ಮೈಸೂರು

ಗ್ರಾಮೀಣ ವೈದ್ಯರುಗಳಿಗೆ ಪುನರ್ ಶಿಕ್ಷಣ ಕಾರ್ಯಗಾರ

ಮೈಸೂರು: ವೈದ್ಯಕೀಯ ಕ್ಷೇತ್ರದಲ್ಲಿ ಶರವೇಗದಲ್ಲಿ ಸಂಶೋಧನೆಗಳು ಜರಗುತ್ತಿದ್ದು, ವೈದ್ಯರುಗಳು ಅವುಗಳನ್ನು ಅಧ್ಯಯನ ಮಾಡಿ ಅದಕ್ಕನುಗುಣವಾಗಿ ತಮ್ಮ ಚಿಕಿತ್ಸಾ ವಿಧಾನಗಳನ್ನು ಅನುಸರಿಸಬೇಕೆಂದು ಸುಯೋಗ್ ಆಸ್ಪತ್ರೆಯ ಅಧ್ಯಕ್ಷ ಡಾ.ಎಸ್.ಪಿ.ಯೋಗಣ್ಣ ಹೇಳಿದರು.

ನಗರದ ಖಾಸಗಿ ಹೋಟೆಲ್‌ನಲ್ಲಿ ಮೈಸೂರಿನ ಸುಯೋಗ್ ಆಸ್ಪತ್ರೆಯ ವತಿಯಿಂದ ಗ್ರಾಮೀಣ ವೈದ್ಯರುಗಳಿಗೆ ಆಯೋಜಿಸಿದ್ದ ಪುನರ್ ಶಿಕ್ಷಣ ಕಾರ್ಯಗಾರವನ್ನು ಉದ್ಘಾಟಿಸಿ ಮಾತನಾಡಿದ ಅವರು, ಸಕ್ಕರೆ ಕಾಯಿಲೆ ಮತ್ತು ಏರು ರಕ್ತ ಒತ್ತಡದ ಕಾಯಿಲೆಗಳನ್ನು ಸೂಕ್ತ ಹಾಗೂ ನಿರಂತರ ಚಿಕಿತ್ಸಾ ವಿಧಾನಗಳಿಂದ ನಿಯಂತ್ರಣದಲ್ಲಿಟ್ಟುಕೊಳ್ಳಬಹುದೇ ವಿನಃ ಸಂಪೂರ್ಣವಾಗಿ ವಾಸಿವಾಡಲು ಸಾಧ್ಯವಿಲ್ಲ ಎಂಬ ವೈಜ್ಞಾನಿಕ ಸತ್ಯವನ್ನು ರೋಗಿಗಳಿಗೆ ವೈದ್ಯರು ಮನವರಿಕೆ ಮಾಡಿಕೊಡಬೇಕೆಂದರು.

ಸಕ್ಕರೆ ಕಾಯಿಲೆಯನ್ನು ಸಂಪೂರ್ಣವಾಗಿ ವಾಸಿವಾಡುತ್ತೇವೆ ಎಂಬ ಹುಸಿ ಜಾಹೀರಾತುಗಳಿಗೆ ಜನಸಾವಾನ್ಯರು ಮಾರುಹೋಗದಂತೆ ವೈದ್ಯರುಗಳು ಜನರಿಗೆ ಮನವರಿಕೆ ಮಾಡಿಕೊಡಬೇಕು.

ಜತೆಗೆ, ರೋಗಿಗಳಿಗೆ ವೈದ್ಯರುಗಳು ಚಿಕಿತ್ಸೆಯನ್ನು ಮಾತ್ರ ನೀಡದೆ ಅವರೊಂದಿಗೆ ಕಾಯಿಲೆಯ ಬಗ್ಗೆ ಚರ್ಚಿಸಿ ಪಾಲಿಸಬೇಕಾದ ಜೀವನಶೈಲಿ ಮತ್ತು ಔಷಧಗಳನ್ನು ಉಪಯೋಗಿಸುವ ವಿಧಿ ವಿಧಾನಗಳನ್ನು ಮನದಟ್ಟು ಮಾಡಿಕೊಡಬೇಕೆಂದು ತಿಳಿಸಿದರು.

ಸುಯೋಗ್ ಆಸ್ಪತ್ರೆಯ ಫಿಜೀಷಿಯನ್ ಡಾ.ಅಭಿಷೇಕ್ ಅವರು, ಏರು ರಕ್ತ ಒತ್ತಡದ ನಿುಯಂತ್ರಣದ ಬಗ್ಗೆ, ಸುಯೋಗ್ ಆಸ್ಪತ್ರೆಯ ಸಕ್ಕರೆ ಕಾಯಿಲೆ ತಜ್ಞ ಡಾ.ಅಭಿಲಾಶ್ ಅವರು, ಸಕ್ಕರೆ ಕಾಯಿಲೆಯ ಚಿಕಿತ್ಸಾ ವಿಧಾನಗಳ ಬಗ್ಗೆ ಉಪನ್ಯಾಸ ನೀಡಿದರು. ಕಾರ್ಯಗಾರದಲ್ಲಿ ಸುವಾರು ೧೫೦ ಜನ ಗ್ರಾಮೀಣ ಪ್ರದೇಶದ ವೈದ್ಯರು ಪಾಲ್ಗೊಂಡಿದ್ದರು.

ಸುಯೋಗ್ ಆಸ್ಪತ್ರೆಯ ವ್ಯವಸ್ಥಾಪಕ ನಿರ್ದೇಶಕ ಡಾ.ಸುಯೋಗ್ ಯೋಗಣ್ಣ, ಸುಯೋಗ್ ಆಸ್ಪತ್ರೆುಯ ಉಪ ವೈದ್ಯಕೀಯ ಅಧೀಕ್ಷಕ ಡಾ.ಯೋಗೇಶ್, ಆಸ್ಪತ್ರೆಯ ಜನರಲ್ ಮ್ಯಾನೇಜರ್‌ ಅರುಣ್ ಕುವಾರ್ ಇತರರು ಹಾಜರಿದ್ದರು.

ಎನ್‌ ಎಂ ಪ್ರದ್ಯುಮ್ನ

ಮೈಸೂರು ಜಿಲ್ಲೆಯ ನಂಜನಗೂಡಿನವನಾದ ನಾನು, ಸದ್ಯ ಮೈಸೂರಿನಲ್ಲಿ ನೆಲೆಸಿದ್ದೇನೆ. 2011 ಮೈಸೂರಿನ ಮಹಾರಾಜಾ ಕಾಲೇಜಿನಲ್ಲಿ ಬಿಎ ಪತ್ರಿಕೋದ್ಯಮ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 8 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಮೈಸೂರಿನ ಪಾದೇಶಿಕ ಪತ್ರಿಕೆ ʼಹಲೋ ಮೈಸೂರುʼಯಿಂದ ಪ್ರಾರಂಭಿಸಿ, ಜನಶ್ರೀ(ಟಿವಿ), ಸಿರಿ(ಟಿವಿ), ವಿಶ್ವವಾಣಿ ಪತ್ರಿಕೆ, ಟಿವಿ-೯(ಟಿವಿ) ಸಂಸ್ಥೆಗಳಲ್ಲಿ ವರದಿಗಾರ, ಮುಖ್ಯ ವರದಿಗಾರ ಹಾಗೂ ಉಪ ಸಂಪಾದಕನಾಗಿ ಕೆಲಸ ಮಾಡಿದ್ದೇನೆ. ಪ್ರಿಂಟ್‌ ಮೀಡಿಯಾದಲ್ಲಿ 6 ವರ್ಷ ಹಾಗೂ ಎಲೆಕ್ಟ್ರಾನಿಕ್‌ ಮೀಡಿಯಾದಲ್ಲಿ 2 ವರ್ಷಗಳ ಕಾಲ ಅನುಭವ ಹೊಂದಿದ್ದು, ಸದ್ಯ ಮೈಸೂರಿನ ʼಆಂದೋಲನ ದಿನಪತ್ರಿಕೆʼಯ ಭಾಗವಾದ ʼಆಂದೋಲನ ಡಿಜಿಟಲ್‌ʼನಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ವೈಲ್ಡ್‌ಲೈಫ್‌ ಫೋಟೋಗ್ರಫಿ, ಪುಸ್ತಕ ಓದುವುದು ನನ್ನ ನೆಚ್ಚಿನ ಹವ್ಯಾಸಗಳಾಗಿವೆ.

Recent Posts

ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಜೀವ ರಕ್ಷಕ ಔಷಧಿಗಳ ಕೊರತೆಯಿದೆ: ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌

ಬೆಂಗಳೂರು: ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಜೀವ ರಕ್ಷಕ ಔಷಧಿಗಳ ಕೊರತೆಯಿರುವುದು ನಿಜ ಎಂದು ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ಹೇಳಿದ್ದಾರೆ.…

10 mins ago

ನಟಿ ರನ್ಯಾ ರಾವ್‌ ಪ್ರಕರಣಕ್ಕೆ ರೋಚಕ ಟ್ವಿಸ್ಟ್‌

ಬೆಂಗಳೂರು: ಚಿನ್ನ ಕಳ್ಳಸಾಗಾಣಿಕೆ ಪ್ರಕರಣದಲ್ಲಿ ಸಿಕ್ಕಿಬಿದ್ದಿರುವ ನಟಿ ರನ್ಯಾರಾವ್‌ ಸದ್ಯ ನ್ಯಾಯಾಂಗ ಬಂಧನದಲ್ಲಿದ್ದು, ಡಿಐಆರ್‌ ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದಿದ್ದೇಗೆ ಎಂಬ…

30 mins ago

ಕೌಟುಂಬಿಕ ಕಲಹ: ಕೆರೆಗೆ ಹಾರಿ ತಾಯಿ-ಮಗ ಆತ್ಮಹತ್ಯೆ

ಹಾಸನ: ಕೌಟುಂಬಿಕ ಕಲಹದಿಂದ ಬೇಸತ್ತು ತಾಯಿ-ಮಗ ಕೆರೆಗೆ ಹಾರಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಹಾಸನ ಜಿಲ್ಲೆ ಚನ್ನರಾಯಪಟ್ಟಣ ತಾಲ್ಲೂಕಿನ ಕಬ್ಬಳ್ಳಿ…

53 mins ago

ಗ್ರೇಟರ್‌ ಬೆಂಗಳೂರು ವಿಧೇಯಕಕ್ಕೆ ಎಚ್.ಡಿ.ಕುಮಾರಸ್ವಾಮಿ ವಿರೋಧ

ಬೆಂಗಳೂರು: ಗ್ರೇಟರ್‌ ಬೆಂಗಳೂರು ವಿಧೇಯಕಕ್ಕೆ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಸಂಪೂರ್ಣ ವಿರೋಧ ವ್ಯಕ್ತಪಡಿಸಿದ್ದು, ಕಾಂಗ್ರೆಸ್‌ ಸರ್ಕಾರದ ವಿರುದ್ಧ ಹರಿಹಾಯ್ದಿದ್ದಾರೆ. ಈ…

1 hour ago

ಓದುಗರ ಪತ್ರ: ಸಮತೋಲನದ ಬಜೆಟ್!…

ಸಮತೋಲನದ ಬಜೆಟ್!... ಮೂಡಿ ಬಂದಿದೆ ಸರ್ವರ ಹಿತ ಏಳ್ಗೆಯ ಕರ್ನಾಟಕದ ಮಾದರಿ ಜನಪರ ಬಜೆಟ್! ಮುಖ್ಯಮಂತ್ರಿಗಳ ಅನುಭವದ ಮೂಸೆಯಲಿ ಸುಸ್ಥಿರ…

4 hours ago

ಓದುಗರ ಪತ್ರ: ಸಿನಿಮಾ ಟಿಕೆಟ್ ದರ ನಿಗದಿ ಸ್ವಾಗತಾರ್ಹ

ಮುಖ್ಯಮಂತ್ರಿ ಸಿದ್ದರಾಮಯ್ಯನವರು ೧೬ನೇ ಬಜೆಟ್ ಮಂಡನೆ ವೇಳೆ ಸಿನಿಮಾ ಟಿಕೆಟ್ ದರ ನಿಗದಿಯ ಬಗ್ಗೆ ಪ್ರಸ್ತಾಪಿಸಿದ್ದು, ಸಿನಿ ಪ್ರಿಯರಿಗೆ ಸಂತಸ…

4 hours ago