ಮೈಸೂರು

ಕಬ್ಬಿನ ಬಾಕಿ ಹಣ ಕೊಡಿಸುವಂತೆ ಸಿಎಂಗೆ ಮನವಿ

ಮೈಸೂರು : ಸಕ್ಕರೆ ಕಾರ್ಖಾನೆಗಳಿಂದ ಬಾಕಿ ಇರುವ ಪ್ರತಿ ಟನ್ ಕಬ್ಬಿನ 150 ರೂ.ಗಳನ್ನು ಕಬ್ಬು ಬೆಳೆಗಾರರಿಗೆ ಬಣ್ಣಾರಿ ಅಮ್ಮನ್ ಸಕ್ಕರೆ ಕಾರ್ಖಾನೆಯಿಂದ ಕೊಡಿಸಬೇಕು. ಪ್ರಸಕ್ತ ಸಾಲಿನಲ್ಲಿ ಕಬ್ಬಿನ ಎಫ್‌ಆರ್‌ಪಿ ಹೆಚ್ಚುವರಿ ದರ ಎಸ್‌ಎಪಿ 4,000 ರೂ.ಗಳಿಗೆ ನಿಗದಿ ಮಾಡಬೇಕು ಎಂದು ರೈತ ಮುಖಂಡರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದರು.

ಕರ್ನಾಟಕ ಆಡಳಿತ ಹೇಮಾವತಿ ಸಭಾಂಗಣದ ಬಳಿ ರಾಜ್ಯ ರೈತ ಸಂಘಟನೆಗಳ ಒಕ್ಕೂಟ ಹಾಗೂ ರಾಜ್ಯ ಕಬ್ಬು ಬೆಳೆಗಾರರ ಸಂಘದ ಪದಾಧಿಕಾರಿಗಳು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಜಿಲ್ಲೆಯ ರೈತರ ಸಮಸ್ಯೆಗಳ ಬಗೆಗೆ ಮನವಿ ಪತ್ರ ಸಲ್ಲಿಸಿದರು.

ಜಿಲ್ಲೆಯಲ್ಲಿ ಸುಮಾರು 1500 ಹೆಕ್ಟೇರ್‌ಗೂ ಹೆಚ್ಚು ಬಾಳೆ ಬೆಳೆಗಾರರಿಗೆ ತೋಟಗಾರಿಕೆ ಇಲಾಖೆಯಿಂದ ಯಾವುದೇ ಅನುಕೂಲ ಆಗುತ್ತಿಲ್ಲ. ಬಗರ್ ಹುಕುಂ ಸಾಗುವಳಿ ಚೀಟಿ ನೀಡಲು ಅಧಿಕಾರಿಗಳು ತಾಂತ್ರಿಕ ಸಮಸ್ಯೆ ಎಂದು ಹೇಳಿ ತಡ ಮಾಡುತ್ತಿದ್ದಾರೆ. ಆದ್ದರಿಂದ ಕೂಡಲೇ ಇದನ್ನು ಸರಿಪಡಿಸಿ ಸುಮಾರು 40, 50 ವರ್ಷಗಳಿಂದ ಉಳುಮೆ ಮಾಡಿಕೊಂಡು ಬರುತ್ತಿರುವ ರೈತರಿಗೆ ಸಾಗುವಳಿ ಚೀಟಿ ನೀಡಬೇಕು ಎಂದು ಒತ್ತಾಯಿಸಿದರು.

ಬರಡನಪುರ ನಾಗರಾಜ್, ಕಿರಗಸೂರು ಶಂಕರ್, ಪಿ.ಸೋಮಶೇಖರ್, ಮಾರ್ಬಳ್ಳಿ ನೀಲಕಂಠಪ್ಪ, ಕುರುಬೂರು ಸಿದ್ದೇಶ್, ವಿಜಯೇಂದ್ರ, ವರಕೋಡು ನಾಗೇಶ್, ಕುರುಬೂರು ಪ್ರದೀಪ್, ಬನ್ನೂರು ಸೂರಿ, ವಾಜಮಂಗಲ ಮಹದೇವು, ಪರಶಿವಮೂರ್ತಿ, ಕಿರಗಸೂರು ಪ್ರಸಾದ್ ನಾಯಕ, ಪಟೇಲ್ ಶಿವಮೂರ್ತಿ, ಹೆಗ್ಗೊಠಾರ ಶಿವಸ್ವಾಮಿ, ಮಹದೇವ ಸ್ವಾಮಿ, ಶಿವಣ್ಣ, ಪುಟ್ಟಸ್ವಾಮಿ, ಸಿದ್ದರಾಮ, ಕಾಟೂರು ನಾಗೇಶ್, ಮಹದೇವಸ್ವಾಮಿ, ಸೋಮಣ್ಣ, ನವೀನ, ನಂಜುಂಡಸ್ವಾಮಿ, ಮಾದೇಶ, ಉಮೇಶ, ಮಹೇಶ, ದೇವನೂರು ಮಹದೇವಸ್ವಾಮಿ, ಕೆ.ನಾಗರಾಜ, ಮಹದೇವಪ್ಪ, ವೆಂಕಟೇಶ್ ಮತ್ತಿತರರು ಹಾಜರಿದ್ದರು.

ಆಂದೋಲನ ಡೆಸ್ಕ್

Recent Posts

ಬಿಡದಿ ಹೋರಾಟಕ್ಕೆ ಜೆನ್‌-ಝೀ ಗಳು ಬರಲಿ ; ದೇವನೂರು ಮಹದೇವ ಕರೆ

ಮೈಸೂರು: ಫಲವತ್ತಾದ ಕೃಷಿ ಭೂಮಿಯನ್ನು ಉಳಿಸಿಕೊಳ್ಳುವ ಆಕಾಂಕ್ಷೆ ಪ್ರಭುತ್ವಕ್ಕೆ ಇರಬೇಕು. ಭೂಮಿ ನೀಡುವ ರೈತರ ಬದುಕಿನ ಹೊಣೆಗಾರಿಕೆಯನ್ನು ಸರ್ಕಾರ ವಹಿಸಿಕೊಳ್ಳುತ್ತದೆಯೇ…

39 mins ago

ಕನ್ನಡ ಭಾಷ ಶಿಕ್ಷಕರ ಪ್ರತ್ಯೇಕ ನೇಮಕಕ್ಕೆ ಸರ್ಕಾರ ಅಸ್ತು ; ಸ್ವಾಗತಾರ್ಹ

ಮೈಸೂರು : ಶಾಲಾ ಶಿಕ್ಷಣ ಇಲಾಖೆಯ ಜಿಪಿಎಸ್‌ಟಿಆರ್ ಹಾಗೂ ಎಚ್‌ಎಸ್‌ಟಿಆರ್ ಶಿಕ್ಷಕರ ನೇಮಕಾತಿಯಲ್ಲಿ ಕನ್ನಡ ಭಾಷಾ ಶಿಕ್ಷಕರ ಹುದ್ದೆಗಳನ್ನು ಪ್ರತ್ಯೇಕವಾಗಿ…

4 hours ago

ಶೀಘ್ರದಲ್ಲೇ ರಾಜ್ಯದಲ್ಲಿ ಗುಟ್ಕಾ ನಿಷೇಧ ಆದೇಶ ವಾಪಸ್?‌

ಬೆಂಗಳೂರು: ಗುಟ್ಕಾ ನಿಷೇಧ ಆದೇಶವನ್ನು ರಾಜ್ಯ ಸರ್ಕಾರ ಶೀಘ್ರದಲ್ಲೇ ವಾಪಸ್‌ ಪಡೆಯುವ ಸಾಧ್ಯತೆಯಿದೆ. ಆಡಳಿತರೂಢ ಕಾಂಗ್ರೆಸ್‌ ಶಾಸಕರಿಂದಲೇ ಸರ್ಕಾರದ ನಿರ್ಧಾರಕ್ಕೆ…

8 hours ago

6 ದಿನಗಳಾದರೂ ಸಿಗದ ಟೆಕ್ಕಿ ಅದ್ವೈತ್‌ ಸುಳಿವು: ಶಿವಗಂಗೆ ಬೆಟ್ಟದಲ್ಲಿ ಶೋಧ ಕಾರ್ಯಾಚರಣೆ ಸ್ಥಗಿತ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲ ತಾಲ್ಲೂಕಿನ ಶಿವಗಂಗೆ ಬೆಟ್ಟದಲಲಿ ಟ್ರೆಕ್ಕಿಂಗ್‌ಗೆ ತೆರಳಿ ನಾಪತ್ತೆಯಾಗಿದ್ದ ಟೆಕ್ಕಿ ಟದ್ವೈತ್‌ಗಾಗಿ ನಡೆಸುತ್ತಿದ್ದ ಶೋಧ ಕಾರ್ಯಾಚರಣೆಗೆ…

10 hours ago

ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್.ಪಾಟೀಲ್‌ ಅವಿರೋಧ ಆಯ್ಕೆ

ಬೆಂಗಳೂರು: ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್.ಪಾಟೀಲ್‌ ಸರ್ವಾನುಮತದಿಂದ ಆಯ್ಕೆಯಾದರು. ಸಂಪ್ರದಾಯದಂತೆ ವಿಪಕ್ಷ ನಾಯಕ ಆರ್.‌ಅಶೋಕ್‌ ಹಾಗೂ ಸಿಎಂ ಡಿ.ಕೆ.ಶಿವಕುಮಾರ್‌…

11 hours ago

ಉತ್ತರಾಖಂಡದಲ್ಲಿ ನಿರ್ಮಾಣ ಹಂತದ ಸುರಂಗಕ್ಕೆ ನುಗ್ಗಿದ ನೀರು: 7 ಮಂದಿ ಕಾರ್ಮಿಕರು ಸಾವು

ಡೆಹ್ರಾಡೂನ್:‌ ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್‌ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…

12 hours ago