ಮೈಸೂರು

ಮೇಕೆದಾಟು ಯೋಜನೆ ಜಾರಿಗೆ ಸನ್ನದ್ಧ : ಡಿಕೆಶಿ

ಮೈಸೂರು : ಮೇಕೆದಾಟು ಯೋಜನೆ ಜಾರಿಗೆ ನಾವು ಸನ್ನದ್ಧ. ನ್ಯಾಯಾಲಯದಲ್ಲಿ ನಮಗೆ ನ್ಯಾಯ ಸಿಗುವ ಭರವಸೆ ಇದೆ ಎಂದು ಡಿಸಿಎಂ ಡಿಕೆ ಶಿವಕುಮಾರ್‌ ಹೇಳಿದರು.

ತಮಿಳುನಾಡಿಗೆ ಹೆಚ್ಚುವರಿ ನೀರು ಹರಿದು ಹೋಗುತ್ತಿದೆ ಹಾಗೂ ಅವರ ಅಚ್ಚುಕಟ್ಟು ಪ್ರದೇಶ ಹೆಚ್ಚಳವಾಗುತ್ತಿದೆಯಲ್ಲಾ? ಎಂದು ಮೈಸೂರು ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ” ನಮ್ಮ ಅಚ್ಚುಕಟ್ಟು ಪ್ರದೇಶವೂ ಶೇ.6 ರಷ್ಟು ಹೆಚ್ಚಾಗಿದೆ. ಯೋಜನೆ ಜಾರಿಗೆ ನಾವು ಸನ್ನದ್ಧರಾಗಿದ್ದೇವೆ. ನ್ಯಾಯಾಲಯದಲ್ಲಿಯೂ ನಮಗೆ ನ್ಯಾಯ ಸಿಗುತ್ತದೆ. ಈಗಾಲೇ ಕನಕಪುರದಲ್ಲಿ ಮೇಕೆದಾಟು ಕಚೇರಿ ತೆರೆದಿದ್ದೇವೆ. ಭೂಸ್ವಾಧೀನ, ಮುಳುಗಡೆಯಾಗುವ ಅರಣ್ಯ ಭೂಮಿಗೆ ಪರ್ಯಾಯವಾಗಿ ಎಲ್ಲಿ ಭೂಮಿ ನೀಡಬೇಕು ಎಂದು ನಾವು ತಯಾರಾಗಿದ್ದೇವೆ” ಎಂದು ತಿಳಿಸಿದರು.

ಕಾವೇರಿ ಹಾಗೂ ಕಬಿನಿ‌ ನೀರಾವರಿ ಪ್ರದೇಶದಲ್ಲಿ ಅಭಿವೃದ್ಧಿಯಾಗಿಲ್ಲ ಎನ್ನುವ ಪ್ರಶ್ನೆಗೆ, “ಮಂಡ್ಯ ಜಿಲ್ಲೆಗೆ ನೀರಾವರಿ ಇಲಾಖೆಯಿಂದ 1 ಸಾವಿರ ಕೋಟಿ ಅನುದಾನ ನೀಡಿದ್ದೇವೆ. ಕಾಲುವೆ ಸ್ವಚ್ಚತೆ, ನೀರಿನ ಸೋರಿಕೆ ತಡೆಗಟ್ಟುವಿಕೆ, ಕೊನೆ ಪ್ರದೇಶಕ್ಕೆ ನೀರು ತಲುಪಿಸುವುದು ಹೀಗೆ ಅನೇಕ ಕೆಲಸಗಳನ್ನು ಮಾಡಿದ್ದೇವೆ. ಕಬಿನಿ ಪ್ರದೇಶಕ್ಕೆ ರೂ.400 ಕೋಟಿ ನೀಡಿದ್ದೇವೆ” ಎಂದರು.

ಕಾವೇರಿ ಆರತಿ ಘೋಷಣೆ ಮಾಡಿ ಒಂದು ವರ್ಷವಾಗಿರುವ ಬಗ್ಗೆ ಕೇಳಿದಾಗ, “ಒಂದಷ್ಟು ರೈತರು ಆತಂಕದಲ್ಲಿದ್ದಾರೆ. ಅವರು ಆತಂಕಕ್ಕೆ ಒಳಗಾಗುವ ಪ್ರಮೇಯವಿಲ್ಲ. ಪೂಜೆ ಹಾಗೂ ಪ್ರಾರ್ಥನೆ ಮಾಡುವುದರಲ್ಲಿ ಏನಿದೆ? ಪೂಜೆಯನ್ನು ಚಿಕ್ಕದಾಗಿಯೂ ದೊಡ್ಡದಾಗಿಯೂ ಮಾಡಬಹುದು. ಸುಮಾರು 1500 ಜನಕ್ಕೆ ಪ್ರತ್ಯಕ್ಷವಾಗಿ ಉದ್ಯೋಗ ದೊರೆಯುತ್ತದೆ” ಎಂದರು.

ಕೆಆರ್ ಎಸ್, ಕಬಿನಿಗೆ ಒಟ್ಟಾಗಿ ಬಾಗಿನ ಅರ್ಪಣೆ ಮಾಡುವಿರಾ ಎಂದು ಕೇಳಿದಾಗ, “ಈಗ ಕೆಆರ್ ಎಸ್ ಜೂನ್ ತಿಂಗಳಲ್ಲಿ ತುಂಬಿ ಇತಿಹಾಸದ ಪುಟ ಸೇರಿದೆ” ಎಂದರು.

ಆಂದೋಲನ ಡೆಸ್ಕ್

Recent Posts

ಅಯೋಧ್ಯೆ ರಾಮಮಂದಿರಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು ಭೇಟಿ

ಲಕ್ನೋ: ರಾಷ್ಟ್ರಪತಿ ದ್ರೌಪತಿ ಮುರ್ಮು ಅವರು ಅಯೋಧ್ಯೆಯ ರಾಮಮಂದಿರಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಉತ್ತರ ಪ್ರದೇಶದ ರಾಜ್ಯಪಾಲರಾದ…

8 hours ago

ಮುಕ್ತಾಯ ಹಂತಕ್ಕೆ ತಲುಪಿದ ರಾಯ್‌ ಆತ್ಮಹತ್ಯೆ ಪ್ರಕರಣದ ತನಿಖೆ

ಬೆಂಗಳೂರು: ಉದ್ಯಮಿ ಸಿಜೆ ರಾಯ್‌ ಆತ್ಮಹತ್ಯೆ ಪ್ರಕರಣದ ತನಿಖೆ ಬಹುತೇಕ ಮುಕ್ತಾಯದ ಹಂತಕ್ಕೆ ಬಂದಿದ್ದು, ಮುಂದಿನ ವಾರದಲ್ಲಿ ತನಿಖಾ ತಂಡ…

8 hours ago

ರಾಮಚಂದ್ರರಾವ್‌ ರಾಸಲೀಲೆ ಪ್ರಕರಣ: ವಿಡಿಯೋ ಅಸಲಿ ಎಂದ ತನಿಖಾ ತಂಡ

ಬೆಂಗಳೂರು: ಕಚೇರಿಯಲ್ಲಿ ಮಹಿಳೆಯರೊಂದಿಗೆ ರಾಮಚಂದ್ರರಾವ್‌ ಅನುಚಿತ ವರ್ತನೆ ಕುರಿತ ವೈರಲ್‌ ವಿಡಿಯೋಗಳು ಅಸಲಿ ಎಂದು ತನಿಖಾ ತಂಡ ದೃಢಪಡಿಸಿದೆ. ಸಮವಸ್ತ್ರದಲ್ಲಿಯೇ…

8 hours ago

ಮಧ್ಯಪ್ರಾಚ್ಯದಲ್ಲಿ ಬಿಕ್ಕಟ್ಟು ಪರಿಹಾರಕ್ಕೆ ಯತ್ನ: ಮ್ಯಾಕ್ರನ್‌ ಜೊತೆ ಮೋದಿ ಮಾತುಕತೆ

ನವದೆಹಲಿ: ಮಧ್ಯ ಏಷ್ಯಾದಲ್ಲಿ ಬಿಕ್ಕಟ್ಟು ಪರಿಹಾರ ಮಾಡುವ ನಿಟ್ಟಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಫ್ರಾನ್ಸ್‌ ಅಧ್ಯಕ್ಷ ಎಮ್ಯಾನುಯೆಲ್‌ ಮ್ಯಾಕ್ರನ್‌ ಜೊತೆ…

8 hours ago

ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ಸಹೋದರಿ ನಿಧನ

ಹಾಸನ: ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡರ ಸಹೋದರಿ ಜವರಮ್ಮ ವಯೋಸಹಜ ಖಾಯಿಲೆಯಿಂದ ನಿಧನರಾಗಿದ್ದಾರೆ. ಹಾಸನದ ಖಾಸಗಿ ಆಸ್ಪತ್ರೆಯಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿತ್ತು.…

11 hours ago

ರಾಜ್ಯದಲ್ಲಿ ಮತ್ತೆರಡು ದಿನ ಅಬ್ಬರಿಸಲಿದ್ದಾನೆ ವರುಣ

ಬೆಂಗಳೂರು: ಕರ್ನಾಟಕದ ಹಲವೆಡೆ ಮುಂದಿನ ಎರಡು ದಿನ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಬೀದರ್‌, ಕಲಬುರ್ಗಿ,…

11 hours ago