ಮೈಸೂರು

ಮಳೆಹಾನಿಗೆ ತ್ವರಿತವಾಗಿ ಸ್ಪಂದಿಸಿ: ಸಚಿವ ಮಹದೇವಪ್ಪ ಸೂಚನೆ

ಜಿಲ್ಲಾಮಟ್ಟದ ಅಧಿಕಾರಿಗಳ ಸಭೆಯಲ್ಲಿ ಹಲವು ಸಲಹೆ, ಸೂಚನೆ ನೀಡಿದ ಸಚಿವರು

ಮೈಸೂರು : ಈ ಬಾರಿ ಅವಧಿಗೂ ಮುನ್ನ ಮುಂಗಾಳು ಮಳೆಯಾಗುತ್ತಿದ್ದು, ಮಳೆಹಾನಿ ಕುರಿತು ಅಗತ್ಯ ಮುಂಜಾಗ್ರತೆ ಕ್ರಮವಹಿಸಿ ಸಮಸ್ಯೆಯಾದ ವೇಳೆ ಅಧಿಕಾರಿಗಳು ತ್ವರಿತವಾಗಿ ಸ್ಪಂದಿಸಬೇಕು ಎಂದು ಸಮಾಜ ಕಲ್ಯಾಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಹೆಚ್.ಸಿ.ಮಹದೇವಪ್ಪ ಸೂಚಿಸಿದರು.

ನಗರದ ಜಲದರ್ಶಿನಿ ಅತಿಥಿಗೃಹದಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಬುಧವಾರ ಸಭೆ ನಡೆಸಿ ಮಾತನಾಡದಿ ಅವರು, ಉತ್ತಮವಾಗಿ ಮಳೆಯಾಗುತ್ತಿರುವುದರಿಂದ ನೀರಿನ ಸಮಸ್ಯೆ ಬರುವುದಿಲ್ಲ ಎಂದ ಅವರು ಜಲಾಶಯಗಳ ನೀರಿನ ಮಟ್ಟ ಹಾಗೂ ಒಳಹರಿವು ಬಗ್ಗೆ ಮಾಹಿತಿ ಪಡೆದರು. ಮಳೆಯಿಂದಾಗಿ ನಂಜನಗೂಡು ತಾಲ್ಲೂಕಿನಲ್ಲಿ ಆರು ಪ್ರಾಣಿಗಳು ಹಾನಿಗೊಳಗಾಗಿದ್ದು, ಕೂಡಲೇ ಸೂಕ್ತ ಪರಿಹಾರ ದೊರಕಿಸಕೊಡಬೇಕು. 146 ವಿದ್ಯುತ್ ಕಂಬಗಳಿಗೆ ಹಾನಿಯಾಗಿದ್ದು, ಶೀಘ್ರವಾಗಿ ಸರಿಪಡಿಸಬೇಕು ಎಂದರು.

ಅಧಿಕ ಮಳೆಯಾದ ಸಂದರ್ಭದಲ್ಲಿ ನೀರಿನ ಟ್ಯಾಂಕ್ ಹಾಗೂ ಕೊಳವೆ ಬಾವಿಗಳಿಗೆ ಮಳೆ ನೀರು ಹರಿಯುವುದನ್ನು ತಡೆಗಟ್ಟಲು ಕ್ರಮವಹಿಸಬೇಕು. ಯಾವುದೇ ಕಾರಣಕ್ಕೂ ಕುಡಿಯುವ ನೀರು ಕಲುಷಿತವಾಗಬಾರದು ಎಂದು ನಿರ್ದೇಶನ ನೀಡಿದರು.

ನಿರೀಕ್ಷೆಗಿಂತ ಹೆಚ್ಚು ಜಿಲ್ಲೆಯಲ್ಲಿ ಮಳೆಯಾಗುತ್ತಿದ್ದು, ಕೃಷಿ ಚಟುವಟಿಕೆಗಳು ಗರಿಗೆದರುತ್ತಿವೆ. ಈ ಸಂದರ್ಭದಲ್ಲಿ ಬಿತ್ತನೆ ಸಿದ್ಧತೆಯಲ್ಲಿರುವ ರೈತರಿಗೆ ಯಾವುದೇ ಸಮಸ್ಯೆ ಉಂಟಾಗಬಾರದು. ಅಗತ್ಯವಿರುವಷ್ಟು ಬಿತ್ತನಿ ಬೀಜ ಹಾಗೂ ರಸಗೊಬ್ಬರವನ್ನು ಸಮರ್ಪಕವಾಗಿ ವಿತರಿಸಬೇಕು ಎಂದು ಸೂಚನೆ ನೀಡಿದರು.

ಪೊಟಾಸಿಯಂ ಬಳಕೆ ಹೆಚ್ಚಾದಷ್ಟು ಮಣ್ಣಿನ ಫಲವತ್ತತೆಯು ಕಡಿಮೆಯಾಗುತ್ತದೆ. ಇದನ್ನು ಕಡಿಮೆ ಉಪಯೋಗಿಸುವಂತೆ ರೈತರಿಗೆ ಜಾಗೃತಿ ಮೂಡಿಸಬೇಕು ಎಂದು ಸಲಹೆ ನೀಡಿದರು.

ವಾಜಮಂಗಲ, ಸಿಂಧೂವಳ್ಳಿ ಹಾಗೂ ಉಲ್ಲಹಳ್ಳಿಯಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಅಪಮಾನ ಮಾಡಿದಂತಹ ಅಹಿತರ ಘಟನೆಗಳು ಸಂಭವಿಸಬಾರದು. ಈ ಸಂಬಂಧ ಪೊಲೀಸ್ ಇಲಾಖೆಯು ಕಟ್ಟೆಚ್ಚರವಹಿಸಬೇಕು. ಬಾಬಾಸಾಹೇಬರು ಅವರಂತಹ ಮಹನೀಯರನ್ನು ಪ್ರತಿಯೊಬ್ಬರೂ ಗೌರವದಿಂದ ಕಾಣುವಂತೆ ಜಾಗೃತಿ ಮೂಡಿಸಬೇಕು ಎಂದು ತಿಳಿಸಿದರು.

ಯಾರಿಂದಲೂ ಕಾನೂನು ಸುವ್ಯವಸ್ಥೆ ಹಾಳಾಗದಂತೆ ಕ್ರಮವಹಿಸಬೇಕು. ಹೋರಾಟ, ಪ್ರತಿಭಟನೆಗಳು ಕಾನೂನಿನ ಪ್ರಕಾರ ಶಾಂತಿಯುತವಾಗಿ ನಡೆಯಬೇಕು. ಅನಗತ್ಯವಾಗಿ ಕಾನೂನು ಉಲ್ಲಂಘಿಸುವ ಘಟನೆಗಳು ಜರುಗಬಾರದು ಎಂದು ಸೂಚಿಸಿದರು.

ಜಿಲ್ಲೆಯಲ್ಲಿ ಅಲ್ಪಪ್ರಮಾಣದಲ್ಲಿ ಕೋವಿಡ್-19 ಪ್ರಕರಣಗಳ ದಾಖಲಾಗುತ್ತಿವೆ. ಅಗತ್ಯವಿರುವ ಮುಂಜಾಗ್ರತ ಕ್ರಮಗಳನ್ನು ಸಾರ್ವಜನಿಕರು ಅನುಸರಿಸಬೇಕು. ಕೋವಿಡ್ ಲಕ್ಷಣಗಳ ಕಂಡುಬಂದ ಕೂಡಲೇ ಹತ್ತಿರದ ಆಸ್ಪತ್ರೆಯಲ್ಲಿ ಪರೀಕ್ಷೆಗೆ ಒಳಗಾಗಿ ಸೂಕ್ತ ಚಿಕಿತ್ಸೆ ಪಡೆದುಕೊಳ್ಳಬೇಕು ಎಂದು ಹೇಳಿದರು.

ಇಂತಹ ಸಂದರ್ಭದಲ್ಲಿ ಅಧಿಕಾರಿಗಳು ಕಚೇರಿಯಲ್ಲಿ ಕೂರಬಾರದು. ಸಮಸ್ಯೆ ಕಾಣಿಸಿಕೊಂಡ ಸ್ಥಳಕ್ಕೆ ಭೇಟಿ ನೀಡಬೇಕು. ಜನರ ನಡುವೆ ಇದ್ದುಕೊಂಡು ಸರ್ಕಾರವು ನಿಮ್ಮ ಜೊತೆ ಇದೆ ಎಂದು ಧೈರ್ಯ ತುಂಬಬೇಕು ಎಂದು ತಿಳಿಸಿದರು.

ಸಭೆಯಲ್ಲಿ ಜಿಲ್ಲಾಧಿಕಾರಿ ಜಿ.ಲಕ್ಷ್ಮೀಕಾಂತ ರೆಡ್ಡಿ ಅವರು, ನಗರ ಪೊಲೀಸ್ ಆಯುಕ್ತರಾದ ಸೀಮಾ ಲಾಟ್ಕರ್, ನಗರಪಾಲಿಕೆ ಉಪ ಆಯುಕ್ತ ಸೋಮಶೇಖರ್, ಡಿಸಿಪಿ ಕೆ.ಎಸ್.ಸುಂದರ್ ರಾಜ್, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಕಾರ್ಯಪಾಲಕ ಅಭಿಯಂತರರಾದ ಎ.ಎಸ್.ರಂಜಿತ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಕುಮಾರಸ್ವಾಮಿ, ಸೆಸ್ಕ್ ಅಧೀಕ್ಷಕ ಎಂಜಿನಿಯರ್ ಸುನೀಲ್ ಸೇರಿದಂತೆ ಮುಂತಾದ ಅಧಿಕಾರಿಗಳು ಹಾಜರಿದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಫಲ ನೀಡಿದ ಮಾತುಕತೆ : ಹಾರ್ಮುಜ್ ಜಲಸಂಧಿ ದಾಟಿದ ತೈಲ ಟ್ಯಾಂಕರ್‌

ಹೊಸದಿಲ್ಲಿ : ಇರಾನ್-ಅಮೆರಿಕ-ಇಸ್ರೇಲ್ ಸಂಘರ್ಷದ ನಡುವೆ ಹಾರ್ಮುಜ್ ಜಲಸಂಧಿ ಬಂದ್ ಆಗುವ ಆತಂಕದಲ್ಲಿದ್ದ ಭಾರತಕ್ಕೆ ದೊಡ್ಡ ರಾಜತಾಂತ್ರಿಕ ಜಯ ಸಿಕ್ಕಿದೆ.…

17 mins ago

ವೈರಲ್‌ ಹುಡುಗಿ ʻಮೊನಾಲಿಸಾʼ ಮದುವೆಗೆ ತಂದೆ ವಿರೋಧಿಸಿದ್ದೇಕೆ….. ಯಾರಿ ಈ ಹುಡುಗ?

ತಿರುವನಂತಪುರಂ : 2025ರ ಮಹಾಕುಂಭಮೇಳದಲ್ಲಿ ರುದ್ರಾಕ್ಷಿ ಮಾಲೆ ಮಾರುತ್ತಿದ್ದ ವೈರಲ್ ಸ್ಟಾರ್ ಮೊನಾಲಿಸಾ ಭೋಸ್ಲೆ ಅವರು ತಮ್ಮ ಪ್ರಿಯಕರ ಮುಹಮ್ಮದ್…

46 mins ago

32 ವರ್ಷಗಳ ನಂತರ ನಾಗರತ್ನಮ್ಮ ಸ್ಮಾರಕಕ್ಕೆ ಅಭಿವೃದ್ಧಿ ಭಾಗ್ಯ

ಸಿಎಂಗೆ ಶಾಸಕ ಗಣೇಶ್ ಪ್ರಸಾದ್ ಮನವಿ; ಸ್ಮಾರಕ ನಿರ್ಮಾಣಕ್ಕೆ 1 ಕೋಟಿ ರೂ. ಅನುದಾನ • ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ:…

1 hour ago

ದೇಶಾದ್ಯಂತ ಎಸ್ಮಾ ಜಾರಿ : ಗ್ಯಾಸ್‌ ಪೂರೈಕೆಯಲ್ಲಿ ವ್ಯತ್ಯಯವಾದ್ರೆ ಜೈಲು!

ಹೊಸದಿಲ್ಲಿ : ಜಾಗತಿಕ ರಾಜಕೀಯ ವಿದ್ಯಮಾನಗಳು ಮತ್ತು ಮಧ್ಯಪ್ರಾಚ್ಯದಲ್ಲಿ ಹೆಚ್ಚುತ್ತಿರುವ ಯುದ್ಧದ ಭೀತಿಯ ಹಿನ್ನೆಲೆಯಲ್ಲಿ, ಭಾರತ ಸರ್ಕಾರವು ದೇಶದ ಇಂಧನ…

1 hour ago

ಸಫಾರಿಗೆ ಮೊಬೈಲ್‌ ನಿಷೇಧ ; ಪ್ರವಾಸಿಗರ ಬೇಸರ

ವನ್ಯಜೀವಿ ಚಿತ್ರಗಳನ್ನು ಮೊಬೈಲ್‌ನಲ್ಲಿ ಸೆರೆ ಹಿಡಿಯುವ ಅವಕಾಶ ಇಲ್ಲದೆ ಪರಿತಾಪ; ನಿಷೇಧಕ್ಕೆ ಕೆಲವರ ಸಹಮತ • ಚಿರಂಜೀವಿ ಸಿ. ಹುಲ್ಲಹಳ್ಳಿ…

3 hours ago

ಓದುಗರ ಪತ್ರ | ಮೆಜೆಸ್ಟಿಕ್ ಸುಸ್ಥಿರ ನಗರದ ಹೊಸ ದಿಕ್ಕೂಚಿಯಾಗಲಿ

ಬೆಂಗಳೂರಿನ ಹೃದಯಭಾಗದ 32 ಎಕರೆ ವಿಸ್ತೀರ್ಣದಲ್ಲಿ ಪ್ರಾಜೆಕ್ಟ್ ಮೆಜೆಸ್ಟಿಕ್ ಅಡಿಯಲ್ಲಿ ಸಿಂಗಾಪುರ ಮಾದರಿಯ ಇಂಟರ್ ಮಾಡೆಲ್ ಟ್ರಾನ್ಸಿಟ್ ಹಬ್ ನಿರ್ಮಿಸುವ…

4 hours ago