ಮೈಸೂರು

ರಸ್ತೆ ವಿವಾದ: ರಾಜಮನೆತನಕ್ಕೆ ಅಪಮಾನ ಮಾಡಲ್ಲ ಎಂದ ಶಾಸಕ ಕೆ. ಹರೀಶ್‌ ಗೌಡ

ಮೈಸೂರು: ರಾಜ ಮನೆತನದ ಇತಿಹಾಸವಿರುವ ಮೈಸೂರಿನ ಕೆಆರ್‌ಎಸ್‌ ರಸ್ತೆಗೆ ಸಿದ್ದರಾಮಯ್ಯ ಅವರ ಹೆಸರಿಡುವ ಸಂಬಂಧ ವಿರೋಧ ವ್ಯಕ್ತವಾಗಿದ್ದು ಯಾವೂದೇ ಕಾರಣಕ್ಕೂ ಮೈಸೂರು ಒಡೆಯರ ಮನೆತನಕ್ಕೆ ಅಪಮಾನ ಮಾಡಲ್ಲ ಎಂದು ಕಾಂಗ್ರೆಸ್‌ ಶಾಸಕ ಹರೀಶ್‌ ಗೌಡ ಹೇಳಿದ್ದಾರೆ.

ಇಂದು (ಜ.6) ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಪ್ರಿನ್ಸೆಸ್‌ ರಸ್ತೆಗೆ ಸಿದ್ದರಾಮಯ್ಯ ಅವರ ಹೆಸರಿಡುವ ವಿಚಾರ ಮೈಸೂರು ಡಿಸಿ ಹಾಗೂ ನಗರ ಪಾಲಿಕೆ ಕಮಿಷನರ್‌ಗೆ ಪತ್ರ ಬರದು ಈ ರಸ್ತೆಯಲ್ಲಿ ಹಲವಾರು ಆಸ್ಪತ್ರೆಗಳು ನಿರ್ಮಾಣವಾಗಿವೆ ಇದಕ್ಕೆ ಸಿದ್ದರಾಮಯ್ಯ ಕಾರಣ ಆದ್ದರಿಂದ ಅವರ ಹೆಸರಿಡಲು ಅನುಮತಿ ನೀಡಬೇಕು ಎಂದು ಮನವಿ ಮಾಡಿದ್ದೆ. ಪಾಲಿಕೆಯಿಂದ ಅನುಮೋದನೆ ಸಿಕ್ಕಿದೆ ಆದರೆ ಕೌನ್ಸಿಲ್‌ನಲ್ಲಿ ಅದು ನಿರ್ಧಾರ ಆಗಿಲ್ಲ ಎಂದರು.

ಈ ಕುರಿತು ಆಕ್ಷೇಪಣೆ ಇದ್ದರೆ ತಿಳಿಸಲು ಪತ್ರಿಕಾ ಪ್ರಕಟಣೆ ನೀಡಲಾಗಿತ್ತು. ಇದಕ್ಕೆ ಸಾಮಾಜಿಕ ಕಾರ್ಯಕರ್ತರು, ಬಿಜೆಪಿ ಸಂಸದ ಯದುವೀರ್‌ ಇನ್ನಿತರರು ಪ್ರಿನ್ಸೆಸ್‌ ರಸ್ತೆಗೆ ಸಿದ್ದರಾಮಯ್ಯ ಅವರ ಹೆಸರಿಡುವುದು ರಾಜ ಮನೆತನಕ್ಕೆ ಮಾಡುವ ಅವಮಾನ ಎಂದು ಆಕ್ಷೇಪಣೆ ಸಲ್ಲಿಸಿದ್ದಾರೆ.

ಇದಕ್ಕೆ ಪ್ರತಿಕ್ರಿಯಿಸದ ಅವರು, ನಾನು ರಾಜಮನೆತನಕ್ಕೆ ಯಾವುದೇ ಅವಮಾನ ಮಾಡುತ್ತಿಲ್ಲ.ಮೈಸೂರು ಮಹಾರಾಜರು ಈ ರಾಜ್ಯಕ್ಕೆ ನೀಡಿರುವ ಕೊಡುಗೆ ಸೂರ್ಯ-ಚಂದ್ರ ಇರುವವರೆಗೂ ಶಾಶ್ವತ ಎಂದು ಹೇಳಿದರು.

ರಸ್ತೆಯ ವಿಚಾರವಾಗಿ ಮಾತನಾಡಿ, ದಾಸಪ್ಪ ವೃತದಿಂದ ಲಕ್ಷ್ಮೀ ವೆಂಕಟರಮಣ ದೇವಸ್ಥಾನದವರೆಗೆ ಮಾತ್ರ ಪ್ರಿನ್ಸೆಸ್‌ ಹೆಸರಿರೋದು ಅಲ್ಲಿಂದ ರಾಯಲ್‌ ಇನ್‌ ಜಂಕ್ಷನ್‌ವರೆಗೆ ಆ ರಸ್ತೆಗೆ ಯಾವುದೇ ಹೆಸರಿಲ್ಲ. ಬೇಕಾದರೆ ಯಾರಾದರೂ ಪರಿಶೀಲನೆ ಮಾಡಲಿ ಎಂದು ಹೇಳಿದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಚಿರಕನಹಳ್ಳಿ ; ಬೋನಿಗೆ ಬಿದ್ದ ಹುಲಿ

ಗುಂಡ್ಲುಪೇಟೆ: ತಾಲ್ಲೂಕಿನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶ ವ್ಯಾಪ್ತಿಯ ಕುಂದಕೆರೆ ವಲಯದ ಚಿರಕನಹಳ್ಳಿ ಗ್ರಾಮದಲ್ಲಿ ಪೋತರಾಜು ಎಂಬುವವರ ಜಮೀನಿನಲ್ಲಿ ಅರಣ್ಯ…

8 hours ago

ವೆನಿಜುವೆಲಾ ಭೂಕಂಪ ; ಮೃತರ ಸಂಖ್ಯೆ 235ಕ್ಕೆ ಏರಿಕೆ

ಮುಂದುವರಿದ ರಕ್ಷಣಾ ಕಾರ್ಯಾಚರಣೆ ವೆನಿಜುವೆಲಾ : ವೆನಿಜುವೆಲಾದ ಉತ್ತರ ಭಾಗದಲ್ಲಿ ಬುಧವಾರ ಸಂಜೆ ಸಂಭವಿಸಿದ ಸತತ ಎರಡು ಪ್ರಬಲ ಭೂಕಂಪಗಳ…

8 hours ago

ಡಿಕೆಶಿ ಜೊತೆಗಿನ ಬಾಂಧ್ಯವ : ಧರ್ಮಸ್ಥಳದಲ್ಲಿ ವಿಜಯೇಂದ್ರ ಹೇಳಿದಿಷ್ಟು

ಧರ್ಮಸ್ಥಳ : ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ ವಿಜಯೇಂದ್ರ ಮತ್ತು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಜೊತೆಗಿನ ಬಾಂಧವ್ಯದ ಬಗ್ಗೆ…

11 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಜೂನ್‌ 26, ಶುಕ್ರವಾರ  

13 hours ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ | ಕನ್ನಡಕ್ಕೊಂದು ಒಟಿಟಿ, ʼಗರುಡ ಪುರಾಣʼ ಇತ್ಯಾದಿ

‘ವೆನ್ ಯು ವಾಂಟ್ ಟು ಡು ಸಮ್‌ತಿಂಗ್ ಡು ಇಟ್; ಆರ್ ಎಲ್ಸ್ ವಿಟ್ ನೆಸ್‌ಇಟ್’ ಇದು ಅತ್ಯಂತ ಪ್ರಚಲಿತವಿರುವ…

13 hours ago

ಹಿಟಾಚಿ ಮೇಲೆ ಬಿದ್ದ ಗೋಡೆ: ಚಾಲಕ ಪಾರು

ಮಳವಳ್ಳಿ: ಪೂರಿಗಾಲಿ ಗ್ರಾಮದಲ್ಲಿ ರಸ್ತೆ ಅಗಲೀಕರಣ ಕಾಮಗಾರಿ ಆರಂಭವಾಗಿದ್ದು, ರಸ್ತೆ ಬದಿಯ ಕಟ್ಟಡ ನೆಲಸಮ ಮಾಡುವಾಗ ಕಟ್ಟಡದ ಗೋಡೆ ಹಿಟಾಚಿ…

1 day ago