ಮೈಸೂರು

ಅಂಬೇಡ್ಕರ್‌ನ್ನು ಓದುವುದು ಮಾನವೀಯತೆ ಅಧ್ಯಯನ ಮಾಡಿದಂತೆ: ಡಾ.ಹೆಚ್.ಸಿ.ಮಹದೇವಪ್ಪ

ಮೈಸೂರು : ಡಾ.ಬಿ.ಆರ್.ಅಂಬೇಡ್ಕರ್ ಅವರನ್ನು ಓದುವುದು ಹೊಸ ದೇಶಕ್ಕೆ ಪ್ರವೇಶದಂತೆ ಹಾಗೂ ಮಾನವೀಯತೆಯನ್ನು ಅಧ್ಯಯನ ಮಾಡುತ್ತಿದ್ದಂತೆ ಎಂದು ಸಮಾಜ ಕಲ್ಯಾಣ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಹೆಚ್.ಸಿ.ಮಹದೇವಪ್ಪ ಅವರು ತಿಳಿಸಿದರು.

ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಡಾ.ಬಿ.ಆರ್.ಅಂಬೇಡ್ಕರ್ ಅಧ್ಯಯನ ಮತ್ತು ಸಂಶೋಧನ ಕೇಂದ್ರ ವತಿಯಿಂದ ಘಟಿಕೋತ್ಸವ ಭವನದಲ್ಲಿ ಶನಿವಾರ ಆಯೋಜಿಸಿದ್ದ “ಡಾ.ಬಿ.ಆರ್.ಅಂಬೇಡ್ಕರ್ ಅವರ ಅಭಿವೃದ್ಧಿ ದೃಷ್ಟಿಕೋನ ಮತ್ತು ಸಮಕಾಲಿನ ಜಗತ್ತು” ವಿಷಯ ಕುರಿತ ಎರಡು ದಿನಗಳ ಅಂತಾರಾಷ್ಟ್ರೀಯ ಕಾರ್ಯಗಾರಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಬಾಬಸಾಹೇಬರು ದೇಶಕಟ್ಟಲು, ಜನರನ್ನು ಬೆಸೆಯಲು, ಸಾಂಸ್ಕೃತಿಕವಾದ ಬದುಕಿನ ನಿರೂಪಣೆಗೆ ನೀಡಿರುವ ಸತ್ವಭರಿತ ಅನೇಕ ಕೊಡುಗೆಯ ಬಗ್ಗೆ ಎಲ್ಲರೂ ಚಿಂತನೆ ಮಾಡಬೇಕಿದೆ. ಅಸಮಾನತೆಯನ್ನು ತೊರೆದು ಸಮಸಮಾಜದ ಸಾಧನೆಯ ಗುರಿಯ ಕಡೆಗೆ ಹೆಜ್ಜೆ ಇಡಬೇಕಿದೆ ಎಂದು ಹೇಳಿದರು.

ಸಂವಿಧಾನ ಕುರಿತು ಜನರಲ್ಲಿ ಜಾಗೃತಿ ಮೂಡಿಸಲಾಗುತ್ತಿದೆ. ಅದರಂತೆ ವಿಶ್ವವಿದ್ಯಾಲಯಗಳಲ್ಲಿ ಸಂವಿಧಾನ ಕುರಿತು ಸಮಗ್ರವಾದ ಅಧ್ಯಯನ ನಡೆಸಬೇಕಿದೆ. ಪ್ರಾಧ್ಯಾಪಕರು ವಿದ್ಯಾರ್ಥಿಗಳಿಗೆ ಸಂವಿಧಾನದ ಆಶಯಗಳನ್ನು ಬಿತ್ತಬೇಕಿದೆ. ಈ ಮೂಲಕ ಅಂಬೇಡ್ಕರ ಅವರ ಕನಸಾದ ಸಮೃದ್ಧ ಭಾರತದ ನಿರ್ಮಾಣಕ್ಕೆ ಪ್ರತಿಯೊಬ್ಬರೂ ಕೈಜೋಡಿಸಬೇಕಿದೆ ಎಂದು ಕರೆ ನೀಡಿದರು.

ಮಾಧ್ಯಮಗಳ ನಿಲುವು ವೈಚಾರತೆ, ವೈಜ್ಞಾನಿಕ ನಿಲುವುಗಳನ್ನು ಬಲಪಡಿಸುವಂತೆ ಕಾರ್ಯನಿರ್ವಹಿಸಬೇಕಿದೆ. ಸತಿಸಹಾಗಮನ ಪದ್ಧತಿ ಪಾಲಿಸಿದವರು ಇಂದು ಸಂವಿಧಾನದ ಮೇಲೆ ಸವಾರಿ ಮಾಡುತ್ತಿದ್ದಾರೆ. ಸಾಮಾಜಿಕ ಹಾಗೂ ಅರ್ಥಿಕ ಸಮಾನತೆವಿಲ್ಲದೆ ಸ್ವಾತಂತ್ರ್ಯಕ್ಕೆ ಅರ್ಥವಿಲ್ಲ.

ಭಾರತದ ಎಲ್ಲಾ ಜನರನ್ನು ಸಂರಕ್ಷಣೆ ಮಾಡುವ ಸಂವಿಧಾನವನ್ನು ಬಾಬಸಾಹೇಬರು ನೀಡಿದ್ದಾರೆ. ನಮಗೆ, ನಮ್ಮ ಮಕ್ಕಳಿಗೆ, ಮಹಿಳೆಯರಿಗೆ, ರೈತರಿಗೆ, ಕಾರ್ಮಿಕರಿಗೆ ನೆಮ್ಮದಿ ಬದುಕು ಸಂವಿಧಾನದ ಸಮರ್ಪಕ ಜಾರಿಯಲ್ಲಿದೆ ಎಂದು ತಿಳಿಸಿದರು.

ಉನ್ನತ ಶಿಕ್ಷಣ ಸಚಿವರಾದ ಡಾ.ಎಂ.ಸಿ.ಸುಧಾಕರ್ ಅವರು ಮಾತನಾಡಿ, ಶಿಕ್ಷಣವು ಸುಲಭವಾಗಿ ಕೈಗೆಟುಕದ ಸಂದರ್ಭದಲ್ಲಿ ಶೋಷಿತ ಸಮುದಾಯದ ವ್ಯಕ್ತಿ ವರ್ಣಬೇದ, ಜಾತಿಭೇದದ ನಡುವೆ ಸ್ವಾತಂತ್ರ್ಯಪೂರ್ವದಲ್ಲಿ ವಿದೇಶದಲ್ಲಿ ಉನ್ನತ ಪದವಿ ಪಡೆದವರು ಡಾ.ಬಿ.ಆರ್.ಅಂಬೇಡ್ಕರ್ ಅವರಾಗಿದ್ದಾರೆ. ಈ ದೇಶದ ಜಾತಿ ಪದ್ಧತಿ, ಅಸ್ಪೃಶ್ಯತೆ ತೊಲಿಗಿಸಲು ಅವರು ನೀಡಿರುವ ಸಂವಿಧಾನ ಪ್ರಪಂಚಕ್ಕೆ ಮಾದರಿಯಾಗಿದೆ ಎಂದರು.

ಅಂಬೇಡ್ಕರ್ ಅವರು ಸಂವಿಧಾನ ಕತೃ ಮಾತ್ರವಲ್ಲ, ಆರ್ಥಿಕ ತಜ್ಞ, ಶಿಕ್ಷಣ ತಜ್ಞ, ಸಾಮಾಜಿಕ ಚಿಂತಕ, ಕ್ರಾಂತಿಕಾರಿ ನಾಯಕ, ತತ್ವಜ್ಞಾನಿ ಹಾಗೂ ಮಾನವತಾವಾದಿ. ಈ ನಿಟ್ಟಿನಲ್ಲಿ 21ನೇ ಶತಮಾನದಲ್ಲಿ ಬಾಬಾಸಾಹೇಬರ ದೂರದೃಷ್ಟಿತ್ವದ ಅಭಿವೃದ್ಧಿ ವಿಚಾರಗಳು ಹೇಗೆ ಪ್ರತಿಧ್ವನಿಸುತ್ತಿದೆ ಎಂಬುದನ್ನು ಚಿಂತಿಸಿಬೇಕಿದೆ ಎಂದರು.

ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ.ಶರಣಪ್ಪ ವಿ.ಹಲಸೆ, ಕುಲಸಚಿವ ಪ್ರೊ.ಕೆ.ಎಲ್.ಎನ್.ಮೂರ್ತಿ, ಪರಿಕ್ಷಾಂಗ ಕುಲಸಚಿವ ಪ್ರೊ.ಪ್ರವೀಣ್, ಪ್ರೊ.ಎನ್.ಲಕ್ಷ್ಮಿ, ಡಾ.ಶಿವಕುಮಾರಸ್ವಾಮಿ, ವ್ಯವಸ್ಥಾಪನ ಮಂಡಳಿ ಸದಸ್ಯ ಬಿ.ಜಿ.ಪಾಟೀಲ್, ಬಾಲಕ ತೇಜಸ್ವಿ ಚಕ್ರವರ್ತಿ ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು.

andolana

Recent Posts

ಓದುಗರ ಪತ್ರ: ಮೈಸೂರಿನಲ್ಲಿ ಮಳೆ ನೀರು ಕೊಯ್ಲು ಥೀಮ್ ಪಾರ್ಕ್ ಕನ್ನಡಿಯೊಳಗಿನ ಗಂಟು

ಮೈಸೂರು ನಗರದಲ್ಲಿ ಮಳೆನೀರು ಕೊಯ್ಲು ಥೀಮ್ ಪಾರ್ಕ್ ಸ್ಥಾಪಿಸುವ ಹಿಂದಿನ ಹಾಗೂ ಈಗಿನ ಸರ್ಕಾರಗಳ ಭರವಸೆ ಇನ್ನೂ ಕನ್ನಡಿಯೊಳಗಿನ ಗಂಟಾಗಿಯೇ…

46 mins ago

ಓದುಗರ ಪತ್ರ: ಅಂಕೇಗೌಡರಿಗೆ ಸಿಕ್ಕ ಪದ್ಮಶ್ರೀ ಸಾರಸ್ವತ ಲೋಕಕ್ಕೆ ಸಂದ ಗೌರವ

ಮಂಡ್ಯ ಜಿಲ್ಲೆಯ ಪಾಂಡವಪುರ ತಾಲ್ಲೂಕಿನ ಹರಳಹಳ್ಳಿಯ ಪುಸ್ತಕ ಪ್ರೇಮಿ ೭೮ ವರ್ಷದ ಅಂಕೇಗೌಡ ಅವರಿಗೆ ಪದ್ಮಶ್ರೀ ಪ್ರಶಸ್ತಿ ಲಭಿಸಿರುವುದು ಕನ್ನಡ…

48 mins ago

ಓದುಗರ ಪತ್ರ: ರಾಮಕೃಷ್ಣನಗರಕ್ಕೆ ಮತ್ತಷ್ಟು ಬಸ್ ಸೌಲಭ್ಯ ಕಲ್ಪಿಸಿ

ಮೈಸೂರಿನ ರಾಮಕೃಷ್ಣನಗರ ಮಾರ್ಗಕ್ಕೆ ಪ್ರತಿದಿನ ನಗರ ಸಾರಿಗೆ ಬಸ್ಸುಗಳು ಸಂಚರಿಸುತ್ತವೆ. ಆದರೆ ಈ ಮಾರ್ಗದಲ್ಲಿ ಓಡಾಡುವ ಬಸ್ಸುಗಳ ಸಂಖ್ಯೆ ಮಾತ್ರ…

50 mins ago

ವಿಜೃಂಭಣೆಯಿಂದ ನಡೆದ ಸಂತೆ ಮಾಸ್ತಮ್ಮನವರ ಜಾತ್ರೆ

ಸರಗೂರು: ಪಟ್ಟಣದಲ್ಲಿ ಗ್ರಾಮದೇವತೆ ಶ್ರೀ ಸಂತೆ ಮಾಸ್ತಮ್ಮನವರ ೩೧ನೇ ಜಾತ್ರಾ ಮಹೋತ್ಸವ ಹಾಗೂ ಕೊಂಡೋತ್ಸವ ಶುಕ್ರವಾರ ವಿಜೃಂಭಣೆಯಿಂದ ನೆರವೇರಿತು. ಜಾತ್ರಾ…

52 mins ago

ಕಬಿನಿ ಹಿನ್ನೀರಿನ ರೆಸಾರ್ಟ್‌ಗಳ ದಾಖಲಾತಿ ಪರಿಶೀಲನೆ

ರೆಸಾರ್ಟ್‌ಗಳು, ಹೋಂಸ್ಟೇಗಳಿಗೆ ಅಕ್ರಮ ರೆಸಾರ್ಟ್‌ಗಳ ತನಿಖಾ ಸಮಿತಿಯವರ ದಿಢೀರ್ ಭೇಟಿ ಹೆಚ್.ಡಿ.ಕೋಟೆ: ತಾಲ್ಲೂಕಿನ ಕಬಿನಿ ಹಿನ್ನೀರಿನ ನಾಗರಹೊಳೆ ಮತ್ತು ಬಂಡೀಪುರ…

56 mins ago

ಬೀದಿ ನಾಯಿ ಪುನರ್ವಸತಿ ಕೇಂದ್ರ ಸ್ಥಾಪನೆಗೆ ವಿರೋಧ

ಕೆ.ಬಿ.ಶಂಶುದ್ಧೀನ್ ಗ್ರಾಮಕ್ಕೆ ಹುಲಿ, ಚಿರತೆಗಳು ಲಗ್ಗೆಯಿಡುವ ಆತಂಕ; ಹೋರಾಟದ ಎಚ್ಚರಿಕೆ ನೀಡಿದ ಹಕ್ಕೆ ಗ್ರಾಮಸ್ಥರು ಕುಶಾಲನಗರ: ಬೀದಿ ನಾಯಿಗಳ ಹಾವಳಿ…

59 mins ago