ಮೈಸೂರು

ಕಬ್ಬಿನ ಬಾಕಿ ಹಣ ಕೊಡಿಸುವಂತೆ ಸಿಎಂಗೆ ಮನವಿ

ಮೈಸೂರು : ಸಕ್ಕರೆ ಕಾರ್ಖಾನೆಗಳಿಂದ ಬಾಕಿ ಇರುವ ಪ್ರತಿ ಟನ್ ಕಬ್ಬಿನ 150 ರೂ.ಗಳನ್ನು ಕಬ್ಬು ಬೆಳೆಗಾರರಿಗೆ ಬಣ್ಣಾರಿ ಅಮ್ಮನ್ ಸಕ್ಕರೆ ಕಾರ್ಖಾನೆಯಿಂದ ಕೊಡಿಸಬೇಕು. ಪ್ರಸಕ್ತ ಸಾಲಿನಲ್ಲಿ ಕಬ್ಬಿನ ಎಫ್‌ಆರ್‌ಪಿ ಹೆಚ್ಚುವರಿ ದರ ಎಸ್‌ಎಪಿ 4,000 ರೂ.ಗಳಿಗೆ ನಿಗದಿ ಮಾಡಬೇಕು ಎಂದು ರೈತ ಮುಖಂಡರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದರು.

ಕರ್ನಾಟಕ ಆಡಳಿತ ಹೇಮಾವತಿ ಸಭಾಂಗಣದ ಬಳಿ ರಾಜ್ಯ ರೈತ ಸಂಘಟನೆಗಳ ಒಕ್ಕೂಟ ಹಾಗೂ ರಾಜ್ಯ ಕಬ್ಬು ಬೆಳೆಗಾರರ ಸಂಘದ ಪದಾಧಿಕಾರಿಗಳು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಜಿಲ್ಲೆಯ ರೈತರ ಸಮಸ್ಯೆಗಳ ಬಗೆಗೆ ಮನವಿ ಪತ್ರ ಸಲ್ಲಿಸಿದರು.

ಜಿಲ್ಲೆಯಲ್ಲಿ ಸುಮಾರು 1500 ಹೆಕ್ಟೇರ್‌ಗೂ ಹೆಚ್ಚು ಬಾಳೆ ಬೆಳೆಗಾರರಿಗೆ ತೋಟಗಾರಿಕೆ ಇಲಾಖೆಯಿಂದ ಯಾವುದೇ ಅನುಕೂಲ ಆಗುತ್ತಿಲ್ಲ. ಬಗರ್ ಹುಕುಂ ಸಾಗುವಳಿ ಚೀಟಿ ನೀಡಲು ಅಧಿಕಾರಿಗಳು ತಾಂತ್ರಿಕ ಸಮಸ್ಯೆ ಎಂದು ಹೇಳಿ ತಡ ಮಾಡುತ್ತಿದ್ದಾರೆ. ಆದ್ದರಿಂದ ಕೂಡಲೇ ಇದನ್ನು ಸರಿಪಡಿಸಿ ಸುಮಾರು 40, 50 ವರ್ಷಗಳಿಂದ ಉಳುಮೆ ಮಾಡಿಕೊಂಡು ಬರುತ್ತಿರುವ ರೈತರಿಗೆ ಸಾಗುವಳಿ ಚೀಟಿ ನೀಡಬೇಕು ಎಂದು ಒತ್ತಾಯಿಸಿದರು.

ಬರಡನಪುರ ನಾಗರಾಜ್, ಕಿರಗಸೂರು ಶಂಕರ್, ಪಿ.ಸೋಮಶೇಖರ್, ಮಾರ್ಬಳ್ಳಿ ನೀಲಕಂಠಪ್ಪ, ಕುರುಬೂರು ಸಿದ್ದೇಶ್, ವಿಜಯೇಂದ್ರ, ವರಕೋಡು ನಾಗೇಶ್, ಕುರುಬೂರು ಪ್ರದೀಪ್, ಬನ್ನೂರು ಸೂರಿ, ವಾಜಮಂಗಲ ಮಹದೇವು, ಪರಶಿವಮೂರ್ತಿ, ಕಿರಗಸೂರು ಪ್ರಸಾದ್ ನಾಯಕ, ಪಟೇಲ್ ಶಿವಮೂರ್ತಿ, ಹೆಗ್ಗೊಠಾರ ಶಿವಸ್ವಾಮಿ, ಮಹದೇವ ಸ್ವಾಮಿ, ಶಿವಣ್ಣ, ಪುಟ್ಟಸ್ವಾಮಿ, ಸಿದ್ದರಾಮ, ಕಾಟೂರು ನಾಗೇಶ್, ಮಹದೇವಸ್ವಾಮಿ, ಸೋಮಣ್ಣ, ನವೀನ, ನಂಜುಂಡಸ್ವಾಮಿ, ಮಾದೇಶ, ಉಮೇಶ, ಮಹೇಶ, ದೇವನೂರು ಮಹದೇವಸ್ವಾಮಿ, ಕೆ.ನಾಗರಾಜ, ಮಹದೇವಪ್ಪ, ವೆಂಕಟೇಶ್ ಮತ್ತಿತರರು ಹಾಜರಿದ್ದರು.

ಆಂದೋಲನ ಡೆಸ್ಕ್

Recent Posts

ಉಡುಪಿ ಮಲ್ಪೆ ಬಳಿ ದೋಣಿ ಪಲ್ಟಿ: ಮೈಸೂರಿನ ಇಬ್ಬರು ಸಾವು

ಉಡುಪಿ: ಇಲ್ಲಿನ ಮಲ್ಪೆ ಕೋಡಿಬೆಂಗ್ರೆ ಬೀಷಚ್‌ ಸಮೀಪ ಪ್ರವಾಸಿ ದೋಣಿ ಮುಗುಚಿದ ಪರಿಣಾಮ ತೀವ್ರ ಅಸ್ವಸ್ಥಗೊಂಡಿದ್ದ ಮೈಸೂರಿನ ಇಬ್ಬರು ಮೃತಪಟ್ಟಿರುವ…

11 hours ago

ಜೆಡಿಎಸ್‌ ಬಿಟ್ಟಿದ್ದು ದ್ರೋಹ ಹೇಗಾಗುತ್ತೆ: ಶಾಸಕ ಶಿವಲಿಂಗೇಗೌಡ

ಹಾಸನ: ನಾನು ಜೆಡಿಎಸ್‌ ಬಿಟ್ಟು ಹೋದರೆ ದ್ರೋಹ ಹೇಗಾಗುತ್ತದೆ? ನಾನು ಅಲ್ಲಿದ್ದರೆ ಇನ್ನೊಂದು ಸೀಟ್‌ ಜಾಸ್ತಿ ಆಗೋದು ಅಷ್ಟೇ. ಏನು…

12 hours ago

ಭಾಷಣ ಮಾಡದೇ ತೆರಳುತ್ತಿದ್ದ ರಾಜ್ಯಪಾಲರಿಗೆ ಅಡ್ಡಿಪಡಿಸಿದ ವಿಚಾರ: ರಾಷ್ಟ್ರಪತಿಗೆ ವರದಿ ರವಾನಿಸಿದ ಲೋಕಭವನ

ಬೆಂಗಳೂರು: ವಿಧಾನಮಂಡಲ ವಿಶೇಷ ಜಂಟಿ ಅಧಿವೇಶನದಲ್ಲಿ ಭಾಷಣ ಮಾಡದೇ ತೆರಳುತ್ತಿದ್ದ ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ ಅವರಿಗೆ ಕಾಂಗ್ರೆಸ್‌ ಸದಸ್ಯರು…

12 hours ago

ಮಳವಳ್ಳಿ: ಈಜಲು ಹೋಗಿದ್ದ ಯುವಕ ಸಾವು

ಮಳವಳ್ಳಿ: ಮಳವಳ್ಳಿ ತಾಲ್ಲೂಕಿನ ಹಲಗೂರು ಸಮೀಪದ ಮುತ್ತತ್ತಿ ಕಾವೇರಿ ನದಿಯಲ್ಲಿ ಈಜಾಡುತ್ತಿದ್ದಾಗ ನೀರಿನ ಸೆಳೆತಕ್ಕೆ ಸಿಲುಕಿ ಯುವಕ ಮೃತಪಟ್ಟ ಘಟನೆ…

12 hours ago

ಮಂಡ್ಯದಲ್ಲಿ 3 ಕೋಟಿ ವೆಚ್ಚದಲ್ಲಿ ಗಾಂಧಿಭವನ ನಿರ್ಮಾಣ: ಸಚಿವ ಚಲುವರಾಯಸ್ವಾಮಿ

ಮಂಡ್ಯ: ಮಹಾತ್ಮ ಗಾಂಧೀಜಿ ಅವರ ವಿಚಾರಧಾರೆಗಳನ್ನು ಯುವ ಪೀಳಿಗೆಗೆ ತಲುಪಿಸುವ ಕೆಲಸವನ್ನು ಗಾಂಧಿ ಭವನದಲ್ಲಿ ಮಾಡಲಾಗುವುದು ಎಂದು ಮಂಡ್ಯ ಜಿಲ್ಲಾ…

12 hours ago

ಗ್ರಾಮ ಪಂಚಾಯತ್‌ಗಳ 590 ಸಿಬ್ಬಂದಿಗಳಿಗೆ ಅನುಮೋದನೆ: ಆದೇಶ ಪ್ರತಿ ವಿತರಿಸಿದ ಸಚಿವ ಎನ್‌.ಚಲುವರಾಯಸ್ವಾಮಿ

ಮಂಡ್ಯ: ಮಂಡ್ಯ ಜಿಲ್ಲೆಯ ವ್ಯಾಪ್ತಿಯ ಗ್ರಾಮ ಪಂಚಾಯತ್‌ಗಳಲ್ಲಿ ದಿನಾಂಕ:31-10-2017ಕ್ಕೂ ಪೂರ್ವದಲ್ಲಿ ಗ್ರಾಮ ಪಂಚಾಯತ್ ನಿಂದ ನೇಮಕಗೊಂಡು ನೀರುಗಂಟಿ, ಸ್ವಚ್ಛತಗಾರ, ಅಟೆಂಡರ್…

12 hours ago