ಮೈಸೂರು

ಮಳೆಹಾನಿಗೆ ತ್ವರಿತವಾಗಿ ಸ್ಪಂದಿಸಿ: ಸಚಿವ ಮಹದೇವಪ್ಪ ಸೂಚನೆ

ಜಿಲ್ಲಾಮಟ್ಟದ ಅಧಿಕಾರಿಗಳ ಸಭೆಯಲ್ಲಿ ಹಲವು ಸಲಹೆ, ಸೂಚನೆ ನೀಡಿದ ಸಚಿವರು

ಮೈಸೂರು : ಈ ಬಾರಿ ಅವಧಿಗೂ ಮುನ್ನ ಮುಂಗಾಳು ಮಳೆಯಾಗುತ್ತಿದ್ದು, ಮಳೆಹಾನಿ ಕುರಿತು ಅಗತ್ಯ ಮುಂಜಾಗ್ರತೆ ಕ್ರಮವಹಿಸಿ ಸಮಸ್ಯೆಯಾದ ವೇಳೆ ಅಧಿಕಾರಿಗಳು ತ್ವರಿತವಾಗಿ ಸ್ಪಂದಿಸಬೇಕು ಎಂದು ಸಮಾಜ ಕಲ್ಯಾಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಹೆಚ್.ಸಿ.ಮಹದೇವಪ್ಪ ಸೂಚಿಸಿದರು.

ನಗರದ ಜಲದರ್ಶಿನಿ ಅತಿಥಿಗೃಹದಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಬುಧವಾರ ಸಭೆ ನಡೆಸಿ ಮಾತನಾಡದಿ ಅವರು, ಉತ್ತಮವಾಗಿ ಮಳೆಯಾಗುತ್ತಿರುವುದರಿಂದ ನೀರಿನ ಸಮಸ್ಯೆ ಬರುವುದಿಲ್ಲ ಎಂದ ಅವರು ಜಲಾಶಯಗಳ ನೀರಿನ ಮಟ್ಟ ಹಾಗೂ ಒಳಹರಿವು ಬಗ್ಗೆ ಮಾಹಿತಿ ಪಡೆದರು. ಮಳೆಯಿಂದಾಗಿ ನಂಜನಗೂಡು ತಾಲ್ಲೂಕಿನಲ್ಲಿ ಆರು ಪ್ರಾಣಿಗಳು ಹಾನಿಗೊಳಗಾಗಿದ್ದು, ಕೂಡಲೇ ಸೂಕ್ತ ಪರಿಹಾರ ದೊರಕಿಸಕೊಡಬೇಕು. 146 ವಿದ್ಯುತ್ ಕಂಬಗಳಿಗೆ ಹಾನಿಯಾಗಿದ್ದು, ಶೀಘ್ರವಾಗಿ ಸರಿಪಡಿಸಬೇಕು ಎಂದರು.

ಅಧಿಕ ಮಳೆಯಾದ ಸಂದರ್ಭದಲ್ಲಿ ನೀರಿನ ಟ್ಯಾಂಕ್ ಹಾಗೂ ಕೊಳವೆ ಬಾವಿಗಳಿಗೆ ಮಳೆ ನೀರು ಹರಿಯುವುದನ್ನು ತಡೆಗಟ್ಟಲು ಕ್ರಮವಹಿಸಬೇಕು. ಯಾವುದೇ ಕಾರಣಕ್ಕೂ ಕುಡಿಯುವ ನೀರು ಕಲುಷಿತವಾಗಬಾರದು ಎಂದು ನಿರ್ದೇಶನ ನೀಡಿದರು.

ನಿರೀಕ್ಷೆಗಿಂತ ಹೆಚ್ಚು ಜಿಲ್ಲೆಯಲ್ಲಿ ಮಳೆಯಾಗುತ್ತಿದ್ದು, ಕೃಷಿ ಚಟುವಟಿಕೆಗಳು ಗರಿಗೆದರುತ್ತಿವೆ. ಈ ಸಂದರ್ಭದಲ್ಲಿ ಬಿತ್ತನೆ ಸಿದ್ಧತೆಯಲ್ಲಿರುವ ರೈತರಿಗೆ ಯಾವುದೇ ಸಮಸ್ಯೆ ಉಂಟಾಗಬಾರದು. ಅಗತ್ಯವಿರುವಷ್ಟು ಬಿತ್ತನಿ ಬೀಜ ಹಾಗೂ ರಸಗೊಬ್ಬರವನ್ನು ಸಮರ್ಪಕವಾಗಿ ವಿತರಿಸಬೇಕು ಎಂದು ಸೂಚನೆ ನೀಡಿದರು.

ಪೊಟಾಸಿಯಂ ಬಳಕೆ ಹೆಚ್ಚಾದಷ್ಟು ಮಣ್ಣಿನ ಫಲವತ್ತತೆಯು ಕಡಿಮೆಯಾಗುತ್ತದೆ. ಇದನ್ನು ಕಡಿಮೆ ಉಪಯೋಗಿಸುವಂತೆ ರೈತರಿಗೆ ಜಾಗೃತಿ ಮೂಡಿಸಬೇಕು ಎಂದು ಸಲಹೆ ನೀಡಿದರು.

ವಾಜಮಂಗಲ, ಸಿಂಧೂವಳ್ಳಿ ಹಾಗೂ ಉಲ್ಲಹಳ್ಳಿಯಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಅಪಮಾನ ಮಾಡಿದಂತಹ ಅಹಿತರ ಘಟನೆಗಳು ಸಂಭವಿಸಬಾರದು. ಈ ಸಂಬಂಧ ಪೊಲೀಸ್ ಇಲಾಖೆಯು ಕಟ್ಟೆಚ್ಚರವಹಿಸಬೇಕು. ಬಾಬಾಸಾಹೇಬರು ಅವರಂತಹ ಮಹನೀಯರನ್ನು ಪ್ರತಿಯೊಬ್ಬರೂ ಗೌರವದಿಂದ ಕಾಣುವಂತೆ ಜಾಗೃತಿ ಮೂಡಿಸಬೇಕು ಎಂದು ತಿಳಿಸಿದರು.

ಯಾರಿಂದಲೂ ಕಾನೂನು ಸುವ್ಯವಸ್ಥೆ ಹಾಳಾಗದಂತೆ ಕ್ರಮವಹಿಸಬೇಕು. ಹೋರಾಟ, ಪ್ರತಿಭಟನೆಗಳು ಕಾನೂನಿನ ಪ್ರಕಾರ ಶಾಂತಿಯುತವಾಗಿ ನಡೆಯಬೇಕು. ಅನಗತ್ಯವಾಗಿ ಕಾನೂನು ಉಲ್ಲಂಘಿಸುವ ಘಟನೆಗಳು ಜರುಗಬಾರದು ಎಂದು ಸೂಚಿಸಿದರು.

ಜಿಲ್ಲೆಯಲ್ಲಿ ಅಲ್ಪಪ್ರಮಾಣದಲ್ಲಿ ಕೋವಿಡ್-19 ಪ್ರಕರಣಗಳ ದಾಖಲಾಗುತ್ತಿವೆ. ಅಗತ್ಯವಿರುವ ಮುಂಜಾಗ್ರತ ಕ್ರಮಗಳನ್ನು ಸಾರ್ವಜನಿಕರು ಅನುಸರಿಸಬೇಕು. ಕೋವಿಡ್ ಲಕ್ಷಣಗಳ ಕಂಡುಬಂದ ಕೂಡಲೇ ಹತ್ತಿರದ ಆಸ್ಪತ್ರೆಯಲ್ಲಿ ಪರೀಕ್ಷೆಗೆ ಒಳಗಾಗಿ ಸೂಕ್ತ ಚಿಕಿತ್ಸೆ ಪಡೆದುಕೊಳ್ಳಬೇಕು ಎಂದು ಹೇಳಿದರು.

ಇಂತಹ ಸಂದರ್ಭದಲ್ಲಿ ಅಧಿಕಾರಿಗಳು ಕಚೇರಿಯಲ್ಲಿ ಕೂರಬಾರದು. ಸಮಸ್ಯೆ ಕಾಣಿಸಿಕೊಂಡ ಸ್ಥಳಕ್ಕೆ ಭೇಟಿ ನೀಡಬೇಕು. ಜನರ ನಡುವೆ ಇದ್ದುಕೊಂಡು ಸರ್ಕಾರವು ನಿಮ್ಮ ಜೊತೆ ಇದೆ ಎಂದು ಧೈರ್ಯ ತುಂಬಬೇಕು ಎಂದು ತಿಳಿಸಿದರು.

ಸಭೆಯಲ್ಲಿ ಜಿಲ್ಲಾಧಿಕಾರಿ ಜಿ.ಲಕ್ಷ್ಮೀಕಾಂತ ರೆಡ್ಡಿ ಅವರು, ನಗರ ಪೊಲೀಸ್ ಆಯುಕ್ತರಾದ ಸೀಮಾ ಲಾಟ್ಕರ್, ನಗರಪಾಲಿಕೆ ಉಪ ಆಯುಕ್ತ ಸೋಮಶೇಖರ್, ಡಿಸಿಪಿ ಕೆ.ಎಸ್.ಸುಂದರ್ ರಾಜ್, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಕಾರ್ಯಪಾಲಕ ಅಭಿಯಂತರರಾದ ಎ.ಎಸ್.ರಂಜಿತ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಕುಮಾರಸ್ವಾಮಿ, ಸೆಸ್ಕ್ ಅಧೀಕ್ಷಕ ಎಂಜಿನಿಯರ್ ಸುನೀಲ್ ಸೇರಿದಂತೆ ಮುಂತಾದ ಅಧಿಕಾರಿಗಳು ಹಾಜರಿದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಆರೋಪದಿಂದ ಮುಕ್ತನಾಗಿ ಹೊರಬರುತ್ತೇನೆ : ಸಚಿವ ನಾಗೇಂದ್ರ ವಿಶ್ವಾಸ

ಬೆಂಗಳೂರು : ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಗರಣದಲ್ಲಿ ದುರುಪಯೋಗವಾಗಿದೆ ಎಂದು ಹೇಳಲಾಗಿದ್ದ 187 ಕೋಟಿ ರೂಪಾಯಿ…

60 mins ago

ಶೂಟೌಟ್‌ ಪ್ರಕರಣ ; ಮೃತರು ಬೇಟೆಗಾರರು ಎಂಬುದಕ್ಕೆ ಮತ್ತಷ್ಟು ಸಾಕ್ಷ್ಯ ಬಿಡುಗಡೆ ಮಾಡಿದ ಅರಣ್ಯ ಇಲಾಖೆ

ಹನೂರು : ಅರಣ್ಯ ಇಲಾಖೆ ಸಿಬ್ಬಂದಿ ಗುಂಡಿಗೆ ಮೂವರು ಬಲಿ ಪ್ರಕರಣಕ್ಕೆ ದಿನಕ್ಕೊಂದು ಟ್ವಿಸ್ಟ್​​ ಸಿಗುತ್ತಿದೆ. ದನ ಹುಡುಕಲು ಹೋಗಿದ್ದವರ…

1 hour ago

ನಕಲಿ ಔಷಧ ಜಾಲ ಪತ್ತೆ ಪ್ರಕರಣ ; ಎಸ್‌ಐಟಿ ತನಿಖೆಗೆ ಆದೇಶ

ಬೆಂಗಳೂರು: ಬೆಂಗಳೂರು ದಕ್ಷಿಣದ ದೊಡ್ಡೇರಿಯಲ್ಲಿ ಬೃಹತ್ ನಕಲಿ ಔಷಧ ಜಾಲ ಪತ್ತೆ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸರ್ಕಾರ ಈ ಪ್ರಕರಣವನ್ನು…

2 hours ago

ಮುಡಾ ಬದಲಿ ನಿವೇಶನಗಳ ಹಂಚಿಕೆ ಆದೇಶ ರದ್ದು ; ಮುಯ್ಯಿಗೆ ಮುಯ್ಯಿ ತೀರಿಸಿಕೊಂಡ ಸಚಿವ ಯತೀಂದ್ರ

ಸದ್ದಿಲ್ಲದೆ ಕೈಗೊಂಡ ತೀರ್ಮಾನಕ್ಕೆ ಬೆಚ್ಚಿದ ರಿಯಲ್‌ ಎಸ್ಟೇಟ್ ಉದ್ಯಮಿಗಳು; ಮೂರು ಪಕ್ಷಗಳಲ್ಲೂ ತಳಮಳ ಕೆ.ಬಿ.ರಮೇಶನಾಯಕ ಮೈಸೂರು : ಕಳೆದ ಎರಡು…

3 hours ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ ; 72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ

ಮೊದಲಬಾರಿಗೆ ರಾಷ್ಟ್ರರಾಜಧಾನಿಯಿಂದ ಹೊರಗೆ ಆಯೋಜನೆ   72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭವು ಇದೇ ಮೊದಲ ಬಾರಿಗೆ ನವದೆಹಲಿಯಿಂದ…

3 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಆಗಸ್ಟ್‌ 21 ಶುಕ್ರವಾರ

6 hours ago