ಮೈಸೂರು: ನೌಕರರಿಗೆ ವೃತ್ತಿಯಿಂದ ಮಾತ್ರ ನಿವೃತ್ತಿ ಆಗುತ್ತದೆ ಹೊರತು ಜ್ಞಾನ ಮತ್ತು ಅನುಭವಕ್ಕೆ ಎಂದಿಗೂ ನಿವೃತ್ತಿಯಾಗುವುದಿಲ್ಲ ಎಂದು ಮಾಜಿ ಶಾಸಕ ಎಂ.ಕೆ ಸೋಮಶೇಖರ್ ಅಭಿಪ್ರಾಯಪಟ್ಟರು.
ಕುವೆಂಪು ನಗರದ ಚಿಕ್ಕಮ್ಮಾನಿಕೇತನ ಕಲ್ಯಾಣ ಮಂಟಪದಲ್ಲಿ ಶುಕ್ರವಾರ ನಡೆದ ವಿಶ್ರಾಂತ ಉದ್ಯೋಗಿಗಳ ಸಂಘ(ರಿ.) ಹಾಗೂ ಕರ್ನಾಟಕ ರಾಜ್ಯ ಸರ್ಕಾರಿ ನಿವೃತ್ತ ನೌಕರರ ಸಂಘ (ರಿ.) ದ 2023-24ನೇ ಸಾಲಿನ ವಾರ್ಷಿಕ ಮಹಾಸಭೆಯನ್ನು ಜ್ಯೋತಿ ಬೆಳಗುವ ಮೂಲಕ ವಿದ್ಯುಕ್ತವಾಗಿ ಚಾಲನೆ ನೀಡಿ ಅವರು ಮಾತನಾಡಿದರು.
ನಿವೃತ್ತ ಸರ್ಕಾರಿ ನೌಕರರು ಎಂದರೆ ಹಲವಾರು ವರ್ಷಗಳ ಸುಧೀರ್ಘ ಸೇವೆ ಸಲ್ಲಿಸಿದ ಅನುಭವಿಗಳು. ನಿವೃತ್ತರ ಅನುಭವಗಳು ಇವತ್ತಿನ ನೌಕರರ ಕೆಲಸ ಕಾರ್ಯಗಳಿಗೆ ತಳಹದಿಯಾಗುತ್ತದೆ. ಇವರ ನೌಕರಿಗೆ ವೃತ್ತಿಯಷ್ಟೆ ಹೊರತು ಅವರ ಅನುಭವಕ್ಕಲ್ಲ. ಅವರ ಅನುಭವಗಳನ್ನು ಇತರ ನೌಕರರಿಗೆ ಧಾರೆಯೆರಯ ಬೇಕು ಎಂದರು.
ಸರ್ಕಾರಿ ನೌಕರರು ತಮ್ಮ ವೃತ್ತಿಯುದ್ದಕ್ಕೂ ಇಡೀ ರಾಜ್ಯದ ವಿವಿಧ ಇಲಾಖೆಗಳಲ್ಲಿ, ವಿವಿಧ ಶ್ರೇಣಿಯಲ್ಲಿ ಕರ್ತವ್ಯ ನಿರ್ವಹಿಸಿ ರಾಜ್ಯದ ಸರ್ವತೋಮುಖ ಅಭಿವೃದ್ಧಿಗೆ ಕೊಡುಗೆ ನೀಡಿರುತ್ತಾರೆ. ಈ ಮೂಲಕ ಅವರು ಸಾಕಷ್ಟು ಅನುಭವ ಮತ್ತು ಅರಿವು ಸಂಪಾದಿಸಿರುತ್ತಾರೆ. ನಿವೃತ್ತರ ಸೇವೆ ಒಂದಲ್ಲ ಒಂದು ರೀತಿ ಸಮಾಜಕ್ಕೆ ಸಿಗುತ್ತಿರುತ್ತದೆ ಎಂದು ಹೇಳಿದರು.
ನೌಕರರು ನಿವೃತ್ತಿಯ ನಂತರವೂ ದೈಹಿಕ ಚಟುವಟಿಕೆಗಳನ್ನು ಮಾಡಿಕೊಂಡು ಸಧೃಡ ಆರೋಗ್ಯವನ್ನು ಕಾಯ್ದುಕೊಳ್ಳಬೇಕು ಎಂದು ಸಲಹೆ ನೀಡಿದ ಅವರು ನಿವೃತ್ತರ ಯಾವುದೇ ಸಮಸ್ಯೆಗಳಿಗೆ ದನಿಯಾಗುತ್ತೇನೆ ಎಂದು ಅಭಯ ನೀಡಿದರು.
ಕಾರ್ಯಕ್ರಮದಲ್ಲಿ ಸರ್ಕಾರಿ ನೌಕರರ ಸಂಘದ ಜಿಲ್ಲಾ ಅಧ್ಯಕ್ಷ ಗೋವಿಂದರಾಜು, ವಿಶ್ರಾಂತ ಉದ್ಯೋಗಿಗಳ ಸಂಘದ ಅಧ್ಯಕ್ಷ ಉಮಾಕಾಂತ್.ಬಿ.ಆರ್, ತಾಲೂಕು ಅಧ್ಯಕ್ಷರುಗಳಾದ ಸಣ್ಣಲಿಂಗಪ್ಪ , ಬಾಲಕೃಷ್ಣ, ಜೋಸೆಫ್ ಆರೋಕ್ಯ, ಎಂ.ಮಹದೇವಯ್ಯ, ಶಿವನಂಜೇಗೌಡ, ಗೋವಿಂದೇಗೌಡ ಸೇರಿದಂತೆ ಇನ್ನಿತರರು ಇದ್ದರು.
ಮೈಸೂರು: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ ಹಿರಿಯ, ಅನುಭವಿ, ಹಾಗೂ ವೈಚಾರಿಕ ಪ್ರಜ್ಞೆಯ ಸಮರ್ಥ ದಲಿತ ರಾಜಕಾರಣಿಯಾಗಿದ್ದ ಮಾಜಿ…
ನಾಗಮಂಗಲ : ನಾಲ್ಕನೇ ಬಾರಿ ಸಚಿವರಾದ ನಂತರ ಪ್ರಥಮ ಬಾರಿಗೆ ಸ್ವಕ್ಷೇತ್ರ ನಾಗಮಂಗಲಕ್ಕೆ ಆಗಮಿಸಿದ ಸಚಿವ ಎನ್. ಚಲುವರಾಯಸ್ವಾಮಿ ಅವರಿಗೆ…
ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…
ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…
ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…