ಮೈಸೂರು: ನಟ ದರ್ಶನ್ ಮೇಲೆ ಅಂಧಾಭಿಮಾನ ಎಷ್ಟು ದಿನ ಇರುತ್ತೆ ಎಂದು ಎಂಎಲ್ಸಿ ಎಚ್.ವಿಶ್ವನಾಥ್ ಅವರು ದರ್ಶನ್ ಅಭಿಮಾನಿಗಳಿಗೆ ಪ್ರಶ್ನೆ ಮಾಡಿದ್ದಾರೆ.
ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪರಪ್ಪರ ಅಗ್ರಹಾರದಲ್ಲಿರುವ ನಟ ದರ್ಶನ್ ಅವರು, ರಾತ್ರಿಯೆಲ್ಲಾ ನಿದ್ದೆ ಮಾಡದೇ ಕಂಗಾಲಾಗಿದ್ದಾರೆ. ಒಂದೆಡೆ ನೆಚ್ಚಿನ ನಟ ಜೈಲಿನಲ್ಲಿರುವುದನ್ನು ಸಹಿಸಲಾಗದೇ ಅಭಿಮಾನಿಗಳು ಬೇಸರ ವ್ಯಕ್ತಪಡಿಸಿದ್ದಾರೆ. ಹೀಗಿರುವಾಗಲೇ ದರ್ಶನ್ ಅವರ ಖೈದಿ ಸಂಖ್ಯೆ 6106ನ್ನು ಬೈಕ್ ನೋಂದಣಿ ಮಾಡಿಸಿಕೊಳ್ಳಲು ಅನೇಕ ಅಭಿಮಾನಿಗಳು ಕಾಯುತ್ತಿದ್ದಾರೆ.
ಈ ಬಗ್ಗೆ ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಎಂಎಲ್ಸಿ ಹೆಚ್.ವಿಶ್ವನಾಥ್ ಅವರು, ದರ್ಶನ್ ಮೇಲೆ ಜನತೆಗೆ ಅಂಧಾಭಿಮಾನ ಎಷ್ಟು ದಿನ ಇರುತ್ತೆ ಎಂದು ಪ್ರಶ್ನೆ ಮಾಡಿದ್ದಾರೆ. ಜನರಿಗೆ ನೆನಪಿನ ಶಕ್ತಿ ಬೇಗ ಹೊರಟು ಹೋಗುತ್ತೆ. ಹೆಣ್ಣಿಗಾಗಿ ನಟ ದರ್ಶನ್ ಜೈಲಿಗೆ ಹೋಗುವಂತಾಗಿದೆ ಎಂದು ಬೇಸರ ವ್ಯಕ್ತಪಡಿಸಿದರು.
ಮುಂದುವರಿದು ಮಾತನಾಡಿದ ಅವರು, ಅಭಿಮಾನ ಇರಬೇಕು. ಆದರೆ ಅಂಧಾಭಿಮಾನ ಇರಬಾರದು. ಯಾರೇ ತಪ್ಪು ಮಾಡಿದ್ರೂ ಅದು ತಪ್ಪೇ. ನಟ ದರ್ಶನ್ಗೆ ಕಾನೂನಿನಡಿ ಶಿಕ್ಷೆ ಆಗುತ್ತದೆ. ಒಂದು ಹೆಣ್ಣಿಗಾಗಿ ಅಮಾಯಕನ ಜೀವ ಹೋಗಿದೆ. ಆರೋಪಿಗಳಿಗೆ ತಕ್ಕ ಶಿಕ್ಷೆಯಾಗಿ ರೇಣುಕಾಸ್ವಾಮಿ ಕುಟುಂಬಕ್ಕೆ ನ್ಯಾಯ ಒದಗಿಸಬೇಕು ಎಂದು ಆಗ್ರಹಿಸಿದರು.
ದೇಶದ ತುಂಬಾ ಇಂದು ಭಕ್ತ ಗಣ ಮಾಡುತ್ತಿದೆ ಜಪ ರಾಮ ರಾಮ... ಆ ಟ್ರಂಪಣ್ಣನೂ ಜಪಿಸುತ್ತಿದ್ದಾರಂತೆ ಯಾವಾಗ ಘೋಷಿಸುತ್ತದೆಯೋ ಇರಾನ್,…
ಕೆಲವು ತಿಂಗಳ ಹಿಂದೆ ಹೈದರಾಲಿರಸ್ತೆಯ ಎರಡೂ ಬದಿ ೪೦ ಮರಗಳನ್ನು ಹೊಂದಿ ಹಸಿರು ಕಂಗೊಳಿಸುತ್ತಿತ್ತು. ರಸ್ತೆ ಅಗಲೀಕರಣದ ನೆಪದಲ್ಲಿ ಅಹೋರಾತ್ರಿ…
ಇತ್ತೀಚಿನ ದಿನಗಳಲ್ಲಿ ಬೆಂಗಳೂರು, ಮೈಸೂರು, ಹೈದರಾಬಾದ್, ಮುಂಬೈನಂತಹ ನಗರ ಪ್ರದೇಶಗಳಲ್ಲಿ ಓಲಾ, ಊಬರ್, ರ್ಯಾಪಿಡೋ, ನಮ್ಮ ಯಾತ್ರೆ ಎಂಬ ಆಪ್…
ಕನ್ನಡ ಚಿತ್ರರಂಗ ಸದ್ದು ಮಾಡುತ್ತಿದೆ. ರಾಜ್ಯಮಟ್ಟದಲ್ಲಿ, ರಾಷ್ಟ್ರಮಟ್ಟದಲ್ಲಿ. ಅಭಿವ್ಯಕ್ತಿ ಸ್ವಾತಂತ್ರ್ಯದ ಎಲ್ಲ ಮುಖಗಳ ಪರಿಚಯವೂ ಈಗ ಆಗತೊಡಗಿದೆ. ನಿರ್ಮಾಪಕ ಕನಕಪುರ…
ಮಹಾದೇಶ್ ಎಂ.ಗೌಡ ಹನೂರು: ಪಟ್ಟಣ ಪಂಚಾಯಿತಿ ವ್ಯಾಪ್ತಿಯ ಸಾರ್ವಜನಿಕರಿಗೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ೨೪ ಲಕ್ಷ ರೂ. ವೆಚ್ಚದಲ್ಲಿ ನಿರ್ಮಾಣ…
ಭೇರ್ಯ ಮಹೇಶ್ ಡಿಜಿಟಲ್ ಗ್ರಂಥಾಲಯ, ಸ್ವಚ್ಛತೆ, ನೈರ್ಮಲ್ಯ, ನೀರು ಸರಬರಾಜು, ಇನ್ನಿತರ ವಿಭಾಗಗಳಲ್ಲಿ ವಿಶೇಷ ಸಾಧನೆ ಭೇರ್ಯ: ಭಾರತದ ನಿಜವಾದ…