ಮೈಸೂರು

ಜೈಲ್‌ನಿಂದ ಬಿಡುಗಡೆ ಬಳಿಕ ಚಾಮುಂಡೇಶ್ವರಿ ದರ್ಶನ ಪಡೆದ ರೇವಣ್ಣ

ಮೈಸೂರು : ಮಹಿಳೆ ಕಿಡ್ನ್ಯಾಪ್‌ ಪ್ರಕರಣದಲ್ಲಿ ರೇವಣ್ಣ ಅವರಿಗೆ ಜಾಮೀನು ಮಂಜೂರಾಗಿದ್ದು, ಬಿಡುಗಡೆಯಾಗುತ್ತಿದ್ದಂತೆ ಮೈಸೂರಿನ ಚಾಮುಂಡೇಶ್ವರಿಯ ದರ್ಶನ ಪಡೆದಿದ್ದಾರೆ.

ಹಾಸನ ಮಹಿಳೆ ಕಿಡ್ನ್ಯಾಪ್‌ ಕೇಸ್‌ಗೆ ಸಂಬಂಧಿಸಿದಂತೆ ಹಚ್‌.ಡಿ.ರೇವಣ್ಣ ಅವರಿಗೆ ನ್ಯಾಯಾಲಯ ಜಾಮೀನು ನೀಡಿದೆ. ಬಿಡುಗಡೆಗೊಂಡ ರೇವಣ್ಣ ತಂದೆ-ತಾಯಿ ಸೇರಿದಂತೆ ಕುಟುಂಬಸ್ಥರನ್ನು ಭೇಟಿ ಮಾಡಿದ ಬಳಿಕ ಮೈಸೂರಿನ ಚಾಮುಂಡಿಬೆಟ್ಟಕ್ಕೆ ಬಂದು ತಾಯಿ ಚಾಮುಂಡೇಶ್ವರಿಯ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದ್ದಾರೆ.

ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ರೇವಣ್ಣ, ಪ್ರಕರಣ ನ್ಯಾಯಾಲಯದಲ್ಲಿ ಇರುವ ಕಾರಣ ನಾನು ಯಾವುದೇ ಪ್ರತಿಕ್ರಿಯೆ ನೀಡುವುದಿಲ್ಲ. ಎಲ್ಲಾ ತಾಯಿ ಚಾಮುಂಡೇಶ್ವರಿ ನೋಡಿಕೊಳ್ಳುತ್ತಾಲೆ. ನಾನು ದೇವರ ಮೇಲೆ ನಂಬಿಕೆ ಇಟ್ಟಿರುವವನು. ತಾಯಿ ಚಾಮುಂಡೇಶ್ವರಿ ನನಗೆ ನ್ಯಾಯಾ ಕೊಡಿಸುತ್ತಾಳೆ ಎಂಬ ನಂಬಿಕೆ ಇದೆ ಎಂದು ತಿಳಿಸಿದರು.

ಈ ವೇಳೆ ಪುತ್ರ ಪ್ರಜ್ವಲ್‌ ರೇವಣ್ಣ ಅವರ ಹೆಸರಲ್ಲೂ ರೇವಣ್ಣ ವಿಶೇಷ ಪೂಜೆ ಸಲ್ಲಿಸಿದ್ದಾರೆ ಎಂದು ತಿಳಿದುಬಂದಿದೆ.

ಎನ್‌ ಎಂ ಪ್ರದ್ಯುಮ್ನ

ಮೈಸೂರು ಜಿಲ್ಲೆಯ ನಂಜನಗೂಡಿನವನಾದ ನಾನು, ಸದ್ಯ ಮೈಸೂರಿನಲ್ಲಿ ನೆಲೆಸಿದ್ದೇನೆ. 2011 ಮೈಸೂರಿನ ಮಹಾರಾಜಾ ಕಾಲೇಜಿನಲ್ಲಿ ಬಿಎ ಪತ್ರಿಕೋದ್ಯಮ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 8 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಮೈಸೂರಿನ ಪಾದೇಶಿಕ ಪತ್ರಿಕೆ ʼಹಲೋ ಮೈಸೂರುʼಯಿಂದ ಪ್ರಾರಂಭಿಸಿ, ಜನಶ್ರೀ(ಟಿವಿ), ಸಿರಿ(ಟಿವಿ), ವಿಶ್ವವಾಣಿ ಪತ್ರಿಕೆ, ಟಿವಿ-೯(ಟಿವಿ) ಸಂಸ್ಥೆಗಳಲ್ಲಿ ವರದಿಗಾರ, ಮುಖ್ಯ ವರದಿಗಾರ ಹಾಗೂ ಉಪ ಸಂಪಾದಕನಾಗಿ ಕೆಲಸ ಮಾಡಿದ್ದೇನೆ. ಪ್ರಿಂಟ್‌ ಮೀಡಿಯಾದಲ್ಲಿ 6 ವರ್ಷ ಹಾಗೂ ಎಲೆಕ್ಟ್ರಾನಿಕ್‌ ಮೀಡಿಯಾದಲ್ಲಿ 2 ವರ್ಷಗಳ ಕಾಲ ಅನುಭವ ಹೊಂದಿದ್ದು, ಸದ್ಯ ಮೈಸೂರಿನ ʼಆಂದೋಲನ ದಿನಪತ್ರಿಕೆʼಯ ಭಾಗವಾದ ʼಆಂದೋಲನ ಡಿಜಿಟಲ್‌ʼನಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ವೈಲ್ಡ್‌ಲೈಫ್‌ ಫೋಟೋಗ್ರಫಿ, ಪುಸ್ತಕ ಓದುವುದು ನನ್ನ ನೆಚ್ಚಿನ ಹವ್ಯಾಸಗಳಾಗಿವೆ.

Recent Posts

ನಾಳೆಯಿಂದ ಮಡಿಕೇರಿಯಲ್ಲಿ ಕೂರ್ಗ್‌ ಕಾರ್ನಿವಲ್‌

ನವೀನ್ ಡಿಸೋಜ ೨ನೇ ಬಾರಿಗೆ ನಡೆಯುವ ಪ್ರವಾಸಿ ಉತ್ಸವಕ್ಕೆ ಸಿದ್ಧತೆ; ಹೋಟೆಲ್ ಮತ್ತು ರೆಸಾರ್ಟ್ ಅಸೋಸಿಯೇಷನ್ ಸಹಭಾಗಿತ್ವ  ಮಡಿಕೇರಿ: ಡಿ.೨೦…

2 hours ago

ಮುಡಾ ಅಕ್ರಮ : ತೆರೆಗೆ ಸರಿದ ದೇಸಾಯಿ ಆಯೋಗದ ವರದಿ

ಕೆ.ಬಿ.ರಮೇಶನಾಯಕ ಮುಡಾ ಅಕ್ರಮಗಳ ಕುರಿತು ೬ ಸಂಪುಟಗಳಲ್ಲಿ ಸಲ್ಲಿಸಿದ್ದ ವರದಿ ೩೦೦ ನಿವೇಶನಗಳು ಬದಲಿ ನಿವೇಶನಗಳಾಗಿ ಹಂಚಿಕೆ ೫೦:೫೦ ಅನುಪಾತದಡಿ…

2 hours ago

ಗುಂಡ್ಲುಪೇಟೆ | ಉಪಟಳ ನೀಡುತಿದ್ದ ಹುಲಿ ಸೆರೆ ; ಮತ್ತೊಂದು ದರ್ಶನ

ಗುಂಡ್ಲುಪೇಟೆ : ತಾಲ್ಲೂಕಿನ ಬೊಮ್ಮಲಾಪುರ ಬಳಿ ಅನೇಕ ದಿನಗಳಿಂದ ರೈತರಿಗೆ ಉಪಟಳ ನೀಡಿ ಜಾನುವಾರುಗಳ ಮೇಲೆ ದಾಳಿ ನಡೆಸುತ್ತಿದ್ದ ಹುಲಿಯನ್ನು…

14 hours ago

ಬೆಳ್ತಂಗಡಿ | ಮಹೇಶ್‌ ಶೆಟ್ಟಿ ತಿಮರೋಡಿ ಮತ್ತೆ ಗಡಿಪಾರು

ಬೆಳ್ತಂಗಡಿ : ಧರ್ಮಸ್ಥಳ ವಿರುದ್ಧ ಹೋರಾಟ ನಡೆಸುತ್ತಿರುವ ಮಹೇಶ್ ಶೆಟ್ಟಿ ತಿಮರೋಡಿಗೆ ಎರಡನೇ ಬಾರಿಗೆ ಗಡಿಪಾರು ಮಾಡಿ ಪುತ್ತೂರು ಎ.ಸಿ.ಆದೇಶ…

14 hours ago

ಲೋಕಸಭೆ | ವಿಭಾ ಜಿರಾಮ್‌ ಮಸೂದೆ ಅಂಗೀಕಾಋ : ಪ್ರತಿಪಕ್ಷಗಳಿಂದ ಪ್ರತಿ ಹರಿದು ಆಕ್ರೋಶ

ಹೊಸದಿಲ್ಲಿ : ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಅಸ್ತಿತ್ವದಲ್ಲಿರುವ ‘ಮನ್ರೇಗಾ ಯೋಜನೆ’(ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ)ಯಿಂದ…

14 hours ago