ಮೈಸೂರು

ಪಶುಪಾಲನಾ ಇಲಾಖೆಗೆ 700 ʼಡಿʼ ಗ್ರೂಪ್‌ ನೌಕರರ ನೇಮಕ: ಸಚಿವ ವೆಂಕಟೇಶ್

ಮೈಸೂರು: ಪಶುಪಾಲನಾ ಇಲಾಖೆಯಲ್ಲಿನ 700 ಮಂದಿ ʻಡಿʼ ಗ್ರೂಪ್‌ ನೌಕರರ ನೇಮಕಕ್ಕೆ ಸಿಎಂ ಸಿದ್ದರಾಮಯ್ಯ ಒಪ್ಪಿಗೆ ಸೂಚಿಸಿ ಸಹಿ ಹಾಕಿದ್ದಾರೆ. ಶೀಘ್ರವೇ ನೇಮಕಾತಿ ಪ್ರಕ್ರಿಯೆ ಆರಂಭಿಸಲಾಗುವುದು ಎಂದು ಪಶುಸಂಗೋಪನ ಸಚಿವ ಕೆ.ವೆಂಕಟೇಶ್‌ ತಿಳಿಸಿದರು.

ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ ಮತ್ತು ಕರ್ನಾಟಕ ಪಶುವೈದ್ಯಕೀಯ ಸಂಘದ ವತಿಯಿಂದ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಘಟಿಕೋತ್ಸವ ಭವನದಲ್ಲಿ ಶನಿವಾರ ಆಯೋಜಿಸಿದ್ದ “ಪಶುವೈದ್ಯರ ರಾಜ್ಯ ಮಟ್ಟದ ತಾಂತ್ರಿಕ ವಿಚಾರ ಸಂಕಿರಣ ಹಾಗೂ 6ನೇ ಸುತ್ತಿನ ಕಾಲುಬಾಯಿಜ್ವರ ಲಸಿಕಾ ಕಾರ್ಯಕ್ರಮ” ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಇಲಾಖೆಯಲ್ಲಿರುವ ಕೊರತೆಗಳನ್ನು ಸರಿಪಡಿಸಬೇಕೆಂಬ ನಿಟ್ಟಿನಲ್ಲಿ 400 ಮಂದಿ ಪಶುವೈದ್ಯರನ್ನು ಗುತ್ತಿಗೆ ಆಧಾರದಲ್ಲಿ ನೇಮಕಾತಿ ಮಾಡಿಕೊಂಡಿದ್ದೇವೆ. ಅಲ್ಲದೇ 400ಖಾಯಂ ವೈದ್ಯರ ನೇಮಕಾತಿಗೆ ಕೆಪಿಎಸ್‌ಸಿ ಮಟ್ಟದಲ್ಲಿ ಪ್ರಕಿಯೆ ನಡೆದಿದೆ. ಇಲಾಖೆಯಲ್ಲಿ ನ್ಯೂನ್ಯತೆ ಹಾಗೂ ಕೊರತೆಯನ್ನು ಸರಿಪಡಿಸಲು ಸರ್ಕಾರ ಬದ್ದವಿದೆ ಎಂದರು.

ಮನುಷ್ಯರಿಗೆ ಕಷ್ಟ ಬಂದರೆ ಹೇಳಿಕೊಳ್ಳುತ್ತಾರೆ. ಆದರೆ ಪ್ರಾಣಿಗಳಿಗೆ ಖಾಯಿಲೆ ಬಂದರೆ ನಾವೇ ಅರ್ಥಮಾಡಿಕೊಂಡು ಚಿಕಿತ್ಸೆ ನೀಡಬೇಕಾಗುತ್ತದೆ. ಈ ಕಾರಣದಿಂದ ಬಹಳ ಜವಾಬ್ದಾರಿ ಇರುವ ಇಲಾಖೆ ಇದಾಗಿದೆ ಎಂದು ಹೇಳಿದರು.

ಖಾಸಗಿ ಪಶುವೈದ್ಯ ಕಾಲೇಜು ಪ್ರಾರಂಭಿಸಲು ಮನವಿ ಬಂದಿತ್ತು. ಆದರೆ ಮುಖ್ಯಮಂತ್ರಿಗಳು ಖಾಸಗಿ ಕಾಲೇಜಿಗೆ ಒಪ್ಪಿಗೆ ಸೂಚಿಸಲಿಲ್ಲ. ಬೇಕೆದ್ದರೆ ಸರ್ಕಾರದಿಂದಲೇ ಕಾಲೇಜು ತೆರೆಯರಿ ಎಂದು ಸಲಹೆ ನೀಡಿದರು. ಅದರಂತೆ ಸರ್ಕಾರದಿಂದ ನೂತನವಾಗಿ ಎರಡು ಕಾಲೇಜು ಸ್ಥಾಪಿಸಲು ನಿರ್ಧಿರಿಸಲಾಗಿದೆ ಎಂದರು.

ಕಾಲುಬಾಯಿಜ್ವರದ ಲಸಿಕೆಯನ್ನು ತಿಂಗಳಳೊಳಗೆ ಎಲ್ಲಾ ರಾಸುಗಳಿಗೆ ನೀಡಬೇಕು. ರೈತರು ಲಭ್ಯವಿರುವ ಮುಂಜಾನೆ ಸಮಯದಲ್ಲಿ ತೆರಳಿ ಲಸಿಕೆ ಕಾರ್ಯ ಕೈಗೊಳ್ಳಬೇಕು. ರೈತರಿಂದ ಕೆಲವು ದೂರುಗಳು ಬರುತ್ತವೆ. ತಕ್ಷಣವೇ ಸ್ಪಂದಿಸುವ ಕೆಲಸವನ್ನು ವೈದ್ಯರು ಮಾಡಬೇಕು. ರೈತರಿಗೆ ಯಾವುದೇ ಕಾರಣಕ್ಕೂ ತೊಂದರೆ ಉಂಟಾಗಬಾರದು ಎಂದು ಸೂಚಿಸಿದರು.

ಕಾರ್ಯಕ್ರಮದಲ್ಲಿ ಶಾಸಕರಾದ ಹರೀಶ್ ಗೌಡ, ವಿಧಾನ ಪರಿಷತ್ ಸದಸ್ಯರಾದ ಸಿ.ಎನ್.ಮಂಜೇಗೌಡ, ಆಯುಕ್ತರಾದ ರೂಪ, ನಿರ್ದೇಶಕ ಮಂಜುನಾಥ್ ಪಾಳೇಗಾರ್, ಜಂಟಿ ನಿರ್ದೇಶಕ ಶಿವಣ್ಣ, ಉಪ ನಿರ್ದೇಶಕ ನಾಗರಾಜು ಹಾಗೂ ಡಾ.ವೈ.ಡಿ.ರಾಜಣ್ಣ ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ನೀಟ್‌ ಪ್ರತಿಭಟನಾಕಾರರ ವಿರುದ್ಧದ ಎಫ್‌ಐಆರ್‌ ರದ್ದು: ಸೆ.5ರ ಪ್ರತಿಭಟನೆ ಹಿಂಪಡೆದ ಸಿಜೆಪಿ

ನವದೆಹಲಿ: ಸೆಪ್ಟೆಂಬರ್‌ 5ರಂದು ದೆಹಲಿಯಲ್ಲಿ ಹಮ್ಮಿಕೊಳ್ಳಲಾಗಿದ್ದ ಪ್ರತಿಭಟನಾ ಮೆರವಣಿಗೆಯನ್ನು ಹಿಂಪಡೆಯಲಾಗಿದೆ ಎಂದು ಕಾಕ್ರೋಚ್ ಜನತಾ ಪಾರ್ಟಿ (CJP) ಸುಪ್ರೀಂ ಕೋರ್ಟ್‌ಗೆ…

3 hours ago

ನೀಟ್‌ ಪ್ರತಿಭಟನಾಕಾರರ ವಿರುದ್ಧದ ಎಫ್‌ಐಆರ್‌ ರದ್ದು

ನವದೆಹಲಿ: ನೀಟ್‌ ಪ್ರಶ್ನೆಪತ್ರಿಕೆ ಸೋರಿಕೆ ಖಂಡಿಸಿ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಫ್‌ಐಆರ್‌ ಅನ್ನು ಸುಪ್ರೀಂಕೋರ್ಟ್‌ ರದ್ದುಪಡಿಸಿದೆ. ಜುಲೈನಲ್ಲಿ…

4 hours ago

ನೇಪಾಳ ಪ್ರವಾಹ | ಮೃತರ ಸಂಖ್ಯೆ 939ಕ್ಕೆ ಏರಿಕೆ, ಇನ್ನೂ ಸುಮಾರು 4,000 ಜನ ಕಣ್ಮರೆ

ಕಠ್ಮಂಡು: ನೇಪಾಳದಲ್ಲಿ ಭೀಕರ ಪ್ರವಾಹದ ಅಬ್ಬರ ಮುಂದುವರಿದಿದ್ದು, ಮೃತರ ಸಂಖ್ಯೆ 939ಕ್ಕೆ ಏರಿಕೆಯಾಗಿದೆ. ಇನ್ನೂ ಸುಮಾರು 4 ಸಾವಿರ ಜನರು…

5 hours ago

ಮಡಿಕೇರಿ: ಕೆರೆಗೆ ಹಾರಿ ತಾಯಿ ಮಗಳು ಆತ್ಮಹತ್ಯೆ

ಮಡಿಕೇರಿ: ತಲಕಾವೇರಿ ಸಮೀಪದ ತಣ್ಣಿಮಾನಿ ಗ್ರಾಮದಲ್ಲಿ ತಾಯಿ ಮತ್ತು ಮಗಳು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ನಡೆದಿದೆ.…

5 hours ago

ಮಡಿಕೇರಿ: ಭಾರೀ ಮಳೆಗೆ ಬೆಟ್ಟದಲ್ಲಿ ಜಾರಿನಿಂತ ಬೃಹತ್‌ ಕಲ್ಲುಬಂಡೆ!

ಮಡಿಕೇರಿ: ಕೊಡಗಿನಲ್ಲಿ ಭಾರೀ ಮಳೆಗೆ ಬೆಟ್ಟದಲ್ಲಿ ಜಾರಿನಿಂತ ಬೃಹತ್‌ ಕಲ್ಲುಬಂಡೆ ಆತಂಕ ಮೂಡಿಸಿದೆ. ಮಡಿಕೇರಿ ತಾಲೂಕಿನ ಕುಂದಚೇರಿ ಗ್ರಾಮದ ಪೊಲಮಾನಿ…

5 hours ago

ಓದುಗರ ಪತ್ರ: ನೀರು ಸೋರಿಕೆ ತಡೆಗಟ್ಟಿ

ಮೈಸೂರಿನ ಚಾಮರಾಜ ಮೊಹದ ಸೋನಾರ್ ಬೀದಿಯಲ್ಲಿ ಸಾರ್ವಜನಿಕ ನಲ್ಲಿಗೆ ಸಂಪರ್ಕ ಕಲ್ಪಿಸುವ ಪೈಪ್ ಪಡೆದುಹೋಗಿದ್ದು, ಕುಡಿಯುವ ನೀರು ಚರಂಡಿ ಪಾಲಾಗುತ್ತಿದೆ.…

13 hours ago