ಮೈಸೂರು

ರೈಲ್ವೆಯಲ್ಲಿ 60 ಸಾವಿರ ಹುದ್ದೆಗೆ ನೇಮಕಾತಿ; ಕನ್ನಡದಲ್ಲೂ ಪರೀಕ್ಷೆಗೆ ಅವಕಾಶ: ಕೇಂದ್ರ ಸಚಿವ ಸೋಮಣ್ಣ

ಮೈಸೂರು: ಭಾರತೀಯ ರೈಲ್ವೆ ಇಲಾಖೆಯಲ್ಲಿ ಈ ವರ್ಷ 60 ಸಾವಿರ ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತಿದ್ದು,  ಕನ್ನಡದಲ್ಲಿಯೂ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಲಾಗಿದೆ ಎಂದು ಕೇಂದ್ರ ಸರ್ಕಾರದ ಜಲಶಕ್ತಿ ಹಾಗೂ ರೈಲ್ವೆ ರಾಜ್ಯ ಸಚಿವ ವಿ ಸೋಮಣ್ಣ ತಿಳಿಸಿದರು.

ಮಂಗಳವಾರ ವಾಕ್ ಮತ್ತು ಶ್ರವಣ ಸಂಸ್ಥೆಯ ವಿಜ್ಞಾನ ಭವನದಲ್ಲಿ ಹಮ್ಮಿಕೊಂಡಿದ್ದ ಸರ್ಕಾರಿ ಉದ್ಯೋಗಗಳಲ್ಲಿ ಆಯ್ಕೆಯಾದ 51 ಸಾವಿರಕ್ಕೂ ಹೆಚ್ಚು ಅಭ್ಯರ್ಥಿಗಳಿಗೆ ನೇಮಕಾತಿ ಪತ್ರಗಳ ವಿತರಣೆ ಮೇಳವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ರಾಷ್ಟ್ರೀಯ ರೋಜಗಾರ್ ಯೋಜನೆಯನ್ನು ಜಾರಿಗೆ ತಂದಿದ್ದಾರೆ. 2014 ರಿಂದ 12 ಆವೃತ್ತಿಯಲ್ಲಿ ಉದ್ಯೋಗ ಮೇಳೆ ಮಾಡಿ ಇಲ್ಲಿಯವರೆಗೆ 14 ಲಕ್ಷಕ್ಕೂ ಹೆಚ್ಚು ಜನರಿಗೆ ಉದ್ಯೋಗ ನೇಮಕಾತಿ ಪತ್ರಗಳನ್ನು ವಿತರಿಸಲಾಗಿದೆ. ಇದರಿಂದ ಪ್ರತಿಭಾವಂತರಿಗೆ ಉದ್ಯೋಗ ಸಿಗುತ್ತಿದೆ. ರೈಲ್ವೆ ಇಲಾಖೆಯಲ್ಲಿ 2014 ರಿಂದ ಇಲ್ಲಿಯವರೆಗೆ ಮಿಶನ್ ಮೋಡ್ ನಲ್ಲಿ 5.2 ಲಕ್ಷ ಉದ್ಯೋಗಳನ್ನು ನೀಡಲಾಗಿದೆ ಎಂದು ಹೇಳಿದರು.

ಅಂಚೆ ಇಲಾಖೆಯಲ್ಲಿ ಹೆಚ್ಚಿನ ನೇಮಕಾತಿಗಳು ನಡೆಯುತ್ತಿವೆ. ಭಾರತದಲ್ಲಿ ಕರ್ನಾಟಕ ಸಾಂಸ್ಕೃತಿಕ ರಾಜ್ಯ, ಕರ್ನಾಟಕದಲ್ಲಿ ಮೈಸೂರು ಸಾಂಸ್ಕೃತಿಕ ರಾಜಧಾನಿ. ಪ್ರಧಾನ ಮಂತ್ರಿ ಜನ ಧನ್ ಯೋಜನೆಯಡಿ ಆರೋಗ್ಯ ಸೌಲಭ್ಯ ಹೆಚ್ಚಿಸಲು ಆಯುಷ್ಮನ ಭಾರತ್ ಯೋಜನೆ, ಮುದ್ರ ಯೋಜನೆ, ಬೇಟಿ ಬಚಾವ್ ಬೇಟಿ ಪಡವೋ ಯೋಜನೆ, ಮುಂತಾದ ಯೋಜನೆಗಳನ್ನು ಜಾರಿಗೆ  ಜಾರಿಗೆ ತಂದು ದೇಶವನ್ನು  ಅಭಿವೃದ್ದಿಯತ್ತ ಕೊಂಡೊಯ್ಯಲಾಗುತ್ತಿದೆ.  ವಾಕ್ ಮತ್ತು ಶ್ರವಣ ಸಂಸ್ಥೆಗೆ 150 ಕೋಟಿ ಅನುಧಾನ ನೀಡಿ ಇದರ ಸರ್ವಾಂಗೀಣ ಅಭಿವೃದ್ಧಿಗೆ ಕೇಂದ್ರ ಸರ್ಕಾರ ಕೊಡುಗೆ ನೀಡುತ್ತಿದೆ ಎಂದು ಹೇಳಿದರು.

ದೇಶಕ್ಕೆ ತನ್ನದೇ ಆದ ಪರಂಪರೆ ಇದೆ. ಪ್ರತಿಯೊಬ್ಬರೂ ದೇಶ ಪ್ರೇಮವನ್ನು ಬೆಳೆಸಿಕೊಳ್ಳಿ. ಉದೋಗವನ್ನು ಪಡೆದ 51 ಸಾವಿರ ಅಭ್ಯರ್ಥಿಗಳಿಗೆ ಶುಭವಾಗಲಿ. ಮೈಸೂರು ವಿಭಾಗದಲ್ಲಿ 171 ಅಭ್ಯರ್ಥಿಗಳಿಗೆ ನೇಮಕಾತಿ ಪತ್ರ ವಿತರಿಸಲಾಗುತ್ತಿದೆ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಮೈಸೂರು-ಕೊಡಗು ಲೋಕಸಭಾ ಸಂಸದರಾದ ಯದುವೀರ್ ಕೃಷ್ಣ ದತ್ತ ಚಾಮರಾಜ ಒಡೆಯರ್, ಕೃಷ್ಣರಾಜ ವಿಧಾನಸಭಾ ಕ್ಷೇತ್ರದ ಶಾಸಕ ಟಿ.ಎಸ್ ಶ್ರೀವತ್ಸ, ದಕ್ಷಿಣ ಕರ್ನಾಟಕ ವಿಭಾಗದ ಅಂಚೆ ಇಲಾಖೆಯ ನಿರ್ದೇಶಕ ಸಂದೇಶ್ ಮಹದೇವಪ್ಪ, ರೈಲ್ವೆ ಇಲಾಖೆಯ ಡಿ ಆರ್ ಎಂ ಶಿಲ್ಪಿ ಅಗರವಾಲ್, ಆಯುಷ್ ಸಂಸ್ಥೆ ನಿರ್ದೇಶಕಿ ಪುಷ್ಪಾವತಿ, ದಕ್ಷಿಣ ಭಾರತದ ಪೋಸ್ಟ್ ಮಾಸ್ಟರ್ ಜನರಲ್ ಮ್ಯಾನೇಜರ್  ಚಂದ್ರಶೇಖರ್ ಕಾಕುಮಾನ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ನೂತನ ಸಚಿವರಿಗೆ ಖಾತೆ ಹಂಚಿಕೆ : ಯಾರಿಗೆ ಯಾವ ಹೊಣೆ? ಇಲ್ಲಿದೆ ಮಾಹಿತಿ

ಬೆಂಗಳೂರು : ಹಲವು ಸುತ್ತಿನ ಸಭೆಯ ಬಳಿಕ ಡಿ.ಕೆ.ಶಿವಕುಮಾರ್ ಸಚಿವ ಸಂಪುಟದ ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಲಾಗಿದೆ. ಖಾತೆ…

9 hours ago

ಬೆಂಗಳೂರಿನಿಂದ ಕೇರಳಕ್ಕೆ ಎಂಡಿಎಂಎ ಸಾಗಾಟ : ಇಬ್ಬರ ಬಂಧನ

ಗುಂಡ್ಲುಪೇಟೆ : ಬೆಂಗಳೂರಿನಿಂದ ಕೇರಳಕ್ಕೆ ಎಂಡಿಎಂಎ (MDMA) ಮಾದಕವಸ್ತು ಸಾಗಿಸುತ್ತಿದ್ದ ಆರೋಪದ ಮೇರೆಗೆ ಮುತ್ತಂಗ ಚೆಕ್‌ಪೋಸ್ಟ್‌ನಲ್ಲಿ ಇಬ್ಬರನ್ನು ಕೇರಳದ ಪೊಲೀಸರು…

11 hours ago

ಮಾನವ ಕಲಿಯಬೇಕಾದ ಬದುಕಿನ ಪಾಠಗಳು

ಶ್ರೇಯಸ್ ದೇವನೂರು ಇಂದು ವಿಶ್ವ ಆನೆ ದಿನಾಚರಣೆ  ಭೂಮಿಯ ಮೇಲಿರುವ ಜೀವಿಗಳಲ್ಲಿ ಆನೆ, ಅತಿ ದೊಡ್ಡ ಪ್ರಾಣಿ ಮಾತ್ರವಲ್ಲ ,…

19 hours ago

ಸಾವಿರಾರು ಹೆರಿಗೆ ಮಾಡಿಸಿದ ಫ್ಲಾರೆನ್ಸ್ ನೈಟಿಂಗೇಲ್ ಗೀತಾ ‘ಮಾ’

ಪಂಜುಗಂಗೊಳ್ಳಿ ಅವರ ವಾರದ ಅಂಕಣ  ಕಡು ಬಡತನದ ಕುಟುಂಬದಿಂದ ಬಂದ ಶುಶ್ರೂಷಕಿ ಪ. ಬಂಗಾಳದ ಗೀತಾ ಕಾರ್ಮಕಾರ್ ನರ್ಸಿಂಗ್ ತರಬೇತಿ…

19 hours ago

ಸಿದ್ದರಾಮಯ್ಯ ಸಿದ್ಧಾಂತದ ಹೋರಾಟಕ್ಕೆ ಅಂತ್ಯವೆಂಬುದೇ ಇಲ್ಲ

ಆರ್.ಟಿ.ವಿಠ್ಠಲಮೂರ್ತಿ ಕರ್ನಾಟಕದ ರಾಜಕೀಯ ಚರಿತ್ರೆಯಲ್ಲಿ ಹೊಸ ಮೈಲಿಗಲ್ಲಾಗಿ ದಾಖಲಾಗಿರುವ ಸಿದ್ದರಾಮಯ್ಯ ಅವರೀಗ ಮತ್ತೊಂದು ಪಯಣಕ್ಕೆ ಸಜ್ಜಾಗಬೇಕಿದೆ. ಇನ್ನು ಚುನಾವಣೆಗಳಲ್ಲಿ ಸ್ಪರ್ಧಿಸುವು…

19 hours ago

ಕಣ್ಮನ ಸೆಳೆಯುತ್ತಿದೆ ಮಲ್ಲಳ್ಳಿ ಜಲಪಾತ!

ಲಕ್ಷ್ಮೀಕಾಂತ್ ಕೊಮಾರಪ್ಪ ಪ್ರಾಕೃತಿಕ ಸೌಂದರ್ಯಕ್ಕೆ ಮಾರುಹೋಗುತ್ತಿರುವ ಪ್ರವಾಸಿಗರು ಸೋಮವಾರಪೇಟೆ: ಎತ್ತ ನೋಡಿದರೂ ಅಚ್ಚಹಸಿರಿನ ಕಾಡು ಸುಂದರ ಪ್ರಕೃತಿಯ ಸೊಬಗು... ನಿಮಿಷಕ್ಕೊಮ್ಮೆ…

19 hours ago