹೊಟ್ಟೆ ತುಂಬಿಸಲಾಗದು ಎಂದು ಅಭಿಪ್ರಾಯಿಸಿದರು.ಆರ್ಥಿಕವಾಗಿ ಸಬಲನಾಗದಿದ್ದರೆ ಯಾರ ಹೊಟ್ಟೆ ತುಂಬಿಸಲಾಗದು ಎಂದು ಅಭಿಪ್ರಾಯಪಟ್ಟರು.

ರಾಜ್ಯದಲ್ಲಿ ನಾಯಕ ಜನಾಂಗ ನಾಲ್ಕನೇ ದೊಡ್ಡ ಸ್ಥಾನದಲ್ಲಿದೆ. ವರ್ತಮಾನದಲ್ಲಿ ದೊಡ್ಡ ಅಸಡ್ಡೆಯಿಂದ ಕಾಲಕಳೆಯುತ್ತಿದ್ದೇವೆ. ಈಗ ಬಹುದೊಡ್ಡ ಶೂನ್ಯವಾಗಿದೆ. ನಾವು ಹಳೆಯ ಕಾಲದ ಬಿರುದುಗಳನ್ನು ಹೇಳಿಕೊಂಡು ಕೂರುವ ಬದಲಿಗೆ ಇನ್ನೊಂದು ಹೋರಾಟದ ಅವಶ್ಯಕತೆ ಇದೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಹೋರಾಡಿ ಪಡೆಯುವುದು ಹೆಚ್ಚು. ಹೋರಾಡಿಯೇ ಪಡೆಯಬೇಕು ಎಂದು ಕರೆ ನೀಡಿದರು.

ಆಂದೋಲನ ಡೆಸ್ಕ್

Recent Posts

ಎಕ್ಸ್ ಬಿಟ್ಟು ಇನ್‌ಸ್ಟಾ ಹಿಡಿದ ರಾಜಕಾರಣ : ಮೋದಿಗೆ ಜೆನ್-ಝೀ ಕಾಟ

ನವದೆಹಲಿ : ದೇಶದ ರಾಜಕೀಯದ ಭಾಷೆ ಬದಲಾಗುತ್ತಿದೆ. ಒಮ್ಮೆ ಟ್ವಿಟರ್, ಈಗಿನ ಎಕ್ಸ್‌ನಲ್ಲಿ ನಡೆಯುತ್ತಿದ್ದ ವಾಗ್ವಾದ, ಟ್ರೆಂಡ್‌ಗಳು ಈಗ ಇನ್‌ಸ್ಟಾಗ್ರಾಂ…

8 hours ago

ಓದುಗರ ಪತ್ರ: ಕಠಿಣ ಕ್ರಮ ಅಗತ್ಯ

ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿಗಳು ಶ್ರಮಪಡುವುದು ಗೊತ್ತಿರುವ ವಿಷಯವೇ. ವೃತ್ತಿಪರ ಕೋರ್ಸ್‌ಗಳು ಮತ್ತು ನಂತರ ಉದ್ಯೋಗಕ್ಕಾಗಿ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗೆ ವಿದ್ಯಾರ್ಥಿಗಳು…

16 hours ago

ಓದುಗರ ಪತ್ರ: ಕಸ ವಿಲೇವಾರಿಗೆ ವೈಜ್ಞಾನಿಕ ಪರಿಹಾರ ಅಗತ್ಯ

ರಾಜ್ಯದಲ್ಲಿ ಪ್ರತಿದಿನ ಸೃಷ್ಟಿಯಾಗುವ ೧೨,೧೪೯ ಟನ್ ಕಸದಿಂದ ವಿದ್ಯುತ್ ತಯಾರಿಸುವ ಸರ್ಕಾರದ ಪ್ರಸ್ತಾಪವು ಕೇವಲ ಕಾಗದದ ಮೇಲಷ್ಟೇ ಸುಂದರವಾಗಿ ಕಾಣುತ್ತದೆ.…

16 hours ago

ಕೇಂದ್ರ ಸರ್ಕಾರದ ಮೇಲೆ ಜೆನ್ ಝೀ ಚಳುವಳಿಯ ತೂಗುಗತ್ತಿ

ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್‌  ಪಂಜಬ್ ಮತ್ತು ಹರಿಯಾಣ ರೈತರ ೧೩ ತಿಂಗಳ ನಿರಂತರಹೋರಾಟ ಜನಮಾನಸದಿಂದ ಮರೆಯುತ್ತಿದ್ದಂತೆ ಬಿಜೆಪಿ ನೇತೃತ್ವದ…

16 hours ago

‘ಅಂಕಲ್ ಚೋಕ್’ ಕಟ್ಟಿದ ಬಿದಿರಿನ ಮಾಯಾಲೋಕ

ಜಿ.ಕೃಷ್ಣ ಪ್ರಸಾದ್ ‘ಇಂದು ನಿಮ್ಮನ್ನು ಬಿದಿರಿನ ಲೋಕಕ್ಕೆ ಕರೆದೊಯ್ಯುತ್ತೇನೆ’. ಬೆಳಿಗ್ಗೆ ಕಾಫಿ ಕುಡಿಯುತ್ತಿದ್ದಾಗ ಗೆಳೆಯ ಮೈಕೆಲ್ ಕಾಮನ್ಸ್ ಹೇಳಿದ ಈ…

19 hours ago

ಮುಚ್ಚುತ್ತಿರುವ ಚಿತ್ರಮಂದಿರ

ಮಧುಕರ ಎಂ.ಎಲ್. ಒಂದು ಕಾಲದಲ್ಲಿ ಚಲನಚಿತ್ರವೇ ನಮ್ಮ ಮನರಂಜನೆ ಮಾಧ್ಯಮವಾಗಿದ್ದು, ಪೌರಾಣಿಕ ಕಥೆಗಳು, ರಾಮಾಯಣ ಕಥೆಗಳು, ಮಹಾಭಾರತ ಪ್ರಸಂಗಗಳು ಚಲನಚಿತ್ರವಾಗಿ…

19 hours ago