ಮೈಸೂರು

ಗುಣಮಟ್ಟದ ಆಹಾರ ಒದಗಿಸುವುದು ಸರ್ಕಾರ ಹಾಗೂ ಅಧಿಕಾರಿಗಳ ಜವಾಬ್ದಾರಿ – ಡಾ.ಹೆಚ್.ಕೃಷ್ಣ

ರಾಜ್ಯ ಆಹಾರ ಆಯೋಗದ ಸಮಿತಿ ಸಭೆ

ಮೈಸೂರು: ರಾಜ್ಯ ಆಹಾರ ಆಯೋಗದ ಅಧ್ಯಕ್ಷರು ಹಾಗೂ ಸದಸ್ಯರ ತಂಡ ಮೂರು ದಿನಗಳ ಕಾಲ ಜಿಲ್ಲೆಯ ವಿವಿಧೆಡೆ ಸಂಚರಿಸಿ ನ್ಯೂನ್ಯತೆಗಳನ್ನು ಗಮನಿಸುವುದರೊಂದಿಗೆ, ಉತ್ತಮ ಕಾರ್ಯಗಳನ್ನು ಮಾಡಿರುವ ಅಧಿಕಾರಿ ಹಾಗೂ ಸಿಬ್ಬಂದಿಗಳನ್ನು ಶ್ಲಾಘಿಸಿದರು.

ಮೂರು ದಿನಗಳ ಅವಲೋಕನದ ನಂತರ ಶುಕ್ರವಾರ ಜಿಲ್ಲಾಡಳಿತ ಭವನದಲ್ಲಿ ನಡೆದ ಸಭೆಯಲ್ಲಿ ಆಯೋಗದ ಅಧ್ಯಕ್ಷರಾದ ಡಾ.ಹೆಚ್ ಕೃಷ್ಣ ಅವರ ಅಧ್ಯಕ್ಷತೆಯಲ್ಲಿ ಜಿಲ್ಲಾಧಿಕಾರಿ ಸೇರಿದಂತೆ ಸಂಬಂಧಿಸಿದ ಇಲಾಖೆಯ ಅಧಿಕಾರಿಗಳೊಂದಿಗೆ ನಡೆದ ಸಭೆಯಲ್ಲಿ ಆಯೋಗ ಗಮನಿಸಿದ ಅಂಶಗಳನ್ನು ಸಭೆಯಲ್ಲಿ ಪ್ರಸ್ತಾಪಿಸಿ ಸರಿಯಾಗಿ ಕಾರ್ಯನಿರ್ವಹಿಸದ ಅಧಿಕಾರಿಗಳಿಗೆ ಬಿಸಿ ಮುಟ್ಟಿಸುವುದರೊಂದಿಗೆ ನ್ಯೂನ್ಯತೆಗಳನ್ನು ಸರಿಪಡಿಸಿಕೊಳ್ಳಲು ಸೂಚಿಸಿದರು.

ಆಯೋಗದ ಅಧ್ಯಕ್ಷರು ಮಾತನಾಡಿ, ಪ್ರತಿ ಪ್ರಜೆಗೂ ಗುಣಮಟ್ಟದ ಆಹಾರ ಪದಾರ್ಥ ಒದಗಿಸುವುದು ಸರ್ಕಾರ ಹಾಗೂ ನಮ್ಮೆಲ್ಲರ ಜವಾಬ್ದಾರಿ ಇದರೊಂದಿಗೆ ಧ್ವನಿ ಇಲ್ಲದವರು,ಬಡವರು, ರೈತರು, ಮಹಿಳೆಯರು ಮತ್ತು ಮಕ್ಕಳಿಗೆ ಹಾಗೂ ಶ್ರಮಿಕರಿಗೆ ಶಕ್ತಿ ತುಂಬುವ ಕೆಲಸವಾಗಬೇಕು ಎಂದರು.

ಪ್ರಮುಖವಾಗಿ ನ್ಯಾಯಬೆಲೆ ಅಂಗಡಿಗಳಲ್ಲಿ ಜಾಗೃತಿ ಸಮಿತಿಯ ಸದಸ್ಯರುಗಳ ಹೆಸರು, ವಿಳಾಸ, ದೂರವಾಣಿ ನಂಬರ್‌  ಗಳನ್ನು ಪ್ರದರ್ಶಿಸಿರುವುದಿಲ್ಲ. ಇದರಿಂದ ಪಡಿತರದಾರರು ಸಮಸ್ಯೆಗಳನ್ನು ಯಾರ ಬಳಿ ಹೇಳಿಕೊಳ್ಳಬೇಕು?  ಗೋಡಾನ್ನಲ್ಲಿರುವ ದಾಸ್ತಾನಿಗೂ ರಿಜಿಸ್ಟರ್ ನಲ್ಲಿರುವ ಸಂಖ್ಯೆಗಳಿಗೂ ತಾಳೆಯಾಗುತಿಲ್ಲ. ಹುಣಸೂರು ಹಾಗೂ ಕೆ.ಆರ್.ನಗರ ತಾಲೂಕುಗಳ ಕೆಲ ನ್ಯಾಯಬೆಲೆ ಅಂಗಡಿಗಳಲ್ಲಿ ಸಮಿತಿಯ ಸದಸ್ಯರ ಹೆಸರುಗಳೇ ಇಲ್ಲ, ಪಡಿತರವನ್ನು ನಿಗದಿತ ದಿನಗಳಲ್ಲಿ ವಿತರಣೆಯಾಗಬೇಕೆಂದಿದ್ದರೂ ಪಾಲನೆ ಆಗುತಿಲ್ಲ, ಈ ಬಗ್ಗೆ ಪುಡ್ ಇನ್ಸ್ಪೆಕ್ಟರ್ ಗಳು ಸರಿಯಾಗಿ ಕಾರ್ಯ ನಿರ್ವಹಿಸಬೇಕು ಎಂದರು.

ಜಿಲ್ಲಾಧಿಕಾರಿ ಕೆ.ವಿ ರಾಜೇಂದ್ರ ಪ್ರತಿಕ್ರಿಯಿಸಿ ಅಗತ್ಯಕ್ಕಿಂತ ಹೆಚ್ಚು ಸ್ಟಾಕ್ ಇದ್ದರೆ ಅಂತಹವರಿಗೆ ಶೋಕಾಸ್ ನೋಟೀಸ್ ನೀಡಲು ಅಹಾರ ಇಲಾಖೆಯ ಜಂಟಿ ನಿರ್ದೇಶಕರಿಗೆ ಸೂಚಿಸಿ,  ಗೋಡನ್‌ಗಳಿಗೆ ಸಿ.ಸಿ.ಕ್ಯಾಮರಾ ಅಳವಡಿಸಿ ಪಡಿತರ ಎಲ್ಲಾದರು ಬೇರೆಕಡೆ ಹೋಗುತ್ತದೆಯೇ ಗಮನಿಸಿ ಒಂದು ವೇಳೆ ಲೋಪ ಕಂಡುಬಂದಲ್ಲಿ ಪುಡ್ ಇನ್ಸ್ಪೆಕ್ಟರ್ ಗಳ ಮೇಲೆ ಕ್ರಮ ಕೈಗೊಳ್ಳಿ ಎಂದರು.

ಆಯೋಗದ ಸದಸ್ಯ ಸುಮಂತರಾವ್ ಮಾತನಾಡಿ, ಅಂಗನವಾಡಿ ಕೇಂದ್ರಗಳಲ್ಲಿ ಸರಿಯಾಗಿ ಮೊಟ್ಟೆ ವಿತರಣೆ ಆಗುತಿಲ್ಲ, ಮಂಗಳವಾರ ಹಾಗೂ ಶುಕ್ರವಾರ ಮೊಟ್ಟೆ ನೀಡಬೇಕೆಂದಿದ್ದರೂ ನಾವು ಭೇಟಿ ನೀಡಿದ ಮಂಗಳವಾರ ಮೊಟ್ಟೆ ನೀಡಿರುವುದಿಲ್ಲ. ಕೆಲ ಪೆಟ್ರೋಲ್ ಬಂಕ್‌ ಗಳಲ್ಲಿ ಶೌಚಾಲಯದ ವ್ಯವಸ್ಥೆ ಸಮರ್ಪಕವಾಗಿರುವುದಿಲ್ಲ, ಕೆಲವೆಡೆ ಮಾತ್ರ ಸ್ವಚ್ಚತೆ ಕಾಪಾಡಿದ್ದಾರೆ ಎಂದರು.

ಸದಸ್ಯರಾದ ರೋಹಿಣಿ ಪ್ರಿಯ ಮಾತನಾಡಿ, ಬಹುತೇಕ ಹಾಸ್ಟೆಲ್ ಗಳಲ್ಲಿ ಸರಿಯಾದ ಹಾಸಿಗೆ ವ್ಯವಸ್ಥೆಯಿಲ್ಲ ಹಾಗೂ ಹೆಣ್ಣುಮಕ್ಕಳಿಗೆ ಸ್ಯಾನಿಟರಿ ಪ್ಯಾಡ್ಗಳ ವ್ಯವಸ್ಥೆ ಸಮರ್ಪಕವಾಗಿಲ್ಲ, ಮಕ್ಕಳು ಕೀಳರಿಮೆ ಬಿಟ್ಟು, ಈ ಬಗ್ಗೆ ಶಿಕ್ಷಕರೊಂದಿಗೆ ಸಂವಾದಿಸಬೇಕು, ತಕ್ಷಣ ಸಮಸ್ಯೆ ಬಗೆಹರಿಸಲು ಗಮನ ನೀಡಿ ಎಂದರು.

ಹಾಸ್ಟೆಲ್ ಒಂದರಲ್ಲಿ ಶೂ ಮತ್ತು ಸಾಕ್ಸ್ ಸ್ಟಾಕ್ ಇದ್ದರೂ ವಿತರಣೆ ಮಾಡಿಲ್ಲ ಎಂದಾಗ ಜಿಲ್ಲಾಧಿಕಾರಿ ಗಳು ಈ ಬಗೆಗೆ ಇಂದೇ ವರದಿ ನೀಡಿ ಎಂದರು.

ಡಿ.ಬಿ.ಕುಪ್ಪೆಯ ಆಶ್ರಮ ಶಾಲೆಯಲ್ಲಿ ವಿಜ್ಞಾನ ಹಾಗೂ ಗಣಿತ ಶಿಕ್ಷಕರಿಲ್ಲ ಮುಖ್ಯ ಅಡುಗೆಯವರಿಗೆ ಹೆಡ್ ಮಾಸ್ಟರ್ ಚಾರ್ಜ್ ಕೊಟ್ಟಿದ್ದಾರೆ ಎಂದಾಗ ಅಧಿಕಾರಿ ಪ್ರತಿಕ್ರಿಯಿಸಿ ಅಲ್ಲಿನ ಶಿಕ್ಷಕರು ಯಾರೂ ಪರ್ಮನೆಂಟ್ ಇಲ್ಲದುದರಿಂದ ಅವರಿಗೆ ಪ್ರಭಾರ ನೀಡಲಾಗಿದೆ ಎಂದರು.

ಸಭೆಯಲ್ಲಿ ಆಯೋಗದ ಸದಸ್ಯರುಗಳಾದ ಮಾರುತಿ ಎಂ.ದೊಡ್ಡಲಿಂಗಣ್ಣನವರ್, ಎ.ರೋಹಿಣಿ ಪ್ರಿಯ, ಕೆ.ಎಸ್.ವಿಜಯಲಕ್ಷ್ಮಿ, ಸದಸ್ಯ ಕಾರ್ಯದರ್ಶಿ ಸುಜಾತ ಹೊಸಮನಿ , ಜಿ.ಪಂ ಸಿಇಒ ಕೆ.ಎಂ.ಗಾಯತ್ರಿ, ಆಹಾರ ನಾಗರಿಕ ಸರಬರಾಜು ಇಲಾಖೆಯ ಜಂಟಿ ನಿರ್ದೇಶಕ ರಾದ ಕುಮುದ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳಿದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಅಧಿವೇಶನವನ್ನು ಒಂದು ವಾರ ವಿಸ್ತರಿಸಲು ಮನವಿ : ಸ್ಪೀಕರ್‌ಗೆ ಪತ್ರ ಬರೆದ ಪ್ರತಿಪಕ್ಷ ನಾಯಕ ಆರ್‌.ಅಶೋಕ

ಬೆಳಗಾವಿ : ಉತ್ತರ ಕರ್ನಾಟಕದ ಸಮಸ್ಯೆ, ಕಾನೂನು ಸುವ್ಯವಸ್ಥೆಯಲ್ಲಿ ಲೋಪ ಸೇರಿದಂತೆ ಹಲವಾರು ವಿಷಯಗಳ ಬಗ್ಗೆ ಇನ್ನೂ ದೀರ್ಘ ಚರ್ಚೆ…

7 hours ago

ಮೊಟ್ಟೆಯಲ್ಲಿ ಕ್ಯಾನ್ಸರ್‌ ಅಂಶ : ವರದಿ ನೀಡಲು ಸೂಚಿಸಿದ ಆರೋಗ್ಯ ಇಲಾಖೆ

ಬೆಳಗಾವಿ : ಮೊಟ್ಟೆಯಲ್ಲಿ ಕ್ಯಾನ್ಸರ್‌ಕಾರಕ ಅಂಶವಿದೆ ಎಂಬ ವಿಚಾರದ ಹಿನ್ನೆಲೆಯಲ್ಲಿ ಪರೀಕ್ಷೆ ಮಾಡಿ ವರದಿ ನೀಡಲು ಇಲಾಖೆಗೆ ಸೂಚಿಸಲಾಗಿದೆ ಎಂದು…

8 hours ago

ಹವಾಮಾನ ವೈಪರೀತ್ಯ : ವಿಮಾನದಲ್ಲೇ ಸಿಲುಕಿದ್ದ ಕರ್ನಾಟಕದ 21 ಶಾಸಕರು ಮತ್ತು 7 ಸಚಿವರು

ಹೊಸದಿಲ್ಲಿ : ದಿಲ್ಲಿಯಲ್ಲಿ ಉಂಟಾದ ದಟ್ಟವಾದ ಹೊಗೆ ಹಾಗೂ ತೀವ್ರ ಹವಾಮಾನ ವೈಪರೀತ್ಯದಿಂದಾಗಿ ಕರ್ನಾಟಕದ 21 ಶಾಸಕರು ಮತ್ತು 7…

9 hours ago

ನ್ಯಾಷನಲ್‌ ಹೆರಾಲ್ಡ್‌ ಪ್ರಕರಣ : ದಿಲ್ಲಿ ಪೊಲೀಸರ ನೋಟಿಸ್‌ಗೆ ಕಾಲಾವಕಾಶ ಕೋರುವೆ ಎಂದ ಡಿಕೆಶಿ

ಹೊಸದಿಲ್ಲಿ : ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಪೊಲೀಸರ ನೋಟೀಸ್ʼಗೆ ಉತ್ತರ ನೀಡಲು ಕಾಲಾವಕಾಶ ಕೋರುವೆ ಎಂದು ಡಿಸಿಎಂ…

9 hours ago

ಆಕಸ್ಮಿಕ ಬೆಂಕಿ : ಯಮಹಾ ಬೈಕ್‌ ಸಾಗಿಸುತ್ತಿದ್ದ ಲಾರಿ ಭಸ್ಮ : ಸುಟ್ಟು ಕರಕಲಾದ 40ಬೈಕ್‌ಗಳು

ಬಳ್ಳಾರಿ : ನಗರದಲ್ಲಿ ಆಕಸ್ಮಿಕ ಬೆಂಕಿ ಅವಘಡ ಸಂಭವಿಸಿ ಲಾರಿಯಲ್ಲಿ ಸಾಗಿಸುತ್ತಿದ್ದ ಯಮಹಾ ಕಂಪನಿಯ 40 ಬೈಕ್‌ಗಳು ಸಂಪೂರ್ಣವಾಗಿ ಸುಟ್ಟು…

9 hours ago

ಆಸ್ಟ್ರೇಲಿಯಾದಲ್ಲಿ ಉಗ್ರರ ದಾಳಿ : ದಿಲ್ಲಿ, ಬೆಂಗಳೂರಿನಲ್ಲಿ ಹೈ ಅಲರ್ಟ್‌

ಬೆಂಗಳೂರು : ಆಸ್ಪ್ರೇಲಿಯಾದ ಬೀಚ್‌ನಲ್ಲಿ ಭಾನುವಾರ ಮಧ್ಯಾಹ್ನ ಭೀಕರ ಗುಂಡಿನ ದಾಳಿ ನಡೆದಿದ್ದು, ಇಬ್ಬರು ಪೊಲೀಸರು ಸೇರಿದಂತೆ 12 ಮಂದಿ…

11 hours ago