ಮೈಸೂರು

ಹಂಪಾಪುರ ಸರ್ಕಾರಿ ಶಾಲೆಗೆ ಅನೇಕ ಪರಿಕರಗಳನ್ನು ನೀಡಿದ ರವಿ ಸಂತು ಬಳಗ

ಎಚ್.ಡಿ.ಕೋಟೆ: ಹಂಪಾಪುರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ರವಿ ಸಂತು ಬಳಗದ ವತಿಯಿಂದ ಮೂಲಭೂತ ಸೌಕರ್ಯ ಒದಗಿಸಲಾಯಿತು.

ಶಾಲೆಗೆ ರವಿ ಸಂತು ಬಳಗದ ಪರವಾಗಿ ರಮೇಶ್ ನಾಗರಾಜ ಅವರ ಕುಟುಂಬದ ಹೆಸರಲ್ಲಿ ಸಮಗ್ರ ಅಭಿವೃದ್ಧಿ ಸಂಸ್ಥಾಪಕರಾದ ಡಾಕ್ಟರ್ ಸ್ನೇಹ ರಾಕೇಶ್ ಅವರ ನೇತೃತ್ವದಲ್ಲಿ ಸರ್ಕಾರಿ ಶಾಲೆಯ ಮಕ್ಕಳಿಗೆ ಮೂಲಭೂತ ಸೌಕರ್ಯ ಒದಗಿಸುವ ನಿಟ್ಟಿನಲ್ಲಿ ವಾಟರ್ ಪ್ಯೂರಿಫೈಯರ್, ಜೆರಾಕ್ಸ್ ಪ್ರಿಂಟರ್, ಮಕ್ಕಳಿಗೆ ವಿದ್ಯಾ ಸಾಮಗ್ರಿ, ವಾಟರ್ ಬಾಟಲ್ಸ್ ನೀಡಲಾಯಿತು.

ಇದೇ ಸಂದರ್ಭದಲ್ಲಿ ಶಿಕ್ಷಕರಾಗಿ ಸೇವೆ ಸಲ್ಲಿಸುತ್ತಿರುವ ಶಿಕ್ಷಕರಿಗೆ 2025ನೇ ಸಾಲಿನ ರಾಜ್ಯ ಸೇವಾ ರತ್ನ ಪ್ರಶಸ್ತಿಯನ್ನು ನೀಡಲಾಯಿತು. ಇದೇ ವೇಳೆ 35 ವರ್ಷಗಳ ಕಾಲ ಕುಂಚ ಕಲೆಯನ್ನು ವೃತ್ತಿಯಾಗಿಸಿಕೊಂಡು ಸೇವೆ ಮಾಡುತ್ತಿರುವ ಕಲೆ ಪ್ರಕಾಶ್ ಅವರಿಗೂ ಕೂಡ ಡಾಕ್ಟರ್ ವಿಷ್ಣುವರ್ಧನ್ ಹೆಸರಿನಲ್ಲಿ ಕುಂಚ ಕಲಾ ರತ್ನ ಪ್ರಶಸ್ತಿಯನ್ನು ಕೊಡುವುದರ ಮೂಲಕ ರವಿ ಸಂತು ಬಳಗ ಗೌರವ ಸಲ್ಲಿಸಿದೆ.

ಕಾರ್ಯಕ್ರಮದಲ್ಲಿ ರವಿ ಸಂತು ಬಳಗದ ಸುರೇಶ್ ಗೌಡ್ರು, ಶ್ರೀಕಂಠ, ರವಿ ಹಂಸಲೇಖ, ಕಿರಣ್, ಮಿಮಿಕ್ರಿ ಸುಧಾಕರ್, ಶ್ರೀನಿವಾಸ್, ಮಹಿಳಾ ಸಾಧಕಿ ಡಾಕ್ಟರ್ ಸ್ನೇಹ ರಾಕೇಶ್, ಚಂದ್ರು ಜೂನಿಯರ್ ಪುನೀತ್ ರಾಜಕುಮಾರ್‌, ಕಲೆ ಪ್ರಕಾಶ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

ಆಂದೋಲನ ಡೆಸ್ಕ್

Recent Posts

ಮಾನವ ಕಲಿಯಬೇಕಾದ ಬದುಕಿನ ಪಾಠಗಳು

ಶ್ರೇಯಸ್ ದೇವನೂರು ಇಂದು ವಿಶ್ವ ಆನೆ ದಿನಾಚರಣೆ  ಭೂಮಿಯ ಮೇಲಿರುವ ಜೀವಿಗಳಲ್ಲಿ ಆನೆ, ಅತಿ ದೊಡ್ಡ ಪ್ರಾಣಿ ಮಾತ್ರವಲ್ಲ ,…

2 hours ago

ಸಾವಿರಾರು ಹೆರಿಗೆ ಮಾಡಿಸಿದ ಫ್ಲಾರೆನ್ಸ್ ನೈಟಿಂಗೇಲ್ ಗೀತಾ ‘ಮಾ’

ಪಂಜುಗಂಗೊಳ್ಳಿ ಅವರ ವಾರದ ಅಂಕಣ  ಕಡು ಬಡತನದ ಕುಟುಂಬದಿಂದ ಬಂದ ಶುಶ್ರೂಷಕಿ ಪ. ಬಂಗಾಳದ ಗೀತಾ ಕಾರ್ಮಕಾರ್ ನರ್ಸಿಂಗ್ ತರಬೇತಿ…

2 hours ago

ಸಿದ್ದರಾಮಯ್ಯ ಸಿದ್ಧಾಂತದ ಹೋರಾಟಕ್ಕೆ ಅಂತ್ಯವೆಂಬುದೇ ಇಲ್ಲ

ಆರ್.ಟಿ.ವಿಠ್ಠಲಮೂರ್ತಿ ಕರ್ನಾಟಕದ ರಾಜಕೀಯ ಚರಿತ್ರೆಯಲ್ಲಿ ಹೊಸ ಮೈಲಿಗಲ್ಲಾಗಿ ದಾಖಲಾಗಿರುವ ಸಿದ್ದರಾಮಯ್ಯ ಅವರೀಗ ಮತ್ತೊಂದು ಪಯಣಕ್ಕೆ ಸಜ್ಜಾಗಬೇಕಿದೆ. ಇನ್ನು ಚುನಾವಣೆಗಳಲ್ಲಿ ಸ್ಪರ್ಧಿಸುವು…

2 hours ago

ಕಣ್ಮನ ಸೆಳೆಯುತ್ತಿದೆ ಮಲ್ಲಳ್ಳಿ ಜಲಪಾತ!

ಲಕ್ಷ್ಮೀಕಾಂತ್ ಕೊಮಾರಪ್ಪ ಪ್ರಾಕೃತಿಕ ಸೌಂದರ್ಯಕ್ಕೆ ಮಾರುಹೋಗುತ್ತಿರುವ ಪ್ರವಾಸಿಗರು ಸೋಮವಾರಪೇಟೆ: ಎತ್ತ ನೋಡಿದರೂ ಅಚ್ಚಹಸಿರಿನ ಕಾಡು ಸುಂದರ ಪ್ರಕೃತಿಯ ಸೊಬಗು... ನಿಮಿಷಕ್ಕೊಮ್ಮೆ…

2 hours ago

ಓದುಗರ ಪತ್ರ: ಸ್ಥಾನ…ಮಾನ !

ಸ್ಥಾನ...ಮಾನ ! ಅಳೆದೂ ಸುರಿದು ಅಲ್ಲಿಂದಿಲ್ಲಿಗೆ ಓಡಾಡಿ ಕೊಟ್ಟೂ ಕೊಡಲಾಗದೆ ಬಿಟ್ಟೂ ಇರಲಾಗದೆ ಉಳಿಸಿಕೊಂಡಿರುವುದು ಒಂದೇ ಒಂದು ಮಂತ್ರಿ ಸ್ಥಾನ…

2 hours ago

ಓದುಗರ ಪತ್ರ: ಸಚಿವ ಸ್ಥಾನ: ಹಿರಿಯರ ನಿರ್ಲಕ್ಷ್ಯ ಸರಿಯಲ್ಲ

ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ನೇತೃತ್ವದ ಮಂತ್ರಿಮಂಡಲ ವಿಸ್ತರಣೆಯಾಗಿ ೨೦ ಸ್ಥಾನಗಳ ಪೈಕಿ ೧೯ ಶಾಸಕರು ಸಚಿವರಾಗಿ ಪ್ರಮಾಣವಚನ ಸ್ವೀಕಾರ…

3 hours ago