ಮೈಸೂರು

ಕಾಂಗ್ರೆಸ್‌ ಸುಪಾರಿ ಪಡೆದು ಮ್ಯಾಚ್‌ ಫಿಕ್ಸಿಂಗ್‌ ಮಾಡಿಕೊಂಡ ಯತ್ನಾಳ್‌: ರೇಣುಕಾಚಾರ್ಯ

ಮೈಸೂರು: ಶಾಸಕ ಬಸನಗೌಡ ಪಾಟೀಲ ಯತ್ನಾಳ್‌ ಕಾಂಗ್ರೆಸ್‌ನಿಂದ ಸುಪಾರಿ ಪಡೆದು ಸ್ವಪಕ್ಷವಾದ ಬಿಜೆಪಿ ವಿರುದ್ಧವೇ ಹೋರಾಟ ನಡೆಸುತ್ತಿದ್ದಾರೆ ಎಂದು ಬಿಜೆಪಿ ಮುಖಂಡ ಎಂ.ಪಿ.ರೇಣುಕಾಚಾರ್ಯ ಕಿಡಿಕಾರಿದ್ದಾರೆ.

ಮೈಸೂರಿನಲ್ಲಿ ಇಂದು(ನ.30) ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ರಾಜ್ಯದ ಮೂರು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ ಸೋಲಿಗೆ ಯತ್ನಾಳ್‌ ಅವರೇ ನೇರ ಕಾರಣ.ಅವರು ಹಿಂದುತ್ವದ ಮುಖವಾಡ ಧರಿಸಿ, ವಿಜಯಪುರದ ಪ್ರಭಾವಿ ಸಚಿವರ ಜೊತೆ ಮ್ಯಾಚ್‌ ಫಿಕ್ಸಿಂಗ್‌ ಮಾಡಿಕೊಂಡು ಹಿಟ್ಲರ್‌ ರೀತಿ ವರ್ತಿಸುತ್ತಿದ್ದಾರೆ. ಒಂದೇ ಪಕ್ಷದಲ್ಲಿದ್ದುಕೊಂಡು ಮುಡಾ ಪಾದಯಾತ್ರೆಗೆ ಹಾಗೂ ವಕ್ಫ್‌ ಮಂಡಳಿ ವಿರುದ್ಧ ಪ್ರತಿಭಟನೆಗೆ ಬರಲಿಲ್ಲ. ಹೀಗಾಗಿ ಯತ್ನಾಳ್‌ ಪರೋಕ್ಷವಾಗಿ ಭ್ರಷ್ಟಾಚಾರವನ್ನು ಬೆಂಬಲಿಸಿದ್ದಾರೆ ಎಂದು ವಾಗ್ದಾಳಿ ನಡೆಸಿದ್ದಾರೆ.

ಮಾಜಿ ಸಿಎಂ ಬಿ.ಎಸ್‌.ಯಡಿಯೂರಪ್ಪ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರಿಗೆ ಸ್ವಪಕ್ಷದ ಇಂತಹ ಶಕುನಿಗಳು ಮತ್ತು ಮೀರ್‌ ಸಾಧಕರು ಪ್ರತಿನಿತ್ಯ ಕಾಟ ಕೊಡುತ್ತಲೇ ಇದ್ದಾರೆ. ಬಿ.ವೈ.ವಿಜಯೇಂದ್ರ ಅವರನ್ನು ಬಿಜೆಪಿ ಘಟಕದ ರಾಜ್ಯ ಅಧ್ಯಕ್ಷರನ್ನಾಗಿ ನೇಮಕ ಮಾಡಿದ್ದು, ಹೈಕಮಾಂಡ್‌ ಹೊರತು ಯಡಿಯೂರಪ್ಪ ಅಲ್ಲ. ಒಂದು ವೇಳೆ ಯಡಿಯೂರಪ್ಪ ಹಾಗೂ ವಿಜಯೇಂದ್ರಗೆ ನಿಂದಿನಿಸಿದರೆ ಬಿಜೆಪಿ ಹೈಕಮಾಂಡ್‌ ನಿಂದಿಸಿದಂತೆ ಎಂದು ಹೇಳಿದ್ದಾರೆ.

ಬಸವಣ್ಣ ಅವರು ಎಲ್ಲ ವರ್ಗದವರಿಗೆ ಸೇರಿದ ವಿಶ್ವಗುರು. ಅಂತಹವರಿಗೆ ಅಪಮಾನ ಮಾಡಿದ ಯತ್ನಾಳ್‌ರ ವಿರುದ್ಧ ಮಠಾಧೀಶರು ಛೀಮಾರಿ ಹಾಕಬೇಕು. ಬಿಜೆಪಿ ಪಕ್ಷದಲ್ಲಿ ವಿಜಯೇಂದ್ರ ಒಂದು ಶಕ್ತಿಯಾಗಿದ್ದಾರೆ. ಆದರೆ ಯತ್ನಾಳ್‌ ಅವರದ್ದು ನಾಲ್ಕು ಜನರ ಒಂದು ಗುಂಪು ಅಷ್ಟೇ. ನಾವೆಲ್ಲರೂ ಬಣ ರಾಜಕೀಯ ಮಾಡುತ್ತಿಲ್ಲ. ಅದರ ಬದಲಾಗಿ ಶಕ್ತಿ ಪ್ರದರ್ಶನ ಮಾಡುತ್ತಿದ್ದೇವೆ . ಹೀಗಾಗಿ ತಾಯಿ ಚಾಮುಂಡೇಶ್ವರಿ ಅವರು ಅದಷ್ಟು ಬೇಗ ಇಂತಹ ಆಂತರಿಕ ದುಷ್ಟರನ್ನು ಸಂಹಾರ ಮಾಡಲಿ ಎಂದು ತಿಳಿಸಿದ್ದಾರೆ.

ಅರ್ಚನ ಎಸ್‌ ಎಸ್

Recent Posts

ಹೋಟೆಲ್,ರೆಸ್ಟೋರೆಂಟ್‌ಗಳ ಮೇಲೆ ಮುಂದುವರೆದ ದಾಳಿ

ಬೆಂಗಳೂರು ನಂತರ ಮೈಸೂರು, ಮಂಗಳೂರಿನಲ್ಲೂ ಕಾರ್ಯಾಚರಣೆ ಬೆಂಗಳೂರು : ರಾಜ್ಯದಲ್ಲಿ ಆಹಾರದ ಗುಣಮಟ್ಟ ಮತ್ತು ನೈರ್ಮಲ್ಯದ ಕುರಿತು ಸಾರ್ವಜನಿಕರಿಂದ ಹೆಚ್ಚುತ್ತಿರುವ…

1 hour ago

ನಂ.ಗೂಡು | ಮತ್ತೆ ಕಳಚಿ ಬೀಳುತ್ತಿರುವ ಸೇತುವೆಯ ಸೀಲಿಂಗ್ ಕಾಂಕ್ರೀಟ್

ಮೂರೂ ದಿನಗಳಿಂದಲೂ ಸೇತುವೆಯತ್ತ ಮುಖ ಮಾಡದ ರೈಲ್ವೆ ಇಲಾಖೆ ನಂಜನಗೂಡು : ಮಹಾತ್ಮಾಗಾಂಧಿ ಶತಾಬ್ಧಿ ರಸ್ತೆಗೆ ನಿರ್ಮಿಸಿರುವ ರೈಲ್ವೆ ಕೆಳ…

4 hours ago

ರಾವಣನ ಪಾತ್ರವನ್ನ ನನಗಿಂತ ಉತ್ತಮವಾಗಿ ಯಾರೂ ಮಾಡಲು ಸಾಧ್ಯವಿಲ್ಲ : ಯಶ್

ಮುಂಬೈ : ‘ಟಾಕ್ಸಿಕ್’ ಮತ್ತು ‘ರಾಮಾಯಣ’ ಸಿನಿಮಾಗಳ ಕೆಲಸಗಳಲ್ಲಿ ನಿರತರಾಗಿರುವ ಯಶ್, ‘ರಾಮಾಯಣ’ ಸಿನಿಮಾದಲ್ಲಿ ಕೇವಲ ಸಹ-ನಿರ್ಮಾಪಕರಾಗಿ ಮಾತ್ರವಲ್ಲದೆ ʻರಾವಣʼನ…

4 hours ago

ರಾಜ್ಯಗಳಿಗೆ ನೀಡುವ ವಿಪತ್ತು ಪರಿಹಾರದಲ್ಲೂ ಕೇಂದ್ರದಿಂದ ವಂಚನೆ : ಸಿಎಜಿ ವರದಿ

ಬೆಂಗಳೂರು : ಭೂಕುಸಿತ, ಬರದಂತಹ ಭೀಕರ ಪ್ರಕೃತಿ ವಿಕೋಪಗಳಿಂದ ಕಂಗಾಲಾಗಿರುವ ರಾಜ್ಯಗಳಿಗೆ ಕೇಂದ್ರ ಸರ್ಕಾರದಿಂದ ಸಿಗಬೇಕಾದ ವಿಪತ್ತು ಪರಿಹಾರ ಅನುದಾನದಲ್ಲಿ…

5 hours ago

ಶಾಸಕರ ಭರವಸೆ ಬಳಿಕ ಪ್ರತಿಭಟನೆ ಹಿಂಪಡೆತ : ಮೃತರ ಕುಟುಂಬಕ್ಕೆ ತಲಾ ₹15 ಲಕ್ಷ ಪರಿಹಾರ

ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ದಾಳಿಗೆ ಮೃತಪಟ್ಟ ಕುಟುಂಬಗಳಿಗೆ ಸರ್ಕಾರಿ ಉದ್ಯೋಗ, ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ಹಾಗೂ ಸೂಕ್ತ…

7 hours ago

ವಾರಣಾಸಿ ಏರ್‌ಫೋರ್ಟ್‌ | ಶಸ್ತ್ರಾಸ್ತ್ರ ತಪಾಸಣೆ ವೇಳೆ ಆಕಸ್ಮಿಕ ಗುಂಡಿನ ದಾಳಿ ; ಇಬ್ಬರಿಗೆ ಗಾಯ

ವಾರಣಾಸಿ : ವಾರಣಾಸಿಯ ಲಾಲ್ ಬಹದ್ದೂರ್ ಶಾಸ್ತ್ರಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾನುವಾರ ಬೆಳಿಗ್ಗೆ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಶಸ್ತ್ರಾಸ್ತ್ರ ತಪಾಸಣೆಯ…

8 hours ago