ಮೈಸೂರು

ಮೇಕೆದಾಟು ಯೋಜನೆ ಜಾರಿಗೆ ಸನ್ನದ್ಧ : ಡಿಕೆಶಿ

ಮೈಸೂರು : ಮೇಕೆದಾಟು ಯೋಜನೆ ಜಾರಿಗೆ ನಾವು ಸನ್ನದ್ಧ. ನ್ಯಾಯಾಲಯದಲ್ಲಿ ನಮಗೆ ನ್ಯಾಯ ಸಿಗುವ ಭರವಸೆ ಇದೆ ಎಂದು ಡಿಸಿಎಂ ಡಿಕೆ ಶಿವಕುಮಾರ್‌ ಹೇಳಿದರು.

ತಮಿಳುನಾಡಿಗೆ ಹೆಚ್ಚುವರಿ ನೀರು ಹರಿದು ಹೋಗುತ್ತಿದೆ ಹಾಗೂ ಅವರ ಅಚ್ಚುಕಟ್ಟು ಪ್ರದೇಶ ಹೆಚ್ಚಳವಾಗುತ್ತಿದೆಯಲ್ಲಾ? ಎಂದು ಮೈಸೂರು ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ” ನಮ್ಮ ಅಚ್ಚುಕಟ್ಟು ಪ್ರದೇಶವೂ ಶೇ.6 ರಷ್ಟು ಹೆಚ್ಚಾಗಿದೆ. ಯೋಜನೆ ಜಾರಿಗೆ ನಾವು ಸನ್ನದ್ಧರಾಗಿದ್ದೇವೆ. ನ್ಯಾಯಾಲಯದಲ್ಲಿಯೂ ನಮಗೆ ನ್ಯಾಯ ಸಿಗುತ್ತದೆ. ಈಗಾಲೇ ಕನಕಪುರದಲ್ಲಿ ಮೇಕೆದಾಟು ಕಚೇರಿ ತೆರೆದಿದ್ದೇವೆ. ಭೂಸ್ವಾಧೀನ, ಮುಳುಗಡೆಯಾಗುವ ಅರಣ್ಯ ಭೂಮಿಗೆ ಪರ್ಯಾಯವಾಗಿ ಎಲ್ಲಿ ಭೂಮಿ ನೀಡಬೇಕು ಎಂದು ನಾವು ತಯಾರಾಗಿದ್ದೇವೆ” ಎಂದು ತಿಳಿಸಿದರು.

ಕಾವೇರಿ ಹಾಗೂ ಕಬಿನಿ‌ ನೀರಾವರಿ ಪ್ರದೇಶದಲ್ಲಿ ಅಭಿವೃದ್ಧಿಯಾಗಿಲ್ಲ ಎನ್ನುವ ಪ್ರಶ್ನೆಗೆ, “ಮಂಡ್ಯ ಜಿಲ್ಲೆಗೆ ನೀರಾವರಿ ಇಲಾಖೆಯಿಂದ 1 ಸಾವಿರ ಕೋಟಿ ಅನುದಾನ ನೀಡಿದ್ದೇವೆ. ಕಾಲುವೆ ಸ್ವಚ್ಚತೆ, ನೀರಿನ ಸೋರಿಕೆ ತಡೆಗಟ್ಟುವಿಕೆ, ಕೊನೆ ಪ್ರದೇಶಕ್ಕೆ ನೀರು ತಲುಪಿಸುವುದು ಹೀಗೆ ಅನೇಕ ಕೆಲಸಗಳನ್ನು ಮಾಡಿದ್ದೇವೆ. ಕಬಿನಿ ಪ್ರದೇಶಕ್ಕೆ ರೂ.400 ಕೋಟಿ ನೀಡಿದ್ದೇವೆ” ಎಂದರು.

ಕಾವೇರಿ ಆರತಿ ಘೋಷಣೆ ಮಾಡಿ ಒಂದು ವರ್ಷವಾಗಿರುವ ಬಗ್ಗೆ ಕೇಳಿದಾಗ, “ಒಂದಷ್ಟು ರೈತರು ಆತಂಕದಲ್ಲಿದ್ದಾರೆ. ಅವರು ಆತಂಕಕ್ಕೆ ಒಳಗಾಗುವ ಪ್ರಮೇಯವಿಲ್ಲ. ಪೂಜೆ ಹಾಗೂ ಪ್ರಾರ್ಥನೆ ಮಾಡುವುದರಲ್ಲಿ ಏನಿದೆ? ಪೂಜೆಯನ್ನು ಚಿಕ್ಕದಾಗಿಯೂ ದೊಡ್ಡದಾಗಿಯೂ ಮಾಡಬಹುದು. ಸುಮಾರು 1500 ಜನಕ್ಕೆ ಪ್ರತ್ಯಕ್ಷವಾಗಿ ಉದ್ಯೋಗ ದೊರೆಯುತ್ತದೆ” ಎಂದರು.

ಕೆಆರ್ ಎಸ್, ಕಬಿನಿಗೆ ಒಟ್ಟಾಗಿ ಬಾಗಿನ ಅರ್ಪಣೆ ಮಾಡುವಿರಾ ಎಂದು ಕೇಳಿದಾಗ, “ಈಗ ಕೆಆರ್ ಎಸ್ ಜೂನ್ ತಿಂಗಳಲ್ಲಿ ತುಂಬಿ ಇತಿಹಾಸದ ಪುಟ ಸೇರಿದೆ” ಎಂದರು.

ಆಂದೋಲನ ಡೆಸ್ಕ್

Recent Posts

ರಾಜ್ಯ ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ: ತುಟ್ಟಿ ಭತ್ಯೆ ಹೆಚ್ಚಳ

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರ ತುಟ್ಟಿಭತ್ಯೆ(ಡಿಎ)ಯನ್ನು ಶೇ.1.50ರಷ್ಟು ಹೆಚ್ಚಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. 2026 ಜನವರಿ 1ರಿಂದ ಅನ್ವಯವಾಗುವಂತೆ…

5 hours ago

ಮೇ.13ರಂದು ಬೆಂಗಳೂರು ಜನತೆಗೆ ಬಿಗ್‌ ಗಿಫ್ಟ್:‌ ಡಿಸಿಎಂ ಡಿ.ಕೆ.ಶಿವಕುಮಾರ್‌

ಬೆಂಗಳೂರು: ಮೇ.13ಕ್ಕೆ ಬೆಂಗಳೂರು ಜನತೆಗೆ ಬಿಗ್‌ ಗಿಫ್ಟ್‌ ನೀಡಲಿದ್ದೇವೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ತಿಳಿಸಿದ್ದಾರೆ. ಈ ಬಗ್ಗೆ ಮಾಧ್ಯಮದವರೊಂದಿಗೆ…

5 hours ago

ದೇವರಾಜ ಮಾರುಕಟ್ಟೆಗೆ ಸಂಸದ ಯದುವೀರ್‌ ಒಡೆಯರ್‌ ಭೇಟಿ

ಮೈಸೂರು: ಮೈಸೂರಿನ ಪಾರಂಪರಿಕ ಕಟ್ಟಡದಲ್ಲಿ ಒಂದಾಗಿರುವ ದೇವರಾಜ ಮಾರುಕಟ್ಟೆಗೆ ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಅವರಿಂದು ಭೇಟಿ ನೀಡಿ…

6 hours ago

ಪಂಚಭೂತಗಳಲ್ಲಿ ಲೀನರಾದ ಸಚಿವ ಡಿ.ಸುಧಾಕರ್‌

ಚಿತ್ರದುರ್ಗ: ಸಕಲ ಸರ್ಕಾರಿ ಗೌರವಗಳೊಂದಿಗೆ ಚಳ್ಳಕೆರೆಯ ಚಿತಾಗಾರದಲ್ಲಿ ಹಿರಿಯೂರು ಶಾಸಕ ಡಿ.ಸುಧಾಕರ್‌ ಅವರ ಅಂತ್ಯಕ್ರಿಯೆ ನೆರವೇರಿತು. ಬೆಳಿಗ್ಗೆಯಿಂದ ಸುಧಾಕರ್‌ ಅವರ…

7 hours ago

ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ರೈತನ ಮೇಲೆ ಕಾಡಾನೆ ದಾಳಿ: ಗಂಭೀರ ಗಾಯ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು  ಹನೂರು: ಜಮೀನಿನಲ್ಲಿದ್ದ ರೈತನೋರ್ವನ ಮೇಲೆ ಕಾಡಾನೆ ದಾಳಿ ಮಾಡಿದ ಪರಿಣಾಮ ತೀವ್ರ…

7 hours ago

ಎಂ.ಕೆ.ಸ್ಟಾಲಿನ್‌ ಭೇಟಿಯಾದ ತಮಿಳುನಾಡು ನೂತನ ಸಿಎಂ ವಿಜಯ್‌

ಚೆನ್ನೈ: ತಮಿಳುನಾಡಿನ ನೂತನ ಸಿಎಂ ವಿಜಯ್‌ ಅವರಿಂದು ಮಾಜಿ ಸಿಎಂ ಎಂ.ಕೆ.ಸ್ಟಾಲಿನ್‌ ಅವರನ್ನು ಭೇಟಿಯಾದರು. ಸದ್ಯ ಇಂದಿನ ಸಭೆಯಲ್ಲಿ ಇಬ್ಬರು…

8 hours ago