ಮೈಸೂರು

ಏ.23 ರಂದು ಕೋಮುವಾದ ಧಿಕ್ಕರಿಸಿ; ಸಂವಿಧಾನ ರಕ್ಷಿಸಿ ಜನಾಕ್ರಾಂತಿ ಸಮಾವೇಶ

ಮೈಸೂರು: ಡಾ. ಬಿ.ಆರ್.ಅಂಬೇಡ್ಕರ್ ಜಯಂತಿ ಅಂಗವಾಗಿ ಏ.೨೩ರಂದು ಬೆಳಿಗ್ಗೆ ೧೧ಕ್ಕೆ ಬೆಂಗಳೂರಿನ ವಸಂತ ನಗರದಲ್ಲಿರುವ ಡಾ.ಬಿ.ಆರ್. ಅಂಬೇಡ್ಕರ್ ಭವನದಲ್ಲಿ ‘ಕೋಮುವಾದ ಧಿಕ್ಕರಿಸಿ-ಸಂವಿಧಾನ ರಕ್ಷಿಸಿ’ ಶೀರ್ಷಿಕೆಯಡಿ ದಲಿತರ ಅಭಿವೃದ್ಧಿಗಾಗಿ ಜನಕ್ರಾಂತಿ ಸಮಾವೇಶ ಆಯೋಜಿಸಲಾಗಿದೆ ಎಂದು ಕರ್ನಾಟಕ ದಲಿತ ಸಂಘರ್ಷ ಸಮಿತಿ ಜಿಲ್ಲಾ ಸಮಿತಿ ಸಂಚಾಲಕ ಉಗ್ರಪ್ಪ ತಿಳಿಸಿದರು.

ಸಮಿತಿಯ ರಾಜ್ಯ ಸಂಚಾಲಕ ಎಂ. ಗುರುಮೂರ್ತಿ ಅವರು ಸಮಾವೇಶದ ನೇತೃತ್ವ ವಹಿಸುವರು. ಈ ವೇಳೆ ಸರ್ವೋಚ್ಚ ನ್ಯಾಯಾಲಯದ ಆದೇಶದಂತೆ ಪ.ಜಾತಿಯ ಎಲ್ಲ ಉಪ ಜಾತಿಗಳಿಗೆ ಒಳ ಮೀಸಲಾತಿಯನ್ನು ಎಲ್.ಜಿ. ಹಾವನೂರು ವರದಿ, ಎ.ಜೆ. ಸದಾಶಿವ ಆಯೋಗದ ವರದಿ, ಸಿ.ಜೆ. ಮಾಧುಸ್ವಾಮಿಯವರ ಶಿಫಾರಸುಗಳಲ್ಲಿ ಯಾವುದಾದರೂ ಒಂದನ್ನು ಆಧರಿಸಿ ಜಾರಿಗೆ ತರಬೇಕು ಹಾಗೂ ಇನ್ನಿತರ ಹಕ್ಕೊತ್ತಾಯಗಳನ್ನು ಸರ್ಕಾರಕ್ಕೆ ಸಲ್ಲಿಸಲಾಗುವುದು ಎಂದು ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು.

ಸಮಿತಿಯ ಜಿಲ್ಲಾ ಸಂಘಟನಾ ಸಂಚಾಲಕ ಗೋಪಾಲಕೃಷ್ಣಸ್ವಾಮಿ, ಆರ್. ಮಹೇಶ್, ರಾಚಪ್ಪ ಜಟ್ಟಿಹುಂಡಿ, ಎಂ.ಎಂ.ಮಲ್ಲೇಶ್, ತಾಲ್ಲೂಕು ಸಂಚಾಲಕ ಶಿವಪ್ಪ ಪತ್ರಿಕಾಗೋಷ್ಠಿಯಲ್ಲಿ ಹಾಜರಿದ್ದರು.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಆರೋಗ್ಯ ಸಚಿವರ ಕಳಕಳಿ ಶ್ಲಾಘನೀಯ

ಮಹಿಳೆಯರಿಗೆ ಮೆನೋಪಾಸ್ (ಪ್ರೀ ಮೆನೋಪಾಸ್ ಹಾಗೂ ಪೋಸ್ಟ್ ಮೊನೋಪಾಸ್) ಸಮಸ್ಯೆ ಕುರಿತು ಸೂಕ್ತ ಮಾಹಿತಿ ಬೇಕು ಎಂದು ನಟಿ ರಮ್ಯಾ…

1 day ago

ಓದುಗರ ಪತ್ರ: ರಾಜಕೀಯ ಗದ್ದಲದ ಮುಂದೆ ಜನರ ಸಮಸ್ಯೆ ಗೌಣವಾಗಬಾರದು

ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಮ್ಮ ಸಚಿವ ಸಂಪುಟವನ್ನು ವಿಸ್ತರಿಸಿದ್ದಾರೆ. ಸಿದ್ದರಾಮಯ್ಯ ಅವರ ಸರ್ಕಾರದಲ್ಲಿದ್ದ ಹೆಚ್. ಸಿ ಮಹದೇವಪ್ಪ ಸೇರಿದಂತೆ ಅನೇಕರು ಸಚಿವ…

1 day ago

ಓದುಗರ ಪತ್ರ: ಸಾಹಿತ್ಯ ಸಮಾರಂಭದಲ್ಲಿ ವಿಷಯಾಂತರ ಏಕೆ?

ಸಾಹಿತ್ಯ, ಸಂಗೀತ ಮತ್ತಿತರ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಅತಿಥಿಗಳು ಆದಷ್ಟು ಆಯಾ ಕ್ಷೇತ್ರಕ್ಕೆ ಸಂಬಂಧಿಸಿದ ವಿಷಯಗಳನ್ನು ಪ್ರಸ್ತಾಪಿಸಿದರೆ ಹೆಚ್ಚು ಸೂಕ್ತವಾಗುತ್ತದೆ. ಅದು…

1 day ago

ಹಾಳಾಗಿರುವ ಜನರೇಟರ್; ಡಯಾಲಿಸಿಸ್ ರೋಗಿಗಳ ಪರದಾಟ

ವೈದ್ಯರು ಮೊಬೈಲ್ ಟಾರ್ಚ್ ‌ಬೆಳಕಿನಲ್ಲೇ ರೋಗಿಗಳ ತಪಾಸಣೆ ನಡೆಸಿ ಚೀಟಿ ಬರೆಯಬೇಕಾದ ಪರಿಸ್ಥಿತಿ ಶ್ರೀರಂಗಪಟ್ಟಣ ಸರ್ಕಾರಿ ಆಸ್ಪತ್ರೆಯ ದುಸ್ಥಿತಿ ಶ್ರೀರಂಗಪಟ್ಟಣ:…

1 day ago

1 ಕೆಜಿ 520 ಗ್ರಾಂ ತೂಕದ ಬಟರ್ ಫ್ರೂಟ್ ಬೆಳೆದ ಸಾವಯವ ಕೃಷಿಕ

ಮಂಜು ಕೋಟೆ ಕ್ಯಾತನಹಳ್ಳಿಯಲ್ಲಿ ಸಾವಯವ ಪದ್ಧತಿಯಲ್ಲಿ ಬೆಳೆ ಬೆಳೆದು ಗಮನ ಸೆಳೆದ ರೈತ ಎಚ್.ಆರ್.ಮೂರ್ತಿ ಎಚ್.ಡಿ.ಕೋಟೆ: ತಾಲ್ಲೂಕಿನ ಸಾವಯವ ಕೃಷಿಕ…

1 day ago