ಮೈಸೂರು

ಮೈಸೂರಿನಲ್ಲಿ 250 ಕೋಟಿ ರೂ. ವೆಚ್ಚ: ರಸ್ತೆ ಡಾಂಬರೀಕರಣಕ್ಕೆ ಮರು ಚಾಲನೆ

ಮೈಸೂರು :ಗುಂಡಿಬಿದ್ದ ನಗರದ ರಸ್ತೆಗಳಿಗೆ ಮುಕ್ತಿ ನೀಡುವ ಸಲುವಾಗಿ 250 ಕೋಟಿ ರೂ. ವೆಚ್ಚದ ಡಾಂಬರೀಕರಣಕ್ಕೆ ಮರು ಚಾಲನೆ ನೀಡಲು ಮೈಸೂರು ಮಹಾನಗರಪಾಲಿಕೆ ಮುಂದಾಗಿದೆ.

ಈ ಹಿಂದಿನ ಮೇಯರ್‌ ಸುನಂದಾ ಪಾಲನೇತ್ರ ಅವರು 25 ಕೋಟಿ ರೂ., ಶಾಸಕರಾದ ಎಸ್‌.ಎ. ರಾಮದಾಸ್‌ ಅವರು 150 ಕೋಟಿ ರೂ. ಹಾಗೂ ಎಲ್‌.ನಾಗೇಂದ್ರ ಅವರು 200 ಕೋಟಿ ರೂ. ಅನುದಾನವನ್ನು ರಸ್ತೆ, ಪಾರ್ಕ್, ಯುಜಿಡಿ ಅಭಿವೃದ್ಧಿಗೆ ತಂದಿದ್ದಾರೆ. ಇದರ ಜೊತೆಗೆ ಪಾಲಿಕೆಯ 10 ಕೋಟಿ ರೂ. ಹಾಗೂ 15ನೇ ಹಣಕಾಸಿನ ಯೋಜನೆಯಡಿ ಅನುದಾನವನ್ನು ರಸ್ತೆ ಡಾಂಬರೀಕರಣಕ್ಕೆ ಬಳಸಲಾಗುತ್ತಿದೆ. ಒಟ್ಟಾರೆ ಸದ್ಯ 250 ಕೋಟಿ ರೂ. ವೆಚ್ಚದಲ್ಲಿ ಇನ್ನು ಮೂರು ದಿನದಲ್ಲಿ ಮರು ಡಾಂಬರೀಕರಣಕ್ಕೆ ಚಾಲನೆ ನೀಡಲಾಗುತ್ತದೆ.

ದಸರಾ ಮಹೋತ್ಸವ ಹಾಗೂ ಮಳೆ ಅಡಚಣೆ ಹಿನ್ನೆಲೆಯಲ್ಲಿ ನಗರದ ಹೃದಯ ಭಾಗಕ್ಕಷ್ಟೇ ಡಾಂಬರೀಕರಣ ಮಾಡಲಾಗಿತ್ತು. ಆದರೆ, ಇದೀಗ ದಸರಾ ಮುಗಿದು ಮಳೆಯೂ ಬಿಡುವು ಕೊಟ್ಟಿರುವುದರಿಂದ ವಾರದೊಳಗೆ ನಗರದ ಗುಂಡಿ ಹಾಗೂ ಹಳ್ಳಬಿದ್ದ ರಸ್ತೆಗಳಿಗೆ ಡಾಂಬರೀಕರಣ ಹಾಕಲು ಪಾಲಿಕೆ ನಿರ್ಧರಿಸಿದೆ. ಸೋಮವಾರ (ಅ.10ರಿಂದ) ದಿಂದಲೇ ನಗರಪಾಲಿಕೆ ಮೇಯರ್‌ ಶಿವಕುಮಾರ್‌ ಅವರು ನಗರದಾದ್ಯಂತ ಸ್ಥಳ ಪರಿಶೀಲನೆ ನಡೆಸಿ ಯಾವ ಬಡಾವಣೆಯ ಯಾವ ರಸ್ತೆಗಳಿಗೆ ಡಾಂಬರೀಕರಣ ಅಗತ್ಯವಿದೆ ಎಂಬ ಪಟ್ಟಿ ತಯಾರಿಸಲು ಸಿದ್ಧತೆ ನಡೆಸಿದ್ದಾರೆ. ಈ ಸಂಬಂಧ ಪಾಲಿಕೆ ಆಯುಕ್ತ ಲಕ್ಷ್ಮಿಕಾಂತರೆಡ್ಡಿ ಅವರೊಂದಿಗೂ ಮಾತುಕತೆ ನಡೆಸಿದ್ದು, ಇನ್ನೆರಡು ತಿಂಗಳಿನಲ್ಲಿ ಗುಂಡಿ ರಸ್ತೆಗಳಿಗೆ ಮುಕ್ತಿ ನೀಡಲು ಕಟಿಬದ್ಧರಾಗಿದ್ದಾರೆ.

ಎಲ್ಲಿಎಷ್ಟು ಅನುದಾನ?
ಈ ಹಿಂದಿನ ಮೇಯರ್‌ ಸುನಂದಾ ಪಾಲನೇತ್ರ ಅವರು 25 ಕೋಟಿ ರೂ., ಶಾಸಕರಾದ ಎಸ್‌.ಎ. ರಾಮದಾಸ್‌ ಅವರು 150 ಕೋಟಿ ರೂ. ಹಾಗೂ ಎಲ್‌.ನಾಗೇಂದ್ರ ಅವರು 200 ಕೋಟಿ ರೂ. ಅನುದಾನವನ್ನು ರಸ್ತೆ, ಪಾರ್ಕ್, ಯುಜಿಡಿ ಅಭಿವೃದ್ಧಿಗೆ ತಂದಿದ್ದಾರೆ. ಇದರ ಜೊತೆಗೆ ಪಾಲಿಕೆಯ 10 ಕೋಟಿ ರೂ. ಹಾಗೂ 15ನೇ ಹಣಕಾಸಿನ ಯೋಜನೆಯಡಿ ಅನುದಾನವನ್ನು ರಸ್ತೆ ಡಾಂಬರೀಕರಣಕ್ಕೆ ಬಳಸಲಾಗುತ್ತಿದೆ. ಒಟ್ಟಾರೆ ಸದ್ಯ 250 ಕೋಟಿ ರೂ. ವೆಚ್ಚದಲ್ಲಿ ಇನ್ನು ಮೂರು ದಿನದಲ್ಲಿ ಮರು ಡಾಂಬರೀಕರಣಕ್ಕೆ ಚಾಲನೆ ನೀಡಲಾಗುತ್ತದೆ. ಟೆಂಡರ್‌ ಹಂತದಲ್ಲಿರುವ ರಸ್ತೆ ಕಾಮಗಾರಿಯನ್ನೂ ಬೇಗ ಮುಗಿಸಲು ಪಾಲಿಕೆ ಚಿಂತನೆ ನಡೆಸಿದೆ.

andolana

Recent Posts

ತಿ.‌ ನರಸೀಪುರ: ಬೈಕ್ ಡಿಕ್ಕಿ ಚಿರತೆ ಸಾವು

ತಿ. ನರಸೀಪುರ: ತಾಲೂಕಿನ ಬನ್ನೂರು ಹೋಬಳಿಯ ಬಸವನಹಳ್ಳಿ ಗ್ರಾಮದ ಸಮೀಪದ ಮುಖ್ಯರಸ್ತೆಯಲ್ಲಿ ದ್ವಿಚಕ್ರ ವಾಹನ ಚಿರತೆಗೆ ಡಿಕ್ಕಿ ಹೊಡೆದ ಪರಿಣಾಮ…

6 hours ago

ತಿರುಪತಿ ಲಡ್ಡು: ತುಪ್ಪದಲ್ಲಿ ಪ್ರಾಣಿ ಕೊಬ್ಬು ಬಳಕೆ

ಅಮರಾವತಿ: ಜಗತ್‌ ಪ್ರಸಿದ್ಧ ತಿರುಪತಿ ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬು ಹಾಗೂ ಕಳಪೆ ಗುಣಮಟ್ಟದ ಪದಾರ್ಥಗಳು ಪತ್ತೆಯಾಗಿದೆ ಎಂದು ತೆಲುಗು…

8 hours ago

ಬುರ್ಖಾಧಾರಿ ಮಹಿಳೆಯಿಂದ ಸಲ್ಮಾನ್‌ ಖಾನ್‌ ತಂದೆಗೆ ಜೀವ ಬೆದರಿಕೆ: ಮಹಿಳೆ ಸೇರಿ ಇಬ್ಬರ ಬಂಧನ

ಮುಂಬೈ:‌ ಬಾಲಿವುಡ್‌ನ ಭಾಯಿಜಾನ್ ಸಲ್ಮಾನ್‌ ಖಾನ್‌ ಅವರ ತಂದೆಗೆ ಬುರ್ಖಾ ಧರಿಸಿದ್ದ ಮಹಿಳೆ ಹಾಗೂ ಇನ್ನೊರ್ವ ವ್ಯಕ್ತಿ ಜೀವ ಬೆದರಿಕೆ…

8 hours ago

ಶಾಸಕ ಮುನಿರತ್ನಗೆ ಜಾಮೀನು: ಅತ್ಯಾಚಾರ ಪ್ರಕರಣದಲ್ಲಿ ಮತ್ತೆ ಬಂಧನ ಸಾಧ್ಯತೆ

ಬೆಂಗಳೂರು: ಗುತ್ತಿಗೆದಾರರೊಬ್ಬರಿಗೆ ಜಾತಿನಿಂದನೆ ಹಾಗೂ ಪ್ರಾಣ ಬೆದರಿಕೆ ಹಾಕಿದ ಪ್ರಕರಣದಲ್ಲಿ ಬೆಂಗಳೂರಿನ ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನಗೆ…

9 hours ago

ನುಡಿ ಹಬ್ಬಕ್ಕೆ ಆಹ್ವಾನಿಸಲು ಸಿದ್ಧವಾಗಿದೆ ಕನ್ನಡ ರಥ

ಮಂಡ್ಯ: ಜಿಲ್ಲೆಯಲ್ಲಿ ಡಿಸೆಂಬರ್ 20, 21, 22 ರಂದು ನಡೆಯಲಿರುವ 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ…

10 hours ago

ಬಸ್‌ನಲ್ಲಿ ಪ್ರಯಾಣ: ಮಹಿಳೆಯರಿಂದ ಶಕ್ತಿಯೋಜನೆಯ ಅಭಿಪ್ರಾಯ ಪಡೆದ ಪುಷ್ಪ ಅಮರನಾಥ್‌

ಮೈಸೂರು: ರಾಜ್ಯ ಸರ್ಕಾರದ ಮಹತ್ವಕಾಂಕ್ಷೆ ಯೋಜನೆಗಳಲ್ಲಿ ಒಂದಾದ ಶಕ್ತಿಯೋಜನೆ ಫಲಾನುಭವಿಗಳ ಅಭಿಪ್ರಾಯ ಸಂಗ್ರಹಿಸಲು ಗ್ಯಾರಂಟಿ ಅನುಷ್ಠಾನ ಸಮಿತಿ ಉಪಾಧ್ಯಕ್ಷೆಯಾದ ಡಾ…

10 hours ago