ಮೈಸೂರು

ಸಿಎಂ ಕ್ಷೇತ್ರದಲ್ಲಿನ ಸಮಸ್ಯೆ ಬಗೆಹರಿಸಿ : ಅಧಿಕಾರಿಗಳಿಗೆ ಯತೀಂದ್ರ ಸೂಚನೆ

ನಂಜನಗೂಡು : ಮುಖ್ಯಮಂತ್ರಿ ಸಿದ್ದರಾಮಯ್ಯನವರ ಕ್ಷೇತ್ರದಲ್ಲಿ ಕೆಲಸ ಮಾಡುತ್ತಿರುವ ಅಧಿಕಾರಿಗಳು ಸಾರ್ವಜನಿಕರ ಸಮಸ್ಯೆಗಳನ್ನು ಆಲಿಸಿ ಆದಷ್ಟು ಬೇಗ ಸಮಸ್ಯೆಗಳಿಗೆ ಸ್ಪಂದಿಸುವ ಕೆಲಸ ಮಾಡಬೇಕು ಎಂದು ಅಧಿಕಾರಿಗಳಿಗೆ ವಿಧಾನಪರಿಷತ್ ಸದಸ್ಯ ಡಾ.ಯತೀಂದ್ರ ಸಿದ್ದರಾಮಯ್ಯ ಖಡಕ್ ಸೂಚನೆ ನೀಡಿದರು.

ವರುಣ ವಿಧಾನಸಭಾ ಕ್ಷೇತ್ರದ ನಂಜನಗೂಡು ತಾಲ್ಲೂಕಿನ ಕೋಣನೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೋಣನೂರು, ಕೋಣನಪುರ, ಕೋಣನೂರು ಪಾಳ್ಯ, ಮರಳ್ಳಿಪುರ, ಪಿ.ಮರಹಳ್ಳಿ , ಹನುಮನಪುರ ಗ್ರಾಮಗಳಲ್ಲಿ ವಿಧಾನಸಭಾ ಪರಿಷತ್ ಸದಸ್ಯ ಡಾ.ಯತೀಂದ್ರ ಸಿದ್ದರಾಮಯ್ಯ ಜನ ಸಂಪರ್ಕ ಸಭೆಯನ್ನು ನಡೆಸಿ, ಸ್ಥಳದಲ್ಲಿಯೇ ಗ್ರಾಮಸ್ಥರ ಅಹವಾಲು ಸ್ವೀಕರಿಸಿ ಮಾತನಾಡಿದರು.

ಹಲವು ದಿನಗಳಿಂದ ಜನ ಸಂಪರ್ಕ ಸಭೆಯನ್ನು ನಡೆಸಲು ಆಗಿರಲಿಲ್ಲ. ಜನರ ಸಮಸ್ಯೆಗಳನ್ನು ಬಗೆಹರಿಸಲು ಎಲ್ಲ ಗ್ರಾಮಗಳಲ್ಲಿ ಜನ ಸಂಪರ್ಕ ಸಭೆಯನ್ನು ಮಾಡುತ್ತಿದ್ದು, ನೇರವಾಗಿ ಜನರಿಗೆ ಸಮಸ್ಯೆಯನ್ನು ಬಗೆಹರಿಸಲು ಪ್ರಾಮಾಣಿಕವಾಗಿ ಪ್ರಯತ್ನ ಮಾಡುತ್ತಿದ್ದೇನೆ. ಸಿಎಂ ಕ್ಷೇತ್ರದಲ್ಲಿ ಕೆಲಸ ಮಾಡುತ್ತಿರುವ ಅಧಿಕಾರಿಗಳು ಎಚ್ಚರಿಕೆಯಿಂದ ಕೆಲಸ ಮಾಡಬೇಕು. ಸಾರ್ವಜನಿಕರು ಯಾವುದೇ ಕೆಲಸ ಕಾರ್ಯಗಳನ್ನು ಕೇಳಿಕೊಂಡು ಕಛೇರಿಗೆ ಬಂದರೆ ಅವರಿಗೆ ಸ್ಪಂದಿಸಿ ಆದಷ್ಟು ಬೇಗ ಅವರ ಕೆಲಸವನ್ನು ಮಾಡಿಕೊಡಬೇಕು. ಕೊಣನೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಗ್ರಾಮಗಳಲ್ಲಿಯೂ ಸ್ಮಶಾನ ಭೂಮಿ ಕಲ್ಪಿಸಲು ಅಧಿಕಾರಿಗಳು ಈ ಕೂಡಲೇ ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದರು.

ಗ್ರಾಮಗಳಲ್ಲಿ ಸಾರಿಗೆ ಬಸ್ ನಿಲ್ಲಿಸುತ್ತಿಲ್ಲ ಇದರಿಂದ ಗ್ರಾಮಸ್ಥರಿಗೆ ಮತ್ತು ವಿದ್ಯಾರ್ಥಿಗಳಿಗೆ ತೊಂದರೆಯಾಗುತ್ತಿದೆ ಎಂದು ಮಹಿಳೆಯರು ಅಳಲನ್ನು ತೋಡಿಕೊಂಡರು. ಇದರಿಂದ ಕೋಪಗೊಂಡ ಡಾ.ಯತೀಂದ್ರ, ಸಾರಿಗೆ ಬಸ್ ಗಳನ್ನು ಕಡ್ಡಾಯವಾಗಿ ನಿಲ್ಲಿಸಬೇಕು ಮತ್ತು ಗ್ರಾಮಗಳಿಗೆ ಸಾರಿಗೆ ಸೌಲಭ್ಯವನ್ನು ಕಲ್ಪಿಸಲು ಅಧಿಕಾರಿಗಳು ಮುಂದಾಗಬೇಕು ಅಲ್ಲದೆ ಬಸ್ ಗಳನ್ನು ನಿಲ್ಲಿಸಬೇಕು ಎಂದು ಘಟಕ ವ್ಯವಸ್ಥಾಪಕರನ್ನು ತರಾಟೆಗೆ ತೆಗೆದುಕೊಂಡರು.

ಇನ್ನೂ ಗ್ರಾಮಗಳ ವ್ಯಾಪ್ತಿಯಲ್ಲಿ ರಸ್ತೆ, ಚರಂಡಿ ನಿರ್ಮಾಣ, ಭವನಗಳ ನಿರ್ಮಾಣ, ದೇವಾಲಯಗಳ ನಿರ್ಮಾಣ ಕಾಮಗಾರಿ ಸೇರಿದಂತೆ ಹಲವು ಅಭಿವೃದ್ಧಿ ಕೆಲಸಗಳನ್ನು ಮಾಡಿಕೊಡಬೇಕು ಎಂದು ಗ್ರಾಮಸ್ಥರು ಮನವಿ ಸಲ್ಲಿಸಿದರು.
ಈ ಸಂದರ್ಭದಲ್ಲಿ ಮೃಗಾಲಯ ಪ್ರಾಧಿಕಾರದ ಅಧ್ಯಕ್ಷ ಹಾಡ್ಯ ರಂಗಸ್ವಾಮಿ, ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಜೆರಾಲ್ಡ್ ರಾಜೇಶ್, ತಹಶೀಲ್ದಾರ್ ಶಿವಕುಮಾರ್ ಕಾಸ್ನೂರು, ಕೋಣನೂರು ಗ್ರಾ.ಪಂ ಅಧ್ಯಕ್ಷ ವಸಂತಕುಮಾರ್, ಮಾಜಿ ಜಿ.ಪಂ ಅಧ್ಯಕ್ಷೆ ಲತಾ ಸಿದ್ದಶೆಟ್ಟಿ, ಮಾಜಿ ಗ್ರಾ.ಪಂ ಅಧ್ಯಕ್ಷ ಗಿರೀಶ್, ಮಾಜಿ ತಾಪಂ ಸದಸ್ಯ ಪದ್ಮನಾಭ, ಕಾಂಗ್ರೆಸ್ ಮುಖಂಡರಾದ ಕೆ.ಎಂ ಬಸವಣ್ಣ, ಚುಂಚನಹಳ್ಳಿ ಪುಟ್ಟಸ್ವಾಮಿ, ಪಿ.ಮರಹಳ್ಳಿ ಮಹೇಶ್, ದಾಸನೂರು ಕಿಶೋರ್, ಪುಟ್ಟರಂಗಯ್ಯ, ಚೇತನ್ ಸೇರಿದಂತೆ ತಾಲ್ಲೂಕು ಮಟ್ಟದ ಅಧಿಕಾರಿಗಳು ಭಾಗವಹಿಸಿದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಸರ್ಕಾರಿ ಶಾಲಾ ಮಕ್ಕಳಿಗೆ ಕಳಪೆ ಶೂ ವಿತರಣೆ: ರಾಜ್ಯ ಸರ್ಕಾರದ ವಿರುದ್ಧ ಶೇ.40 ಕಮಿಷನ್ ಆರೋಪ ಮಾಡಿದ ಆರ್.‌ಅಶೋಕ್‌

ಬೆಂಗಳೂರು: ಸರ್ಕಾರಿ ಶಾಲಾ ಮಕ್ಕಳಿಗೆ ವಿತರಿಸಲಾಗಿರುವ ಶೂಗಳ ಗುಣಮಟ್ಟ ಕಳಪೆಯಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಈ ವಿಚಾರವಾಗಿ ರಾಜ್ಯ ಸರ್ಕಾರದ…

4 hours ago

ಪರಿಸರ ಮಾಲಿನ್ಯ ನಿಯಂತ್ರಣಕ್ಕೆ ಕಟ್ಟುನಿಟ್ಟಿನ ಕ್ರಮ ಕೈಗೊಂಡ ಸರ್ಕಾರ

ಬೆಂಗಳೂರು: ಹಬ್ಬಗಳ ಸೀಸನ್ ಸಮೀಪಿಸುತ್ತಿದ್ದಂತೆ ರಾಜ್ಯ ಸರ್ಕಾರ ಪರಿಸರ ಮಾಲಿನ್ಯ ನಿಯಂತ್ರಣಕ್ಕೆ ಕಠಿಣ ಕ್ರಮಗಳನ್ನು ಕೈಗೊಂಡಿದ್ದು, ಪಿಒಪಿ ಗಣೇಶ ಮೂರ್ತಿಗಳ…

5 hours ago

ರಾಜ್ಯದಲ್ಲಿ ಕೈಕೊಟ್ಟ ಮುಂಗಾರು: ಸಂಕಷ್ಟದತ್ತ ಕೃಷಿ ವಲಯ

ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಮಳೆ ಕೈಕೊಟ್ಟಿರುವ ಪರಿಣಾಮ ಕೃಷಿ ವಲಯ ಮತ್ತೊಂದು ಗಂಭೀರ ಸಂಕಷ್ಟದತ್ತ ಸಾಗುತ್ತಿದೆ. ಸತತ ಮೂರು ವಾರಗಳಿಂದ…

5 hours ago

ಮಳೆ ಕೈಕೊಟ್ಟಿದ್ದಕ್ಕೆ ರಾಜ್ಯದಲ್ಲಿ ತಾಪಮಾನ ಏರಿಕೆ – ಮಳೆಗಾಲದಲ್ಲೇ ಬೇಸಿಗೆಯಂತಹ ಬಿಸಿಲು

ಬೆಂಗಳೂರು: ರಾಜ್ಯದಲ್ಲಿ ಮಳೆ ಪ್ರಮಾಣ ಕಡಿಮೆಯಾಗಿರುವ ಬೆನ್ನಲ್ಲೇ ತಾಪಮಾನ ಏರಿಕೆಯಾಗಿದ್ದು, ಸೆಪ್ಟೆಂಬರ್ ತಿಂಗಳಲ್ಲೂ ಬೇಸಿಗೆಯಂತಹ ಬಿಸಿಲಿನ ವಾತಾವರಣ ಕಂಡುಬರುತ್ತಿದೆ. ಸಾಮಾನ್ಯವಾಗಿ…

5 hours ago

SIR ನೋಟಿಸ್: ವಿಚಾರಣೆಗೆ ತೆರಳುವಾಗ ಈ ದಾಖಲೆಗಳು ನಿಮ್ಮ ಬಳಿ ಇರಲಿ

ಬೆಂಗಳೂರು: SIR ನೋಟಿಸ್‌ಗಳ ವಿಚಾರಣೆ ಅಧಿಕೃತವಾಗಿ ಆರಂಭವಾಗಿದೆ. ವಿಚಾರಣೆಗೆ ಹಾಜರಾಗುವ ವೇಳೆ ಅಗತ್ಯ ದಾಖಲೆಗಳನ್ನು ಕಡ್ಡಾಯವಾಗಿ ಕೊಂಡೊಯ್ಯುವುದು ಮುಖ್ಯವಾಗಿದೆ. ನಿಮ್ಮ…

7 hours ago

ದಸರಾ ಚಿತ್ರೋತ್ಸವ ರದ್ದಾಗದಿರಲಿ

ಮೊದಲ ವಿಶ್ವಕನ್ನಡ ಸಮ್ಮೇಳನದ ಸಿದ್ಧತೆಯ ಸಂದರ್ಭ. ಬರಗಾಲದ ವೇಳೆ ದುಬಾರಿ ವೆಚ್ಚದ ಇಂತಹ ಸಮ್ಮೇಳನ ಅಗತ್ಯ ಇಲ್ಲ ಎಂದು ಇದರ…

12 hours ago