ಮೈಸೂರು

ಗ್ರಾಮೀಣ ವೈದ್ಯರುಗಳಿಗೆ ಪುನರ್ ಶಿಕ್ಷಣ ಕಾರ್ಯಗಾರ

ಮೈಸೂರು: ವೈದ್ಯಕೀಯ ಕ್ಷೇತ್ರದಲ್ಲಿ ಶರವೇಗದಲ್ಲಿ ಸಂಶೋಧನೆಗಳು ಜರಗುತ್ತಿದ್ದು, ವೈದ್ಯರುಗಳು ಅವುಗಳನ್ನು ಅಧ್ಯಯನ ಮಾಡಿ ಅದಕ್ಕನುಗುಣವಾಗಿ ತಮ್ಮ ಚಿಕಿತ್ಸಾ ವಿಧಾನಗಳನ್ನು ಅನುಸರಿಸಬೇಕೆಂದು ಸುಯೋಗ್ ಆಸ್ಪತ್ರೆಯ ಅಧ್ಯಕ್ಷ ಡಾ.ಎಸ್.ಪಿ.ಯೋಗಣ್ಣ ಹೇಳಿದರು.

ನಗರದ ಖಾಸಗಿ ಹೋಟೆಲ್‌ನಲ್ಲಿ ಮೈಸೂರಿನ ಸುಯೋಗ್ ಆಸ್ಪತ್ರೆಯ ವತಿಯಿಂದ ಗ್ರಾಮೀಣ ವೈದ್ಯರುಗಳಿಗೆ ಆಯೋಜಿಸಿದ್ದ ಪುನರ್ ಶಿಕ್ಷಣ ಕಾರ್ಯಗಾರವನ್ನು ಉದ್ಘಾಟಿಸಿ ಮಾತನಾಡಿದ ಅವರು, ಸಕ್ಕರೆ ಕಾಯಿಲೆ ಮತ್ತು ಏರು ರಕ್ತ ಒತ್ತಡದ ಕಾಯಿಲೆಗಳನ್ನು ಸೂಕ್ತ ಹಾಗೂ ನಿರಂತರ ಚಿಕಿತ್ಸಾ ವಿಧಾನಗಳಿಂದ ನಿಯಂತ್ರಣದಲ್ಲಿಟ್ಟುಕೊಳ್ಳಬಹುದೇ ವಿನಃ ಸಂಪೂರ್ಣವಾಗಿ ವಾಸಿವಾಡಲು ಸಾಧ್ಯವಿಲ್ಲ ಎಂಬ ವೈಜ್ಞಾನಿಕ ಸತ್ಯವನ್ನು ರೋಗಿಗಳಿಗೆ ವೈದ್ಯರು ಮನವರಿಕೆ ಮಾಡಿಕೊಡಬೇಕೆಂದರು.

ಸಕ್ಕರೆ ಕಾಯಿಲೆಯನ್ನು ಸಂಪೂರ್ಣವಾಗಿ ವಾಸಿವಾಡುತ್ತೇವೆ ಎಂಬ ಹುಸಿ ಜಾಹೀರಾತುಗಳಿಗೆ ಜನಸಾವಾನ್ಯರು ಮಾರುಹೋಗದಂತೆ ವೈದ್ಯರುಗಳು ಜನರಿಗೆ ಮನವರಿಕೆ ಮಾಡಿಕೊಡಬೇಕು.

ಜತೆಗೆ, ರೋಗಿಗಳಿಗೆ ವೈದ್ಯರುಗಳು ಚಿಕಿತ್ಸೆಯನ್ನು ಮಾತ್ರ ನೀಡದೆ ಅವರೊಂದಿಗೆ ಕಾಯಿಲೆಯ ಬಗ್ಗೆ ಚರ್ಚಿಸಿ ಪಾಲಿಸಬೇಕಾದ ಜೀವನಶೈಲಿ ಮತ್ತು ಔಷಧಗಳನ್ನು ಉಪಯೋಗಿಸುವ ವಿಧಿ ವಿಧಾನಗಳನ್ನು ಮನದಟ್ಟು ಮಾಡಿಕೊಡಬೇಕೆಂದು ತಿಳಿಸಿದರು.

ಸುಯೋಗ್ ಆಸ್ಪತ್ರೆಯ ಫಿಜೀಷಿಯನ್ ಡಾ.ಅಭಿಷೇಕ್ ಅವರು, ಏರು ರಕ್ತ ಒತ್ತಡದ ನಿುಯಂತ್ರಣದ ಬಗ್ಗೆ, ಸುಯೋಗ್ ಆಸ್ಪತ್ರೆಯ ಸಕ್ಕರೆ ಕಾಯಿಲೆ ತಜ್ಞ ಡಾ.ಅಭಿಲಾಶ್ ಅವರು, ಸಕ್ಕರೆ ಕಾಯಿಲೆಯ ಚಿಕಿತ್ಸಾ ವಿಧಾನಗಳ ಬಗ್ಗೆ ಉಪನ್ಯಾಸ ನೀಡಿದರು. ಕಾರ್ಯಗಾರದಲ್ಲಿ ಸುವಾರು ೧೫೦ ಜನ ಗ್ರಾಮೀಣ ಪ್ರದೇಶದ ವೈದ್ಯರು ಪಾಲ್ಗೊಂಡಿದ್ದರು.

ಸುಯೋಗ್ ಆಸ್ಪತ್ರೆಯ ವ್ಯವಸ್ಥಾಪಕ ನಿರ್ದೇಶಕ ಡಾ.ಸುಯೋಗ್ ಯೋಗಣ್ಣ, ಸುಯೋಗ್ ಆಸ್ಪತ್ರೆುಯ ಉಪ ವೈದ್ಯಕೀಯ ಅಧೀಕ್ಷಕ ಡಾ.ಯೋಗೇಶ್, ಆಸ್ಪತ್ರೆಯ ಜನರಲ್ ಮ್ಯಾನೇಜರ್‌ ಅರುಣ್ ಕುವಾರ್ ಇತರರು ಹಾಜರಿದ್ದರು.

ಎನ್‌ ಎಂ ಪ್ರದ್ಯುಮ್ನ

ಮೈಸೂರು ಜಿಲ್ಲೆಯ ನಂಜನಗೂಡಿನವನಾದ ನಾನು, ಸದ್ಯ ಮೈಸೂರಿನಲ್ಲಿ ನೆಲೆಸಿದ್ದೇನೆ. 2011 ಮೈಸೂರಿನ ಮಹಾರಾಜಾ ಕಾಲೇಜಿನಲ್ಲಿ ಬಿಎ ಪತ್ರಿಕೋದ್ಯಮ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 8 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಮೈಸೂರಿನ ಪಾದೇಶಿಕ ಪತ್ರಿಕೆ ʼಹಲೋ ಮೈಸೂರುʼಯಿಂದ ಪ್ರಾರಂಭಿಸಿ, ಜನಶ್ರೀ(ಟಿವಿ), ಸಿರಿ(ಟಿವಿ), ವಿಶ್ವವಾಣಿ ಪತ್ರಿಕೆ, ಟಿವಿ-೯(ಟಿವಿ) ಸಂಸ್ಥೆಗಳಲ್ಲಿ ವರದಿಗಾರ, ಮುಖ್ಯ ವರದಿಗಾರ ಹಾಗೂ ಉಪ ಸಂಪಾದಕನಾಗಿ ಕೆಲಸ ಮಾಡಿದ್ದೇನೆ. ಪ್ರಿಂಟ್‌ ಮೀಡಿಯಾದಲ್ಲಿ 6 ವರ್ಷ ಹಾಗೂ ಎಲೆಕ್ಟ್ರಾನಿಕ್‌ ಮೀಡಿಯಾದಲ್ಲಿ 2 ವರ್ಷಗಳ ಕಾಲ ಅನುಭವ ಹೊಂದಿದ್ದು, ಸದ್ಯ ಮೈಸೂರಿನ ʼಆಂದೋಲನ ದಿನಪತ್ರಿಕೆʼಯ ಭಾಗವಾದ ʼಆಂದೋಲನ ಡಿಜಿಟಲ್‌ʼನಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ವೈಲ್ಡ್‌ಲೈಫ್‌ ಫೋಟೋಗ್ರಫಿ, ಪುಸ್ತಕ ಓದುವುದು ನನ್ನ ನೆಚ್ಚಿನ ಹವ್ಯಾಸಗಳಾಗಿವೆ.

Recent Posts

ತಮಿಳುನಾಡು ಚುನಾವಣೆ: ಎರಡು ಕ್ಷೇತ್ರಗಳಿಂದ ನಟ ವಿಜಯ್‌ ಸ್ಪರ್ಧೆ

ಚೆನ್ನೈ: ಏಪ್ರಿಲ್.23ರಂದು ನಡೆಯಲಿರುವ ತಮಿಳುನಾಡು ವಿಧಾನಸಭಾ ಚುನಾವಣೆಗೆ ಎರಡು ಕ್ಷೇತ್ರಗಳಿಂದ ಸ್ಪರ್ಧೆ ಮಾಡುವುದಾಗಿ ನಟ ವಿಜಯ್‌ ಘೋಷಣೆ ಮಾಡಿದ್ದಾರೆ. ಚೆನ್ನೈನ…

1 min ago

ಹಳ್ಳಿಗಳಲ್ಲಿ ಗೃಹ ಬಳಕೆಯವರಿಗೆ 45 ದಿನಕ್ಕೆ ಒಂದು ಸಿಲಿಂಡರ್:‌ ಸಚಿವ ಮುನಿಯಪ್ಪ

ಬೆಂಗಳೂರು: ಹಳ್ಳಿಗಳಲ್ಲಿ ಗೃಹ ಬಳಕೆಯವರಿಗೆ 45 ದಿನಕ್ಕೆ ಒಂದು ಸಿಲಿಂಡರ್ ಪೂರೈಕೆ ಮಾಡಲಾಗುತ್ತದೆ ಎಂದು ಆಹಾರ ಮತ್ತು ನಾಗರಿಕ ಸರಬರಾಜು…

19 mins ago

ಹನೂರು| ಕಾಡಾನೆ ದಾಳಿ: ಆಟೋ ಜಖಂ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮಂಚಾಪುರ ಗ್ರಾಮದಿಂದ ಒಡೆಯರ ಪಾಳ್ಯ ಗ್ರಾಮಕ್ಕೆ ವ್ಯಾಪಾರ ಮಾಡಲು…

2 hours ago

ಪಶ್ಚಿಮ ಏಷ್ಯಾದಲ್ಲಿ ಹೆಚ್ಚಾದ ಉದ್ವಿಗ್ನತೆ: ಮನ್‌ ಕಿ ಬಾತ್‌ನಲ್ಲಿ ಪ್ರಧಾನಿ ಮೋದಿ ಹೇಳಿದ್ದಿಷ್ಟು.!

ನವದೆಹಲಿ: ಪಶ್ಚಿಮ ಏಷ್ಯಾದಲ್ಲಿ ಉದ್ವಿಗ್ನತೆ ಹೆಚ್ಚುತ್ತಿರುವಂತೆ ಭಾರತೀಯ ನಾಗರಿಕರು ಒಗ್ಗಟ್ಟಾಗಿರುವಂತೆ ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿದ್ದಾರೆ. ಪ್ರಧಾನಿ ನರೇಂದ್ರ…

2 hours ago

ಆರೋಗ್ಯ ಕೇಂದ್ರದ ಮುಂಭಾಗವೇ ವಾಹನಗಳ ಪಾರ್ಕಿಂಗ್:‌ ಸಾರ್ವಜನಿಕರಿಗೆ ಕಿರಿಕಿರಿ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದ ಪ್ರಾಥಮಿಕ ಆರೋಗ್ಯ ಕೇಂದ್ರದ…

2 hours ago

ಹನೂರು: ಸಮರ್ಪಕ ಕುಡಿಯುವ ನೀರು ಪೂರೈಸುವಂತೆ ನಿವಾಸಿಗಳಿಂದ ಪ್ರತಿಭಟನೆ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಹೂಗ್ಯಂ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಭೋವಿ ಸಮುದಾಯದ ಕಾಲೋನಿಗೆ…

2 hours ago