ಮೈಸೂರು

ಕ್ರಾಂತಿಕಾರಿ ಹೋರಾಟಗಾರ ಅಂಬೇಡ್ಕರ್ ವಾದಿ ಮಂಟೇಲಿಂಗಯ್ಯ ನಿಧನ

ಮೈಸೂರು : ಜನಪರ ಹೋರಾಟಗಾರ, ಅಂಬೇಡ್ಕರ್ ವಾದಿ, ವೈಚಾರಿಕ ಚಿಂತಕ, ವಿಚಾರವಾದಿ, ಕ್ರಾಂತಿಕಾರಿ ಮಂಟೇ ಲಿಂಗಯ್ಯ ರವರು ಮೈಸೂರಿನ ಸ್ವಗೃಹದಲ್ಲಿ ಸೋಮವಾರ ಸಂಜೆ ನಿಧನರಾಗಿದ್ದಾರೆ.

ಹಠಾತ್ ಹೃದಯಾಘಾತಕ್ಕೊಳಗಾದ ಹಿನ್ನಲೆಯಲ್ಲಿ ಮಂಟೇಲಿಂಗಯ್ಯ ರವರು ಇಹಲೋಕ ತ್ಯಜಿಸಿದ್ದು, ಕೆಸರೆ ಯಲ್ಲಿರುವ ಅವರ ನಿವಾಸದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದ್ದು, ಮೃತರ ಅಂತ್ಯ ಕ್ರಿಯೆ ಮಂಗಳವಾರ ನಡೆಯಲಿದೆ.

ಬಡ ಜನರ ಪರ ಕಾಳಜಿ ಹೊಂದಿದ್ದ ಮಂಟೇ ಲಿಂಗಯ್ಯ ಜನಸಾಮಾನ್ಯರ ಸಮಸ್ಯೆಗಳಿಗೆ ಸ್ಪಂದಿಸಿ ಹೋರಾಟ ಮಾಡಿದವರಲ್ಲಿ ಮುಂಚೂಣಿಗರು. ಅಧಿಕಾರಸ್ತರು, ಜನಪ್ರತಿನಿಧಿಗಳು ಮತ್ತು ಆಳುವ ಸರ್ಕಾರಕ್ಕೆ ಸಿಂಹ ಸ್ವಪ್ನ ರಾಗಿದ್ದ ಅವರು ಹೋರಾಟದ ಮೂಲಕವೇ ಸಮಾಜವನ್ನು ಎಚ್ಚರಿಸಿದ್ದರು.
ಸದಾ ಕಾಲ ನೊಂದ ಜನರ ಸಂಕಷ್ಟಕ್ಕೆ ಮಿಡಿಯುತ್ತಿದ್ದ ಅವರು ಎಜೆಎಂಎಸ್ ಸಂಘಟನೆ ಹುಟ್ಟು ಹಾಕಿ ಜನಪರ ಚಳವಳಿಯಲ್ಲಿ ಸಕ್ರಿಯರಾಗಿದ್ದರು.

andolanait

Recent Posts

ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ : ಸಿಎಂ ಖಂಡನೆ, ಶಾಂತಿ-ಸೌಹಾರ್ದತೆಗೆ ಮನವಿ

ಬೆಂಗಳೂರು : ಬಾಗಲಕೋಟೆಯ ಹಳೆಯ ನಗರದಲ್ಲಿ ಚತ್ರಪತಿ ಶಿವಾಜಿ ಮಹಾರಾಜ್ ಜಯಂತಿ ಅಂಗವಾಗಿ ನಡೆದ ಭಾವಚಿತ್ರ ಮೆರವಣಿಗೆಯ ವೇಳೆ ನಡೆದ…

1 hour ago

ಮಡಿಕೇರಿ | ಟ್ರಾಕ್ಟರ್ ಮಗುಚಿ ಕಾರ್ಮಿಕ ಸಾವು

ಸಿದ್ದಾಪುರ : ವಾಹನ ಚಲಾಯಿಸುವ ಆಸೆಯಿಂದ ಟ್ರಾಕ್ಟರ್ ಚಲಾಯಿಸಿದ ಕಾರ್ಮಿಕ ನಿಯಂತ್ರಣ ತಪ್ಪಿ ಹಳ್ಳಕ್ಕೆ ಮಗುಚಿದ ಪರಿಣಾಮ ಸ್ಥಳದಲ್ಲೆ ಮೃತ…

2 hours ago

ಬುದನೂರು ಉತ್ಸವ | ಹೆಲಿಕಾಪ್ಟರ್‌ ಜಾಯ್‌ ರೈಡ್‌ಗೆ ಚಾಲನೆ

ಮಂಡ್ಯ : ಜಿಲ್ಲೆಯ ಯುವ ಜನತೆಗೆ ನಗರದ ಚಿತ್ರಣವನ್ನು ಪ್ರದರ್ಶಿಸುವ ನಿಟ್ಟಿನಲ್ಲಿ ಹೆಲಿಕಾಪ್ಟರ್‌ ಜಾಯ್‌ ರೈಡ್‌ಅನ್ನು ಆಯೋಜಿಸಲಗಿದ್ದು, ಮೂರು ದಿನಗಳ…

2 hours ago

ಟಾಕ್ಸಿಕ್ ಟೀಸರ್ ಬಿಡುಗಡೆ : ಡಬಲ್‌ ಲುಕ್‌ನಲ್ಲಿ ಅಬ್ಬರಿಸಿದ ರಾಕಿಂಗ್‌ ಸ್ಟಾರ್ ರಾಯ‌

ಬೆಂಗಳೂರು : ರಾಕಿಂಗ್ ಸ್ಟಾರ್ ಯಶ್ ಅಭಿನಯದ ಟಾಕ್ಸಿಕ್ ಚಿತ್ರದ ಟೀಸರ್ ಇಂದು(ಫೆ.20) ಬಿಡುಗಡೆಯಾಗಿದೆ. 2 ನಿಮಿಷಗಳ ಈ ಟೀಸರ್…

2 hours ago

ಓದುಗರ ಪತ್ರ: ಶಾಲಾ ದಾಖಲಾತಿ ವಯೋಮಿತಿ ಸಮಸ್ಯೆ ನಿವಾರಿಸಿ

ಮಕ್ಕಳನ್ನು ಒಂದನೇ ತರಗತಿಗೆ ಪ್ರಸಕ್ತ ಸಾಲಿಗೆ ದಾಖಲಿಸುವ ವಯೋಮಿತಿಯನ್ನು ಆರು ವರ್ಷಗಳಿಗೆ ನಿಗದಿಗೊಳಿಸಿ ಶಾಲಾ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ.…

7 hours ago

ಓದುಗರ ಪತ್ರ: ಡ್ರಗ್ಸ್ ಜಾಲ ಪತ್ತೆಗೆ ಡ್ರೋನ್ ಕಾರ್ಯಾಚರಣೆ ಶ್ಲಾಘನೀಯ

ಮೈಸೂರಿನಲ್ಲಿ ಸಮಾಜಘಾತುಕ ಶಕ್ತಿಗಳ ದುಷ್ಕೃತ್ಯ ಮತ್ತು ಡ್ರಗ್ಸ್ ಜಾಲ ಪ್ರಕರಣಗಳ ಪತ್ತೆಗೆ ಡ್ರೋನ್ ಕಾರ್ಯಾಚರಣೆ ನಡೆಸಲು ಮೈಸೂರು ನಗರ ಪೊಲೀಸರು…

7 hours ago