ಮೈಸೂರು : ಮಹಿಳೆ ಕಿಡ್ನ್ಯಾಪ್ ಪ್ರಕರಣದಲ್ಲಿ ರೇವಣ್ಣ ಅವರಿಗೆ ಜಾಮೀನು ಮಂಜೂರಾಗಿದ್ದು, ಬಿಡುಗಡೆಯಾಗುತ್ತಿದ್ದಂತೆ ಮೈಸೂರಿನ ಚಾಮುಂಡೇಶ್ವರಿಯ ದರ್ಶನ ಪಡೆದಿದ್ದಾರೆ.
ಹಾಸನ ಮಹಿಳೆ ಕಿಡ್ನ್ಯಾಪ್ ಕೇಸ್ಗೆ ಸಂಬಂಧಿಸಿದಂತೆ ಹಚ್.ಡಿ.ರೇವಣ್ಣ ಅವರಿಗೆ ನ್ಯಾಯಾಲಯ ಜಾಮೀನು ನೀಡಿದೆ. ಬಿಡುಗಡೆಗೊಂಡ ರೇವಣ್ಣ ತಂದೆ-ತಾಯಿ ಸೇರಿದಂತೆ ಕುಟುಂಬಸ್ಥರನ್ನು ಭೇಟಿ ಮಾಡಿದ ಬಳಿಕ ಮೈಸೂರಿನ ಚಾಮುಂಡಿಬೆಟ್ಟಕ್ಕೆ ಬಂದು ತಾಯಿ ಚಾಮುಂಡೇಶ್ವರಿಯ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದ್ದಾರೆ.
ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ರೇವಣ್ಣ, ಪ್ರಕರಣ ನ್ಯಾಯಾಲಯದಲ್ಲಿ ಇರುವ ಕಾರಣ ನಾನು ಯಾವುದೇ ಪ್ರತಿಕ್ರಿಯೆ ನೀಡುವುದಿಲ್ಲ. ಎಲ್ಲಾ ತಾಯಿ ಚಾಮುಂಡೇಶ್ವರಿ ನೋಡಿಕೊಳ್ಳುತ್ತಾಲೆ. ನಾನು ದೇವರ ಮೇಲೆ ನಂಬಿಕೆ ಇಟ್ಟಿರುವವನು. ತಾಯಿ ಚಾಮುಂಡೇಶ್ವರಿ ನನಗೆ ನ್ಯಾಯಾ ಕೊಡಿಸುತ್ತಾಳೆ ಎಂಬ ನಂಬಿಕೆ ಇದೆ ಎಂದು ತಿಳಿಸಿದರು.
ಈ ವೇಳೆ ಪುತ್ರ ಪ್ರಜ್ವಲ್ ರೇವಣ್ಣ ಅವರ ಹೆಸರಲ್ಲೂ ರೇವಣ್ಣ ವಿಶೇಷ ಪೂಜೆ ಸಲ್ಲಿಸಿದ್ದಾರೆ ಎಂದು ತಿಳಿದುಬಂದಿದೆ.
ಕುಶಾಲನಗರ: ಒಂಟಿಸಲಗವೊಂದು ಮನೆ ಬಳಿ ನಿಲ್ಲಿಸಿದ್ದ ಆಟೋ ರಿಕ್ಷಾದ ಮೇಲೆ ದಾಳಿ ನಡೆಸಿ ಜಖಂಗೊಳಿಸಿರುವ ಘಟನೆ ಕುಶಾಲನಗರದ ನೆಲ್ಲಿ ಹುದಿಕೇರಿ…
ಮಾನವಕುಲದ ಒಳಿತಿಗೆ ಪ್ರಾರ್ಥಿಸುವುದು ಅವಶ್ಯ: ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಗಳೂರು: ರಾಜ್ಯದ ಮುಸ್ಲಿಂ ಬಾಂಧವರಿಗೆ ರಂಜಾನ್ ಹಬ್ಬದ ಶುಭಕೋರಿದ ಮುಖ್ಯಮಂತ್ರಿ ಸಿದ್ದರಾಮಯ್ಯ…
ಟೆಹರಾನ್: ಇರಾನ್-ಇಸ್ರೇಲ್ ಸಂಘರ್ಷದ ಮಧ್ಯೆಯೇ ಭಾರತಕ್ಕೆ ಮತ್ತೊಂದು ಗುಡ್ನ್ಯೂಸ್ ಮತ್ತೊಂದು ಗುಡ್ನ್ಯೂಸ್ ಸಿಕ್ಕಿದೆ. ಭಾರತದ ಧ್ವಜವನ್ನು ಹೊಂದಿರುವ ಎರಡು ದ್ರವೀಕೃತ…
ಬೆಂಗಳೂರು: ಬೇಸಿಗೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಇಲ್ಲ ಎಂದು ಸಚಿವ ಪ್ರಿಯಾಂಕ್ ಖರ್ಗೆ ಸ್ಪಷ್ಟನೆ ನೀಡಿದ್ದಾರೆ. ಈ ಕುರಿತು ಮಾತನಾಡಿದ…
ಚಾಮರಾಜನಗರ: ಇರಾನ್-ಇಸ್ರೇಲ್ ನಡುವಿನ ಸಂಘರ್ಷ ಮುಂದುವರಿದಿದ್ದು, ಮಧ್ಯಪ್ರಾಚ್ಯ ರಾಷ್ಟ್ರಗಳಲ್ಲಿ ಪ್ರಕ್ಷುಬ್ಧ ವಾತಾವರಣ ನಿರ್ಮಾಣವಾಗಿರುವ ಪರಿಣಾಮ ಸೋಷಿಯಲ್ ಮೀಡಿಯಾದಲ್ಲಿ ಪೆಟ್ರೋಲ್, ಡೀಸೆಲ್…
ನಂಜನಗೂಡು: ಕೊಟ್ಟಿಗೆಯಲ್ಲಿ ಕಟ್ಟಿ ಹಾಕಿದ್ದ ಕರುವಿನ ಮೇಲೆ ಚಿರತೆ ದಾಳಿ ನಡೆಸಿ ಕೊಂದು ಹಾಕಿರುವ ಘಟನೆ ನಂಜನಗೂಡು ತಾಲ್ಲೂಕಿನ ಹನುಮನಪುರ…