ಮೈಸೂರು

ಗ್ರಾಮೀಣ ವೈದ್ಯರುಗಳಿಗೆ ಪುನರ್ ಶಿಕ್ಷಣ ಕಾರ್ಯಗಾರ

ಮೈಸೂರು: ವೈದ್ಯಕೀಯ ಕ್ಷೇತ್ರದಲ್ಲಿ ಶರವೇಗದಲ್ಲಿ ಸಂಶೋಧನೆಗಳು ಜರಗುತ್ತಿದ್ದು, ವೈದ್ಯರುಗಳು ಅವುಗಳನ್ನು ಅಧ್ಯಯನ ಮಾಡಿ ಅದಕ್ಕನುಗುಣವಾಗಿ ತಮ್ಮ ಚಿಕಿತ್ಸಾ ವಿಧಾನಗಳನ್ನು ಅನುಸರಿಸಬೇಕೆಂದು ಸುಯೋಗ್ ಆಸ್ಪತ್ರೆಯ ಅಧ್ಯಕ್ಷ ಡಾ.ಎಸ್.ಪಿ.ಯೋಗಣ್ಣ ಹೇಳಿದರು.

ನಗರದ ಖಾಸಗಿ ಹೋಟೆಲ್‌ನಲ್ಲಿ ಮೈಸೂರಿನ ಸುಯೋಗ್ ಆಸ್ಪತ್ರೆಯ ವತಿಯಿಂದ ಗ್ರಾಮೀಣ ವೈದ್ಯರುಗಳಿಗೆ ಆಯೋಜಿಸಿದ್ದ ಪುನರ್ ಶಿಕ್ಷಣ ಕಾರ್ಯಗಾರವನ್ನು ಉದ್ಘಾಟಿಸಿ ಮಾತನಾಡಿದ ಅವರು, ಸಕ್ಕರೆ ಕಾಯಿಲೆ ಮತ್ತು ಏರು ರಕ್ತ ಒತ್ತಡದ ಕಾಯಿಲೆಗಳನ್ನು ಸೂಕ್ತ ಹಾಗೂ ನಿರಂತರ ಚಿಕಿತ್ಸಾ ವಿಧಾನಗಳಿಂದ ನಿಯಂತ್ರಣದಲ್ಲಿಟ್ಟುಕೊಳ್ಳಬಹುದೇ ವಿನಃ ಸಂಪೂರ್ಣವಾಗಿ ವಾಸಿವಾಡಲು ಸಾಧ್ಯವಿಲ್ಲ ಎಂಬ ವೈಜ್ಞಾನಿಕ ಸತ್ಯವನ್ನು ರೋಗಿಗಳಿಗೆ ವೈದ್ಯರು ಮನವರಿಕೆ ಮಾಡಿಕೊಡಬೇಕೆಂದರು.

ಸಕ್ಕರೆ ಕಾಯಿಲೆಯನ್ನು ಸಂಪೂರ್ಣವಾಗಿ ವಾಸಿವಾಡುತ್ತೇವೆ ಎಂಬ ಹುಸಿ ಜಾಹೀರಾತುಗಳಿಗೆ ಜನಸಾವಾನ್ಯರು ಮಾರುಹೋಗದಂತೆ ವೈದ್ಯರುಗಳು ಜನರಿಗೆ ಮನವರಿಕೆ ಮಾಡಿಕೊಡಬೇಕು.

ಜತೆಗೆ, ರೋಗಿಗಳಿಗೆ ವೈದ್ಯರುಗಳು ಚಿಕಿತ್ಸೆಯನ್ನು ಮಾತ್ರ ನೀಡದೆ ಅವರೊಂದಿಗೆ ಕಾಯಿಲೆಯ ಬಗ್ಗೆ ಚರ್ಚಿಸಿ ಪಾಲಿಸಬೇಕಾದ ಜೀವನಶೈಲಿ ಮತ್ತು ಔಷಧಗಳನ್ನು ಉಪಯೋಗಿಸುವ ವಿಧಿ ವಿಧಾನಗಳನ್ನು ಮನದಟ್ಟು ಮಾಡಿಕೊಡಬೇಕೆಂದು ತಿಳಿಸಿದರು.

ಸುಯೋಗ್ ಆಸ್ಪತ್ರೆಯ ಫಿಜೀಷಿಯನ್ ಡಾ.ಅಭಿಷೇಕ್ ಅವರು, ಏರು ರಕ್ತ ಒತ್ತಡದ ನಿುಯಂತ್ರಣದ ಬಗ್ಗೆ, ಸುಯೋಗ್ ಆಸ್ಪತ್ರೆಯ ಸಕ್ಕರೆ ಕಾಯಿಲೆ ತಜ್ಞ ಡಾ.ಅಭಿಲಾಶ್ ಅವರು, ಸಕ್ಕರೆ ಕಾಯಿಲೆಯ ಚಿಕಿತ್ಸಾ ವಿಧಾನಗಳ ಬಗ್ಗೆ ಉಪನ್ಯಾಸ ನೀಡಿದರು. ಕಾರ್ಯಗಾರದಲ್ಲಿ ಸುವಾರು ೧೫೦ ಜನ ಗ್ರಾಮೀಣ ಪ್ರದೇಶದ ವೈದ್ಯರು ಪಾಲ್ಗೊಂಡಿದ್ದರು.

ಸುಯೋಗ್ ಆಸ್ಪತ್ರೆಯ ವ್ಯವಸ್ಥಾಪಕ ನಿರ್ದೇಶಕ ಡಾ.ಸುಯೋಗ್ ಯೋಗಣ್ಣ, ಸುಯೋಗ್ ಆಸ್ಪತ್ರೆುಯ ಉಪ ವೈದ್ಯಕೀಯ ಅಧೀಕ್ಷಕ ಡಾ.ಯೋಗೇಶ್, ಆಸ್ಪತ್ರೆಯ ಜನರಲ್ ಮ್ಯಾನೇಜರ್‌ ಅರುಣ್ ಕುವಾರ್ ಇತರರು ಹಾಜರಿದ್ದರು.

ಎನ್‌ ಎಂ ಪ್ರದ್ಯುಮ್ನ

ಮೈಸೂರು ಜಿಲ್ಲೆಯ ನಂಜನಗೂಡಿನವನಾದ ನಾನು, ಸದ್ಯ ಮೈಸೂರಿನಲ್ಲಿ ನೆಲೆಸಿದ್ದೇನೆ. 2011 ಮೈಸೂರಿನ ಮಹಾರಾಜಾ ಕಾಲೇಜಿನಲ್ಲಿ ಬಿಎ ಪತ್ರಿಕೋದ್ಯಮ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 8 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಮೈಸೂರಿನ ಪಾದೇಶಿಕ ಪತ್ರಿಕೆ ʼಹಲೋ ಮೈಸೂರುʼಯಿಂದ ಪ್ರಾರಂಭಿಸಿ, ಜನಶ್ರೀ(ಟಿವಿ), ಸಿರಿ(ಟಿವಿ), ವಿಶ್ವವಾಣಿ ಪತ್ರಿಕೆ, ಟಿವಿ-೯(ಟಿವಿ) ಸಂಸ್ಥೆಗಳಲ್ಲಿ ವರದಿಗಾರ, ಮುಖ್ಯ ವರದಿಗಾರ ಹಾಗೂ ಉಪ ಸಂಪಾದಕನಾಗಿ ಕೆಲಸ ಮಾಡಿದ್ದೇನೆ. ಪ್ರಿಂಟ್‌ ಮೀಡಿಯಾದಲ್ಲಿ 6 ವರ್ಷ ಹಾಗೂ ಎಲೆಕ್ಟ್ರಾನಿಕ್‌ ಮೀಡಿಯಾದಲ್ಲಿ 2 ವರ್ಷಗಳ ಕಾಲ ಅನುಭವ ಹೊಂದಿದ್ದು, ಸದ್ಯ ಮೈಸೂರಿನ ʼಆಂದೋಲನ ದಿನಪತ್ರಿಕೆʼಯ ಭಾಗವಾದ ʼಆಂದೋಲನ ಡಿಜಿಟಲ್‌ʼನಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ವೈಲ್ಡ್‌ಲೈಫ್‌ ಫೋಟೋಗ್ರಫಿ, ಪುಸ್ತಕ ಓದುವುದು ನನ್ನ ನೆಚ್ಚಿನ ಹವ್ಯಾಸಗಳಾಗಿವೆ.

Recent Posts

ಮೈಕ್ರೋ ಫೈನಾನ್ಸ್‌ ಕಿರುಕುಳ: ವ್ಯಕ್ತಿ ಆತ್ಮಹತ್ಯೆ

ಹುಣಸೂರು: ತಾಲೂಕಿನ ನಂಜಾಪುರ ಗ್ರಾಮದಲ್ಲಿ ಖಾಸಗಿ ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಬೇಸತ್ತ ಯುವಕ ಆತ್ಮಹತ್ಯೆಗೆ ಶರಣಾಗಿರುವ ಘಟನೆ ತಾಲೂಕಿನ ನಂಜಾಪುರದಲ್ಲಿ…

2 hours ago

ರಾಜ್ಯದ 101 ತಾಲ್ಲೂಕುಗಳು ಬರ ತಾಲ್ಲೂಕುಗಳೆಂದು ಘೋಷಣೆ: ಡಿಸಿಎಂ ಜಿ.ಪರಮೇಶ್ವರ್‌

ಮೈಸೂರು: ರೈತರಿಗೆ ಬರ ಪರಿಹಾರ ನೀಡುವ ವಿಚಾರವಾಗಿ ಮಾತನಾಡಿರುವ ಡಿಸಿಎಂ ಪರಮೇಶ್ವರ್‌, ರಾಜ್ಯದ 101 ತಾಲೂಕುಗಳನ್ನು ಬರ ತಾಲೂಕುಗಳೆಂದು ಘೋಷಣೆ…

2 hours ago

ಓದುಗರ ಪತ್ರ: ಉಳುವ ‘ಯೋಗಿ’ ಕೂಗಿಗೆ ಸರ್ಕಾರ ತರ್ತಾಗಿ ಸ್ಪಂದಿಸಲಿ

ರಾಜ್ಯದ ೧೭೫ ತಾಲ್ಲೂಕುಗಳು ಭೀಕರ ಬರಕ್ಕೆ ತತ್ತರಿಸಿ, ಶೇಕಡಾ ೮೦ ಕ್ಕೂ ಹೆಚ್ಚು ಬೆಳೆ ನಷ್ಟದಿಂದ ಅನ್ನದಾತರು ಸಂಪೂರ್ಣ ಕಂಗಾಲಾಗಿದ್ದರೂ…

3 hours ago

ಓದುಗರ ಪತ್ರ: ರಾಷ್ಟ್ರಕವಿ ಶ್ಲಾಘನೆಯ ಸ್ಮರಣೆ

೧೯೮೬ರ ಆಗಸ್ಟ್ ೨೯ರಂದು (ಜಗದ್ಗುರು ವೀರಸಿಂಹಾಸನ ಮಹಾಸಂಸ್ಥಾನ ಮಠದ ೨೩ ನೇ ಮಠಾಧಿಪತಿ) ಶಿವರಾತ್ರಿ ರಾಜೇಂದ್ರ ಶ್ರೀಗಳ ಅಮೃತ ಮಹೋತ್ಸವದ…

3 hours ago

ಓದುಗರ ಪತ್ರ: ಸೈಬರ್ ವಂಚನೆ: ಜಾಗೃತಿಯೂ ಫಲ ನೀಡುತ್ತಿಲ್ಲವಲ್ಲ…

ರಾಜ್ಯದಲ್ಲಿ ಸೈಬರ್ ವಂಚನೆ ಪ್ರಕರಣಗಳು ಹೆಚ್ಚುತ್ತಿದ್ದು, ಕಳೆದ ಏಳು ತಿಂಗಳ ಅವಧಿಯಲ್ಲಿ ಸುಮಾರು ರೂ.೬೦೦ ಕೋಟಿಯಷ್ಟು ಹಣ ಸೈಬರ್ ವಂಚಕರ…

3 hours ago

ಸೇವೆ, ಶಿಕ್ಷಣ, ಸಂಸ್ಕಾರದ ಸಂಗಮವಾಗಿದ್ದ ರಾಜೇಂದ್ರ ಶ್ರೀ

ಡಾ.ಕೆ.ಪಿ.ಸಿದ್ಧಲಿಂಗಸ್ವಾಮಿ ಇಂದು ಶ್ರೀ ಶಿವರಾತ್ರಿ ರಾಜೇಂದ್ರ ಸ್ವಾಮೀಜಿ ೧೧೧ನೇ ಜಯಂತಿ ಕೆಲವರು ತಮ್ಮ ಕಾಲದಲ್ಲಿ ಬದುಕುತ್ತಾರೆ; ಕೆಲವರು ತಮ್ಮ ಕಾಲವನ್ನೇ…

6 hours ago