ಮೈಸೂರು

ಮೇಕೆದಾಟು ಯೋಜನೆ ಜಾರಿಗೆ ಸನ್ನದ್ಧ : ಡಿಕೆಶಿ

ಮೈಸೂರು : ಮೇಕೆದಾಟು ಯೋಜನೆ ಜಾರಿಗೆ ನಾವು ಸನ್ನದ್ಧ. ನ್ಯಾಯಾಲಯದಲ್ಲಿ ನಮಗೆ ನ್ಯಾಯ ಸಿಗುವ ಭರವಸೆ ಇದೆ ಎಂದು ಡಿಸಿಎಂ ಡಿಕೆ ಶಿವಕುಮಾರ್‌ ಹೇಳಿದರು.

ತಮಿಳುನಾಡಿಗೆ ಹೆಚ್ಚುವರಿ ನೀರು ಹರಿದು ಹೋಗುತ್ತಿದೆ ಹಾಗೂ ಅವರ ಅಚ್ಚುಕಟ್ಟು ಪ್ರದೇಶ ಹೆಚ್ಚಳವಾಗುತ್ತಿದೆಯಲ್ಲಾ? ಎಂದು ಮೈಸೂರು ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ” ನಮ್ಮ ಅಚ್ಚುಕಟ್ಟು ಪ್ರದೇಶವೂ ಶೇ.6 ರಷ್ಟು ಹೆಚ್ಚಾಗಿದೆ. ಯೋಜನೆ ಜಾರಿಗೆ ನಾವು ಸನ್ನದ್ಧರಾಗಿದ್ದೇವೆ. ನ್ಯಾಯಾಲಯದಲ್ಲಿಯೂ ನಮಗೆ ನ್ಯಾಯ ಸಿಗುತ್ತದೆ. ಈಗಾಲೇ ಕನಕಪುರದಲ್ಲಿ ಮೇಕೆದಾಟು ಕಚೇರಿ ತೆರೆದಿದ್ದೇವೆ. ಭೂಸ್ವಾಧೀನ, ಮುಳುಗಡೆಯಾಗುವ ಅರಣ್ಯ ಭೂಮಿಗೆ ಪರ್ಯಾಯವಾಗಿ ಎಲ್ಲಿ ಭೂಮಿ ನೀಡಬೇಕು ಎಂದು ನಾವು ತಯಾರಾಗಿದ್ದೇವೆ” ಎಂದು ತಿಳಿಸಿದರು.

ಕಾವೇರಿ ಹಾಗೂ ಕಬಿನಿ‌ ನೀರಾವರಿ ಪ್ರದೇಶದಲ್ಲಿ ಅಭಿವೃದ್ಧಿಯಾಗಿಲ್ಲ ಎನ್ನುವ ಪ್ರಶ್ನೆಗೆ, “ಮಂಡ್ಯ ಜಿಲ್ಲೆಗೆ ನೀರಾವರಿ ಇಲಾಖೆಯಿಂದ 1 ಸಾವಿರ ಕೋಟಿ ಅನುದಾನ ನೀಡಿದ್ದೇವೆ. ಕಾಲುವೆ ಸ್ವಚ್ಚತೆ, ನೀರಿನ ಸೋರಿಕೆ ತಡೆಗಟ್ಟುವಿಕೆ, ಕೊನೆ ಪ್ರದೇಶಕ್ಕೆ ನೀರು ತಲುಪಿಸುವುದು ಹೀಗೆ ಅನೇಕ ಕೆಲಸಗಳನ್ನು ಮಾಡಿದ್ದೇವೆ. ಕಬಿನಿ ಪ್ರದೇಶಕ್ಕೆ ರೂ.400 ಕೋಟಿ ನೀಡಿದ್ದೇವೆ” ಎಂದರು.

ಕಾವೇರಿ ಆರತಿ ಘೋಷಣೆ ಮಾಡಿ ಒಂದು ವರ್ಷವಾಗಿರುವ ಬಗ್ಗೆ ಕೇಳಿದಾಗ, “ಒಂದಷ್ಟು ರೈತರು ಆತಂಕದಲ್ಲಿದ್ದಾರೆ. ಅವರು ಆತಂಕಕ್ಕೆ ಒಳಗಾಗುವ ಪ್ರಮೇಯವಿಲ್ಲ. ಪೂಜೆ ಹಾಗೂ ಪ್ರಾರ್ಥನೆ ಮಾಡುವುದರಲ್ಲಿ ಏನಿದೆ? ಪೂಜೆಯನ್ನು ಚಿಕ್ಕದಾಗಿಯೂ ದೊಡ್ಡದಾಗಿಯೂ ಮಾಡಬಹುದು. ಸುಮಾರು 1500 ಜನಕ್ಕೆ ಪ್ರತ್ಯಕ್ಷವಾಗಿ ಉದ್ಯೋಗ ದೊರೆಯುತ್ತದೆ” ಎಂದರು.

ಕೆಆರ್ ಎಸ್, ಕಬಿನಿಗೆ ಒಟ್ಟಾಗಿ ಬಾಗಿನ ಅರ್ಪಣೆ ಮಾಡುವಿರಾ ಎಂದು ಕೇಳಿದಾಗ, “ಈಗ ಕೆಆರ್ ಎಸ್ ಜೂನ್ ತಿಂಗಳಲ್ಲಿ ತುಂಬಿ ಇತಿಹಾಸದ ಪುಟ ಸೇರಿದೆ” ಎಂದರು.

ಆಂದೋಲನ ಡೆಸ್ಕ್

Recent Posts

ಶೇ.56ರಷ್ಟು ಮೀಸಲಾತಿ | 9ನೇ ಶೆಡ್ಯೂಲ್‌ಗೆ ಸೇರಿಸಲು ವಿ.ಎಸ್.ಉಗ್ರಪ್ಪ ಆಗ್ರಹ

ಬೆಂಗಳೂರು : ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡ ಮತ್ತು ಇತರೆ ಹಿಂದುಳಿದ ಜಾತಿಗಳ ಮೀಸಲಾತಿ ಪ್ರಮಾಣವನ್ನು ಶೇ.56ಕ್ಕೆ ಹೆಚ್ಚಳ…

7 hours ago

Padma Award | ಧರ್ಮೇಂದ್ರಗೆ ಪದ್ಮವಿಭೂಷಣ, ಮಮ್ಮುಟಿಗೆ ಪದ್ಮಭೂಷಣ ಪ್ರಶಸ್ತಿ

ಹೊಸದಿಲ್ಲಿ : ಹಿರಿಯ ನಟ ಧರ್ಮೇಂದ್ರ, ದಂತಕಥೆ ಹಿನ್ನೆಲೆ ಗಾಯಕಿ ಅಲ್ಕಾ ಯಾಜ್ಞಿಕ್, ಮಲಯಾಳಂ ಸಿನಿಮಾ ದಿಗ್ಗಜ ಮಮ್ಮುಟ್ಟಿ, ಬಂಗಾಳಿ…

7 hours ago

ನ್ಯಾಯಾಂಗ ಸ್ವಾತಂತ್ರ್ಯಕ್ಕೆ ʼಆಂತರಿಕ ಅಪಾಯʼ : ಸುಪ್ರೀಂ ನ್ಯಾಯಾಧೀಶರಿಂದ ಕಾರ್ಯಾಂಗದ ಬಗ್ಗೆ ಅಸಮಾಧಾನ

ಹೊಸದಿಲ್ಲಿ : ನ್ಯಾಯಾಂಗ ಸ್ವಾತಂತ್ರ್ಯಕ್ಕೆ ಅಪಾಯ ಹೊರಗಿನಿಂದಲ್ಲ, ‘ಆಂತರಿಕ ವ್ಯವಸ್ಥೆ’ಯಿಂದಲೇ ಇದೆ ಎಂದು ಹೇಳಿರುವ ಸರ್ವೋಚ್ಚ ನ್ಯಾಯಾಲಯದ ನ್ಯಾಯಮೂರ್ತಿ ಉಜ್ಜಲ್…

8 hours ago

ಅಧಿಕಾರಿಗಳು ಜನಪ್ರತಿನಿಧಿಗಳ ಕರೆ ಸ್ವೀಕರಿಸಿ : ರಾಜ್ಯ ಸರ್ಕಾರಿ ಅಧಿಕಾರಿಗಳಿಗೆ ಮುಖ್ಯಕಾರ್ಯದರ್ಶಿ ಖಡಕ್ ಸೂಚನೆ

ಬೆಂಗಳೂರು : ಅಧಿಕಾರಿಗಳು ಜನಪ್ರತಿನಿಧಿಗಳ ದೂರವಾಣಿ ಕರೆಯನ್ನು ಸ್ವೀಕರಿಸಲೇಬೇಕು ಎಂಬ ಸುತ್ತೋಲೆಯನ್ನು ಹೊರಡಿಸುವ ಮೂಲಕ ಸರ್ಕಾರಿ ಅಧಿಕಾರಿಗಳಿಗೆ ರಾಜ್ಯ ಸರ್ಕಾರ…

9 hours ago

ಬುದ್ಧಗಯಾ ವಿಮೋಚನಾ ಚಳವಳಿ ಬೆಂಬಲಿಸಿ

ಮೈಸೂರು : ಹೊಸದಿಲ್ಲಿಯಲ್ಲಿ ಬುದ್ಧಗಯಾ ವಿಮೋಚನೆ ಐತಿಹಾಸಿಕ ಚಳವಳಿಯಲ್ಲಿ ಬೌದ್ಧ ಅನುಯಾಯಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ಬೌದ್ಧ ಚಿಂತಕ,…

9 hours ago

ಮೈಸೂರಲ್ಲಿ ಸಂಭ್ರಮದ ರಥಸಪ್ತಮಿ

ಮೈಸೂರು : ರಥಸಪ್ತಮಿ ಅಂಗವಾಗಿ ನಗರದಲ್ಲಿ ಭಾನುವಾರ ಅರಮನೆ ಸೇರಿದಂತೆ ವಿವಿಧೆಡೆ ವಿಶೇಷ ಪೂಜೆ ಸಲ್ಲಿಸುವ ಮೂಲಕ ಸೂರ್ಯನಿಗೆ ನಮಿಸಲಾಯಿತು.…

9 hours ago