ಮೈಸೂರು

ಪಶುಪಾಲನಾ ಇಲಾಖೆಗೆ 700 ʼಡಿʼ ಗ್ರೂಪ್‌ ನೌಕರರ ನೇಮಕ: ಸಚಿವ ವೆಂಕಟೇಶ್

ಮೈಸೂರು: ಪಶುಪಾಲನಾ ಇಲಾಖೆಯಲ್ಲಿನ 700 ಮಂದಿ ʻಡಿʼ ಗ್ರೂಪ್‌ ನೌಕರರ ನೇಮಕಕ್ಕೆ ಸಿಎಂ ಸಿದ್ದರಾಮಯ್ಯ ಒಪ್ಪಿಗೆ ಸೂಚಿಸಿ ಸಹಿ ಹಾಕಿದ್ದಾರೆ. ಶೀಘ್ರವೇ ನೇಮಕಾತಿ ಪ್ರಕ್ರಿಯೆ ಆರಂಭಿಸಲಾಗುವುದು ಎಂದು ಪಶುಸಂಗೋಪನ ಸಚಿವ ಕೆ.ವೆಂಕಟೇಶ್‌ ತಿಳಿಸಿದರು.

ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ ಮತ್ತು ಕರ್ನಾಟಕ ಪಶುವೈದ್ಯಕೀಯ ಸಂಘದ ವತಿಯಿಂದ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಘಟಿಕೋತ್ಸವ ಭವನದಲ್ಲಿ ಶನಿವಾರ ಆಯೋಜಿಸಿದ್ದ “ಪಶುವೈದ್ಯರ ರಾಜ್ಯ ಮಟ್ಟದ ತಾಂತ್ರಿಕ ವಿಚಾರ ಸಂಕಿರಣ ಹಾಗೂ 6ನೇ ಸುತ್ತಿನ ಕಾಲುಬಾಯಿಜ್ವರ ಲಸಿಕಾ ಕಾರ್ಯಕ್ರಮ” ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಇಲಾಖೆಯಲ್ಲಿರುವ ಕೊರತೆಗಳನ್ನು ಸರಿಪಡಿಸಬೇಕೆಂಬ ನಿಟ್ಟಿನಲ್ಲಿ 400 ಮಂದಿ ಪಶುವೈದ್ಯರನ್ನು ಗುತ್ತಿಗೆ ಆಧಾರದಲ್ಲಿ ನೇಮಕಾತಿ ಮಾಡಿಕೊಂಡಿದ್ದೇವೆ. ಅಲ್ಲದೇ 400ಖಾಯಂ ವೈದ್ಯರ ನೇಮಕಾತಿಗೆ ಕೆಪಿಎಸ್‌ಸಿ ಮಟ್ಟದಲ್ಲಿ ಪ್ರಕಿಯೆ ನಡೆದಿದೆ. ಇಲಾಖೆಯಲ್ಲಿ ನ್ಯೂನ್ಯತೆ ಹಾಗೂ ಕೊರತೆಯನ್ನು ಸರಿಪಡಿಸಲು ಸರ್ಕಾರ ಬದ್ದವಿದೆ ಎಂದರು.

ಮನುಷ್ಯರಿಗೆ ಕಷ್ಟ ಬಂದರೆ ಹೇಳಿಕೊಳ್ಳುತ್ತಾರೆ. ಆದರೆ ಪ್ರಾಣಿಗಳಿಗೆ ಖಾಯಿಲೆ ಬಂದರೆ ನಾವೇ ಅರ್ಥಮಾಡಿಕೊಂಡು ಚಿಕಿತ್ಸೆ ನೀಡಬೇಕಾಗುತ್ತದೆ. ಈ ಕಾರಣದಿಂದ ಬಹಳ ಜವಾಬ್ದಾರಿ ಇರುವ ಇಲಾಖೆ ಇದಾಗಿದೆ ಎಂದು ಹೇಳಿದರು.

ಖಾಸಗಿ ಪಶುವೈದ್ಯ ಕಾಲೇಜು ಪ್ರಾರಂಭಿಸಲು ಮನವಿ ಬಂದಿತ್ತು. ಆದರೆ ಮುಖ್ಯಮಂತ್ರಿಗಳು ಖಾಸಗಿ ಕಾಲೇಜಿಗೆ ಒಪ್ಪಿಗೆ ಸೂಚಿಸಲಿಲ್ಲ. ಬೇಕೆದ್ದರೆ ಸರ್ಕಾರದಿಂದಲೇ ಕಾಲೇಜು ತೆರೆಯರಿ ಎಂದು ಸಲಹೆ ನೀಡಿದರು. ಅದರಂತೆ ಸರ್ಕಾರದಿಂದ ನೂತನವಾಗಿ ಎರಡು ಕಾಲೇಜು ಸ್ಥಾಪಿಸಲು ನಿರ್ಧಿರಿಸಲಾಗಿದೆ ಎಂದರು.

ಕಾಲುಬಾಯಿಜ್ವರದ ಲಸಿಕೆಯನ್ನು ತಿಂಗಳಳೊಳಗೆ ಎಲ್ಲಾ ರಾಸುಗಳಿಗೆ ನೀಡಬೇಕು. ರೈತರು ಲಭ್ಯವಿರುವ ಮುಂಜಾನೆ ಸಮಯದಲ್ಲಿ ತೆರಳಿ ಲಸಿಕೆ ಕಾರ್ಯ ಕೈಗೊಳ್ಳಬೇಕು. ರೈತರಿಂದ ಕೆಲವು ದೂರುಗಳು ಬರುತ್ತವೆ. ತಕ್ಷಣವೇ ಸ್ಪಂದಿಸುವ ಕೆಲಸವನ್ನು ವೈದ್ಯರು ಮಾಡಬೇಕು. ರೈತರಿಗೆ ಯಾವುದೇ ಕಾರಣಕ್ಕೂ ತೊಂದರೆ ಉಂಟಾಗಬಾರದು ಎಂದು ಸೂಚಿಸಿದರು.

ಕಾರ್ಯಕ್ರಮದಲ್ಲಿ ಶಾಸಕರಾದ ಹರೀಶ್ ಗೌಡ, ವಿಧಾನ ಪರಿಷತ್ ಸದಸ್ಯರಾದ ಸಿ.ಎನ್.ಮಂಜೇಗೌಡ, ಆಯುಕ್ತರಾದ ರೂಪ, ನಿರ್ದೇಶಕ ಮಂಜುನಾಥ್ ಪಾಳೇಗಾರ್, ಜಂಟಿ ನಿರ್ದೇಶಕ ಶಿವಣ್ಣ, ಉಪ ನಿರ್ದೇಶಕ ನಾಗರಾಜು ಹಾಗೂ ಡಾ.ವೈ.ಡಿ.ರಾಜಣ್ಣ ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ನಾಳೆಯಿಂದ ಐಪಿಎಲ್‌ ಶುರು : ಅಧಿಕಾರಿಗಳ ಜತೆ ಸಿಎಸ್‌ ಸುದೀರ್ಘ ಸಭೆ

ಬೆಂಗಳೂರು : ನಾಳೆಯಿಂದ ಐಪಿಎಲ್ ಪಂದ್ಯಾವಳಿಗಳು ಆರಂಭವಾಗಲಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರು ಸಂಬಂಧಪಟ್ಟ…

3 hours ago

ಮದ್ದೂರು ಬಳಿ ಭೀಕರ ಅಪಘಾತ : 14 ಶಾಲಾ ಮಕ್ಕಳು ಸೇರಿದಂತೆ 20 ಮಂದಿಗೆ ಗಾಯ

ಮದ್ದೂರು : ಖಾಸಗಿ ಶಾಲೆ ಬಸ್ ಮತ್ತು ಖಾಸಗಿ ಬಸ್ ನಡುವೆ ಅಪಘಾತ ಸಂಭವಿಸಿ, 14 ವಿದ್ಯಾರ್ಥಿಗಳ ಜತೆಗೆ 6…

3 hours ago

ಮಹದೇಶ್ವರ ಬೆಟ್ಟ | 23 ದಿನದಲ್ಲಿ 2 ಕೋಟಿ ಒಡೆಯನಾದ ಮಾದಪ್ಪ

ಹನೂರು : ತಾಲ್ಲೂಕಿನ ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಬುಧವಾರ ನಡೆದ ಹುಂಡಿ ಹಣ ಎಣಿಕೆಯಲ್ಲಿ ಈ ಬಾರಿ…

4 hours ago

ಜನಪರ ಆಡಳಿತ ನೀಡುವಲ್ಲಿ ಸರ್ಕಾರ ವಿಫಲ : ನಿಖಿಲ್‌ ಕಿಡಿ

ಎಚ್.ಡಿ.ಕೋಟೆ : ರಾಜ್ಯದಲ್ಲಿ ಜಾತ್ಯತೀತ ಜನತಾದಳ-ಬಿಜೆಪಿಯ ಮೈತ್ರಿಯ ಸರ್ಕಾರ ಅಧಿಕಾರಕ್ಕೆ ಬಂದು ಜನಪರ ಆಡಳಿತ ನೀಡುವ ದಿನಗಳು ಹತ್ತಿರವಾಗುತ್ತಿವೆ ಎಂದು…

4 hours ago

ದಾವಣಗೆರೆ ದಕ್ಷಿಣ ಉಪಚುನಾವಣೆ : ಕಣದಿಂದ ಹಿಂದೆ ಸರಿದ ಬಂಡಾಯ ಅಭ್ಯರ್ಥಿ ಸಾದಿಕ್‌

ಬೆಂಗಳೂರು : ದಾವಣಗೆರೆ ಉಪಚುನಾವಣೆಗೆ ಸ್ವತಂತ್ರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದ ಸಾದಿಕ್ ಪೈಲ್ವಾನ್ ತಾವು ಕಣದಿಂದ ಹಿಂದೆ ಸರಿದಿರುವುದಾಗಿ ಘೋಷಿಸಿದ್ದಾರೆ.…

4 hours ago

SSLC | ಪರೀಕ್ಷೆ ಅಂಕ 625ರ ಬದಲಿಗೆ 525ಕ್ಕೆ ಇಳಿಕೆ ; ಲೆಕ್ಕಕ್ಕಿಲ್ಲ ತೃತೀಯ ಭಾಷೆ

ಬೆಂಗಳೂರು : ಕರ್ನಾಟಕದ ಶೈಕ್ಷಣಿಕ ಇತಿಹಾಸದಲ್ಲಿ ರಾಜ್ಯ ಸರ್ಕಾರವು ಅತ್ಯಂತ ಮಹತ್ವದ ತೀರ್ಮಾನವೊಂದನ್ನು ಕೈಗೊಂಡಿದ್ದು, ಎಸ್‌ಎಸ್‌ಎಲ್‌ಸಿ ಪರೀಕ್ಷಾ ಪದ್ಧತಿಯಲ್ಲಿ ಆಮೂಲಾಗ್ರ…

4 hours ago