ಮೈಸೂರು: ನಟ ದರ್ಶನ್ ಮೇಲೆ ಅಂಧಾಭಿಮಾನ ಎಷ್ಟು ದಿನ ಇರುತ್ತೆ ಎಂದು ಎಂಎಲ್ಸಿ ಎಚ್.ವಿಶ್ವನಾಥ್ ಅವರು ದರ್ಶನ್ ಅಭಿಮಾನಿಗಳಿಗೆ ಪ್ರಶ್ನೆ ಮಾಡಿದ್ದಾರೆ.
ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪರಪ್ಪರ ಅಗ್ರಹಾರದಲ್ಲಿರುವ ನಟ ದರ್ಶನ್ ಅವರು, ರಾತ್ರಿಯೆಲ್ಲಾ ನಿದ್ದೆ ಮಾಡದೇ ಕಂಗಾಲಾಗಿದ್ದಾರೆ. ಒಂದೆಡೆ ನೆಚ್ಚಿನ ನಟ ಜೈಲಿನಲ್ಲಿರುವುದನ್ನು ಸಹಿಸಲಾಗದೇ ಅಭಿಮಾನಿಗಳು ಬೇಸರ ವ್ಯಕ್ತಪಡಿಸಿದ್ದಾರೆ. ಹೀಗಿರುವಾಗಲೇ ದರ್ಶನ್ ಅವರ ಖೈದಿ ಸಂಖ್ಯೆ 6106ನ್ನು ಬೈಕ್ ನೋಂದಣಿ ಮಾಡಿಸಿಕೊಳ್ಳಲು ಅನೇಕ ಅಭಿಮಾನಿಗಳು ಕಾಯುತ್ತಿದ್ದಾರೆ.
ಈ ಬಗ್ಗೆ ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಎಂಎಲ್ಸಿ ಹೆಚ್.ವಿಶ್ವನಾಥ್ ಅವರು, ದರ್ಶನ್ ಮೇಲೆ ಜನತೆಗೆ ಅಂಧಾಭಿಮಾನ ಎಷ್ಟು ದಿನ ಇರುತ್ತೆ ಎಂದು ಪ್ರಶ್ನೆ ಮಾಡಿದ್ದಾರೆ. ಜನರಿಗೆ ನೆನಪಿನ ಶಕ್ತಿ ಬೇಗ ಹೊರಟು ಹೋಗುತ್ತೆ. ಹೆಣ್ಣಿಗಾಗಿ ನಟ ದರ್ಶನ್ ಜೈಲಿಗೆ ಹೋಗುವಂತಾಗಿದೆ ಎಂದು ಬೇಸರ ವ್ಯಕ್ತಪಡಿಸಿದರು.
ಮುಂದುವರಿದು ಮಾತನಾಡಿದ ಅವರು, ಅಭಿಮಾನ ಇರಬೇಕು. ಆದರೆ ಅಂಧಾಭಿಮಾನ ಇರಬಾರದು. ಯಾರೇ ತಪ್ಪು ಮಾಡಿದ್ರೂ ಅದು ತಪ್ಪೇ. ನಟ ದರ್ಶನ್ಗೆ ಕಾನೂನಿನಡಿ ಶಿಕ್ಷೆ ಆಗುತ್ತದೆ. ಒಂದು ಹೆಣ್ಣಿಗಾಗಿ ಅಮಾಯಕನ ಜೀವ ಹೋಗಿದೆ. ಆರೋಪಿಗಳಿಗೆ ತಕ್ಕ ಶಿಕ್ಷೆಯಾಗಿ ರೇಣುಕಾಸ್ವಾಮಿ ಕುಟುಂಬಕ್ಕೆ ನ್ಯಾಯ ಒದಗಿಸಬೇಕು ಎಂದು ಆಗ್ರಹಿಸಿದರು.
ಬೆಂಗಳೂರು: ಬಿಡದಿ ಟೌನ್ ಶಿಪ್ ಹೆಸರಿನಲ್ಲಿ ರೈತರ ಜಮೀನು ಕಿತ್ತುಕೊಂಡು ದಂಧೆ ನಡೆಸಲು ಹೊರಟಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿರುವ ಮಾಜಿ…
ನವೀನ್ ಕುಮಾರ್: ಪಿರಿಯಾಪಟ್ಟಣ ತಾಲ್ಲೂಕು ವರದಿಗಾರರು ಪಿರಿಯಾಪಟ್ಟಣ: ಸಿಡಿಲು ಬಡಿದು ಎರಡು ಹಸುಗಳು ಹಾಗೂ ಓರ್ವ ಮಹಿಳೆ ಸಾವನ್ನಪ್ಪಿರುವ ಘಟನೆ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ಇಂದು ಬಾದಾಮಿ ಅಮಾವಾಸ್ಯೆ ಪ್ರಯುಕ್ತ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಚಾಮರಾಜನಗರ ಬರಪೀಡಿತ ಜಿಲ್ಲೆ ಎಂದು ಘೋಷಿಸಬೇಕೆಂದು ಜಿಲ್ಲಾಡಳಿತದ ಮೂಲಕ ಸರ್ಕಾರಕ್ಕೆ…
ಬೆಂಗಳೂರು: ಕೇಂದ್ರ ಸರಕಾರದ ಉದ್ದೇಶಿತ 'ಒಂದು ರಾಷ್ಟ್ರ ಒಂದು ಚುನಾವಣೆ' ಪ್ರಸ್ತಾವನೆಯನ್ನು ಕೆಪಿಸಿಸಿ ಅಧ್ಯಕ್ಷರೂ ಆದ ಡಿಸಿಎಂ ಡಿ ಕೆ…
ಮೈಸೂರು: ಶಾಸಕ ಜಿ.ಟಿ.ದೇವೇಗೌಡ ಅವರು ತಮ್ಮ ತಪ್ಪನ್ನು ತಿದ್ದಿಕೊಂಡು ಪಕ್ಷದಲ್ಲೇ ಉಳಿದರೇ ನಮ್ಮ ಅಭ್ಯಂತರವಿಲ್ಲ ಎಂದು ಮಾಜಿ ಶಾಸಕ ಸಾ.ರಾ.ಮಹೇಶ್…