ಮೈಸೂರು

ಏ.23 ರಂದು ಕೋಮುವಾದ ಧಿಕ್ಕರಿಸಿ; ಸಂವಿಧಾನ ರಕ್ಷಿಸಿ ಜನಾಕ್ರಾಂತಿ ಸಮಾವೇಶ

ಮೈಸೂರು: ಡಾ. ಬಿ.ಆರ್.ಅಂಬೇಡ್ಕರ್ ಜಯಂತಿ ಅಂಗವಾಗಿ ಏ.೨೩ರಂದು ಬೆಳಿಗ್ಗೆ ೧೧ಕ್ಕೆ ಬೆಂಗಳೂರಿನ ವಸಂತ ನಗರದಲ್ಲಿರುವ ಡಾ.ಬಿ.ಆರ್. ಅಂಬೇಡ್ಕರ್ ಭವನದಲ್ಲಿ ‘ಕೋಮುವಾದ ಧಿಕ್ಕರಿಸಿ-ಸಂವಿಧಾನ ರಕ್ಷಿಸಿ’ ಶೀರ್ಷಿಕೆಯಡಿ ದಲಿತರ ಅಭಿವೃದ್ಧಿಗಾಗಿ ಜನಕ್ರಾಂತಿ ಸಮಾವೇಶ ಆಯೋಜಿಸಲಾಗಿದೆ ಎಂದು ಕರ್ನಾಟಕ ದಲಿತ ಸಂಘರ್ಷ ಸಮಿತಿ ಜಿಲ್ಲಾ ಸಮಿತಿ ಸಂಚಾಲಕ ಉಗ್ರಪ್ಪ ತಿಳಿಸಿದರು.

ಸಮಿತಿಯ ರಾಜ್ಯ ಸಂಚಾಲಕ ಎಂ. ಗುರುಮೂರ್ತಿ ಅವರು ಸಮಾವೇಶದ ನೇತೃತ್ವ ವಹಿಸುವರು. ಈ ವೇಳೆ ಸರ್ವೋಚ್ಚ ನ್ಯಾಯಾಲಯದ ಆದೇಶದಂತೆ ಪ.ಜಾತಿಯ ಎಲ್ಲ ಉಪ ಜಾತಿಗಳಿಗೆ ಒಳ ಮೀಸಲಾತಿಯನ್ನು ಎಲ್.ಜಿ. ಹಾವನೂರು ವರದಿ, ಎ.ಜೆ. ಸದಾಶಿವ ಆಯೋಗದ ವರದಿ, ಸಿ.ಜೆ. ಮಾಧುಸ್ವಾಮಿಯವರ ಶಿಫಾರಸುಗಳಲ್ಲಿ ಯಾವುದಾದರೂ ಒಂದನ್ನು ಆಧರಿಸಿ ಜಾರಿಗೆ ತರಬೇಕು ಹಾಗೂ ಇನ್ನಿತರ ಹಕ್ಕೊತ್ತಾಯಗಳನ್ನು ಸರ್ಕಾರಕ್ಕೆ ಸಲ್ಲಿಸಲಾಗುವುದು ಎಂದು ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು.

ಸಮಿತಿಯ ಜಿಲ್ಲಾ ಸಂಘಟನಾ ಸಂಚಾಲಕ ಗೋಪಾಲಕೃಷ್ಣಸ್ವಾಮಿ, ಆರ್. ಮಹೇಶ್, ರಾಚಪ್ಪ ಜಟ್ಟಿಹುಂಡಿ, ಎಂ.ಎಂ.ಮಲ್ಲೇಶ್, ತಾಲ್ಲೂಕು ಸಂಚಾಲಕ ಶಿವಪ್ಪ ಪತ್ರಿಕಾಗೋಷ್ಠಿಯಲ್ಲಿ ಹಾಜರಿದ್ದರು.

ಆಂದೋಲನ ಡೆಸ್ಕ್

Recent Posts

ಚಾಮರಾಜನಗರ| ಕಾಡಾನೆ ದಾಳಿ: ವ್ಯಕ್ತಿ ಸಾವು

ಹನೂರು: ಚಾಮರಾಜನಗರ ಜಿಲ್ಲೆ ಹನೂರು ತಾಲ್ಲೂಕಿನ ಮಲೆ ಮಹದೇಶ್ವರ ವನ್ಯಜೀವಿ ವಿಭಾಗದ ಹೂಗ್ಯಂ ವನ್ಯಜೀವಿ ವಲಯದ ಜಲ್ಲಿಪಾಳ್ಯ ಹತ್ತಿರ ಬೈಕ್‌ನಲ್ಲಿ…

31 mins ago

ಸಿದ್ದರಾಮಯ್ಯ ಔಟ್‌ ಗೋಯಿಂಗ್‌ ಸಿಎಂ: ಬಿ.ವೈ.ವಿಜಯೇಂದ್ರ ಲೇವಡಿ

ಬೆಳಗಾವಿ: ಸಿದ್ದರಾಮಯ್ಯ ಔಟ್‌ ಗೋಯಿಂಗ್‌ ಸಿಎಂ. ಇದು ಅವರ ಕೊನೆಯ ಅಧಿವೇಶನ ಎಂದು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಲೇವಡಿ ಮಾಡಿದ್ದಾರೆ.…

35 mins ago

ಓದುಗರ ಪತ್ರ: ಕಸದ ರಾಶಿ ತೆರವುಗೊಳಿಸಿ

ಮೈಸೂರಿನ ಕುವೆಂಪು ನಗರದ ಅಪೋಲೋ ಆಸ್ಪತ್ರೆಯ ಹಿಂಭಾಗ ದಲ್ಲಿರುವ ಬಿಜಿಎಸ್ ಪದವಿಪೂರ್ವ ಕಾಲೇಜಿನ ಎದುರಿನ ದೊಡ್ಡಮೋರಿ ಯಿಂದ ತೆಗೆದ ಕಸವನ್ನು…

1 hour ago

ಓದುಗರ ಪತ್ರ: ರೈತರ ಆತ್ಮಹತ್ಯೆ ತಡೆಗೆ ಕ್ರಮ ಕೈಗೊಳ್ಳಿ

ಕಳೆದ ಮೂರು ವರ್ಷಗಳ ಅವಧಿಯಲ್ಲಿ, ರಾಜ್ಯದಲ್ಲಿ ೨,೮೪೭ ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ರಾಷ್ಟ್ರೀಯ ಅಪರಾಧ ದಾಖಲೆಗಳ ವಿಭಾಗ (ಎನ್‌ಸಿಆರ್‌ಬಿ)…

1 hour ago

ಓದುಗರ ಪತ್ರ: ವಿದ್ಯಾರ್ಥಿಗಳ ಶಾಲಾ ಬ್ಯಾಗ್ ಹೊರೆ ಕಡಿಮೆ ಮಾಡಿ

ಭಾರತದ ಶಿಕ್ಷಣ ನೀತಿ ಮಕ್ಕಳ ಆರೋಗ್ಯದ ಕುರಿತು ಸ್ಪಷ್ಟ ಮಾರ್ಗಸೂಚಿ ನೀಡಿದ್ದರೂ, ಬಹುತೇಕ ಶಾಲೆಗಳು ಇದನ್ನು ಪಾಲಿಸುತ್ತಿಲ್ಲ ಎಂಬುದು ವಿಷಾದಕರ…

2 hours ago

ವಿಕಸಿತ್ ಭಾರತ್- ಜಿ ರಾಮ್ ಜಿ: ಮಹಾತ್ಮನನ್ನು ಮರೆಗೆ ಸರಿಸುವ ಹುನ್ನಾರ

ಕೇಂದ್ರ ಸರ್ಕಾರದಲ್ಲಿ ಕೃಷಿ, ರೈತ ಕಲ್ಯಾಣ ಮತ್ತು ಗ್ರಾಮೀಣ ಅಭಿವೃದ್ಧಿ ಸಚಿವರಾಗಿರುವ ಶಿವರಾಜ್ ಸಿಂಗ್ ಚೌಹಾಣ್ ಅವರು ಡಿಸೆಂಬರ್ ೧೬ರಂದು…

2 hours ago