ಮೈಸೂರು

ರಸ್ತೆ ವಿವಾದ: ರಾಜಮನೆತನಕ್ಕೆ ಅಪಮಾನ ಮಾಡಲ್ಲ ಎಂದ ಶಾಸಕ ಕೆ. ಹರೀಶ್‌ ಗೌಡ

ಮೈಸೂರು: ರಾಜ ಮನೆತನದ ಇತಿಹಾಸವಿರುವ ಮೈಸೂರಿನ ಕೆಆರ್‌ಎಸ್‌ ರಸ್ತೆಗೆ ಸಿದ್ದರಾಮಯ್ಯ ಅವರ ಹೆಸರಿಡುವ ಸಂಬಂಧ ವಿರೋಧ ವ್ಯಕ್ತವಾಗಿದ್ದು ಯಾವೂದೇ ಕಾರಣಕ್ಕೂ ಮೈಸೂರು ಒಡೆಯರ ಮನೆತನಕ್ಕೆ ಅಪಮಾನ ಮಾಡಲ್ಲ ಎಂದು ಕಾಂಗ್ರೆಸ್‌ ಶಾಸಕ ಹರೀಶ್‌ ಗೌಡ ಹೇಳಿದ್ದಾರೆ.

ಇಂದು (ಜ.6) ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಪ್ರಿನ್ಸೆಸ್‌ ರಸ್ತೆಗೆ ಸಿದ್ದರಾಮಯ್ಯ ಅವರ ಹೆಸರಿಡುವ ವಿಚಾರ ಮೈಸೂರು ಡಿಸಿ ಹಾಗೂ ನಗರ ಪಾಲಿಕೆ ಕಮಿಷನರ್‌ಗೆ ಪತ್ರ ಬರದು ಈ ರಸ್ತೆಯಲ್ಲಿ ಹಲವಾರು ಆಸ್ಪತ್ರೆಗಳು ನಿರ್ಮಾಣವಾಗಿವೆ ಇದಕ್ಕೆ ಸಿದ್ದರಾಮಯ್ಯ ಕಾರಣ ಆದ್ದರಿಂದ ಅವರ ಹೆಸರಿಡಲು ಅನುಮತಿ ನೀಡಬೇಕು ಎಂದು ಮನವಿ ಮಾಡಿದ್ದೆ. ಪಾಲಿಕೆಯಿಂದ ಅನುಮೋದನೆ ಸಿಕ್ಕಿದೆ ಆದರೆ ಕೌನ್ಸಿಲ್‌ನಲ್ಲಿ ಅದು ನಿರ್ಧಾರ ಆಗಿಲ್ಲ ಎಂದರು.

ಈ ಕುರಿತು ಆಕ್ಷೇಪಣೆ ಇದ್ದರೆ ತಿಳಿಸಲು ಪತ್ರಿಕಾ ಪ್ರಕಟಣೆ ನೀಡಲಾಗಿತ್ತು. ಇದಕ್ಕೆ ಸಾಮಾಜಿಕ ಕಾರ್ಯಕರ್ತರು, ಬಿಜೆಪಿ ಸಂಸದ ಯದುವೀರ್‌ ಇನ್ನಿತರರು ಪ್ರಿನ್ಸೆಸ್‌ ರಸ್ತೆಗೆ ಸಿದ್ದರಾಮಯ್ಯ ಅವರ ಹೆಸರಿಡುವುದು ರಾಜ ಮನೆತನಕ್ಕೆ ಮಾಡುವ ಅವಮಾನ ಎಂದು ಆಕ್ಷೇಪಣೆ ಸಲ್ಲಿಸಿದ್ದಾರೆ.

ಇದಕ್ಕೆ ಪ್ರತಿಕ್ರಿಯಿಸದ ಅವರು, ನಾನು ರಾಜಮನೆತನಕ್ಕೆ ಯಾವುದೇ ಅವಮಾನ ಮಾಡುತ್ತಿಲ್ಲ.ಮೈಸೂರು ಮಹಾರಾಜರು ಈ ರಾಜ್ಯಕ್ಕೆ ನೀಡಿರುವ ಕೊಡುಗೆ ಸೂರ್ಯ-ಚಂದ್ರ ಇರುವವರೆಗೂ ಶಾಶ್ವತ ಎಂದು ಹೇಳಿದರು.

ರಸ್ತೆಯ ವಿಚಾರವಾಗಿ ಮಾತನಾಡಿ, ದಾಸಪ್ಪ ವೃತದಿಂದ ಲಕ್ಷ್ಮೀ ವೆಂಕಟರಮಣ ದೇವಸ್ಥಾನದವರೆಗೆ ಮಾತ್ರ ಪ್ರಿನ್ಸೆಸ್‌ ಹೆಸರಿರೋದು ಅಲ್ಲಿಂದ ರಾಯಲ್‌ ಇನ್‌ ಜಂಕ್ಷನ್‌ವರೆಗೆ ಆ ರಸ್ತೆಗೆ ಯಾವುದೇ ಹೆಸರಿಲ್ಲ. ಬೇಕಾದರೆ ಯಾರಾದರೂ ಪರಿಶೀಲನೆ ಮಾಡಲಿ ಎಂದು ಹೇಳಿದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ನೂತನ ಸಚಿವರಿಗೆ ಖಾತೆ ಹಂಚಿಕೆ : ಯಾರಿಗೆ ಯಾವ ಹೊಣೆ? ಇಲ್ಲಿದೆ ಮಾಹಿತಿ

ಬೆಂಗಳೂರು : ಹಲವು ಸುತ್ತಿನ ಸಭೆಯ ಬಳಿಕ ಡಿ.ಕೆ.ಶಿವಕುಮಾರ್ ಸಚಿವ ಸಂಪುಟದ ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಲಾಗಿದೆ. ಖಾತೆ…

18 mins ago

ಬೆಂಗಳೂರಿನಿಂದ ಕೇರಳಕ್ಕೆ ಎಂಡಿಎಂಎ ಸಾಗಾಟ : ಇಬ್ಬರ ಬಂಧನ

ಗುಂಡ್ಲುಪೇಟೆ : ಬೆಂಗಳೂರಿನಿಂದ ಕೇರಳಕ್ಕೆ ಎಂಡಿಎಂಎ (MDMA) ಮಾದಕವಸ್ತು ಸಾಗಿಸುತ್ತಿದ್ದ ಆರೋಪದ ಮೇರೆಗೆ ಮುತ್ತಂಗ ಚೆಕ್‌ಪೋಸ್ಟ್‌ನಲ್ಲಿ ಇಬ್ಬರನ್ನು ಕೇರಳದ ಪೊಲೀಸರು…

2 hours ago

ಮಾನವ ಕಲಿಯಬೇಕಾದ ಬದುಕಿನ ಪಾಠಗಳು

ಶ್ರೇಯಸ್ ದೇವನೂರು ಇಂದು ವಿಶ್ವ ಆನೆ ದಿನಾಚರಣೆ  ಭೂಮಿಯ ಮೇಲಿರುವ ಜೀವಿಗಳಲ್ಲಿ ಆನೆ, ಅತಿ ದೊಡ್ಡ ಪ್ರಾಣಿ ಮಾತ್ರವಲ್ಲ ,…

11 hours ago

ಸಾವಿರಾರು ಹೆರಿಗೆ ಮಾಡಿಸಿದ ಫ್ಲಾರೆನ್ಸ್ ನೈಟಿಂಗೇಲ್ ಗೀತಾ ‘ಮಾ’

ಪಂಜುಗಂಗೊಳ್ಳಿ ಅವರ ವಾರದ ಅಂಕಣ  ಕಡು ಬಡತನದ ಕುಟುಂಬದಿಂದ ಬಂದ ಶುಶ್ರೂಷಕಿ ಪ. ಬಂಗಾಳದ ಗೀತಾ ಕಾರ್ಮಕಾರ್ ನರ್ಸಿಂಗ್ ತರಬೇತಿ…

11 hours ago

ಸಿದ್ದರಾಮಯ್ಯ ಸಿದ್ಧಾಂತದ ಹೋರಾಟಕ್ಕೆ ಅಂತ್ಯವೆಂಬುದೇ ಇಲ್ಲ

ಆರ್.ಟಿ.ವಿಠ್ಠಲಮೂರ್ತಿ ಕರ್ನಾಟಕದ ರಾಜಕೀಯ ಚರಿತ್ರೆಯಲ್ಲಿ ಹೊಸ ಮೈಲಿಗಲ್ಲಾಗಿ ದಾಖಲಾಗಿರುವ ಸಿದ್ದರಾಮಯ್ಯ ಅವರೀಗ ಮತ್ತೊಂದು ಪಯಣಕ್ಕೆ ಸಜ್ಜಾಗಬೇಕಿದೆ. ಇನ್ನು ಚುನಾವಣೆಗಳಲ್ಲಿ ಸ್ಪರ್ಧಿಸುವು…

11 hours ago

ಕಣ್ಮನ ಸೆಳೆಯುತ್ತಿದೆ ಮಲ್ಲಳ್ಳಿ ಜಲಪಾತ!

ಲಕ್ಷ್ಮೀಕಾಂತ್ ಕೊಮಾರಪ್ಪ ಪ್ರಾಕೃತಿಕ ಸೌಂದರ್ಯಕ್ಕೆ ಮಾರುಹೋಗುತ್ತಿರುವ ಪ್ರವಾಸಿಗರು ಸೋಮವಾರಪೇಟೆ: ಎತ್ತ ನೋಡಿದರೂ ಅಚ್ಚಹಸಿರಿನ ಕಾಡು ಸುಂದರ ಪ್ರಕೃತಿಯ ಸೊಬಗು... ನಿಮಿಷಕ್ಕೊಮ್ಮೆ…

11 hours ago