ಮೈಸೂರು: ವೈದ್ಯಕೀಯ ಕ್ಷೇತ್ರದಲ್ಲಿ ಶರವೇಗದಲ್ಲಿ ಸಂಶೋಧನೆಗಳು ಜರಗುತ್ತಿದ್ದು, ವೈದ್ಯರುಗಳು ಅವುಗಳನ್ನು ಅಧ್ಯಯನ ಮಾಡಿ ಅದಕ್ಕನುಗುಣವಾಗಿ ತಮ್ಮ ಚಿಕಿತ್ಸಾ ವಿಧಾನಗಳನ್ನು ಅನುಸರಿಸಬೇಕೆಂದು ಸುಯೋಗ್ ಆಸ್ಪತ್ರೆಯ ಅಧ್ಯಕ್ಷ ಡಾ.ಎಸ್.ಪಿ.ಯೋಗಣ್ಣ ಹೇಳಿದರು.
ನಗರದ ಖಾಸಗಿ ಹೋಟೆಲ್ನಲ್ಲಿ ಮೈಸೂರಿನ ಸುಯೋಗ್ ಆಸ್ಪತ್ರೆಯ ವತಿಯಿಂದ ಗ್ರಾಮೀಣ ವೈದ್ಯರುಗಳಿಗೆ ಆಯೋಜಿಸಿದ್ದ ಪುನರ್ ಶಿಕ್ಷಣ ಕಾರ್ಯಗಾರವನ್ನು ಉದ್ಘಾಟಿಸಿ ಮಾತನಾಡಿದ ಅವರು, ಸಕ್ಕರೆ ಕಾಯಿಲೆ ಮತ್ತು ಏರು ರಕ್ತ ಒತ್ತಡದ ಕಾಯಿಲೆಗಳನ್ನು ಸೂಕ್ತ ಹಾಗೂ ನಿರಂತರ ಚಿಕಿತ್ಸಾ ವಿಧಾನಗಳಿಂದ ನಿಯಂತ್ರಣದಲ್ಲಿಟ್ಟುಕೊಳ್ಳಬಹುದೇ ವಿನಃ ಸಂಪೂರ್ಣವಾಗಿ ವಾಸಿವಾಡಲು ಸಾಧ್ಯವಿಲ್ಲ ಎಂಬ ವೈಜ್ಞಾನಿಕ ಸತ್ಯವನ್ನು ರೋಗಿಗಳಿಗೆ ವೈದ್ಯರು ಮನವರಿಕೆ ಮಾಡಿಕೊಡಬೇಕೆಂದರು.
ಸಕ್ಕರೆ ಕಾಯಿಲೆಯನ್ನು ಸಂಪೂರ್ಣವಾಗಿ ವಾಸಿವಾಡುತ್ತೇವೆ ಎಂಬ ಹುಸಿ ಜಾಹೀರಾತುಗಳಿಗೆ ಜನಸಾವಾನ್ಯರು ಮಾರುಹೋಗದಂತೆ ವೈದ್ಯರುಗಳು ಜನರಿಗೆ ಮನವರಿಕೆ ಮಾಡಿಕೊಡಬೇಕು.
ಜತೆಗೆ, ರೋಗಿಗಳಿಗೆ ವೈದ್ಯರುಗಳು ಚಿಕಿತ್ಸೆಯನ್ನು ಮಾತ್ರ ನೀಡದೆ ಅವರೊಂದಿಗೆ ಕಾಯಿಲೆಯ ಬಗ್ಗೆ ಚರ್ಚಿಸಿ ಪಾಲಿಸಬೇಕಾದ ಜೀವನಶೈಲಿ ಮತ್ತು ಔಷಧಗಳನ್ನು ಉಪಯೋಗಿಸುವ ವಿಧಿ ವಿಧಾನಗಳನ್ನು ಮನದಟ್ಟು ಮಾಡಿಕೊಡಬೇಕೆಂದು ತಿಳಿಸಿದರು.
ಸುಯೋಗ್ ಆಸ್ಪತ್ರೆಯ ಫಿಜೀಷಿಯನ್ ಡಾ.ಅಭಿಷೇಕ್ ಅವರು, ಏರು ರಕ್ತ ಒತ್ತಡದ ನಿುಯಂತ್ರಣದ ಬಗ್ಗೆ, ಸುಯೋಗ್ ಆಸ್ಪತ್ರೆಯ ಸಕ್ಕರೆ ಕಾಯಿಲೆ ತಜ್ಞ ಡಾ.ಅಭಿಲಾಶ್ ಅವರು, ಸಕ್ಕರೆ ಕಾಯಿಲೆಯ ಚಿಕಿತ್ಸಾ ವಿಧಾನಗಳ ಬಗ್ಗೆ ಉಪನ್ಯಾಸ ನೀಡಿದರು. ಕಾರ್ಯಗಾರದಲ್ಲಿ ಸುವಾರು ೧೫೦ ಜನ ಗ್ರಾಮೀಣ ಪ್ರದೇಶದ ವೈದ್ಯರು ಪಾಲ್ಗೊಂಡಿದ್ದರು.
ಸುಯೋಗ್ ಆಸ್ಪತ್ರೆಯ ವ್ಯವಸ್ಥಾಪಕ ನಿರ್ದೇಶಕ ಡಾ.ಸುಯೋಗ್ ಯೋಗಣ್ಣ, ಸುಯೋಗ್ ಆಸ್ಪತ್ರೆುಯ ಉಪ ವೈದ್ಯಕೀಯ ಅಧೀಕ್ಷಕ ಡಾ.ಯೋಗೇಶ್, ಆಸ್ಪತ್ರೆಯ ಜನರಲ್ ಮ್ಯಾನೇಜರ್ ಅರುಣ್ ಕುವಾರ್ ಇತರರು ಹಾಜರಿದ್ದರು.
ಹುಣಸೂರು: ತಾಲೂಕಿನ ನಂಜಾಪುರ ಗ್ರಾಮದಲ್ಲಿ ಖಾಸಗಿ ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಬೇಸತ್ತ ಯುವಕ ಆತ್ಮಹತ್ಯೆಗೆ ಶರಣಾಗಿರುವ ಘಟನೆ ತಾಲೂಕಿನ ನಂಜಾಪುರದಲ್ಲಿ…
ಮೈಸೂರು: ರೈತರಿಗೆ ಬರ ಪರಿಹಾರ ನೀಡುವ ವಿಚಾರವಾಗಿ ಮಾತನಾಡಿರುವ ಡಿಸಿಎಂ ಪರಮೇಶ್ವರ್, ರಾಜ್ಯದ 101 ತಾಲೂಕುಗಳನ್ನು ಬರ ತಾಲೂಕುಗಳೆಂದು ಘೋಷಣೆ…
ರಾಜ್ಯದ ೧೭೫ ತಾಲ್ಲೂಕುಗಳು ಭೀಕರ ಬರಕ್ಕೆ ತತ್ತರಿಸಿ, ಶೇಕಡಾ ೮೦ ಕ್ಕೂ ಹೆಚ್ಚು ಬೆಳೆ ನಷ್ಟದಿಂದ ಅನ್ನದಾತರು ಸಂಪೂರ್ಣ ಕಂಗಾಲಾಗಿದ್ದರೂ…
೧೯೮೬ರ ಆಗಸ್ಟ್ ೨೯ರಂದು (ಜಗದ್ಗುರು ವೀರಸಿಂಹಾಸನ ಮಹಾಸಂಸ್ಥಾನ ಮಠದ ೨೩ ನೇ ಮಠಾಧಿಪತಿ) ಶಿವರಾತ್ರಿ ರಾಜೇಂದ್ರ ಶ್ರೀಗಳ ಅಮೃತ ಮಹೋತ್ಸವದ…
ರಾಜ್ಯದಲ್ಲಿ ಸೈಬರ್ ವಂಚನೆ ಪ್ರಕರಣಗಳು ಹೆಚ್ಚುತ್ತಿದ್ದು, ಕಳೆದ ಏಳು ತಿಂಗಳ ಅವಧಿಯಲ್ಲಿ ಸುಮಾರು ರೂ.೬೦೦ ಕೋಟಿಯಷ್ಟು ಹಣ ಸೈಬರ್ ವಂಚಕರ…
ಡಾ.ಕೆ.ಪಿ.ಸಿದ್ಧಲಿಂಗಸ್ವಾಮಿ ಇಂದು ಶ್ರೀ ಶಿವರಾತ್ರಿ ರಾಜೇಂದ್ರ ಸ್ವಾಮೀಜಿ ೧೧೧ನೇ ಜಯಂತಿ ಕೆಲವರು ತಮ್ಮ ಕಾಲದಲ್ಲಿ ಬದುಕುತ್ತಾರೆ; ಕೆಲವರು ತಮ್ಮ ಕಾಲವನ್ನೇ…