ಮೈಸೂರು

ಗ್ರಾಮೀಣ ವೈದ್ಯರುಗಳಿಗೆ ಪುನರ್ ಶಿಕ್ಷಣ ಕಾರ್ಯಗಾರ

ಮೈಸೂರು: ವೈದ್ಯಕೀಯ ಕ್ಷೇತ್ರದಲ್ಲಿ ಶರವೇಗದಲ್ಲಿ ಸಂಶೋಧನೆಗಳು ಜರಗುತ್ತಿದ್ದು, ವೈದ್ಯರುಗಳು ಅವುಗಳನ್ನು ಅಧ್ಯಯನ ಮಾಡಿ ಅದಕ್ಕನುಗುಣವಾಗಿ ತಮ್ಮ ಚಿಕಿತ್ಸಾ ವಿಧಾನಗಳನ್ನು ಅನುಸರಿಸಬೇಕೆಂದು ಸುಯೋಗ್ ಆಸ್ಪತ್ರೆಯ ಅಧ್ಯಕ್ಷ ಡಾ.ಎಸ್.ಪಿ.ಯೋಗಣ್ಣ ಹೇಳಿದರು.

ನಗರದ ಖಾಸಗಿ ಹೋಟೆಲ್‌ನಲ್ಲಿ ಮೈಸೂರಿನ ಸುಯೋಗ್ ಆಸ್ಪತ್ರೆಯ ವತಿಯಿಂದ ಗ್ರಾಮೀಣ ವೈದ್ಯರುಗಳಿಗೆ ಆಯೋಜಿಸಿದ್ದ ಪುನರ್ ಶಿಕ್ಷಣ ಕಾರ್ಯಗಾರವನ್ನು ಉದ್ಘಾಟಿಸಿ ಮಾತನಾಡಿದ ಅವರು, ಸಕ್ಕರೆ ಕಾಯಿಲೆ ಮತ್ತು ಏರು ರಕ್ತ ಒತ್ತಡದ ಕಾಯಿಲೆಗಳನ್ನು ಸೂಕ್ತ ಹಾಗೂ ನಿರಂತರ ಚಿಕಿತ್ಸಾ ವಿಧಾನಗಳಿಂದ ನಿಯಂತ್ರಣದಲ್ಲಿಟ್ಟುಕೊಳ್ಳಬಹುದೇ ವಿನಃ ಸಂಪೂರ್ಣವಾಗಿ ವಾಸಿವಾಡಲು ಸಾಧ್ಯವಿಲ್ಲ ಎಂಬ ವೈಜ್ಞಾನಿಕ ಸತ್ಯವನ್ನು ರೋಗಿಗಳಿಗೆ ವೈದ್ಯರು ಮನವರಿಕೆ ಮಾಡಿಕೊಡಬೇಕೆಂದರು.

ಸಕ್ಕರೆ ಕಾಯಿಲೆಯನ್ನು ಸಂಪೂರ್ಣವಾಗಿ ವಾಸಿವಾಡುತ್ತೇವೆ ಎಂಬ ಹುಸಿ ಜಾಹೀರಾತುಗಳಿಗೆ ಜನಸಾವಾನ್ಯರು ಮಾರುಹೋಗದಂತೆ ವೈದ್ಯರುಗಳು ಜನರಿಗೆ ಮನವರಿಕೆ ಮಾಡಿಕೊಡಬೇಕು.

ಜತೆಗೆ, ರೋಗಿಗಳಿಗೆ ವೈದ್ಯರುಗಳು ಚಿಕಿತ್ಸೆಯನ್ನು ಮಾತ್ರ ನೀಡದೆ ಅವರೊಂದಿಗೆ ಕಾಯಿಲೆಯ ಬಗ್ಗೆ ಚರ್ಚಿಸಿ ಪಾಲಿಸಬೇಕಾದ ಜೀವನಶೈಲಿ ಮತ್ತು ಔಷಧಗಳನ್ನು ಉಪಯೋಗಿಸುವ ವಿಧಿ ವಿಧಾನಗಳನ್ನು ಮನದಟ್ಟು ಮಾಡಿಕೊಡಬೇಕೆಂದು ತಿಳಿಸಿದರು.

ಸುಯೋಗ್ ಆಸ್ಪತ್ರೆಯ ಫಿಜೀಷಿಯನ್ ಡಾ.ಅಭಿಷೇಕ್ ಅವರು, ಏರು ರಕ್ತ ಒತ್ತಡದ ನಿುಯಂತ್ರಣದ ಬಗ್ಗೆ, ಸುಯೋಗ್ ಆಸ್ಪತ್ರೆಯ ಸಕ್ಕರೆ ಕಾಯಿಲೆ ತಜ್ಞ ಡಾ.ಅಭಿಲಾಶ್ ಅವರು, ಸಕ್ಕರೆ ಕಾಯಿಲೆಯ ಚಿಕಿತ್ಸಾ ವಿಧಾನಗಳ ಬಗ್ಗೆ ಉಪನ್ಯಾಸ ನೀಡಿದರು. ಕಾರ್ಯಗಾರದಲ್ಲಿ ಸುವಾರು ೧೫೦ ಜನ ಗ್ರಾಮೀಣ ಪ್ರದೇಶದ ವೈದ್ಯರು ಪಾಲ್ಗೊಂಡಿದ್ದರು.

ಸುಯೋಗ್ ಆಸ್ಪತ್ರೆಯ ವ್ಯವಸ್ಥಾಪಕ ನಿರ್ದೇಶಕ ಡಾ.ಸುಯೋಗ್ ಯೋಗಣ್ಣ, ಸುಯೋಗ್ ಆಸ್ಪತ್ರೆುಯ ಉಪ ವೈದ್ಯಕೀಯ ಅಧೀಕ್ಷಕ ಡಾ.ಯೋಗೇಶ್, ಆಸ್ಪತ್ರೆಯ ಜನರಲ್ ಮ್ಯಾನೇಜರ್‌ ಅರುಣ್ ಕುವಾರ್ ಇತರರು ಹಾಜರಿದ್ದರು.

ಎನ್‌ ಎಂ ಪ್ರದ್ಯುಮ್ನ

ಮೈಸೂರು ಜಿಲ್ಲೆಯ ನಂಜನಗೂಡಿನವನಾದ ನಾನು, ಸದ್ಯ ಮೈಸೂರಿನಲ್ಲಿ ನೆಲೆಸಿದ್ದೇನೆ. 2011 ಮೈಸೂರಿನ ಮಹಾರಾಜಾ ಕಾಲೇಜಿನಲ್ಲಿ ಬಿಎ ಪತ್ರಿಕೋದ್ಯಮ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 8 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಮೈಸೂರಿನ ಪಾದೇಶಿಕ ಪತ್ರಿಕೆ ʼಹಲೋ ಮೈಸೂರುʼಯಿಂದ ಪ್ರಾರಂಭಿಸಿ, ಜನಶ್ರೀ(ಟಿವಿ), ಸಿರಿ(ಟಿವಿ), ವಿಶ್ವವಾಣಿ ಪತ್ರಿಕೆ, ಟಿವಿ-೯(ಟಿವಿ) ಸಂಸ್ಥೆಗಳಲ್ಲಿ ವರದಿಗಾರ, ಮುಖ್ಯ ವರದಿಗಾರ ಹಾಗೂ ಉಪ ಸಂಪಾದಕನಾಗಿ ಕೆಲಸ ಮಾಡಿದ್ದೇನೆ. ಪ್ರಿಂಟ್‌ ಮೀಡಿಯಾದಲ್ಲಿ 6 ವರ್ಷ ಹಾಗೂ ಎಲೆಕ್ಟ್ರಾನಿಕ್‌ ಮೀಡಿಯಾದಲ್ಲಿ 2 ವರ್ಷಗಳ ಕಾಲ ಅನುಭವ ಹೊಂದಿದ್ದು, ಸದ್ಯ ಮೈಸೂರಿನ ʼಆಂದೋಲನ ದಿನಪತ್ರಿಕೆʼಯ ಭಾಗವಾದ ʼಆಂದೋಲನ ಡಿಜಿಟಲ್‌ʼನಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ವೈಲ್ಡ್‌ಲೈಫ್‌ ಫೋಟೋಗ್ರಫಿ, ಪುಸ್ತಕ ಓದುವುದು ನನ್ನ ನೆಚ್ಚಿನ ಹವ್ಯಾಸಗಳಾಗಿವೆ.

Recent Posts

ರೈತರ ನಿದ್ದೆಗೆಡಿಸಿದ್ದ ಚಿರತೆ ಸೆರೆ : ನಿಟ್ಟುಸಿರು ಬಿಟ್ಟ ಗ್ರಾಮಸ್ಥರು

ಕಿಕ್ಕೇರಿ: ಹೋಬಳಿಯ ಗೊಲ್ಲರಕೊಪ್ಪಲು ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಕಳೆದ ಹಲವು ದಿನಗಳಿಂದ ರೈತರಿಗೆ ಆತಂಕ ಸೃಷ್ಟಿಸಿ ಜಾನುವಾರುಗಳು ಹಾಗೂ ಸಾಕು…

12 hours ago

ಶಿವಶಂಕರಪ್ಪ ಸಾಹುಕಾರ್‌ಗೆ ಹೊಸ ಕಾನೂನು ಸಂಕಷ್ಟ

ಬೆಂಗಳೂರು: ಕೆಪಿಎಸ್‌ಸಿ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ ಅವರನ್ನು ಹುದ್ದೆಯಿಂದ ಅಮಾನತುಗೊಳಿಸಿದ ಬೆನ್ನಲ್ಲೇ ಈ ಹೊಸ ಕಾನೂನು ಸಂಕಷ್ಟ ಎದುರಾಗಿದೆ.…

15 hours ago

ಗೋಪಾಲಸ್ವಾಮಿ ಬೆಟ್ಟ: ಕೊನೆಗೂ ಭಕ್ತರಿಗೆ ಸಿಕ್ಕಿತು ನೆರಳು!

ಬೆಟ್ಟದಲ್ಲಿ ಬಸ್ ನಿಲ್ದಾಣದ ಉದ್ಘಾಟನೆ ನೆರವೇರಿಸಿದ ಶಾಸಕ; ಸಮಸ್ಯೆ ಕುರಿತು ಬೆಳಕು ಚೆಲ್ಲಿದ್ದ ‘ಆಂದೋಲನ’ ಗುಂಡ್ಲುಪೇಟೆ: ತಾಲ್ಲೂಕಿನ ಹಿಮವದ್ ಗೋಪಾಲಸ್ವಾಮಿ…

18 hours ago

ಓದುಗರ ಪತ್ರ: ಅಧ್ಯಾತ್ಮ ದುರಂತ!

ಅಧ್ಯಾತ್ಮ ದುರಂತ! ಲೌಕಿಕ ಬದುಕಿನ ಆಶೆ ಆಮಿಷಗಳ ಸೆರೆಮನೆಯಿಂದ ಬಿಡಿಸಿಕೊಳುವ ಸನ್ಮಾರ್ಗವನು ಅಧ್ಯಾತ್ಮವೆನ್ನುವರು ಪ್ರಾಜ್ಞರು! ಆದರೀಗ ಲೌಕಿಕದ ಆಶೆ ಆಮಿಷಗಳ…

22 hours ago

ಓದುಗರ ಪತ್ರ: ರಸ್ತೆ, ಉದ್ಯಾನಕ್ಕೆ ಎಸ್. ಜಾನಕಿ ಅವರ ಹೆಸರಿಡಿ

ಭಾರತೀಯ ಚಿತ್ರರಂಗದ ಗಾನಕೋಗಿಲೆ ಎಸ್.ಜಾನಕಿ ಅವರ ಸಾಧನೆ ಎಂದೆಂದಿಗೂ ಅಜರಾಮರ. ಅವರ ಹೆಸರನ್ನು ಮುಂದಿನ ಪೀಳಿಗೆಗೂ ಪರಿಚಯಿಸುವ ಮೂಲಕ ಚಿರಸ್ಥಾಯಿಯಾಗಿಸಲು…

22 hours ago

ಓದುಗರ ಪತ್ರ: ಚಾಮರಾಜಪುರಂನಲ್ಲಿ ರೈಲುಗಳ ನಿಲುಗಡೆಯಾಗಲಿ

ಮೈಸೂರಿನ ಅಶೋಕಪುರಂನಿಂದ ಚೆನ್ನೆ ಗೆ ತೆರಳುವ ಚೆನ್ನೆ ನಿಂದ - ಅಶೋಕಪುರಂಗೆ ಆಗಮಿಸುವ ೧೬೫೫೧ ಎಂಜಿಆರ್ ಚೆನ್ನೈಎಕ್ಸ್ ಪ್ರೆಸ್, ೨೦೬೨೪…

22 hours ago